Homeಕರ್ನಾಟಕ'ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದ'ವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ. ನಾರಾಯಣ

‘ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದ’ವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ. ನಾರಾಯಣ

- Advertisement -
- Advertisement -

ರಕ್ತಕ್ರಾಂತಿಗೆ ಸಮ್ಮತಿಸದ ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರು ಉಗ್ರ ರಾಷ್ಟ್ರೀಯವಾದವನ್ನೂ ವಿರೋಧಿಸಿದ್ದರು ಎಂದು ಹಿರಿಯ ಸಾಹಿತಿ ಕೆ.ವಿ. ನಾರಾಯಣ ತಿಳಿಸಿದರು.

ಅವರು ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರ ʼವಿಚಾರ ಕ್ರಾಂತಿಗೆ ಆಹ್ವಾನʼ ಮತ್ತು ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಎಂಬ ಎರಡೂ ಯುಗಪ್ರವರ್ತಕ ಭಾಷಣಗಳಿಗೆ 50 ವರ್ಷಗಳು ತುಂಬುತ್ತಿರುವ ನೆನಪಿನಲ್ಲಿ ಜಾಗೃತ ಕರ್ನಾಟಕ ಸಂಘಟನೆಯು ಮೈಸೂರಿನ ಮಹಾರಾಜ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಕುವೆಂಪು ಕ್ರಾಂತಿ ಕಹಳೆ – 50′ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ʼವೈಚಾರಿಕ ದೃಷ್ಟಿʼ ಮತ್ತು ʼವಿಜ್ಞಾನ ಬುದ್ದಿʼ ಎಂಬ ಎರಡು ಪದಗಳನ್ನು ಕುವೆಂಪು ಅವರು ತಮ್ಮ ಸಾಹಿತ್ಯದಲ್ಲಿ ಅತಿಯಾಗಿ ಬಳಸಿದ್ದರು. ಹಲವು ಬಾರಿ ಇದನ್ನ ಸಂಸ್ಕೃತಿ ಕ್ರಾಂತಿ, ವಿಚಾರ ಕ್ರಾಂತಿ ಎಂದೂ ಹೇಳಿದ್ದಿದೆ. ಆದರೆ ರಾಜಕೀಯ ಅಥವಾ ಆರ್ಥಿಕ ಕ್ರಾಂತಿ ಎಂಬ ಪದಗಳನ್ನು ಕುವೆಂಪು ಅವರು ಬಳಸಿಲ್ಲ. ಸಾಂಸ್ಕೃತಿಕ ಮತ್ತು ವೈಚಾರಿಕ ಕ್ರಾಂತಿಯಿಂದಲೇ ಸಮಾಜದಲ್ಲಿ ದೊಡ್ಡ ಬದಲಾವಣೆ ಸಾಧ್ಯ ಎಂದು ಕುವೆಂಪು ಅವರು ನಂಬಿದ್ದರು. ನಾನು ಬದಲಾದರೆ ಸಮಾಜ ಬದಲಿಸಬಹುದು ಎಂಬುದು ಕುವೆಂಪು ಅವರ ಒಟ್ಟು ಸಂದೇಶದ ಸಾರ. ಮೌಢ್ಯ ಮತ್ತು ಪುರೋಹಿತಶಾಹಿ ಇವೆರಡು ಸಮಾಜದ ಸಮಸ್ಯೆಗಳಿಗೆ ಮೂಲ ಕಾರಣ ಎಂಬುದನ್ನು ಕುವೆಂಪು ಅವರು ಗ್ರಹಿಸಿದ್ದರು’ ಎಂದು ಕೆ.ವಿ. ನಾರಾಯಣ ಹೇಳಿದರು.

ಕುಮಾರಸ್ವಾಮಿ ಯುವಜನರ ದಾರಿ ತಪ್ಪಿಸುತ್ತಿದ್ದಾರೆ: ಎಲ್‌. ಎನ್.‌ ಮುಕುಂದರಾಜ್

‘ಕವಿವಾಣಿಯಿಂದ ಕರ್ನಾಟಕ ಮಾದರಿಯಕೆಗೆ’ ಎಂಬ ಆಶಯದೊಂದಿಗೆ ನಡೆದ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದ ಚಿಂತಕರಾದ ಎಲ್. ಎನ್. ಮುಕುಂದರಾಜ್ ಅವರು, ‘ಕುವೆಂಪು ಅವರು 50 ವರ್ಷಗಳ ಹಿಂದೆ ಇದೇ ಸಭಾಂಗಣದಲ್ಲಿ ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಭಾಷಣ ಮಾಡುವಾಗ ʼಓ ಬನ್ನಿ ಸೋದರರೆ… ಬೇಗ ಬನ್ನಿʼ ಎಂಬ ಪದ್ಯ ಓದಿದ್ದರು. ಇಂದು ನಮಗೆ ವೈಚಾರಿಕ ಮತ್ತು ಸಾಂಸ್ಕೃತಿಕ ಕ್ರಾಂತಿಗಳೆರಡೂ ಮುಖ್ಯವಾಗಿವೆ’ ಎಂದರು.

‘ನಾಲ್ವಡಿಯವರು ಜಾರಿಗೆ ತಂದ ಮೀಸಲಾತಿಯಿಂದ ನಾವು ವಿದ್ಯೆ ಪಡೆದಿದ್ದೇವೆ. ಆದರೂ, ಶೂದ್ರರನ್ನು ತುಳಿಯುವ ಕೆಲಸ ಇಂದೂ ನಡೆಯುತ್ತಿದೆ. ರಕ್ತಪಾತದ ಮೂಲಕ ಬಸವಾದಿ ಶರಣರನ್ನು ಕೊಲ್ಲಲಾಯಿತು. ಶೂದ್ರರ ಪರವಿದ್ದ ಗಾಂಧಿಯವರನ್ನೂ ಕೊಂದರು. ಆದರೆ, ಕುವೆಂಪುರವರು ರಕ್ತಕ್ರಾಂತಿಯ ಬದಲಾಗಿ ವಿಚಾರ ಕ್ರಾಂತಿಗೆ ಮತ್ತು ಸಾಂಸ್ಕೃತಿಕ ಕ್ರಾಂತಿಗೆ ಕರೆ ನೀಡಿದರು’ ಎಂದು ತಿಳಿಸಿದರು.

‘ಮಂಡ್ಯದ ಕರೆಗೋಡಿನಲ್ಲಿ ನಡೆದಿದ್ದು ತಾಯಂದಿರು ತಲೆತಗ್ಗಿಸುವ ಕೆಲಸ. ತಮ್ಮ ಮಕ್ಕಳು ಓದಿ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಎಲ್ಲ ತಾಯಂದಿರೂ ಬಯಸುತ್ತಾರೆ. ಕೇಸರಿ ಶಾಲು ಹಾಕೊಂಡು ಕೇಸು ಹಾಕಿಸಿಕೊಳ್ಳಲು ಅಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿ ಯುವಜನರ ದಾರಿ ತಪ್ಪಿಸುತ್ತಿದ್ದಾರೆ. ಕನ್ನಡದ ಪರವಿದ್ದ ಪಕ್ಷ ಇಂದು ಕೋಮುವಾದಿಗಳೊಂದಿಗೆ ಸೇರಿ ಹಾಳಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಕುವೆಂಪು ಸಂದೇಶದ ಕೆಲವು ಸಾಲುಗಳನ್ನ ಓದುವುದರ ಮೂಲಕ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್‌ ಕಾರ್ಯಕ್ರಮ ಉದ್ಘಾಟಿಸಿದರು. ʼಯುವ ಸ್ಪಂಧನʼ ಗೋಷ್ಠಿಯಲ್ಲಿ ಭಾಗವಹಿಸಿದ್ದ ನಟ ಡಾಲಿ ಧನಂಜಯ್ ಕುವೆಂಪು ಅವರ ಭಾಷಣದ ಕೆಲವು ಸಾಲುಗಳನ್ನು ಓದಿದರು. ಕೊಡಗಿನ ಡಾ. ಕಾವೇರಿ, ಬೆಂಗಳೂರಿನ ಕಾವ್ಯಶ್ರೀ, ಔರಾದ್‌ʼನ ಬಾಲಾಜಿ ಕುಂಬಾರ್, ಮಡಿಕೇರಿಯ ಡಾ. ಮುಸ್ತಫಾ ಕೆ.ಎಚ್., ಮಹೇಶ ಸಿ. ಮತ್ತು ಮೈಸೂರು ವಿ.ವಿ ಸಂಶೋಧಕರಾದ ಧನಲಕ್ಷ್ಮಿ ಯುವಸ್ಪಂಧನ ಗೋಷ್ಠಿಯಲ್ಲಿ ಮಾತನಾಡಿದರು.

ಕೃಷ್ಣಮೂರ್ತಿ ಚಮರಂ ಸ್ವಾಗತಿಸಿದರು. ರಮೇಶ್ ಗೌಡ ನಾಗಮಂಗಲ ಪ್ರಸ್ತಾವಿಕ ಮಾತುಗಳನ್ನಾಡಿದರು. ಜಯಶಂಕರ ಹಲಗೂರು ಕಾರ್ಯಕ್ರಮ ನಿರ್ವಹಿಸಿದರು. ಚಿಂತನ್ ವಿಕಾಸ್ ಮೈಸೂರು ಮತ್ತು ಗೋವಿಂದರಾಜು ಚಾಮನಕೊಪ್ಪಲು ತಂಡಗಳು ಕುವೆಂಪು ಹಾಡುಗಳನ್ನು ಪ್ರಸ್ತುತಪಡಿಸಿದರು.

ಇದನ್ನೂ ಓದಿ; ಮತೀಯವಾದಿಗಳಿಗೆ ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ: ಬಿ.ಟಿ. ಲಲಿತಾ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...