Homeಕರ್ನಾಟಕ'ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದ'ವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ. ನಾರಾಯಣ

‘ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದ’ವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ. ನಾರಾಯಣ

- Advertisement -
- Advertisement -

ರಕ್ತಕ್ರಾಂತಿಗೆ ಸಮ್ಮತಿಸದ ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರು ಉಗ್ರ ರಾಷ್ಟ್ರೀಯವಾದವನ್ನೂ ವಿರೋಧಿಸಿದ್ದರು ಎಂದು ಹಿರಿಯ ಸಾಹಿತಿ ಕೆ.ವಿ. ನಾರಾಯಣ ತಿಳಿಸಿದರು.

ಅವರು ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರ ʼವಿಚಾರ ಕ್ರಾಂತಿಗೆ ಆಹ್ವಾನʼ ಮತ್ತು ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಎಂಬ ಎರಡೂ ಯುಗಪ್ರವರ್ತಕ ಭಾಷಣಗಳಿಗೆ 50 ವರ್ಷಗಳು ತುಂಬುತ್ತಿರುವ ನೆನಪಿನಲ್ಲಿ ಜಾಗೃತ ಕರ್ನಾಟಕ ಸಂಘಟನೆಯು ಮೈಸೂರಿನ ಮಹಾರಾಜ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಕುವೆಂಪು ಕ್ರಾಂತಿ ಕಹಳೆ – 50′ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ʼವೈಚಾರಿಕ ದೃಷ್ಟಿʼ ಮತ್ತು ʼವಿಜ್ಞಾನ ಬುದ್ದಿʼ ಎಂಬ ಎರಡು ಪದಗಳನ್ನು ಕುವೆಂಪು ಅವರು ತಮ್ಮ ಸಾಹಿತ್ಯದಲ್ಲಿ ಅತಿಯಾಗಿ ಬಳಸಿದ್ದರು. ಹಲವು ಬಾರಿ ಇದನ್ನ ಸಂಸ್ಕೃತಿ ಕ್ರಾಂತಿ, ವಿಚಾರ ಕ್ರಾಂತಿ ಎಂದೂ ಹೇಳಿದ್ದಿದೆ. ಆದರೆ ರಾಜಕೀಯ ಅಥವಾ ಆರ್ಥಿಕ ಕ್ರಾಂತಿ ಎಂಬ ಪದಗಳನ್ನು ಕುವೆಂಪು ಅವರು ಬಳಸಿಲ್ಲ. ಸಾಂಸ್ಕೃತಿಕ ಮತ್ತು ವೈಚಾರಿಕ ಕ್ರಾಂತಿಯಿಂದಲೇ ಸಮಾಜದಲ್ಲಿ ದೊಡ್ಡ ಬದಲಾವಣೆ ಸಾಧ್ಯ ಎಂದು ಕುವೆಂಪು ಅವರು ನಂಬಿದ್ದರು. ನಾನು ಬದಲಾದರೆ ಸಮಾಜ ಬದಲಿಸಬಹುದು ಎಂಬುದು ಕುವೆಂಪು ಅವರ ಒಟ್ಟು ಸಂದೇಶದ ಸಾರ. ಮೌಢ್ಯ ಮತ್ತು ಪುರೋಹಿತಶಾಹಿ ಇವೆರಡು ಸಮಾಜದ ಸಮಸ್ಯೆಗಳಿಗೆ ಮೂಲ ಕಾರಣ ಎಂಬುದನ್ನು ಕುವೆಂಪು ಅವರು ಗ್ರಹಿಸಿದ್ದರು’ ಎಂದು ಕೆ.ವಿ. ನಾರಾಯಣ ಹೇಳಿದರು.

ಕುಮಾರಸ್ವಾಮಿ ಯುವಜನರ ದಾರಿ ತಪ್ಪಿಸುತ್ತಿದ್ದಾರೆ: ಎಲ್‌. ಎನ್.‌ ಮುಕುಂದರಾಜ್

‘ಕವಿವಾಣಿಯಿಂದ ಕರ್ನಾಟಕ ಮಾದರಿಯಕೆಗೆ’ ಎಂಬ ಆಶಯದೊಂದಿಗೆ ನಡೆದ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದ ಚಿಂತಕರಾದ ಎಲ್. ಎನ್. ಮುಕುಂದರಾಜ್ ಅವರು, ‘ಕುವೆಂಪು ಅವರು 50 ವರ್ಷಗಳ ಹಿಂದೆ ಇದೇ ಸಭಾಂಗಣದಲ್ಲಿ ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಭಾಷಣ ಮಾಡುವಾಗ ʼಓ ಬನ್ನಿ ಸೋದರರೆ… ಬೇಗ ಬನ್ನಿʼ ಎಂಬ ಪದ್ಯ ಓದಿದ್ದರು. ಇಂದು ನಮಗೆ ವೈಚಾರಿಕ ಮತ್ತು ಸಾಂಸ್ಕೃತಿಕ ಕ್ರಾಂತಿಗಳೆರಡೂ ಮುಖ್ಯವಾಗಿವೆ’ ಎಂದರು.

‘ನಾಲ್ವಡಿಯವರು ಜಾರಿಗೆ ತಂದ ಮೀಸಲಾತಿಯಿಂದ ನಾವು ವಿದ್ಯೆ ಪಡೆದಿದ್ದೇವೆ. ಆದರೂ, ಶೂದ್ರರನ್ನು ತುಳಿಯುವ ಕೆಲಸ ಇಂದೂ ನಡೆಯುತ್ತಿದೆ. ರಕ್ತಪಾತದ ಮೂಲಕ ಬಸವಾದಿ ಶರಣರನ್ನು ಕೊಲ್ಲಲಾಯಿತು. ಶೂದ್ರರ ಪರವಿದ್ದ ಗಾಂಧಿಯವರನ್ನೂ ಕೊಂದರು. ಆದರೆ, ಕುವೆಂಪುರವರು ರಕ್ತಕ್ರಾಂತಿಯ ಬದಲಾಗಿ ವಿಚಾರ ಕ್ರಾಂತಿಗೆ ಮತ್ತು ಸಾಂಸ್ಕೃತಿಕ ಕ್ರಾಂತಿಗೆ ಕರೆ ನೀಡಿದರು’ ಎಂದು ತಿಳಿಸಿದರು.

‘ಮಂಡ್ಯದ ಕರೆಗೋಡಿನಲ್ಲಿ ನಡೆದಿದ್ದು ತಾಯಂದಿರು ತಲೆತಗ್ಗಿಸುವ ಕೆಲಸ. ತಮ್ಮ ಮಕ್ಕಳು ಓದಿ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಎಲ್ಲ ತಾಯಂದಿರೂ ಬಯಸುತ್ತಾರೆ. ಕೇಸರಿ ಶಾಲು ಹಾಕೊಂಡು ಕೇಸು ಹಾಕಿಸಿಕೊಳ್ಳಲು ಅಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿ ಯುವಜನರ ದಾರಿ ತಪ್ಪಿಸುತ್ತಿದ್ದಾರೆ. ಕನ್ನಡದ ಪರವಿದ್ದ ಪಕ್ಷ ಇಂದು ಕೋಮುವಾದಿಗಳೊಂದಿಗೆ ಸೇರಿ ಹಾಳಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಕುವೆಂಪು ಸಂದೇಶದ ಕೆಲವು ಸಾಲುಗಳನ್ನ ಓದುವುದರ ಮೂಲಕ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್‌ ಕಾರ್ಯಕ್ರಮ ಉದ್ಘಾಟಿಸಿದರು. ʼಯುವ ಸ್ಪಂಧನʼ ಗೋಷ್ಠಿಯಲ್ಲಿ ಭಾಗವಹಿಸಿದ್ದ ನಟ ಡಾಲಿ ಧನಂಜಯ್ ಕುವೆಂಪು ಅವರ ಭಾಷಣದ ಕೆಲವು ಸಾಲುಗಳನ್ನು ಓದಿದರು. ಕೊಡಗಿನ ಡಾ. ಕಾವೇರಿ, ಬೆಂಗಳೂರಿನ ಕಾವ್ಯಶ್ರೀ, ಔರಾದ್‌ʼನ ಬಾಲಾಜಿ ಕುಂಬಾರ್, ಮಡಿಕೇರಿಯ ಡಾ. ಮುಸ್ತಫಾ ಕೆ.ಎಚ್., ಮಹೇಶ ಸಿ. ಮತ್ತು ಮೈಸೂರು ವಿ.ವಿ ಸಂಶೋಧಕರಾದ ಧನಲಕ್ಷ್ಮಿ ಯುವಸ್ಪಂಧನ ಗೋಷ್ಠಿಯಲ್ಲಿ ಮಾತನಾಡಿದರು.

ಕೃಷ್ಣಮೂರ್ತಿ ಚಮರಂ ಸ್ವಾಗತಿಸಿದರು. ರಮೇಶ್ ಗೌಡ ನಾಗಮಂಗಲ ಪ್ರಸ್ತಾವಿಕ ಮಾತುಗಳನ್ನಾಡಿದರು. ಜಯಶಂಕರ ಹಲಗೂರು ಕಾರ್ಯಕ್ರಮ ನಿರ್ವಹಿಸಿದರು. ಚಿಂತನ್ ವಿಕಾಸ್ ಮೈಸೂರು ಮತ್ತು ಗೋವಿಂದರಾಜು ಚಾಮನಕೊಪ್ಪಲು ತಂಡಗಳು ಕುವೆಂಪು ಹಾಡುಗಳನ್ನು ಪ್ರಸ್ತುತಪಡಿಸಿದರು.

ಇದನ್ನೂ ಓದಿ; ಮತೀಯವಾದಿಗಳಿಗೆ ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ: ಬಿ.ಟಿ. ಲಲಿತಾ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...