Homeಮುಖಪುಟಅನಿಕೇತನದ ಕಿಡಿ ಬಿತ್ತಿದ ವಿಶ್ವಮಾನವ ಸಂದೇಶ

ಅನಿಕೇತನದ ಕಿಡಿ ಬಿತ್ತಿದ ವಿಶ್ವಮಾನವ ಸಂದೇಶ

- Advertisement -
- Advertisement -

ಕುವೆಂಪು ಅವರ ಜನ್ಮದಿನ ಹತ್ತಿರ ಬರುತ್ತಿದೆ. ಕರ್ನಾಟಕ ಸರ್ಕಾರವು 2005ರ ಡಿಸೆಂಬರ್‌ನಲ್ಲಿ ಕುವೆಂಪು ಜನ್ಮದಿನವಾದ ಡಿಸೆಂಬರ್ 29ಅನ್ನು ’ವಿಶ್ವ ಮಾನವ’ ದಿನವನ್ನಾಗಿ ಆಚರಿಸುವುದಾಗಿ ಆದೇಶ ಹೊರಡಿಸಿತು. ಕುವೆಂಪು ಅವರು ತಮ್ಮ ಬರವಣಿಗೆ ಮತ್ತು ಬದುಕಿನುದ್ದಕ್ಕೂ ಪಾಲಿಸಿಕೊಂಡು ಬಂದ, ತಾವು ದರ್ಶನ ಪಡೆದ ಹಲವು ತತ್ವಗಳು ವಿಶ್ವಮಾನವ ಸಂದೇಶದ ಮೂಲಕ ಸಾರಿದ್ದರು. ಈ ಸಂದೇಶಗಳು ವರ್ಷಕ್ಕೊಮ್ಮೆ ನೆನಪಿಸಿಕೊಳ್ಳುವ, ವೈದಿಕರ ಮಂತ್ರಗಳಂತೆ ಪಠಿಸಬೇಕಾದವುಗಳಲ್ಲ, ಹೃದಯದಿಂದ ಕೇಳಿಸಿಕೊಳ್ಳಬೇಕಾದ ಮತ್ತು ನಮಗೆ ನಾವೇ ಕನ್ನಡಿ ಹಿಡಿದುಕೊಳ್ಳುವಂತೆ ಮಾಡುವ ದರ್ಶನಗಳು.

ಕುವೆಂಪು ಅವರು ಬರೆದಿರುವ ಎರಡು ಮಹಾಕಾವ್ಯದಂತಹ ಕಾದಂಬರಿಗಳು ಮತ್ತು ವಿಶ್ವಮಾನವ ಸಂದೇಶ ಎರಡನ್ನೂ ಒಟ್ಟಿಗೆ ನೋಡಿದಾಗ, ಅವರು ’ಮಲೆಗಳಲ್ಲಿ ಮದುಮಗಳು’ ಕಾದಂಬರಿಯಲ್ಲಿ ಮುನ್ನುಡಿ ರೂಪದಲ್ಲಿ ಬರೆದಿರುವ ಅತ್ಯಂತ ಜನಪ್ರಿಯವಾದ

“ಇಲ್ಲಿ
ಯಾರೂ ಮುಖ್ಯರಲ್ಲ
ಯಾರೂ ಅಮುಖ್ಯರಲ್ಲ”

ಎಂಬ ಸಾಲುಗಳು ಕೇವಲ ತಮ್ಮ ಕಾದಂಬರಿಯ ಕುರಿತು ಹೇಳಿದಲ್ಲ. ಇಡೀ ಸಮಾಜದ ರಚನೆ ಕುರಿತು ಸಹ ಆ ಸಾಲುಗಳು ಆಗಿರಬಹುದು. ಕುವೆಂಪು ಅವರು ತಮ್ಮ ಕಾದಂಬರಿಗಳಲ್ಲಿ, ತಾವು ಪ್ರತಿನಿಧಿಸುವ ಸಮುದಾಯದ ಕುರಿತು ಸಹ ಎಲ್ಲಿಯೂ ಹಿಂಜರಿಕೆ ಇಲ್ಲದೆ ಮಾತನಾಡುವ ಧೈರ್ಯ ತೋರಿಸಿದ್ದಾರೆ. ಒಬ್ಬ ಲೇಖಕನಿಗೆ ಇರಬೇಕಾದ ಮುಖ್ಯ ಗುಣ ಅದು ಎಂಬುದು ನನ್ನ ನಂಬಿಕೆ. ಕುವೆಂಪು ಅವರು ತಮ್ಮ ’ಮಲೆನಾಡಿನ ಚಿತ್ರಗಳು’ ಪುಸ್ತಕದಲ್ಲಿ ಹೇಳಿಕೊಂಡಿರುವ ಲಘು ಹಾಸ್ಯದ ಬೆರೆತ ಹಲವು ಅನುಭವಗಳಲ್ಲಿ, ತಾವು ಬಾಲಕರಾಗಿದ್ದಾಗಲೇ ಶಿಕ್ಷಣದ ಪದ್ಧತಿಗಳು, ತಮ್ಮ ಸುತ್ತಲಿನ ದಿನ ನಿತ್ಯದ ಚಟುವಟಿಕೆಗಳ ಅಸಮಾನತೆಯ ಗೆರೆ ಗುರುತಿಸುವ ಸೂಕ್ಷ್ಮವಾದ ಪ್ರವೃತ್ತಿ ಬೆಳೆಸಿಕೊಂಡಿದ್ದು ತಿಳಿಯುತ್ತದೆ. ಅವರು ಮುಂದೆ ವಿಶ್ವಮಾನವ ಸಂದೇಶದ ಮೂಲಕ ಹೇಳಲು ಹೊರಟಿರುವುದು ಸಹ ಅದೇ ಆಗಿದೆ.

“ಯಾವ ಒಂದು ಗ್ರಂಥವೂ ’ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ ’ದರ್ಶನ’ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು” ಎಂಬ ಕುವೆಂಪು ಅವರ ಈ ಸಂದೇಶವನ್ನು ನವಯುವಕರ ಕಿವಿಗೆ ಎಲ್ಲಾ ಕಾಲಕ್ಕಿಂತಲೂ ಹೆಚ್ಚಾಗಿ ಈ ದಿನದಲ್ಲಿ ಮುಟ್ಟಿಸಬೇಕಾದ ಜರೂರತ್ತು ಇದೆ. ಮನುಷ್ಯನ ಮೂಲಭೂತ ಅವಶ್ಯಕತೆಗಳು ಈಡೇರಿಕೆಗೆ ಕಾಯಕ ಮುಖ್ಯವೇ ಹೊರತು, ಹೊಟ್ಟೆ ತುಂಬಿದವರು ಹೇಳುವ ಪ್ರವಚನಗಳಲ್ಲ ಎಂಬ ವಾಸ್ತವವನ್ನು ಜಾತಿಗಳ ಅಮಲು ತಲೆಗೇರಿಸಿಕೊಂಡವರಿಗೆ ತೋರಿಸಬೇಕಿದೆ.

ಇದನ್ನೂ ಓದಿ:ಪೌರೋಹಿತ್ಯ ಧಿಕ್ಕರಿಸಿದ ವಿವಾಹದ ಪರಿಕಲ್ಪನೆ ’ಮಂತ್ರ ಮಾಂಗಲ್ಯ’

ಮಲೆಗಳಲ್ಲಿ ಮದುಮಗಳು ಕಾದಂಬರಿಯಲ್ಲಿ ಕುವೆಂಪು ಅವರು ಪ್ರಕೃತಿಯ ಬಗ್ಗೆ ಎಷ್ಟು ವರ್ಣಿಸಿದ್ದಾರೊ ಇನ್ನೂ ಹೆಚ್ಚು ಜೀವಂತವಾಗಿ ನಾಯಿಗುತ್ತಿಯನ್ನು ಪರಿಚಯಿಸುತ್ತಾರೆ. ಕಗ್ಗತ್ತಲಿನ ಕಾಡುಗಳ ರಾತ್ರಿಯ ಎದೆಯಲ್ಲಿ ನಡುಗದೆ, ಪ್ರೀತಿಯ ಬೀಜಗಳನ್ನು ಎದೆಯೊಳಗಿಟ್ಟುಕೊಂಡ ಗುತ್ತಿಯ ಬಿಗಿ ಉಸಿರಿನಲ್ಲಿ ಸಹ ಕುವೆಂಪು ಅವರ ವಿಶ್ವಮಾನವ ಸಂದೇಶ ಇದೆ.

ಕಾನೂರು ಹೆಗ್ಗಡತಿಯ ಹೂವಯ್ಯನ ಹೊಸ ವಿಚಾರಗಳಲ್ಲಿನ ಕ್ರಾಂತಿಯ ಕಿಡಿಯೊಳಗೆ ಬುದ್ಧನ ಶಾಂತಸಾಗರದ ನಗು ಮತ್ತು ಕುವೆಂಪು ಅವರು ಹೇಳುವ “ಪ್ರತಿಯೊಂದು ಮಗುವೂ ಹುಟ್ಟುತ್ತಲೆ – ವಿಶ್ವಮಾನವ. ಬೆಳೆಯುತ್ತಾ ನಾವು ಅದನ್ನು ’ಅಲ್ಪಮಾನವ’ನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ’ವಿಶ್ವಮಾನವ’ನನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕು” ಎನ್ನುವ ಮಾತು ಅಡಗಿದೆ. ಹೂವಯ್ಯನ ಮೂಲಕ ಕಟ್ಟಿಕೊಟ್ಟ ದರ್ಶನ ನನಗೆ ಹೆಚ್ಚು ಆಪ್ತವಾಗುತ್ತದೆ.

ಕುವೆಂಪು ಅವರ ನಾಟಕ, ಕಥೆ, ಕಾದಂಬರಿ ಮತ್ತು ಅವರ ಒಟ್ಟು ಬರವಣಿಗೆಯ ಪಯಣವೇ ವಿಶ್ವಮಾನವದೆಡೆಗಿನ ಪ್ರಯಾಣವಾಗಿತ್ತು. ಅವರು ಬರೆದಿರುವ ಬರಹಗಳಲ್ಲಿ ಒಂದು ರೀತಿಯ ಪ್ರಕೃತಿಯ ದಿವ್ಯಸ್ಪರ್ಶ ಇದೆ, ಮೂಢನಂಬಿಕೆಗಳು ಮತ್ತು ವೈದಿಕರ ಕೆಡುಕಿನ ಜಾಣತನದ ವಿರುದ್ಧ ಗಟ್ಟಿಯಾದ ಸಿಟ್ಟಿದ್ದು ಅದರ ಬಿಸಿ ತಾಗುತ್ತದೆ.

ಇದನ್ನೂ ಓದಿ: ಸಾಂಸ್ಕೃತಿಕ ಕ್ರಾಂತಿಯ ರೂವಾರಿ ಕುವೆಂಪು ಹೊರಿಸಿದ ಹೊರೆಗಳು

ಅವರ ಆತ್ಮಕಥೆ ’ನೆನಪಿನ ದೋಣಿಯಲ್ಲಿ ನಿವೇದಿಸಿಕೊಂಡಿರುವಂತೆ, ಯುವಕರಾಗಿದ್ದಾಗ ಕುವೆಂಪು ಅವರು ಒಂದು ಸಲ “ಲೈಬ್ರರಿಯಲ್ಲಿ ಸಾಲಾಗಿ ಜೋಡಿಸಿಟ್ಟ ಪುಸ್ತಕಗಳ ಹೆಸರು ನೋಡಿ”, ಓದುತ್ತಾ ಬೆರಗಾಗಿ ನಿಲ್ಲುತ್ತಾರೆ. ಅವರಿಗೆ ಇದ್ದ ಜ್ಞಾನದಾಹ ಇದರಿಂದ ತಿಳಿಯುತ್ತದೆ. ನಮ್ಮನ್ನು ಆಂತರಿಕವಾಗಿ ಮತ್ತು ಬಾಹ್ಯವಾಗಿ ಶೋಷಿಸುವ ಹಲವು ಸಂಗತಿಗಳಿಗೆ ಪ್ರಶ್ನಿಸುವ ಮತ್ತು ಪ್ರತಿಭಟಿಸುವ ಶಕ್ತಿ ಓದಿನಿಂದ ಮಾತ್ರ ಬರುವಂತಹುದು.

’ವಿಚಾರ ಕ್ರಾಂತಿಗೆ ಆಹ್ವಾನ’ ಪುಸ್ತಕದಲ್ಲಿ ಕುವೆಂಪು ಅವರು ತಮ್ಮ ಬದುಕಿನ ವಿಚಾರಗಳಲ್ಲಿದ್ದ ’ಎಷ್ಟೊಂದು ಮಡಿವಂತಿಕೆಗಳಿಗೆ ಛಿದ್ರ ಮಾಡಿದ್ದಾರೆ’ ಎಂಬುದು ತಿಳಿಯುತ್ತದೆ. ಬರವಣಿಗೆಯಂತೆ ಬದುಕಿದ ಕುವೆಂಪು ಅವರು ವಿಶ್ವಮಾನವರಾಗಿದ್ದು ಹೀಗೆ.

“ಜಾತಿ-ಮತ ಇವೆಲ್ಲಾ ಇರಬೇಕು ಅನ್ನುವವರು, ಅವನು ಎಂಥಾ ಸಾಹಿತಿಯೇ ಆಗಿರಲಿ ಅವನಿಗೆ ಧಿಕ್ಕಾರ”- ಕುವೆಂಪು.

ಈ ಮೇಲಿನ ಮಾತುಗಳನ್ನು ಗಮನಿಸಿದಾಗ, ನಿರಂತರವಾಗಿ ಯಾವುದೋ ಒಂದು ಧರ್ಮ ಶ್ರೇಷ್ಠವೆಂದು ಸಾರುವ ಲೇಖಕರ ಹಿಂದೆ ಯುವಪಡೆ ಓಡುತ್ತಿರುವ ಸನ್ನಿವೇಶದಲ್ಲಿ, ಪ್ರಶ್ನಿಸುವ ಮನಸ್ಸು ಕಳೆದುಕೊಂಡಿರುವ ವಿದ್ಯಾವಂತರ ಕುರಿತು, ಭವಿಷ್ಯದ ನಮ್ಮ ನಾಡಿನ ಬಗ್ಗೆ ಆತಂಕ ಹುಟ್ಟುತ್ತದೆ. ಕುವೆಂಪು ಅವರ ಜನ್ಮದಿನದ ಹೊತ್ತಿನಲ್ಲಿ ಆದರೂ ನಾವೆಲ್ಲ ಗಟ್ಟಿಯಾಗಿ ನಿಂತು ’ಜೀವಪರ’ ವಿಚಾರಗಳನ್ನು ಬೆಂಬಲಿಸುತ್ತ, ಇನ್ನೊಬ್ಬರ ತಲೆಯಲ್ಲಿ ಸೆಗಣಿ ತುಂಬಲು ಪ್ರಯತ್ನಿಸುತ್ತಿರುವವರ ಕೈಕೆಳಗಿನಿಂದ ಪಾರಾಗಿ ಹೊರಬರುವ ಪ್ರತಿಜ್ಞೆ ಮಾಡಿ ಅದನ್ನು ಆಚರಿಸಬೇಕಿದೆ.

ಓ ನನ್ನ ಚೇತನ,
ಆಗು ನೀ ಅನಿಕೇತನ!
ನೂರು ಮತದ ಹೊಟ್ಟ ತೂರಿ,
ಎಲ್ಲ ತತ್ತ್ವದೆಲ್ಲೆ ಮೀರಿ,
ನಿರ್ದಿಗಂತವಾಗಿ ಏರಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!

ಕುವೆಂಪು ಅವರ ವಿಶ್ವಮಾನವ ಗೀತೆಯಂತೆ ನಾವೆಲ್ಲ ನಮ್ಮ ನಮ್ಮ ಮತಗಳ ಹೊಟ್ಟ ತೂರಿ, ನಿಜವಾದ ಬೇರು ಬಿಟ್ಟು ಚಿಗುರೊಡೆಯಬಲ್ಲ ಕಾಳುಗಳನ್ನು ಹುಡುಕಬೇಕಿದೆ.

ಕಪಿಲ ಪಿ ಹುಮನಾಬಾದೆ

ಯುವ ಬರಹಗಾರ ಕಪಿಲ ಪಿ ಹುಮನಾಬಾದೆ ಅವರು ಮೂಲತಃ ಬೀದರ್‌ನವರು. ಸದ್ಯ ಕಾವ್ಯಮನೆ ಪ್ರಕಾಶನ ಬಳ್ಳಾರಿ, ಮುಖ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಕಾದಂಬರಿ ಹಾಣಾದಿ ಸಾಕಷ್ಟು ಮೆಚ್ಚುಗೆಯನ್ನು ಗಳಿಸಿದೆ. ಈಗ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ವಿದ್ಯಾರ್ಥಿ.


ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...