Homeಕರ್ನಾಟಕಸಿ.ಟಿ.ರವಿಯ ಬಾಯಲ್ಲಿ ಕುವೆಂಪು, ಶಾಂತವೇರಿಯವರ ಹೆಸರು: ಹೇಳಿಕೊಳ್ಳಲು ಸಿ.ಟಿ.ರವಿಗೆ ಒಂದೂ ಸಂಘಪರಿವಾರದ ಹೆಸರು ಸಿಗಲಿಲ್ಲವೇಕೆ?

ಸಿ.ಟಿ.ರವಿಯ ಬಾಯಲ್ಲಿ ಕುವೆಂಪು, ಶಾಂತವೇರಿಯವರ ಹೆಸರು: ಹೇಳಿಕೊಳ್ಳಲು ಸಿ.ಟಿ.ರವಿಗೆ ಒಂದೂ ಸಂಘಪರಿವಾರದ ಹೆಸರು ಸಿಗಲಿಲ್ಲವೇಕೆ?

- Advertisement -
- Advertisement -

ಡಿ.ಕೆ.ಶಿವಕುಮಾರ್ ರ ಬಂಧನಕ್ಕೆ ಒಕ್ಕಲಿಗರ ಸಂಘಗಳು ಸೇರಿ ಮಾಡಿದ ಪ್ರತಿಭಟನೆಯ ಕುರಿತು ಒಕ್ಕಲಿಗ ಸಮುದಾಯಕ್ಕೆ ಸೇರಿದ ಬಿಜೆಪಿ ಸಚಿವ ಸಿ.ಟಿ.ರವಿ ಆಕ್ಷೇಪಣೆ ಎತ್ತಿ ಮಾತನಾಡಿದರು. ಜಾತಿಯ ಆಧಾರದಲ್ಲಿ ಪ್ರತಿಭಟಿಸಬೇಡಿ ಎಂದು ಅವರು ಹೇಳಲಿಲ್ಲ. ಈ ಮಾತನ್ನು ಬೇರೆ ಕೆಲವರು ಹೇಳಿದ್ದಾರೆ. ಆರ್.ಅಶೋಕ್ ಸೇರಿದಂತೆ ಹಲವರು ತಪ್ಪು ಮಾಡಿದ್ದಾರೆ, ಅನುಭವಿಸುತ್ತಾರೆ ಅಷ್ಟೇ ಹೊರತು ಇದಕ್ಕೆ ಜಾತಿಯ ಬಣ್ಣ ಬಳಿಯಬೇಡಿ ಎಂದು ಹೇಳಿದರು. ಆದರೆ, ಸಿ.ಟಿ.ರವಿ ತಾನು ಭಿನ್ನವಾಗಿ ಹೇಳಬೇಕು ಎಂಬ ಕಾರಣಕ್ಕೆ ಆಶ್ಚರ್ಯಕರವಾದ ಮಾತುಗಳನ್ನು ಹೇಳಿದರು.

‘ಒಕ್ಕಲಿಗ ಸಮುದಾಯದಲ್ಲಿ ಶಾಂತವೇರಿ ಗೋಪಾಲಗೌಡ, ಕುವೆಂಪು, ಕೆಂಗಲ್ ಹನುಮಂತಯ್ಯರಂಥವರು ಇದ್ದರು. ಅವರನ್ನು ಬಿಟ್ಟು ಡಿ.ಕೆ.ಶಿವಕುಮಾರ್ ಥರದವರನ್ನು ನಿಮ್ಮ ನಾಯಕರೆಂದು ಆರಿಸಿಕೊಳ್ಳುತ್ತೀರಾ (ಡಿಕೆಶಿ ಹೆಸರು ಹೇಳದಿದ್ದರೂ, ಅದೇ ಉದ್ದೇಶದಿಂದ ಹೇಳಿದ್ದು) ಯೋಚಿಸಿ’ ಎಂಬುದು ರವಿಯವರ ಹೇಳಿಕೆಯಾಗಿತ್ತು.

ವಿಪರ್ಯಾಸವೆಂದರೆ, ಕೆಂಗಲ್ ಹನುಮಂತಯ್ಯನವರು ಸಿ.ಟಿ.ರವಿಯವರ ಪಕ್ಷದ ಹಿಂದಿನ ಅವತಾರವಾಗಿದ್ದ ಜನಸಂಘದಲ್ಲೇನೂ ಇರಲಿಲ್ಲ. ಅವರು ಕಾಂಗ್ರೆಸ್ ನಾಯಕರಾಗಿದ್ದರು. ಸಿ.ಟಿ.ರವಿಯವರ ಸಂಘಟನೆ ಆರೆಸ್ಸೆಸ್ ಬ್ರಿಟಿಷರ ಪರವಾಗಿ ಕೆಲಸ ಮಾಡಿದರೆ, ಹನುಮಂತಯ್ಯನವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು 9 ಸಾರಿ ಜೈಲು ಅನುಭವಿಸಿದ್ದರು.

ಇನ್ನು ಶಾಂತವೇರಿ ಗೋಪಾಲಗೌಡರು. ಅವರು ಕಾಂಗ್ರೆಸ್ ವಿರುದ್ಧ ಇದ್ದರು. ಆದರೆ, ಬಿಜೆಪಿ ಹಾಗೂ ಆರೆಸ್ಸೆಸ್‍ಅನ್ನು ಸಂಪೂರ್ಣವಾಗಿ ವಿರೋಧಿಸುವ ಸಮಾಜವಾದಿ ಆಶಯದ ಪಕ್ಷದಲ್ಲಿದ್ದರು. ಸಿ.ಟಿ.ರವಿಯವರ ಪಕ್ಷ ಅಥವಾ ಅವರ ಪೂರ್ವಸೂರಿಗಳು ಭೂಮಾಲೀಕರ ಪರವಾಗಿದ್ದರೆ, ಗೋಪಾಲಗೌಡರು ಗೇಣೀದಾರರ ಪರವಾಗಿದ್ದರು. ಇನ್ನು ರವಿಯವರೇ ಕೊಂಡಾಡಿದ ಗೌಡರ ಸರಳತೆ, ಅತ್ಯಂತ ಕೆಳಸ್ತರದಲ್ಲಿದ್ದ ಜನರ ಪರವಾಗಿ ದನಿಯೆತ್ತುವುದೂ ಸಹಾ ರವಿಯವರ ಪಕ್ಷದ ಧೋರಣೆಯಲ್ಲ. ಹಾಗೆಯೇ ಗೋಪಾಲಗೌಡರು ಜಾತಿ ರಾಜಕಾರಣ ಮಾಡಿರಲಿಲ್ಲ. ರವಿ ಬಂದಿರುವ ಮಲೆನಾಡಿನಿಂದಲೇ ಬಂದ ಗೋಪಾಲಗೌಡರು ಕಾಂಗ್ರೆಸ್ಸಿಗೆ ಸಲ್ಲುವ ವ್ಯಕ್ತಿಯಾಗಿರಲಿಲ್ಲ; ಬಿಜೆಪಿಗಂತೂ ಹತ್ತಿರವೂ ಬರುತ್ತಿರಲಿಲ್ಲ.


ಸಿ.ಟಿ.ರವಿಯಂತಹ ವ್ಯಕ್ತಿಗಳು ಕುವೆಂಪು ಅವರ ಹೆಸರಂತೂ ಹೇಳುವುದೇ ಅಪಚಾರ. ಜಾತಿ, ಧರ್ಮ, ಜನಾಂಗಗಳ ಕಾರಣಕ್ಕೆ ದೂರವಿಡುವ ಸಂಸ್ಕೃತಿಯ ರವಿ, ವಿಶ್ವಮಾನವ ತತ್ವವನ್ನು ಹೇಳಿದ ಕುವೆಂಪು ಅವರ ಹೆಸರನ್ನು ಹೇಳಿದ್ದು ವಿಪರ್ಯಾಸ. ರವಿ ಪ್ರತಿಪಾದಿಸುವ ಹಿಂದಿ, ಹಿಂದೂ ಮತ್ತು ಹಿಂದೂರಾಷ್ಟ್ರದ ಕಟುವಿರೋಧಿಗಳಾಗಿದ್ದ ಕುವೆಂಪು ಆರೆಸ್ಸೆಸ್‍ಅನ್ನು ವಿರೋಧಿಸುತ್ತಿದ್ದರಷ್ಟೇ ಅಲ್ಲ, ತಮ್ಮನ್ನು ಒಕ್ಕಲಿಗರೆಂದು ಕರೆಯುವುದನ್ನೂ ಇಷ್ಟಪಡುತ್ತಿರಲಿಲ್ಲ. ಅವರು ಬದುಕಿರುವಷ್ಟು ಕಾಲ ಆದಿಚುಂಚನಗಿರಿ ಮಠಕ್ಕೆ ಭೇಟಿಯೂ ಕೊಡಲಿಲ್ಲ. ಅಂತರ್ಜಾತಿ ಮದುವೆಗಳನ್ನು ಪ್ರೋತ್ಸಾಹಿಸಿದರು. ಸ್ವತಃ ಅವರ ಮಗನ ಅಂತರ್ಜಾತಿ ಮದುವೆಗೆ ಬೆಂಬಲವಾಗಿ ನಿಂತರು.

ಈಗ ಸಿ.ಟಿ.ರವಿಯ ಮಾತನ್ನೇ ಪರಿಗಣಿಸಿ ಕುವೆಂಪು, ಶಾಂತವೇರಿ ಗೋಪಾಲಗೌಡರು, ಕೆಂಗಲ್ ಹನುಮಂತಯ್ಯರವರನ್ನು ಒಕ್ಕಲಿಗ ಸಮುದಾಯ ಆದರ್ಶವಾಗಿ ಪರಿಗಣಿಸಿದರೆ, ಬಿಜೆಪಿ ಒಕ್ಕಲಿಗ ಸಮುದಾಯದ ಮೊದಲ ಶತ್ರುವಾಗಿಬಿಡುತ್ತದೆ. ಜೊತೆಗೆ ಆರೆಸ್ಸೆಸ್‍ನ ಸಿದ್ಧಾಂತದ ಕಡುವಿರೋಧಿಗಳಾಗಿ ಬದಲಾಗಲೇಬೇಕಾಗುತ್ತದೆ. ಹೀಗಾಗಿಯೇ ಉಳಿದವರು ಅಂತಹ ದೊಡ್ಡವರ ಹೆಸರನ್ನು ಹೇಳುವುದಕ್ಕೆ ಹೆದರುತ್ತಾರೆ. ಒಕ್ಕಲಿಗರ ಸಂಘದ ಬೃಹತ್ ಕಾರ್ಯಕ್ರಮವೊಂದರಲ್ಲಿ ಕುವೆಂಪು ಅವರ ಫೋಟೋ ಹಾಕಿಕೊಂಡಿದ್ದಕ್ಕೆ ದೊಡ್ಡ ವಿರೋಧ ಕೇಳಿ ಬಂದಿತ್ತು.

ದುರಂತವೆಂದರೆ, ಸಿ.ಟಿ.ರವಿ ‘ಇವರು ನಿಮ್ಮ ಆದರ್ಶ’ ಎಂದು ತನ್ನ ಪರಿವಾರದ ಹೆಸರುಗಳನ್ನು ಹೇಳುವುದು ಸಾಧ್ಯವಿಲ್ಲ. ಹಾಗಾಗಿ ಈ ಸದ್ಯ ಡಿ.ಕೆ.ಶಿವಕುಮಾರ್‍ರ ಮೇಲೆ ಕೇಂದ್ರ ಸರ್ಕಾರ ಮುಗಿಬಿದ್ದಿರುವ ಸಂದರ್ಭದಲ್ಲಿ ಒಕ್ಕಲಿಗರು ಬಿಜೆಪಿಯ ವಿರುದ್ಧ ತಿರುಗಿ ಬೀಳುತ್ತಿರುವುದನ್ನು ರವಿ ಗ್ರಹಿಸಿದ್ದಾರೆ. ಜಾತಿಯಾಚೆ ಯೋಚಿಸಿ ಎಂದು ‘ಸಂಘಪರಿವಾರದ ಮೂಲದವರಲ್ಲದ’ ಅಶ್ವತ್ಥನಾರಾಯಣ ಹೇಳುತ್ತಿದ್ದರೆ, ಜಾತಿ-ಧರ್ಮಗಳನ್ನು ಬಳಸಿಯೇ ರಾಜಕಾರಣ ಮಾಡುವ ಅಭ್ಯಾಸದ ರವಿಗೆ ಒಕ್ಕಲಿಗ ಹೆಸರುಗಳನ್ನೇ ಮುಂದೆ ಮಾಡುವ ಆಲೋಚನೆ ಬಂದಿದೆ. ಆದರೆ, ಅದಕ್ಕೆ ಅವರು ಆರಿಸಿಕೊಂಡಿರುವ ಹೆಸರುಗಳು ಮಾತ್ರ ಅವರ ವಿರೋಧಿ ಪಾಳೆಯದ್ದು ಎಂಬುದನ್ನು ನೆನಪಿಸುವ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...