Homeಕರ್ನಾಟಕತುಮಕೂರಿನ ಸರ್ವಜನಾಂಗದ ತೋಟದಲ್ಲಿ ಸಹಸ್ರ ಸಹಭೋಜನ ಯಶಸ್ವಿ..

ತುಮಕೂರಿನ ಸರ್ವಜನಾಂಗದ ತೋಟದಲ್ಲಿ ಸಹಸ್ರ ಸಹಭೋಜನ ಯಶಸ್ವಿ..

- Advertisement -
- Advertisement -

ಕುವೆಂಪು ಜನ್ಮದಿನದ ಅಂಗವಾಗಿ ತುಮಕೂರಿನಲ್ಲಿ ಡಾ.ಮುರುಳೀಧರ್ ನೇತೃತ್ವದಲ್ಲಿ ಆಯೋಜಿಸಿದ್ದ ಸಹಸ್ರ ಸಹಭೋಜನ ಕಾರ್ಯಕ್ರಮ ಎಲ್ಲ ಧರ್ಮದ, ಎಲ್ಲಾ ಜಾತಿಯ ಜನರ ಒಗ್ಗೂಡುವಿಕೆ, ವಿಚಾರ ವಿನಿಮಯ, ಪರಸ್ಪರ ಮಾತುಕತೆಗೆ ಸಹಪಂಕ್ತಿ ಊಟ ಮಾಡಿದ್ದಕ್ಕೆ ಸಾಕ್ಷಿಯಾಯಿತು. ಹಿಂದೂ, ಕ್ರೈಸ್ತ, ಮುಸ್ಲಿಂ ಹೀಗೆ ಎಲ್ಲಾ ಧರ್ಮೀಯರು ವಿಚಾರ ವಿನಿಮಯ ಮಾಡಿಕೊಂಡರು. ಒಂದೂವರೆ ಗಂಟೆ ನಡೆದ ಕಾರ್ಯಕ್ರಮದಲ್ಲಿ ಮುಂದೆಯೂ ಇದೇ ರೀತಿ ಕೂಡಿಬಾಳಬೇಕು ಎಂಬ ಪ್ರತಿಜ್ಞೆಯನ್ನು ಮಾಡಿದರು.

ಕಾರ್ಯಕ್ರಮಕ್ಕೂ ಮೊದಲು ಸಂವಿಧಾನದ ಪ್ರಸ್ತಾವನೆಯನ್ನು ಎಲ್ಲರಿಗೂ ಓದಿಸುವ ಮೂಲಕ ನಾವೆಲ್ಲ ಭಾರತೀಯರು, ಸರ್ವಧರ್ಮ ಸಮನ್ವಯದಿಂದ ಸೌಹಾರ್ದತೆಯಿಂದ ನೆಮ್ಮದಿಯಿಂದ ಪ್ರೀತಿಯಿಂದ ಗೌರವದಿಂದ ಬದುಕಬೇಕು ಎಂದು ಪ್ರತಿಜ್ಞಾ ವಿಧಿ ಬೋದಿಸಲಾಯಿತು. ಹಿರಿಯರಾದ ಕೆ.ದೊರೈರಾಜ್ ಅವರು ನಾವೆಲ್ಲರೂ ಎಂತಹದ್ದೇ ಸಂದರ್ಭ ಬಂದರೂ ಒಟ್ಟಾಗಿ ಹೋಗುತ್ತೇವೆ. ಸಮಾಜವನ್ನು ಒಡೆಯುವ ಶಕ್ತಿಗಳ ಹಿಂದೆ ಹೋಗುವುದಿಲ್ಲ. ಜಾತಿ, ಧರ್ಮಧ ಆಧಾರದ ಮೇಲೆ ತಾರತಮ್ಯ ಮಾಡದೆ ವಿಚ್ಛಿದ್ದಕಾರಿ ಶಕ್ತಿಗಳ ಮಾತಿಗೆ ಕಿವಿಗೊಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.

ಮೊದಲಿಗೆ ಪಾಧರ್ ಆದಂ ಮಾತನಾಡಿದರು. ಈವತ್ತಿನ ಸ್ಥಿತಿಗೆ ನಾವೆಲ್ಲರೂ ಕಾರಣರಾಗಿದ್ದೇವೆ. ನಾವು ಸೂಕ್ತ ನಿರ್ಣಯಗಳನ್ನುತೀರ್ಮಾನಗಳನ್ನು ತೆಗೆದುಕೊಳ್ಳದೆ, ನಮ್ಮ ನಮ್ಮಲ್ಲೇ ಜಗಳವಾಡಿದ್ದರಿಂದ ಇಂದು ಸಂಕಷ್ಟ ಎದುರಾಗಿದೆ. ಇನ್ನು ಮುಂದಾದರೂ ನಾವೆಲ್ಲ ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ನಿವೃತ್ತ ಸೈನಿಕ ಇಂತಿಯಾಜ್ ಮಾತನಾಡಿ, ಸೈನಿಕ ತ್ಯಾಗಬಲಿದಾನಗಳನ್ನು ಬಳಸಿಕೊಂಡು ಅಧಿಕಾರಕ್ಕೆ ಬಂದವರು ಅಧಿಕಾರದ ಗದ್ದುಗೆ ಏರುತ್ತಿದ್ದಂತೆಯೇ ನಮ್ಮನ್ನು ಮರೆತರು. ಪ್ರತಿಭಟನೆ ಮಾಡಿದೆವು. ನಮ್ಮ ಕೂಗು ಅವರಿಗೆ ಮುಟ್ಟಲಿಲ್ಲ. ನಾವು ಇಂದು ಅನುಭವಿಸುತ್ತಿರುವ ಸಂಕಟವನ್ನು ನಿವಾರಿಸಿಕೊಳ್ಳಲು ನಾವೇ ತೀರ್ಮಾನ ಮಾಡಬೇಕಾದ ಕಾಲ ಬಂದಿದೆ ಎಂದು ಹೇಳಿದರು.

ಸಾಮಾಜಿಕ ಕಾರ್ಯಕರ್ತ ತಾಜುದ್ದೀನ್ ಷರೀಪ್ ಮಾತನಾಡಿ, ಕುವೆಂಪು ವಿಚಾರಗಳು ಮತ್ತು ಸಂವಿಧಾನದ ಆಶಯಗಳನ್ನು ನಾವೆಲ್ಲರೂ ಉಳಿಸಬೇಕಾಗಿದೆ ಎಂದರು. ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಮಾತನಾಡಿ ಸತ್ತಂತಿಹರನು ಬಡಿದೆಚ್ಚರಿಸು, ಕಚ್ಚಾಡುವರನು ಕೂಡಿಸಿ ಒಲಿಸು, ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು, ಒಟ್ಟಿಗೆ ಬಾಳುವ ತೆರದಲಿ ಹರಸು ಎಂದು ಹೇಳಿ ಅದರ ವಿವರಣೆ ನೀಡಿದರು. ಜನ ಸತ್ತಂತಿದ್ದಾರೆ. ಅವರನ್ನು ಎಚ್ಚಿಸಬೇಕಾಗಿದೆ. ಮತ ನೀಡುವ ಸಮಯದಲ್ಲಿ ಸೂಕ್ತ ನಿರ್ಧಾರ ಪ್ರಕಟಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಆಯೋಜಕ ಡಾ.ಮುರಳೀಧರ್ ಮಾತನಾಡಿ, ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು. ಎಲ್ಲ ಧರ್ಮೀಯರು, ಜಾತಿಯ ಮುಖಂಡರು ಒಂದೇ ವೇದಿಕೆಗೆ ಬಂದಿರುವುದು ತುಂಬಾ ಸಂತೋಷದ ಸಂಗತಿ. ಇದು ಅಪರೂಪದ ಕಾರ್ಯಕ್ರಮ. ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯಬೇಕು. ಎಲ್ಲರೂ ಒಟ್ಟಿಗೆ ಸೇರಿ ಊಟ ಮಾಡಿರುವುದು ಸಂತಸವನ್ನು ಉಂಟು ಮಾಡಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನಪರ ಚಿಂತಕ ಕೆ.ದೊರೈರಾಜು ಮಾತನಾಡಿ ಸಂವಿಧಾನವನ್ನು ಎಲ್ಲರೂ ಓದಬೇಕು. ಆ ಕುರಿತು ಸಣ್ಣಸಣ್ಣ ಗುಂಪುಗಳ ನಡುವೆ ಚರ್ಚೆ ಮಾಡಬೇಕು. ಕುವೆಂಪು ಮತ್ತು ಸಂವಿಧಾನದ ಆಶಯಗಳು ಒಂದೇ ಆಗಿವೆ. ಸರ್ವಜನಾಂಗದ ಶಾಂತಿಯ ತೋಟವಾಗಬೇಕು ನಮ್ಮ ಸಮಾಜ. ನಾವೆಲ್ಲರೂ ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಸಮಾಜ ವಿಭಜಕ ಶಕ್ತಿಗಳ ಬಗ್ಗೆ ಎಚ್ಚರದೀಂದ ಇರಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕೆಇಬಿ ನಾಗರಾಜು ಉಪನ್ಯಾಸಕ ಜಯಶೀಲ, ನರಸಿಂಹಯ್ಯ ಮೊದಲಾದವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...