Homeಮುಖಪುಟಅನಿಕೇತನದ ಕಿಡಿ ಬಿತ್ತಿದ ವಿಶ್ವಮಾನವ ಸಂದೇಶ

ಅನಿಕೇತನದ ಕಿಡಿ ಬಿತ್ತಿದ ವಿಶ್ವಮಾನವ ಸಂದೇಶ

- Advertisement -
- Advertisement -

ಕುವೆಂಪು ಅವರ ಜನ್ಮದಿನ ಹತ್ತಿರ ಬರುತ್ತಿದೆ. ಕರ್ನಾಟಕ ಸರ್ಕಾರವು 2005ರ ಡಿಸೆಂಬರ್‌ನಲ್ಲಿ ಕುವೆಂಪು ಜನ್ಮದಿನವಾದ ಡಿಸೆಂಬರ್ 29ಅನ್ನು ’ವಿಶ್ವ ಮಾನವ’ ದಿನವನ್ನಾಗಿ ಆಚರಿಸುವುದಾಗಿ ಆದೇಶ ಹೊರಡಿಸಿತು. ಕುವೆಂಪು ಅವರು ತಮ್ಮ ಬರವಣಿಗೆ ಮತ್ತು ಬದುಕಿನುದ್ದಕ್ಕೂ ಪಾಲಿಸಿಕೊಂಡು ಬಂದ, ತಾವು ದರ್ಶನ ಪಡೆದ ಹಲವು ತತ್ವಗಳು ವಿಶ್ವಮಾನವ ಸಂದೇಶದ ಮೂಲಕ ಸಾರಿದ್ದರು. ಈ ಸಂದೇಶಗಳು ವರ್ಷಕ್ಕೊಮ್ಮೆ ನೆನಪಿಸಿಕೊಳ್ಳುವ, ವೈದಿಕರ ಮಂತ್ರಗಳಂತೆ ಪಠಿಸಬೇಕಾದವುಗಳಲ್ಲ, ಹೃದಯದಿಂದ ಕೇಳಿಸಿಕೊಳ್ಳಬೇಕಾದ ಮತ್ತು ನಮಗೆ ನಾವೇ ಕನ್ನಡಿ ಹಿಡಿದುಕೊಳ್ಳುವಂತೆ ಮಾಡುವ ದರ್ಶನಗಳು.

ಕುವೆಂಪು ಅವರು ಬರೆದಿರುವ ಎರಡು ಮಹಾಕಾವ್ಯದಂತಹ ಕಾದಂಬರಿಗಳು ಮತ್ತು ವಿಶ್ವಮಾನವ ಸಂದೇಶ ಎರಡನ್ನೂ ಒಟ್ಟಿಗೆ ನೋಡಿದಾಗ, ಅವರು ’ಮಲೆಗಳಲ್ಲಿ ಮದುಮಗಳು’ ಕಾದಂಬರಿಯಲ್ಲಿ ಮುನ್ನುಡಿ ರೂಪದಲ್ಲಿ ಬರೆದಿರುವ ಅತ್ಯಂತ ಜನಪ್ರಿಯವಾದ

“ಇಲ್ಲಿ
ಯಾರೂ ಮುಖ್ಯರಲ್ಲ
ಯಾರೂ ಅಮುಖ್ಯರಲ್ಲ”

ಎಂಬ ಸಾಲುಗಳು ಕೇವಲ ತಮ್ಮ ಕಾದಂಬರಿಯ ಕುರಿತು ಹೇಳಿದಲ್ಲ. ಇಡೀ ಸಮಾಜದ ರಚನೆ ಕುರಿತು ಸಹ ಆ ಸಾಲುಗಳು ಆಗಿರಬಹುದು. ಕುವೆಂಪು ಅವರು ತಮ್ಮ ಕಾದಂಬರಿಗಳಲ್ಲಿ, ತಾವು ಪ್ರತಿನಿಧಿಸುವ ಸಮುದಾಯದ ಕುರಿತು ಸಹ ಎಲ್ಲಿಯೂ ಹಿಂಜರಿಕೆ ಇಲ್ಲದೆ ಮಾತನಾಡುವ ಧೈರ್ಯ ತೋರಿಸಿದ್ದಾರೆ. ಒಬ್ಬ ಲೇಖಕನಿಗೆ ಇರಬೇಕಾದ ಮುಖ್ಯ ಗುಣ ಅದು ಎಂಬುದು ನನ್ನ ನಂಬಿಕೆ. ಕುವೆಂಪು ಅವರು ತಮ್ಮ ’ಮಲೆನಾಡಿನ ಚಿತ್ರಗಳು’ ಪುಸ್ತಕದಲ್ಲಿ ಹೇಳಿಕೊಂಡಿರುವ ಲಘು ಹಾಸ್ಯದ ಬೆರೆತ ಹಲವು ಅನುಭವಗಳಲ್ಲಿ, ತಾವು ಬಾಲಕರಾಗಿದ್ದಾಗಲೇ ಶಿಕ್ಷಣದ ಪದ್ಧತಿಗಳು, ತಮ್ಮ ಸುತ್ತಲಿನ ದಿನ ನಿತ್ಯದ ಚಟುವಟಿಕೆಗಳ ಅಸಮಾನತೆಯ ಗೆರೆ ಗುರುತಿಸುವ ಸೂಕ್ಷ್ಮವಾದ ಪ್ರವೃತ್ತಿ ಬೆಳೆಸಿಕೊಂಡಿದ್ದು ತಿಳಿಯುತ್ತದೆ. ಅವರು ಮುಂದೆ ವಿಶ್ವಮಾನವ ಸಂದೇಶದ ಮೂಲಕ ಹೇಳಲು ಹೊರಟಿರುವುದು ಸಹ ಅದೇ ಆಗಿದೆ.

“ಯಾವ ಒಂದು ಗ್ರಂಥವೂ ’ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ ’ದರ್ಶನ’ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು” ಎಂಬ ಕುವೆಂಪು ಅವರ ಈ ಸಂದೇಶವನ್ನು ನವಯುವಕರ ಕಿವಿಗೆ ಎಲ್ಲಾ ಕಾಲಕ್ಕಿಂತಲೂ ಹೆಚ್ಚಾಗಿ ಈ ದಿನದಲ್ಲಿ ಮುಟ್ಟಿಸಬೇಕಾದ ಜರೂರತ್ತು ಇದೆ. ಮನುಷ್ಯನ ಮೂಲಭೂತ ಅವಶ್ಯಕತೆಗಳು ಈಡೇರಿಕೆಗೆ ಕಾಯಕ ಮುಖ್ಯವೇ ಹೊರತು, ಹೊಟ್ಟೆ ತುಂಬಿದವರು ಹೇಳುವ ಪ್ರವಚನಗಳಲ್ಲ ಎಂಬ ವಾಸ್ತವವನ್ನು ಜಾತಿಗಳ ಅಮಲು ತಲೆಗೇರಿಸಿಕೊಂಡವರಿಗೆ ತೋರಿಸಬೇಕಿದೆ.

ಇದನ್ನೂ ಓದಿ:ಪೌರೋಹಿತ್ಯ ಧಿಕ್ಕರಿಸಿದ ವಿವಾಹದ ಪರಿಕಲ್ಪನೆ ’ಮಂತ್ರ ಮಾಂಗಲ್ಯ’

ಮಲೆಗಳಲ್ಲಿ ಮದುಮಗಳು ಕಾದಂಬರಿಯಲ್ಲಿ ಕುವೆಂಪು ಅವರು ಪ್ರಕೃತಿಯ ಬಗ್ಗೆ ಎಷ್ಟು ವರ್ಣಿಸಿದ್ದಾರೊ ಇನ್ನೂ ಹೆಚ್ಚು ಜೀವಂತವಾಗಿ ನಾಯಿಗುತ್ತಿಯನ್ನು ಪರಿಚಯಿಸುತ್ತಾರೆ. ಕಗ್ಗತ್ತಲಿನ ಕಾಡುಗಳ ರಾತ್ರಿಯ ಎದೆಯಲ್ಲಿ ನಡುಗದೆ, ಪ್ರೀತಿಯ ಬೀಜಗಳನ್ನು ಎದೆಯೊಳಗಿಟ್ಟುಕೊಂಡ ಗುತ್ತಿಯ ಬಿಗಿ ಉಸಿರಿನಲ್ಲಿ ಸಹ ಕುವೆಂಪು ಅವರ ವಿಶ್ವಮಾನವ ಸಂದೇಶ ಇದೆ.

ಕಾನೂರು ಹೆಗ್ಗಡತಿಯ ಹೂವಯ್ಯನ ಹೊಸ ವಿಚಾರಗಳಲ್ಲಿನ ಕ್ರಾಂತಿಯ ಕಿಡಿಯೊಳಗೆ ಬುದ್ಧನ ಶಾಂತಸಾಗರದ ನಗು ಮತ್ತು ಕುವೆಂಪು ಅವರು ಹೇಳುವ “ಪ್ರತಿಯೊಂದು ಮಗುವೂ ಹುಟ್ಟುತ್ತಲೆ – ವಿಶ್ವಮಾನವ. ಬೆಳೆಯುತ್ತಾ ನಾವು ಅದನ್ನು ’ಅಲ್ಪಮಾನವ’ನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ’ವಿಶ್ವಮಾನವ’ನನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕು” ಎನ್ನುವ ಮಾತು ಅಡಗಿದೆ. ಹೂವಯ್ಯನ ಮೂಲಕ ಕಟ್ಟಿಕೊಟ್ಟ ದರ್ಶನ ನನಗೆ ಹೆಚ್ಚು ಆಪ್ತವಾಗುತ್ತದೆ.

ಕುವೆಂಪು ಅವರ ನಾಟಕ, ಕಥೆ, ಕಾದಂಬರಿ ಮತ್ತು ಅವರ ಒಟ್ಟು ಬರವಣಿಗೆಯ ಪಯಣವೇ ವಿಶ್ವಮಾನವದೆಡೆಗಿನ ಪ್ರಯಾಣವಾಗಿತ್ತು. ಅವರು ಬರೆದಿರುವ ಬರಹಗಳಲ್ಲಿ ಒಂದು ರೀತಿಯ ಪ್ರಕೃತಿಯ ದಿವ್ಯಸ್ಪರ್ಶ ಇದೆ, ಮೂಢನಂಬಿಕೆಗಳು ಮತ್ತು ವೈದಿಕರ ಕೆಡುಕಿನ ಜಾಣತನದ ವಿರುದ್ಧ ಗಟ್ಟಿಯಾದ ಸಿಟ್ಟಿದ್ದು ಅದರ ಬಿಸಿ ತಾಗುತ್ತದೆ.

ಇದನ್ನೂ ಓದಿ: ಸಾಂಸ್ಕೃತಿಕ ಕ್ರಾಂತಿಯ ರೂವಾರಿ ಕುವೆಂಪು ಹೊರಿಸಿದ ಹೊರೆಗಳು

ಅವರ ಆತ್ಮಕಥೆ ’ನೆನಪಿನ ದೋಣಿಯಲ್ಲಿ ನಿವೇದಿಸಿಕೊಂಡಿರುವಂತೆ, ಯುವಕರಾಗಿದ್ದಾಗ ಕುವೆಂಪು ಅವರು ಒಂದು ಸಲ “ಲೈಬ್ರರಿಯಲ್ಲಿ ಸಾಲಾಗಿ ಜೋಡಿಸಿಟ್ಟ ಪುಸ್ತಕಗಳ ಹೆಸರು ನೋಡಿ”, ಓದುತ್ತಾ ಬೆರಗಾಗಿ ನಿಲ್ಲುತ್ತಾರೆ. ಅವರಿಗೆ ಇದ್ದ ಜ್ಞಾನದಾಹ ಇದರಿಂದ ತಿಳಿಯುತ್ತದೆ. ನಮ್ಮನ್ನು ಆಂತರಿಕವಾಗಿ ಮತ್ತು ಬಾಹ್ಯವಾಗಿ ಶೋಷಿಸುವ ಹಲವು ಸಂಗತಿಗಳಿಗೆ ಪ್ರಶ್ನಿಸುವ ಮತ್ತು ಪ್ರತಿಭಟಿಸುವ ಶಕ್ತಿ ಓದಿನಿಂದ ಮಾತ್ರ ಬರುವಂತಹುದು.

’ವಿಚಾರ ಕ್ರಾಂತಿಗೆ ಆಹ್ವಾನ’ ಪುಸ್ತಕದಲ್ಲಿ ಕುವೆಂಪು ಅವರು ತಮ್ಮ ಬದುಕಿನ ವಿಚಾರಗಳಲ್ಲಿದ್ದ ’ಎಷ್ಟೊಂದು ಮಡಿವಂತಿಕೆಗಳಿಗೆ ಛಿದ್ರ ಮಾಡಿದ್ದಾರೆ’ ಎಂಬುದು ತಿಳಿಯುತ್ತದೆ. ಬರವಣಿಗೆಯಂತೆ ಬದುಕಿದ ಕುವೆಂಪು ಅವರು ವಿಶ್ವಮಾನವರಾಗಿದ್ದು ಹೀಗೆ.

“ಜಾತಿ-ಮತ ಇವೆಲ್ಲಾ ಇರಬೇಕು ಅನ್ನುವವರು, ಅವನು ಎಂಥಾ ಸಾಹಿತಿಯೇ ಆಗಿರಲಿ ಅವನಿಗೆ ಧಿಕ್ಕಾರ”- ಕುವೆಂಪು.

ಈ ಮೇಲಿನ ಮಾತುಗಳನ್ನು ಗಮನಿಸಿದಾಗ, ನಿರಂತರವಾಗಿ ಯಾವುದೋ ಒಂದು ಧರ್ಮ ಶ್ರೇಷ್ಠವೆಂದು ಸಾರುವ ಲೇಖಕರ ಹಿಂದೆ ಯುವಪಡೆ ಓಡುತ್ತಿರುವ ಸನ್ನಿವೇಶದಲ್ಲಿ, ಪ್ರಶ್ನಿಸುವ ಮನಸ್ಸು ಕಳೆದುಕೊಂಡಿರುವ ವಿದ್ಯಾವಂತರ ಕುರಿತು, ಭವಿಷ್ಯದ ನಮ್ಮ ನಾಡಿನ ಬಗ್ಗೆ ಆತಂಕ ಹುಟ್ಟುತ್ತದೆ. ಕುವೆಂಪು ಅವರ ಜನ್ಮದಿನದ ಹೊತ್ತಿನಲ್ಲಿ ಆದರೂ ನಾವೆಲ್ಲ ಗಟ್ಟಿಯಾಗಿ ನಿಂತು ’ಜೀವಪರ’ ವಿಚಾರಗಳನ್ನು ಬೆಂಬಲಿಸುತ್ತ, ಇನ್ನೊಬ್ಬರ ತಲೆಯಲ್ಲಿ ಸೆಗಣಿ ತುಂಬಲು ಪ್ರಯತ್ನಿಸುತ್ತಿರುವವರ ಕೈಕೆಳಗಿನಿಂದ ಪಾರಾಗಿ ಹೊರಬರುವ ಪ್ರತಿಜ್ಞೆ ಮಾಡಿ ಅದನ್ನು ಆಚರಿಸಬೇಕಿದೆ.

ಓ ನನ್ನ ಚೇತನ,
ಆಗು ನೀ ಅನಿಕೇತನ!
ನೂರು ಮತದ ಹೊಟ್ಟ ತೂರಿ,
ಎಲ್ಲ ತತ್ತ್ವದೆಲ್ಲೆ ಮೀರಿ,
ನಿರ್ದಿಗಂತವಾಗಿ ಏರಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!

ಕುವೆಂಪು ಅವರ ವಿಶ್ವಮಾನವ ಗೀತೆಯಂತೆ ನಾವೆಲ್ಲ ನಮ್ಮ ನಮ್ಮ ಮತಗಳ ಹೊಟ್ಟ ತೂರಿ, ನಿಜವಾದ ಬೇರು ಬಿಟ್ಟು ಚಿಗುರೊಡೆಯಬಲ್ಲ ಕಾಳುಗಳನ್ನು ಹುಡುಕಬೇಕಿದೆ.

ಕಪಿಲ ಪಿ ಹುಮನಾಬಾದೆ

ಯುವ ಬರಹಗಾರ ಕಪಿಲ ಪಿ ಹುಮನಾಬಾದೆ ಅವರು ಮೂಲತಃ ಬೀದರ್‌ನವರು. ಸದ್ಯ ಕಾವ್ಯಮನೆ ಪ್ರಕಾಶನ ಬಳ್ಳಾರಿ, ಮುಖ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಕಾದಂಬರಿ ಹಾಣಾದಿ ಸಾಕಷ್ಟು ಮೆಚ್ಚುಗೆಯನ್ನು ಗಳಿಸಿದೆ. ಈಗ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ವಿದ್ಯಾರ್ಥಿ.


ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...