Homeಕರ್ನಾಟಕಸಿ.ಟಿ.ರವಿಯ ಬಾಯಲ್ಲಿ ಕುವೆಂಪು, ಶಾಂತವೇರಿಯವರ ಹೆಸರು: ಹೇಳಿಕೊಳ್ಳಲು ಸಿ.ಟಿ.ರವಿಗೆ ಒಂದೂ ಸಂಘಪರಿವಾರದ ಹೆಸರು ಸಿಗಲಿಲ್ಲವೇಕೆ?

ಸಿ.ಟಿ.ರವಿಯ ಬಾಯಲ್ಲಿ ಕುವೆಂಪು, ಶಾಂತವೇರಿಯವರ ಹೆಸರು: ಹೇಳಿಕೊಳ್ಳಲು ಸಿ.ಟಿ.ರವಿಗೆ ಒಂದೂ ಸಂಘಪರಿವಾರದ ಹೆಸರು ಸಿಗಲಿಲ್ಲವೇಕೆ?

- Advertisement -
- Advertisement -

ಡಿ.ಕೆ.ಶಿವಕುಮಾರ್ ರ ಬಂಧನಕ್ಕೆ ಒಕ್ಕಲಿಗರ ಸಂಘಗಳು ಸೇರಿ ಮಾಡಿದ ಪ್ರತಿಭಟನೆಯ ಕುರಿತು ಒಕ್ಕಲಿಗ ಸಮುದಾಯಕ್ಕೆ ಸೇರಿದ ಬಿಜೆಪಿ ಸಚಿವ ಸಿ.ಟಿ.ರವಿ ಆಕ್ಷೇಪಣೆ ಎತ್ತಿ ಮಾತನಾಡಿದರು. ಜಾತಿಯ ಆಧಾರದಲ್ಲಿ ಪ್ರತಿಭಟಿಸಬೇಡಿ ಎಂದು ಅವರು ಹೇಳಲಿಲ್ಲ. ಈ ಮಾತನ್ನು ಬೇರೆ ಕೆಲವರು ಹೇಳಿದ್ದಾರೆ. ಆರ್.ಅಶೋಕ್ ಸೇರಿದಂತೆ ಹಲವರು ತಪ್ಪು ಮಾಡಿದ್ದಾರೆ, ಅನುಭವಿಸುತ್ತಾರೆ ಅಷ್ಟೇ ಹೊರತು ಇದಕ್ಕೆ ಜಾತಿಯ ಬಣ್ಣ ಬಳಿಯಬೇಡಿ ಎಂದು ಹೇಳಿದರು. ಆದರೆ, ಸಿ.ಟಿ.ರವಿ ತಾನು ಭಿನ್ನವಾಗಿ ಹೇಳಬೇಕು ಎಂಬ ಕಾರಣಕ್ಕೆ ಆಶ್ಚರ್ಯಕರವಾದ ಮಾತುಗಳನ್ನು ಹೇಳಿದರು.

‘ಒಕ್ಕಲಿಗ ಸಮುದಾಯದಲ್ಲಿ ಶಾಂತವೇರಿ ಗೋಪಾಲಗೌಡ, ಕುವೆಂಪು, ಕೆಂಗಲ್ ಹನುಮಂತಯ್ಯರಂಥವರು ಇದ್ದರು. ಅವರನ್ನು ಬಿಟ್ಟು ಡಿ.ಕೆ.ಶಿವಕುಮಾರ್ ಥರದವರನ್ನು ನಿಮ್ಮ ನಾಯಕರೆಂದು ಆರಿಸಿಕೊಳ್ಳುತ್ತೀರಾ (ಡಿಕೆಶಿ ಹೆಸರು ಹೇಳದಿದ್ದರೂ, ಅದೇ ಉದ್ದೇಶದಿಂದ ಹೇಳಿದ್ದು) ಯೋಚಿಸಿ’ ಎಂಬುದು ರವಿಯವರ ಹೇಳಿಕೆಯಾಗಿತ್ತು.

ವಿಪರ್ಯಾಸವೆಂದರೆ, ಕೆಂಗಲ್ ಹನುಮಂತಯ್ಯನವರು ಸಿ.ಟಿ.ರವಿಯವರ ಪಕ್ಷದ ಹಿಂದಿನ ಅವತಾರವಾಗಿದ್ದ ಜನಸಂಘದಲ್ಲೇನೂ ಇರಲಿಲ್ಲ. ಅವರು ಕಾಂಗ್ರೆಸ್ ನಾಯಕರಾಗಿದ್ದರು. ಸಿ.ಟಿ.ರವಿಯವರ ಸಂಘಟನೆ ಆರೆಸ್ಸೆಸ್ ಬ್ರಿಟಿಷರ ಪರವಾಗಿ ಕೆಲಸ ಮಾಡಿದರೆ, ಹನುಮಂತಯ್ಯನವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು 9 ಸಾರಿ ಜೈಲು ಅನುಭವಿಸಿದ್ದರು.

ಇನ್ನು ಶಾಂತವೇರಿ ಗೋಪಾಲಗೌಡರು. ಅವರು ಕಾಂಗ್ರೆಸ್ ವಿರುದ್ಧ ಇದ್ದರು. ಆದರೆ, ಬಿಜೆಪಿ ಹಾಗೂ ಆರೆಸ್ಸೆಸ್‍ಅನ್ನು ಸಂಪೂರ್ಣವಾಗಿ ವಿರೋಧಿಸುವ ಸಮಾಜವಾದಿ ಆಶಯದ ಪಕ್ಷದಲ್ಲಿದ್ದರು. ಸಿ.ಟಿ.ರವಿಯವರ ಪಕ್ಷ ಅಥವಾ ಅವರ ಪೂರ್ವಸೂರಿಗಳು ಭೂಮಾಲೀಕರ ಪರವಾಗಿದ್ದರೆ, ಗೋಪಾಲಗೌಡರು ಗೇಣೀದಾರರ ಪರವಾಗಿದ್ದರು. ಇನ್ನು ರವಿಯವರೇ ಕೊಂಡಾಡಿದ ಗೌಡರ ಸರಳತೆ, ಅತ್ಯಂತ ಕೆಳಸ್ತರದಲ್ಲಿದ್ದ ಜನರ ಪರವಾಗಿ ದನಿಯೆತ್ತುವುದೂ ಸಹಾ ರವಿಯವರ ಪಕ್ಷದ ಧೋರಣೆಯಲ್ಲ. ಹಾಗೆಯೇ ಗೋಪಾಲಗೌಡರು ಜಾತಿ ರಾಜಕಾರಣ ಮಾಡಿರಲಿಲ್ಲ. ರವಿ ಬಂದಿರುವ ಮಲೆನಾಡಿನಿಂದಲೇ ಬಂದ ಗೋಪಾಲಗೌಡರು ಕಾಂಗ್ರೆಸ್ಸಿಗೆ ಸಲ್ಲುವ ವ್ಯಕ್ತಿಯಾಗಿರಲಿಲ್ಲ; ಬಿಜೆಪಿಗಂತೂ ಹತ್ತಿರವೂ ಬರುತ್ತಿರಲಿಲ್ಲ.


ಸಿ.ಟಿ.ರವಿಯಂತಹ ವ್ಯಕ್ತಿಗಳು ಕುವೆಂಪು ಅವರ ಹೆಸರಂತೂ ಹೇಳುವುದೇ ಅಪಚಾರ. ಜಾತಿ, ಧರ್ಮ, ಜನಾಂಗಗಳ ಕಾರಣಕ್ಕೆ ದೂರವಿಡುವ ಸಂಸ್ಕೃತಿಯ ರವಿ, ವಿಶ್ವಮಾನವ ತತ್ವವನ್ನು ಹೇಳಿದ ಕುವೆಂಪು ಅವರ ಹೆಸರನ್ನು ಹೇಳಿದ್ದು ವಿಪರ್ಯಾಸ. ರವಿ ಪ್ರತಿಪಾದಿಸುವ ಹಿಂದಿ, ಹಿಂದೂ ಮತ್ತು ಹಿಂದೂರಾಷ್ಟ್ರದ ಕಟುವಿರೋಧಿಗಳಾಗಿದ್ದ ಕುವೆಂಪು ಆರೆಸ್ಸೆಸ್‍ಅನ್ನು ವಿರೋಧಿಸುತ್ತಿದ್ದರಷ್ಟೇ ಅಲ್ಲ, ತಮ್ಮನ್ನು ಒಕ್ಕಲಿಗರೆಂದು ಕರೆಯುವುದನ್ನೂ ಇಷ್ಟಪಡುತ್ತಿರಲಿಲ್ಲ. ಅವರು ಬದುಕಿರುವಷ್ಟು ಕಾಲ ಆದಿಚುಂಚನಗಿರಿ ಮಠಕ್ಕೆ ಭೇಟಿಯೂ ಕೊಡಲಿಲ್ಲ. ಅಂತರ್ಜಾತಿ ಮದುವೆಗಳನ್ನು ಪ್ರೋತ್ಸಾಹಿಸಿದರು. ಸ್ವತಃ ಅವರ ಮಗನ ಅಂತರ್ಜಾತಿ ಮದುವೆಗೆ ಬೆಂಬಲವಾಗಿ ನಿಂತರು.

ಈಗ ಸಿ.ಟಿ.ರವಿಯ ಮಾತನ್ನೇ ಪರಿಗಣಿಸಿ ಕುವೆಂಪು, ಶಾಂತವೇರಿ ಗೋಪಾಲಗೌಡರು, ಕೆಂಗಲ್ ಹನುಮಂತಯ್ಯರವರನ್ನು ಒಕ್ಕಲಿಗ ಸಮುದಾಯ ಆದರ್ಶವಾಗಿ ಪರಿಗಣಿಸಿದರೆ, ಬಿಜೆಪಿ ಒಕ್ಕಲಿಗ ಸಮುದಾಯದ ಮೊದಲ ಶತ್ರುವಾಗಿಬಿಡುತ್ತದೆ. ಜೊತೆಗೆ ಆರೆಸ್ಸೆಸ್‍ನ ಸಿದ್ಧಾಂತದ ಕಡುವಿರೋಧಿಗಳಾಗಿ ಬದಲಾಗಲೇಬೇಕಾಗುತ್ತದೆ. ಹೀಗಾಗಿಯೇ ಉಳಿದವರು ಅಂತಹ ದೊಡ್ಡವರ ಹೆಸರನ್ನು ಹೇಳುವುದಕ್ಕೆ ಹೆದರುತ್ತಾರೆ. ಒಕ್ಕಲಿಗರ ಸಂಘದ ಬೃಹತ್ ಕಾರ್ಯಕ್ರಮವೊಂದರಲ್ಲಿ ಕುವೆಂಪು ಅವರ ಫೋಟೋ ಹಾಕಿಕೊಂಡಿದ್ದಕ್ಕೆ ದೊಡ್ಡ ವಿರೋಧ ಕೇಳಿ ಬಂದಿತ್ತು.

ದುರಂತವೆಂದರೆ, ಸಿ.ಟಿ.ರವಿ ‘ಇವರು ನಿಮ್ಮ ಆದರ್ಶ’ ಎಂದು ತನ್ನ ಪರಿವಾರದ ಹೆಸರುಗಳನ್ನು ಹೇಳುವುದು ಸಾಧ್ಯವಿಲ್ಲ. ಹಾಗಾಗಿ ಈ ಸದ್ಯ ಡಿ.ಕೆ.ಶಿವಕುಮಾರ್‍ರ ಮೇಲೆ ಕೇಂದ್ರ ಸರ್ಕಾರ ಮುಗಿಬಿದ್ದಿರುವ ಸಂದರ್ಭದಲ್ಲಿ ಒಕ್ಕಲಿಗರು ಬಿಜೆಪಿಯ ವಿರುದ್ಧ ತಿರುಗಿ ಬೀಳುತ್ತಿರುವುದನ್ನು ರವಿ ಗ್ರಹಿಸಿದ್ದಾರೆ. ಜಾತಿಯಾಚೆ ಯೋಚಿಸಿ ಎಂದು ‘ಸಂಘಪರಿವಾರದ ಮೂಲದವರಲ್ಲದ’ ಅಶ್ವತ್ಥನಾರಾಯಣ ಹೇಳುತ್ತಿದ್ದರೆ, ಜಾತಿ-ಧರ್ಮಗಳನ್ನು ಬಳಸಿಯೇ ರಾಜಕಾರಣ ಮಾಡುವ ಅಭ್ಯಾಸದ ರವಿಗೆ ಒಕ್ಕಲಿಗ ಹೆಸರುಗಳನ್ನೇ ಮುಂದೆ ಮಾಡುವ ಆಲೋಚನೆ ಬಂದಿದೆ. ಆದರೆ, ಅದಕ್ಕೆ ಅವರು ಆರಿಸಿಕೊಂಡಿರುವ ಹೆಸರುಗಳು ಮಾತ್ರ ಅವರ ವಿರೋಧಿ ಪಾಳೆಯದ್ದು ಎಂಬುದನ್ನು ನೆನಪಿಸುವ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...