Homeಕರ್ನಾಟಕ'ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದ'ವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ. ನಾರಾಯಣ

‘ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದ’ವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ. ನಾರಾಯಣ

- Advertisement -
- Advertisement -

ರಕ್ತಕ್ರಾಂತಿಗೆ ಸಮ್ಮತಿಸದ ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರು ಉಗ್ರ ರಾಷ್ಟ್ರೀಯವಾದವನ್ನೂ ವಿರೋಧಿಸಿದ್ದರು ಎಂದು ಹಿರಿಯ ಸಾಹಿತಿ ಕೆ.ವಿ. ನಾರಾಯಣ ತಿಳಿಸಿದರು.

ಅವರು ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರ ʼವಿಚಾರ ಕ್ರಾಂತಿಗೆ ಆಹ್ವಾನʼ ಮತ್ತು ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಎಂಬ ಎರಡೂ ಯುಗಪ್ರವರ್ತಕ ಭಾಷಣಗಳಿಗೆ 50 ವರ್ಷಗಳು ತುಂಬುತ್ತಿರುವ ನೆನಪಿನಲ್ಲಿ ಜಾಗೃತ ಕರ್ನಾಟಕ ಸಂಘಟನೆಯು ಮೈಸೂರಿನ ಮಹಾರಾಜ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಕುವೆಂಪು ಕ್ರಾಂತಿ ಕಹಳೆ – 50′ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ʼವೈಚಾರಿಕ ದೃಷ್ಟಿʼ ಮತ್ತು ʼವಿಜ್ಞಾನ ಬುದ್ದಿʼ ಎಂಬ ಎರಡು ಪದಗಳನ್ನು ಕುವೆಂಪು ಅವರು ತಮ್ಮ ಸಾಹಿತ್ಯದಲ್ಲಿ ಅತಿಯಾಗಿ ಬಳಸಿದ್ದರು. ಹಲವು ಬಾರಿ ಇದನ್ನ ಸಂಸ್ಕೃತಿ ಕ್ರಾಂತಿ, ವಿಚಾರ ಕ್ರಾಂತಿ ಎಂದೂ ಹೇಳಿದ್ದಿದೆ. ಆದರೆ ರಾಜಕೀಯ ಅಥವಾ ಆರ್ಥಿಕ ಕ್ರಾಂತಿ ಎಂಬ ಪದಗಳನ್ನು ಕುವೆಂಪು ಅವರು ಬಳಸಿಲ್ಲ. ಸಾಂಸ್ಕೃತಿಕ ಮತ್ತು ವೈಚಾರಿಕ ಕ್ರಾಂತಿಯಿಂದಲೇ ಸಮಾಜದಲ್ಲಿ ದೊಡ್ಡ ಬದಲಾವಣೆ ಸಾಧ್ಯ ಎಂದು ಕುವೆಂಪು ಅವರು ನಂಬಿದ್ದರು. ನಾನು ಬದಲಾದರೆ ಸಮಾಜ ಬದಲಿಸಬಹುದು ಎಂಬುದು ಕುವೆಂಪು ಅವರ ಒಟ್ಟು ಸಂದೇಶದ ಸಾರ. ಮೌಢ್ಯ ಮತ್ತು ಪುರೋಹಿತಶಾಹಿ ಇವೆರಡು ಸಮಾಜದ ಸಮಸ್ಯೆಗಳಿಗೆ ಮೂಲ ಕಾರಣ ಎಂಬುದನ್ನು ಕುವೆಂಪು ಅವರು ಗ್ರಹಿಸಿದ್ದರು’ ಎಂದು ಕೆ.ವಿ. ನಾರಾಯಣ ಹೇಳಿದರು.

ಕುಮಾರಸ್ವಾಮಿ ಯುವಜನರ ದಾರಿ ತಪ್ಪಿಸುತ್ತಿದ್ದಾರೆ: ಎಲ್‌. ಎನ್.‌ ಮುಕುಂದರಾಜ್

‘ಕವಿವಾಣಿಯಿಂದ ಕರ್ನಾಟಕ ಮಾದರಿಯಕೆಗೆ’ ಎಂಬ ಆಶಯದೊಂದಿಗೆ ನಡೆದ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದ ಚಿಂತಕರಾದ ಎಲ್. ಎನ್. ಮುಕುಂದರಾಜ್ ಅವರು, ‘ಕುವೆಂಪು ಅವರು 50 ವರ್ಷಗಳ ಹಿಂದೆ ಇದೇ ಸಭಾಂಗಣದಲ್ಲಿ ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಭಾಷಣ ಮಾಡುವಾಗ ʼಓ ಬನ್ನಿ ಸೋದರರೆ… ಬೇಗ ಬನ್ನಿʼ ಎಂಬ ಪದ್ಯ ಓದಿದ್ದರು. ಇಂದು ನಮಗೆ ವೈಚಾರಿಕ ಮತ್ತು ಸಾಂಸ್ಕೃತಿಕ ಕ್ರಾಂತಿಗಳೆರಡೂ ಮುಖ್ಯವಾಗಿವೆ’ ಎಂದರು.

‘ನಾಲ್ವಡಿಯವರು ಜಾರಿಗೆ ತಂದ ಮೀಸಲಾತಿಯಿಂದ ನಾವು ವಿದ್ಯೆ ಪಡೆದಿದ್ದೇವೆ. ಆದರೂ, ಶೂದ್ರರನ್ನು ತುಳಿಯುವ ಕೆಲಸ ಇಂದೂ ನಡೆಯುತ್ತಿದೆ. ರಕ್ತಪಾತದ ಮೂಲಕ ಬಸವಾದಿ ಶರಣರನ್ನು ಕೊಲ್ಲಲಾಯಿತು. ಶೂದ್ರರ ಪರವಿದ್ದ ಗಾಂಧಿಯವರನ್ನೂ ಕೊಂದರು. ಆದರೆ, ಕುವೆಂಪುರವರು ರಕ್ತಕ್ರಾಂತಿಯ ಬದಲಾಗಿ ವಿಚಾರ ಕ್ರಾಂತಿಗೆ ಮತ್ತು ಸಾಂಸ್ಕೃತಿಕ ಕ್ರಾಂತಿಗೆ ಕರೆ ನೀಡಿದರು’ ಎಂದು ತಿಳಿಸಿದರು.

‘ಮಂಡ್ಯದ ಕರೆಗೋಡಿನಲ್ಲಿ ನಡೆದಿದ್ದು ತಾಯಂದಿರು ತಲೆತಗ್ಗಿಸುವ ಕೆಲಸ. ತಮ್ಮ ಮಕ್ಕಳು ಓದಿ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಎಲ್ಲ ತಾಯಂದಿರೂ ಬಯಸುತ್ತಾರೆ. ಕೇಸರಿ ಶಾಲು ಹಾಕೊಂಡು ಕೇಸು ಹಾಕಿಸಿಕೊಳ್ಳಲು ಅಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿ ಯುವಜನರ ದಾರಿ ತಪ್ಪಿಸುತ್ತಿದ್ದಾರೆ. ಕನ್ನಡದ ಪರವಿದ್ದ ಪಕ್ಷ ಇಂದು ಕೋಮುವಾದಿಗಳೊಂದಿಗೆ ಸೇರಿ ಹಾಳಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಕುವೆಂಪು ಸಂದೇಶದ ಕೆಲವು ಸಾಲುಗಳನ್ನ ಓದುವುದರ ಮೂಲಕ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್‌ ಕಾರ್ಯಕ್ರಮ ಉದ್ಘಾಟಿಸಿದರು. ʼಯುವ ಸ್ಪಂಧನʼ ಗೋಷ್ಠಿಯಲ್ಲಿ ಭಾಗವಹಿಸಿದ್ದ ನಟ ಡಾಲಿ ಧನಂಜಯ್ ಕುವೆಂಪು ಅವರ ಭಾಷಣದ ಕೆಲವು ಸಾಲುಗಳನ್ನು ಓದಿದರು. ಕೊಡಗಿನ ಡಾ. ಕಾವೇರಿ, ಬೆಂಗಳೂರಿನ ಕಾವ್ಯಶ್ರೀ, ಔರಾದ್‌ʼನ ಬಾಲಾಜಿ ಕುಂಬಾರ್, ಮಡಿಕೇರಿಯ ಡಾ. ಮುಸ್ತಫಾ ಕೆ.ಎಚ್., ಮಹೇಶ ಸಿ. ಮತ್ತು ಮೈಸೂರು ವಿ.ವಿ ಸಂಶೋಧಕರಾದ ಧನಲಕ್ಷ್ಮಿ ಯುವಸ್ಪಂಧನ ಗೋಷ್ಠಿಯಲ್ಲಿ ಮಾತನಾಡಿದರು.

ಕೃಷ್ಣಮೂರ್ತಿ ಚಮರಂ ಸ್ವಾಗತಿಸಿದರು. ರಮೇಶ್ ಗೌಡ ನಾಗಮಂಗಲ ಪ್ರಸ್ತಾವಿಕ ಮಾತುಗಳನ್ನಾಡಿದರು. ಜಯಶಂಕರ ಹಲಗೂರು ಕಾರ್ಯಕ್ರಮ ನಿರ್ವಹಿಸಿದರು. ಚಿಂತನ್ ವಿಕಾಸ್ ಮೈಸೂರು ಮತ್ತು ಗೋವಿಂದರಾಜು ಚಾಮನಕೊಪ್ಪಲು ತಂಡಗಳು ಕುವೆಂಪು ಹಾಡುಗಳನ್ನು ಪ್ರಸ್ತುತಪಡಿಸಿದರು.

ಇದನ್ನೂ ಓದಿ; ಮತೀಯವಾದಿಗಳಿಗೆ ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ: ಬಿ.ಟಿ. ಲಲಿತಾ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...