Homeಮುಖಪುಟಅನಿಕೇತನದ ಕಿಡಿ ಬಿತ್ತಿದ ವಿಶ್ವಮಾನವ ಸಂದೇಶ

ಅನಿಕೇತನದ ಕಿಡಿ ಬಿತ್ತಿದ ವಿಶ್ವಮಾನವ ಸಂದೇಶ

- Advertisement -
- Advertisement -

ಕುವೆಂಪು ಅವರ ಜನ್ಮದಿನ ಹತ್ತಿರ ಬರುತ್ತಿದೆ. ಕರ್ನಾಟಕ ಸರ್ಕಾರವು 2005ರ ಡಿಸೆಂಬರ್‌ನಲ್ಲಿ ಕುವೆಂಪು ಜನ್ಮದಿನವಾದ ಡಿಸೆಂಬರ್ 29ಅನ್ನು ’ವಿಶ್ವ ಮಾನವ’ ದಿನವನ್ನಾಗಿ ಆಚರಿಸುವುದಾಗಿ ಆದೇಶ ಹೊರಡಿಸಿತು. ಕುವೆಂಪು ಅವರು ತಮ್ಮ ಬರವಣಿಗೆ ಮತ್ತು ಬದುಕಿನುದ್ದಕ್ಕೂ ಪಾಲಿಸಿಕೊಂಡು ಬಂದ, ತಾವು ದರ್ಶನ ಪಡೆದ ಹಲವು ತತ್ವಗಳು ವಿಶ್ವಮಾನವ ಸಂದೇಶದ ಮೂಲಕ ಸಾರಿದ್ದರು. ಈ ಸಂದೇಶಗಳು ವರ್ಷಕ್ಕೊಮ್ಮೆ ನೆನಪಿಸಿಕೊಳ್ಳುವ, ವೈದಿಕರ ಮಂತ್ರಗಳಂತೆ ಪಠಿಸಬೇಕಾದವುಗಳಲ್ಲ, ಹೃದಯದಿಂದ ಕೇಳಿಸಿಕೊಳ್ಳಬೇಕಾದ ಮತ್ತು ನಮಗೆ ನಾವೇ ಕನ್ನಡಿ ಹಿಡಿದುಕೊಳ್ಳುವಂತೆ ಮಾಡುವ ದರ್ಶನಗಳು.

ಕುವೆಂಪು ಅವರು ಬರೆದಿರುವ ಎರಡು ಮಹಾಕಾವ್ಯದಂತಹ ಕಾದಂಬರಿಗಳು ಮತ್ತು ವಿಶ್ವಮಾನವ ಸಂದೇಶ ಎರಡನ್ನೂ ಒಟ್ಟಿಗೆ ನೋಡಿದಾಗ, ಅವರು ’ಮಲೆಗಳಲ್ಲಿ ಮದುಮಗಳು’ ಕಾದಂಬರಿಯಲ್ಲಿ ಮುನ್ನುಡಿ ರೂಪದಲ್ಲಿ ಬರೆದಿರುವ ಅತ್ಯಂತ ಜನಪ್ರಿಯವಾದ

“ಇಲ್ಲಿ
ಯಾರೂ ಮುಖ್ಯರಲ್ಲ
ಯಾರೂ ಅಮುಖ್ಯರಲ್ಲ”

ಎಂಬ ಸಾಲುಗಳು ಕೇವಲ ತಮ್ಮ ಕಾದಂಬರಿಯ ಕುರಿತು ಹೇಳಿದಲ್ಲ. ಇಡೀ ಸಮಾಜದ ರಚನೆ ಕುರಿತು ಸಹ ಆ ಸಾಲುಗಳು ಆಗಿರಬಹುದು. ಕುವೆಂಪು ಅವರು ತಮ್ಮ ಕಾದಂಬರಿಗಳಲ್ಲಿ, ತಾವು ಪ್ರತಿನಿಧಿಸುವ ಸಮುದಾಯದ ಕುರಿತು ಸಹ ಎಲ್ಲಿಯೂ ಹಿಂಜರಿಕೆ ಇಲ್ಲದೆ ಮಾತನಾಡುವ ಧೈರ್ಯ ತೋರಿಸಿದ್ದಾರೆ. ಒಬ್ಬ ಲೇಖಕನಿಗೆ ಇರಬೇಕಾದ ಮುಖ್ಯ ಗುಣ ಅದು ಎಂಬುದು ನನ್ನ ನಂಬಿಕೆ. ಕುವೆಂಪು ಅವರು ತಮ್ಮ ’ಮಲೆನಾಡಿನ ಚಿತ್ರಗಳು’ ಪುಸ್ತಕದಲ್ಲಿ ಹೇಳಿಕೊಂಡಿರುವ ಲಘು ಹಾಸ್ಯದ ಬೆರೆತ ಹಲವು ಅನುಭವಗಳಲ್ಲಿ, ತಾವು ಬಾಲಕರಾಗಿದ್ದಾಗಲೇ ಶಿಕ್ಷಣದ ಪದ್ಧತಿಗಳು, ತಮ್ಮ ಸುತ್ತಲಿನ ದಿನ ನಿತ್ಯದ ಚಟುವಟಿಕೆಗಳ ಅಸಮಾನತೆಯ ಗೆರೆ ಗುರುತಿಸುವ ಸೂಕ್ಷ್ಮವಾದ ಪ್ರವೃತ್ತಿ ಬೆಳೆಸಿಕೊಂಡಿದ್ದು ತಿಳಿಯುತ್ತದೆ. ಅವರು ಮುಂದೆ ವಿಶ್ವಮಾನವ ಸಂದೇಶದ ಮೂಲಕ ಹೇಳಲು ಹೊರಟಿರುವುದು ಸಹ ಅದೇ ಆಗಿದೆ.

“ಯಾವ ಒಂದು ಗ್ರಂಥವೂ ’ಏಕೈಕ ಪರಮ ಪೂಜ್ಯ’ ಧರ್ಮಗ್ರಂಥವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ ’ದರ್ಶನ’ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು” ಎಂಬ ಕುವೆಂಪು ಅವರ ಈ ಸಂದೇಶವನ್ನು ನವಯುವಕರ ಕಿವಿಗೆ ಎಲ್ಲಾ ಕಾಲಕ್ಕಿಂತಲೂ ಹೆಚ್ಚಾಗಿ ಈ ದಿನದಲ್ಲಿ ಮುಟ್ಟಿಸಬೇಕಾದ ಜರೂರತ್ತು ಇದೆ. ಮನುಷ್ಯನ ಮೂಲಭೂತ ಅವಶ್ಯಕತೆಗಳು ಈಡೇರಿಕೆಗೆ ಕಾಯಕ ಮುಖ್ಯವೇ ಹೊರತು, ಹೊಟ್ಟೆ ತುಂಬಿದವರು ಹೇಳುವ ಪ್ರವಚನಗಳಲ್ಲ ಎಂಬ ವಾಸ್ತವವನ್ನು ಜಾತಿಗಳ ಅಮಲು ತಲೆಗೇರಿಸಿಕೊಂಡವರಿಗೆ ತೋರಿಸಬೇಕಿದೆ.

ಇದನ್ನೂ ಓದಿ:ಪೌರೋಹಿತ್ಯ ಧಿಕ್ಕರಿಸಿದ ವಿವಾಹದ ಪರಿಕಲ್ಪನೆ ’ಮಂತ್ರ ಮಾಂಗಲ್ಯ’

ಮಲೆಗಳಲ್ಲಿ ಮದುಮಗಳು ಕಾದಂಬರಿಯಲ್ಲಿ ಕುವೆಂಪು ಅವರು ಪ್ರಕೃತಿಯ ಬಗ್ಗೆ ಎಷ್ಟು ವರ್ಣಿಸಿದ್ದಾರೊ ಇನ್ನೂ ಹೆಚ್ಚು ಜೀವಂತವಾಗಿ ನಾಯಿಗುತ್ತಿಯನ್ನು ಪರಿಚಯಿಸುತ್ತಾರೆ. ಕಗ್ಗತ್ತಲಿನ ಕಾಡುಗಳ ರಾತ್ರಿಯ ಎದೆಯಲ್ಲಿ ನಡುಗದೆ, ಪ್ರೀತಿಯ ಬೀಜಗಳನ್ನು ಎದೆಯೊಳಗಿಟ್ಟುಕೊಂಡ ಗುತ್ತಿಯ ಬಿಗಿ ಉಸಿರಿನಲ್ಲಿ ಸಹ ಕುವೆಂಪು ಅವರ ವಿಶ್ವಮಾನವ ಸಂದೇಶ ಇದೆ.

ಕಾನೂರು ಹೆಗ್ಗಡತಿಯ ಹೂವಯ್ಯನ ಹೊಸ ವಿಚಾರಗಳಲ್ಲಿನ ಕ್ರಾಂತಿಯ ಕಿಡಿಯೊಳಗೆ ಬುದ್ಧನ ಶಾಂತಸಾಗರದ ನಗು ಮತ್ತು ಕುವೆಂಪು ಅವರು ಹೇಳುವ “ಪ್ರತಿಯೊಂದು ಮಗುವೂ ಹುಟ್ಟುತ್ತಲೆ – ವಿಶ್ವಮಾನವ. ಬೆಳೆಯುತ್ತಾ ನಾವು ಅದನ್ನು ’ಅಲ್ಪಮಾನವ’ನನ್ನಾಗಿ ಮಾಡುತ್ತೇವೆ. ಮತ್ತೆ ಅದನ್ನು ’ವಿಶ್ವಮಾನವ’ನನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕು” ಎನ್ನುವ ಮಾತು ಅಡಗಿದೆ. ಹೂವಯ್ಯನ ಮೂಲಕ ಕಟ್ಟಿಕೊಟ್ಟ ದರ್ಶನ ನನಗೆ ಹೆಚ್ಚು ಆಪ್ತವಾಗುತ್ತದೆ.

ಕುವೆಂಪು ಅವರ ನಾಟಕ, ಕಥೆ, ಕಾದಂಬರಿ ಮತ್ತು ಅವರ ಒಟ್ಟು ಬರವಣಿಗೆಯ ಪಯಣವೇ ವಿಶ್ವಮಾನವದೆಡೆಗಿನ ಪ್ರಯಾಣವಾಗಿತ್ತು. ಅವರು ಬರೆದಿರುವ ಬರಹಗಳಲ್ಲಿ ಒಂದು ರೀತಿಯ ಪ್ರಕೃತಿಯ ದಿವ್ಯಸ್ಪರ್ಶ ಇದೆ, ಮೂಢನಂಬಿಕೆಗಳು ಮತ್ತು ವೈದಿಕರ ಕೆಡುಕಿನ ಜಾಣತನದ ವಿರುದ್ಧ ಗಟ್ಟಿಯಾದ ಸಿಟ್ಟಿದ್ದು ಅದರ ಬಿಸಿ ತಾಗುತ್ತದೆ.

ಇದನ್ನೂ ಓದಿ: ಸಾಂಸ್ಕೃತಿಕ ಕ್ರಾಂತಿಯ ರೂವಾರಿ ಕುವೆಂಪು ಹೊರಿಸಿದ ಹೊರೆಗಳು

ಅವರ ಆತ್ಮಕಥೆ ’ನೆನಪಿನ ದೋಣಿಯಲ್ಲಿ ನಿವೇದಿಸಿಕೊಂಡಿರುವಂತೆ, ಯುವಕರಾಗಿದ್ದಾಗ ಕುವೆಂಪು ಅವರು ಒಂದು ಸಲ “ಲೈಬ್ರರಿಯಲ್ಲಿ ಸಾಲಾಗಿ ಜೋಡಿಸಿಟ್ಟ ಪುಸ್ತಕಗಳ ಹೆಸರು ನೋಡಿ”, ಓದುತ್ತಾ ಬೆರಗಾಗಿ ನಿಲ್ಲುತ್ತಾರೆ. ಅವರಿಗೆ ಇದ್ದ ಜ್ಞಾನದಾಹ ಇದರಿಂದ ತಿಳಿಯುತ್ತದೆ. ನಮ್ಮನ್ನು ಆಂತರಿಕವಾಗಿ ಮತ್ತು ಬಾಹ್ಯವಾಗಿ ಶೋಷಿಸುವ ಹಲವು ಸಂಗತಿಗಳಿಗೆ ಪ್ರಶ್ನಿಸುವ ಮತ್ತು ಪ್ರತಿಭಟಿಸುವ ಶಕ್ತಿ ಓದಿನಿಂದ ಮಾತ್ರ ಬರುವಂತಹುದು.

’ವಿಚಾರ ಕ್ರಾಂತಿಗೆ ಆಹ್ವಾನ’ ಪುಸ್ತಕದಲ್ಲಿ ಕುವೆಂಪು ಅವರು ತಮ್ಮ ಬದುಕಿನ ವಿಚಾರಗಳಲ್ಲಿದ್ದ ’ಎಷ್ಟೊಂದು ಮಡಿವಂತಿಕೆಗಳಿಗೆ ಛಿದ್ರ ಮಾಡಿದ್ದಾರೆ’ ಎಂಬುದು ತಿಳಿಯುತ್ತದೆ. ಬರವಣಿಗೆಯಂತೆ ಬದುಕಿದ ಕುವೆಂಪು ಅವರು ವಿಶ್ವಮಾನವರಾಗಿದ್ದು ಹೀಗೆ.

“ಜಾತಿ-ಮತ ಇವೆಲ್ಲಾ ಇರಬೇಕು ಅನ್ನುವವರು, ಅವನು ಎಂಥಾ ಸಾಹಿತಿಯೇ ಆಗಿರಲಿ ಅವನಿಗೆ ಧಿಕ್ಕಾರ”- ಕುವೆಂಪು.

ಈ ಮೇಲಿನ ಮಾತುಗಳನ್ನು ಗಮನಿಸಿದಾಗ, ನಿರಂತರವಾಗಿ ಯಾವುದೋ ಒಂದು ಧರ್ಮ ಶ್ರೇಷ್ಠವೆಂದು ಸಾರುವ ಲೇಖಕರ ಹಿಂದೆ ಯುವಪಡೆ ಓಡುತ್ತಿರುವ ಸನ್ನಿವೇಶದಲ್ಲಿ, ಪ್ರಶ್ನಿಸುವ ಮನಸ್ಸು ಕಳೆದುಕೊಂಡಿರುವ ವಿದ್ಯಾವಂತರ ಕುರಿತು, ಭವಿಷ್ಯದ ನಮ್ಮ ನಾಡಿನ ಬಗ್ಗೆ ಆತಂಕ ಹುಟ್ಟುತ್ತದೆ. ಕುವೆಂಪು ಅವರ ಜನ್ಮದಿನದ ಹೊತ್ತಿನಲ್ಲಿ ಆದರೂ ನಾವೆಲ್ಲ ಗಟ್ಟಿಯಾಗಿ ನಿಂತು ’ಜೀವಪರ’ ವಿಚಾರಗಳನ್ನು ಬೆಂಬಲಿಸುತ್ತ, ಇನ್ನೊಬ್ಬರ ತಲೆಯಲ್ಲಿ ಸೆಗಣಿ ತುಂಬಲು ಪ್ರಯತ್ನಿಸುತ್ತಿರುವವರ ಕೈಕೆಳಗಿನಿಂದ ಪಾರಾಗಿ ಹೊರಬರುವ ಪ್ರತಿಜ್ಞೆ ಮಾಡಿ ಅದನ್ನು ಆಚರಿಸಬೇಕಿದೆ.

ಓ ನನ್ನ ಚೇತನ,
ಆಗು ನೀ ಅನಿಕೇತನ!
ನೂರು ಮತದ ಹೊಟ್ಟ ತೂರಿ,
ಎಲ್ಲ ತತ್ತ್ವದೆಲ್ಲೆ ಮೀರಿ,
ನಿರ್ದಿಗಂತವಾಗಿ ಏರಿ,
ಓ ನನ್ನ ಚೇತನ,
ಆಗು ನೀ ಅನಿಕೇತನ!

ಕುವೆಂಪು ಅವರ ವಿಶ್ವಮಾನವ ಗೀತೆಯಂತೆ ನಾವೆಲ್ಲ ನಮ್ಮ ನಮ್ಮ ಮತಗಳ ಹೊಟ್ಟ ತೂರಿ, ನಿಜವಾದ ಬೇರು ಬಿಟ್ಟು ಚಿಗುರೊಡೆಯಬಲ್ಲ ಕಾಳುಗಳನ್ನು ಹುಡುಕಬೇಕಿದೆ.

ಕಪಿಲ ಪಿ ಹುಮನಾಬಾದೆ

ಯುವ ಬರಹಗಾರ ಕಪಿಲ ಪಿ ಹುಮನಾಬಾದೆ ಅವರು ಮೂಲತಃ ಬೀದರ್‌ನವರು. ಸದ್ಯ ಕಾವ್ಯಮನೆ ಪ್ರಕಾಶನ ಬಳ್ಳಾರಿ, ಮುಖ್ಯ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಕಾದಂಬರಿ ಹಾಣಾದಿ ಸಾಕಷ್ಟು ಮೆಚ್ಚುಗೆಯನ್ನು ಗಳಿಸಿದೆ. ಈಗ ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ವಿದ್ಯಾರ್ಥಿ.


ಇದನ್ನೂ ಓದಿ: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...