Homeಕರ್ನಾಟಕ'ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದ'ವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ. ನಾರಾಯಣ

‘ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದ’ವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ. ನಾರಾಯಣ

- Advertisement -
- Advertisement -

ರಕ್ತಕ್ರಾಂತಿಗೆ ಸಮ್ಮತಿಸದ ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರು ಉಗ್ರ ರಾಷ್ಟ್ರೀಯವಾದವನ್ನೂ ವಿರೋಧಿಸಿದ್ದರು ಎಂದು ಹಿರಿಯ ಸಾಹಿತಿ ಕೆ.ವಿ. ನಾರಾಯಣ ತಿಳಿಸಿದರು.

ಅವರು ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರ ʼವಿಚಾರ ಕ್ರಾಂತಿಗೆ ಆಹ್ವಾನʼ ಮತ್ತು ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಎಂಬ ಎರಡೂ ಯುಗಪ್ರವರ್ತಕ ಭಾಷಣಗಳಿಗೆ 50 ವರ್ಷಗಳು ತುಂಬುತ್ತಿರುವ ನೆನಪಿನಲ್ಲಿ ಜಾಗೃತ ಕರ್ನಾಟಕ ಸಂಘಟನೆಯು ಮೈಸೂರಿನ ಮಹಾರಾಜ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಕುವೆಂಪು ಕ್ರಾಂತಿ ಕಹಳೆ – 50′ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ʼವೈಚಾರಿಕ ದೃಷ್ಟಿʼ ಮತ್ತು ʼವಿಜ್ಞಾನ ಬುದ್ದಿʼ ಎಂಬ ಎರಡು ಪದಗಳನ್ನು ಕುವೆಂಪು ಅವರು ತಮ್ಮ ಸಾಹಿತ್ಯದಲ್ಲಿ ಅತಿಯಾಗಿ ಬಳಸಿದ್ದರು. ಹಲವು ಬಾರಿ ಇದನ್ನ ಸಂಸ್ಕೃತಿ ಕ್ರಾಂತಿ, ವಿಚಾರ ಕ್ರಾಂತಿ ಎಂದೂ ಹೇಳಿದ್ದಿದೆ. ಆದರೆ ರಾಜಕೀಯ ಅಥವಾ ಆರ್ಥಿಕ ಕ್ರಾಂತಿ ಎಂಬ ಪದಗಳನ್ನು ಕುವೆಂಪು ಅವರು ಬಳಸಿಲ್ಲ. ಸಾಂಸ್ಕೃತಿಕ ಮತ್ತು ವೈಚಾರಿಕ ಕ್ರಾಂತಿಯಿಂದಲೇ ಸಮಾಜದಲ್ಲಿ ದೊಡ್ಡ ಬದಲಾವಣೆ ಸಾಧ್ಯ ಎಂದು ಕುವೆಂಪು ಅವರು ನಂಬಿದ್ದರು. ನಾನು ಬದಲಾದರೆ ಸಮಾಜ ಬದಲಿಸಬಹುದು ಎಂಬುದು ಕುವೆಂಪು ಅವರ ಒಟ್ಟು ಸಂದೇಶದ ಸಾರ. ಮೌಢ್ಯ ಮತ್ತು ಪುರೋಹಿತಶಾಹಿ ಇವೆರಡು ಸಮಾಜದ ಸಮಸ್ಯೆಗಳಿಗೆ ಮೂಲ ಕಾರಣ ಎಂಬುದನ್ನು ಕುವೆಂಪು ಅವರು ಗ್ರಹಿಸಿದ್ದರು’ ಎಂದು ಕೆ.ವಿ. ನಾರಾಯಣ ಹೇಳಿದರು.

ಕುಮಾರಸ್ವಾಮಿ ಯುವಜನರ ದಾರಿ ತಪ್ಪಿಸುತ್ತಿದ್ದಾರೆ: ಎಲ್‌. ಎನ್.‌ ಮುಕುಂದರಾಜ್

‘ಕವಿವಾಣಿಯಿಂದ ಕರ್ನಾಟಕ ಮಾದರಿಯಕೆಗೆ’ ಎಂಬ ಆಶಯದೊಂದಿಗೆ ನಡೆದ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದ ಚಿಂತಕರಾದ ಎಲ್. ಎನ್. ಮುಕುಂದರಾಜ್ ಅವರು, ‘ಕುವೆಂಪು ಅವರು 50 ವರ್ಷಗಳ ಹಿಂದೆ ಇದೇ ಸಭಾಂಗಣದಲ್ಲಿ ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಭಾಷಣ ಮಾಡುವಾಗ ʼಓ ಬನ್ನಿ ಸೋದರರೆ… ಬೇಗ ಬನ್ನಿʼ ಎಂಬ ಪದ್ಯ ಓದಿದ್ದರು. ಇಂದು ನಮಗೆ ವೈಚಾರಿಕ ಮತ್ತು ಸಾಂಸ್ಕೃತಿಕ ಕ್ರಾಂತಿಗಳೆರಡೂ ಮುಖ್ಯವಾಗಿವೆ’ ಎಂದರು.

‘ನಾಲ್ವಡಿಯವರು ಜಾರಿಗೆ ತಂದ ಮೀಸಲಾತಿಯಿಂದ ನಾವು ವಿದ್ಯೆ ಪಡೆದಿದ್ದೇವೆ. ಆದರೂ, ಶೂದ್ರರನ್ನು ತುಳಿಯುವ ಕೆಲಸ ಇಂದೂ ನಡೆಯುತ್ತಿದೆ. ರಕ್ತಪಾತದ ಮೂಲಕ ಬಸವಾದಿ ಶರಣರನ್ನು ಕೊಲ್ಲಲಾಯಿತು. ಶೂದ್ರರ ಪರವಿದ್ದ ಗಾಂಧಿಯವರನ್ನೂ ಕೊಂದರು. ಆದರೆ, ಕುವೆಂಪುರವರು ರಕ್ತಕ್ರಾಂತಿಯ ಬದಲಾಗಿ ವಿಚಾರ ಕ್ರಾಂತಿಗೆ ಮತ್ತು ಸಾಂಸ್ಕೃತಿಕ ಕ್ರಾಂತಿಗೆ ಕರೆ ನೀಡಿದರು’ ಎಂದು ತಿಳಿಸಿದರು.

‘ಮಂಡ್ಯದ ಕರೆಗೋಡಿನಲ್ಲಿ ನಡೆದಿದ್ದು ತಾಯಂದಿರು ತಲೆತಗ್ಗಿಸುವ ಕೆಲಸ. ತಮ್ಮ ಮಕ್ಕಳು ಓದಿ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಎಲ್ಲ ತಾಯಂದಿರೂ ಬಯಸುತ್ತಾರೆ. ಕೇಸರಿ ಶಾಲು ಹಾಕೊಂಡು ಕೇಸು ಹಾಕಿಸಿಕೊಳ್ಳಲು ಅಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿ ಯುವಜನರ ದಾರಿ ತಪ್ಪಿಸುತ್ತಿದ್ದಾರೆ. ಕನ್ನಡದ ಪರವಿದ್ದ ಪಕ್ಷ ಇಂದು ಕೋಮುವಾದಿಗಳೊಂದಿಗೆ ಸೇರಿ ಹಾಳಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಕುವೆಂಪು ಸಂದೇಶದ ಕೆಲವು ಸಾಲುಗಳನ್ನ ಓದುವುದರ ಮೂಲಕ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್‌ ಕಾರ್ಯಕ್ರಮ ಉದ್ಘಾಟಿಸಿದರು. ʼಯುವ ಸ್ಪಂಧನʼ ಗೋಷ್ಠಿಯಲ್ಲಿ ಭಾಗವಹಿಸಿದ್ದ ನಟ ಡಾಲಿ ಧನಂಜಯ್ ಕುವೆಂಪು ಅವರ ಭಾಷಣದ ಕೆಲವು ಸಾಲುಗಳನ್ನು ಓದಿದರು. ಕೊಡಗಿನ ಡಾ. ಕಾವೇರಿ, ಬೆಂಗಳೂರಿನ ಕಾವ್ಯಶ್ರೀ, ಔರಾದ್‌ʼನ ಬಾಲಾಜಿ ಕುಂಬಾರ್, ಮಡಿಕೇರಿಯ ಡಾ. ಮುಸ್ತಫಾ ಕೆ.ಎಚ್., ಮಹೇಶ ಸಿ. ಮತ್ತು ಮೈಸೂರು ವಿ.ವಿ ಸಂಶೋಧಕರಾದ ಧನಲಕ್ಷ್ಮಿ ಯುವಸ್ಪಂಧನ ಗೋಷ್ಠಿಯಲ್ಲಿ ಮಾತನಾಡಿದರು.

ಕೃಷ್ಣಮೂರ್ತಿ ಚಮರಂ ಸ್ವಾಗತಿಸಿದರು. ರಮೇಶ್ ಗೌಡ ನಾಗಮಂಗಲ ಪ್ರಸ್ತಾವಿಕ ಮಾತುಗಳನ್ನಾಡಿದರು. ಜಯಶಂಕರ ಹಲಗೂರು ಕಾರ್ಯಕ್ರಮ ನಿರ್ವಹಿಸಿದರು. ಚಿಂತನ್ ವಿಕಾಸ್ ಮೈಸೂರು ಮತ್ತು ಗೋವಿಂದರಾಜು ಚಾಮನಕೊಪ್ಪಲು ತಂಡಗಳು ಕುವೆಂಪು ಹಾಡುಗಳನ್ನು ಪ್ರಸ್ತುತಪಡಿಸಿದರು.

ಇದನ್ನೂ ಓದಿ; ಮತೀಯವಾದಿಗಳಿಗೆ ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ: ಬಿ.ಟಿ. ಲಲಿತಾ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...