Homeಕರ್ನಾಟಕ'ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದ'ವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ. ನಾರಾಯಣ

‘ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದ’ವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ. ನಾರಾಯಣ

- Advertisement -
- Advertisement -

ರಕ್ತಕ್ರಾಂತಿಗೆ ಸಮ್ಮತಿಸದ ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರು ಉಗ್ರ ರಾಷ್ಟ್ರೀಯವಾದವನ್ನೂ ವಿರೋಧಿಸಿದ್ದರು ಎಂದು ಹಿರಿಯ ಸಾಹಿತಿ ಕೆ.ವಿ. ನಾರಾಯಣ ತಿಳಿಸಿದರು.

ಅವರು ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರ ʼವಿಚಾರ ಕ್ರಾಂತಿಗೆ ಆಹ್ವಾನʼ ಮತ್ತು ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಎಂಬ ಎರಡೂ ಯುಗಪ್ರವರ್ತಕ ಭಾಷಣಗಳಿಗೆ 50 ವರ್ಷಗಳು ತುಂಬುತ್ತಿರುವ ನೆನಪಿನಲ್ಲಿ ಜಾಗೃತ ಕರ್ನಾಟಕ ಸಂಘಟನೆಯು ಮೈಸೂರಿನ ಮಹಾರಾಜ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಕುವೆಂಪು ಕ್ರಾಂತಿ ಕಹಳೆ – 50′ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ʼವೈಚಾರಿಕ ದೃಷ್ಟಿʼ ಮತ್ತು ʼವಿಜ್ಞಾನ ಬುದ್ದಿʼ ಎಂಬ ಎರಡು ಪದಗಳನ್ನು ಕುವೆಂಪು ಅವರು ತಮ್ಮ ಸಾಹಿತ್ಯದಲ್ಲಿ ಅತಿಯಾಗಿ ಬಳಸಿದ್ದರು. ಹಲವು ಬಾರಿ ಇದನ್ನ ಸಂಸ್ಕೃತಿ ಕ್ರಾಂತಿ, ವಿಚಾರ ಕ್ರಾಂತಿ ಎಂದೂ ಹೇಳಿದ್ದಿದೆ. ಆದರೆ ರಾಜಕೀಯ ಅಥವಾ ಆರ್ಥಿಕ ಕ್ರಾಂತಿ ಎಂಬ ಪದಗಳನ್ನು ಕುವೆಂಪು ಅವರು ಬಳಸಿಲ್ಲ. ಸಾಂಸ್ಕೃತಿಕ ಮತ್ತು ವೈಚಾರಿಕ ಕ್ರಾಂತಿಯಿಂದಲೇ ಸಮಾಜದಲ್ಲಿ ದೊಡ್ಡ ಬದಲಾವಣೆ ಸಾಧ್ಯ ಎಂದು ಕುವೆಂಪು ಅವರು ನಂಬಿದ್ದರು. ನಾನು ಬದಲಾದರೆ ಸಮಾಜ ಬದಲಿಸಬಹುದು ಎಂಬುದು ಕುವೆಂಪು ಅವರ ಒಟ್ಟು ಸಂದೇಶದ ಸಾರ. ಮೌಢ್ಯ ಮತ್ತು ಪುರೋಹಿತಶಾಹಿ ಇವೆರಡು ಸಮಾಜದ ಸಮಸ್ಯೆಗಳಿಗೆ ಮೂಲ ಕಾರಣ ಎಂಬುದನ್ನು ಕುವೆಂಪು ಅವರು ಗ್ರಹಿಸಿದ್ದರು’ ಎಂದು ಕೆ.ವಿ. ನಾರಾಯಣ ಹೇಳಿದರು.

ಕುಮಾರಸ್ವಾಮಿ ಯುವಜನರ ದಾರಿ ತಪ್ಪಿಸುತ್ತಿದ್ದಾರೆ: ಎಲ್‌. ಎನ್.‌ ಮುಕುಂದರಾಜ್

‘ಕವಿವಾಣಿಯಿಂದ ಕರ್ನಾಟಕ ಮಾದರಿಯಕೆಗೆ’ ಎಂಬ ಆಶಯದೊಂದಿಗೆ ನಡೆದ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದ ಚಿಂತಕರಾದ ಎಲ್. ಎನ್. ಮುಕುಂದರಾಜ್ ಅವರು, ‘ಕುವೆಂಪು ಅವರು 50 ವರ್ಷಗಳ ಹಿಂದೆ ಇದೇ ಸಭಾಂಗಣದಲ್ಲಿ ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಭಾಷಣ ಮಾಡುವಾಗ ʼಓ ಬನ್ನಿ ಸೋದರರೆ… ಬೇಗ ಬನ್ನಿʼ ಎಂಬ ಪದ್ಯ ಓದಿದ್ದರು. ಇಂದು ನಮಗೆ ವೈಚಾರಿಕ ಮತ್ತು ಸಾಂಸ್ಕೃತಿಕ ಕ್ರಾಂತಿಗಳೆರಡೂ ಮುಖ್ಯವಾಗಿವೆ’ ಎಂದರು.

‘ನಾಲ್ವಡಿಯವರು ಜಾರಿಗೆ ತಂದ ಮೀಸಲಾತಿಯಿಂದ ನಾವು ವಿದ್ಯೆ ಪಡೆದಿದ್ದೇವೆ. ಆದರೂ, ಶೂದ್ರರನ್ನು ತುಳಿಯುವ ಕೆಲಸ ಇಂದೂ ನಡೆಯುತ್ತಿದೆ. ರಕ್ತಪಾತದ ಮೂಲಕ ಬಸವಾದಿ ಶರಣರನ್ನು ಕೊಲ್ಲಲಾಯಿತು. ಶೂದ್ರರ ಪರವಿದ್ದ ಗಾಂಧಿಯವರನ್ನೂ ಕೊಂದರು. ಆದರೆ, ಕುವೆಂಪುರವರು ರಕ್ತಕ್ರಾಂತಿಯ ಬದಲಾಗಿ ವಿಚಾರ ಕ್ರಾಂತಿಗೆ ಮತ್ತು ಸಾಂಸ್ಕೃತಿಕ ಕ್ರಾಂತಿಗೆ ಕರೆ ನೀಡಿದರು’ ಎಂದು ತಿಳಿಸಿದರು.

‘ಮಂಡ್ಯದ ಕರೆಗೋಡಿನಲ್ಲಿ ನಡೆದಿದ್ದು ತಾಯಂದಿರು ತಲೆತಗ್ಗಿಸುವ ಕೆಲಸ. ತಮ್ಮ ಮಕ್ಕಳು ಓದಿ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಎಲ್ಲ ತಾಯಂದಿರೂ ಬಯಸುತ್ತಾರೆ. ಕೇಸರಿ ಶಾಲು ಹಾಕೊಂಡು ಕೇಸು ಹಾಕಿಸಿಕೊಳ್ಳಲು ಅಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿ ಯುವಜನರ ದಾರಿ ತಪ್ಪಿಸುತ್ತಿದ್ದಾರೆ. ಕನ್ನಡದ ಪರವಿದ್ದ ಪಕ್ಷ ಇಂದು ಕೋಮುವಾದಿಗಳೊಂದಿಗೆ ಸೇರಿ ಹಾಳಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಕುವೆಂಪು ಸಂದೇಶದ ಕೆಲವು ಸಾಲುಗಳನ್ನ ಓದುವುದರ ಮೂಲಕ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್‌ ಕಾರ್ಯಕ್ರಮ ಉದ್ಘಾಟಿಸಿದರು. ʼಯುವ ಸ್ಪಂಧನʼ ಗೋಷ್ಠಿಯಲ್ಲಿ ಭಾಗವಹಿಸಿದ್ದ ನಟ ಡಾಲಿ ಧನಂಜಯ್ ಕುವೆಂಪು ಅವರ ಭಾಷಣದ ಕೆಲವು ಸಾಲುಗಳನ್ನು ಓದಿದರು. ಕೊಡಗಿನ ಡಾ. ಕಾವೇರಿ, ಬೆಂಗಳೂರಿನ ಕಾವ್ಯಶ್ರೀ, ಔರಾದ್‌ʼನ ಬಾಲಾಜಿ ಕುಂಬಾರ್, ಮಡಿಕೇರಿಯ ಡಾ. ಮುಸ್ತಫಾ ಕೆ.ಎಚ್., ಮಹೇಶ ಸಿ. ಮತ್ತು ಮೈಸೂರು ವಿ.ವಿ ಸಂಶೋಧಕರಾದ ಧನಲಕ್ಷ್ಮಿ ಯುವಸ್ಪಂಧನ ಗೋಷ್ಠಿಯಲ್ಲಿ ಮಾತನಾಡಿದರು.

ಕೃಷ್ಣಮೂರ್ತಿ ಚಮರಂ ಸ್ವಾಗತಿಸಿದರು. ರಮೇಶ್ ಗೌಡ ನಾಗಮಂಗಲ ಪ್ರಸ್ತಾವಿಕ ಮಾತುಗಳನ್ನಾಡಿದರು. ಜಯಶಂಕರ ಹಲಗೂರು ಕಾರ್ಯಕ್ರಮ ನಿರ್ವಹಿಸಿದರು. ಚಿಂತನ್ ವಿಕಾಸ್ ಮೈಸೂರು ಮತ್ತು ಗೋವಿಂದರಾಜು ಚಾಮನಕೊಪ್ಪಲು ತಂಡಗಳು ಕುವೆಂಪು ಹಾಡುಗಳನ್ನು ಪ್ರಸ್ತುತಪಡಿಸಿದರು.

ಇದನ್ನೂ ಓದಿ; ಮತೀಯವಾದಿಗಳಿಗೆ ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ: ಬಿ.ಟಿ. ಲಲಿತಾ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...