Homeಕರ್ನಾಟಕಸಿ.ಟಿ.ರವಿಯ ಬಾಯಲ್ಲಿ ಕುವೆಂಪು, ಶಾಂತವೇರಿಯವರ ಹೆಸರು: ಹೇಳಿಕೊಳ್ಳಲು ಸಿ.ಟಿ.ರವಿಗೆ ಒಂದೂ ಸಂಘಪರಿವಾರದ ಹೆಸರು ಸಿಗಲಿಲ್ಲವೇಕೆ?

ಸಿ.ಟಿ.ರವಿಯ ಬಾಯಲ್ಲಿ ಕುವೆಂಪು, ಶಾಂತವೇರಿಯವರ ಹೆಸರು: ಹೇಳಿಕೊಳ್ಳಲು ಸಿ.ಟಿ.ರವಿಗೆ ಒಂದೂ ಸಂಘಪರಿವಾರದ ಹೆಸರು ಸಿಗಲಿಲ್ಲವೇಕೆ?

- Advertisement -
- Advertisement -

ಡಿ.ಕೆ.ಶಿವಕುಮಾರ್ ರ ಬಂಧನಕ್ಕೆ ಒಕ್ಕಲಿಗರ ಸಂಘಗಳು ಸೇರಿ ಮಾಡಿದ ಪ್ರತಿಭಟನೆಯ ಕುರಿತು ಒಕ್ಕಲಿಗ ಸಮುದಾಯಕ್ಕೆ ಸೇರಿದ ಬಿಜೆಪಿ ಸಚಿವ ಸಿ.ಟಿ.ರವಿ ಆಕ್ಷೇಪಣೆ ಎತ್ತಿ ಮಾತನಾಡಿದರು. ಜಾತಿಯ ಆಧಾರದಲ್ಲಿ ಪ್ರತಿಭಟಿಸಬೇಡಿ ಎಂದು ಅವರು ಹೇಳಲಿಲ್ಲ. ಈ ಮಾತನ್ನು ಬೇರೆ ಕೆಲವರು ಹೇಳಿದ್ದಾರೆ. ಆರ್.ಅಶೋಕ್ ಸೇರಿದಂತೆ ಹಲವರು ತಪ್ಪು ಮಾಡಿದ್ದಾರೆ, ಅನುಭವಿಸುತ್ತಾರೆ ಅಷ್ಟೇ ಹೊರತು ಇದಕ್ಕೆ ಜಾತಿಯ ಬಣ್ಣ ಬಳಿಯಬೇಡಿ ಎಂದು ಹೇಳಿದರು. ಆದರೆ, ಸಿ.ಟಿ.ರವಿ ತಾನು ಭಿನ್ನವಾಗಿ ಹೇಳಬೇಕು ಎಂಬ ಕಾರಣಕ್ಕೆ ಆಶ್ಚರ್ಯಕರವಾದ ಮಾತುಗಳನ್ನು ಹೇಳಿದರು.

‘ಒಕ್ಕಲಿಗ ಸಮುದಾಯದಲ್ಲಿ ಶಾಂತವೇರಿ ಗೋಪಾಲಗೌಡ, ಕುವೆಂಪು, ಕೆಂಗಲ್ ಹನುಮಂತಯ್ಯರಂಥವರು ಇದ್ದರು. ಅವರನ್ನು ಬಿಟ್ಟು ಡಿ.ಕೆ.ಶಿವಕುಮಾರ್ ಥರದವರನ್ನು ನಿಮ್ಮ ನಾಯಕರೆಂದು ಆರಿಸಿಕೊಳ್ಳುತ್ತೀರಾ (ಡಿಕೆಶಿ ಹೆಸರು ಹೇಳದಿದ್ದರೂ, ಅದೇ ಉದ್ದೇಶದಿಂದ ಹೇಳಿದ್ದು) ಯೋಚಿಸಿ’ ಎಂಬುದು ರವಿಯವರ ಹೇಳಿಕೆಯಾಗಿತ್ತು.

ವಿಪರ್ಯಾಸವೆಂದರೆ, ಕೆಂಗಲ್ ಹನುಮಂತಯ್ಯನವರು ಸಿ.ಟಿ.ರವಿಯವರ ಪಕ್ಷದ ಹಿಂದಿನ ಅವತಾರವಾಗಿದ್ದ ಜನಸಂಘದಲ್ಲೇನೂ ಇರಲಿಲ್ಲ. ಅವರು ಕಾಂಗ್ರೆಸ್ ನಾಯಕರಾಗಿದ್ದರು. ಸಿ.ಟಿ.ರವಿಯವರ ಸಂಘಟನೆ ಆರೆಸ್ಸೆಸ್ ಬ್ರಿಟಿಷರ ಪರವಾಗಿ ಕೆಲಸ ಮಾಡಿದರೆ, ಹನುಮಂತಯ್ಯನವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು 9 ಸಾರಿ ಜೈಲು ಅನುಭವಿಸಿದ್ದರು.

ಇನ್ನು ಶಾಂತವೇರಿ ಗೋಪಾಲಗೌಡರು. ಅವರು ಕಾಂಗ್ರೆಸ್ ವಿರುದ್ಧ ಇದ್ದರು. ಆದರೆ, ಬಿಜೆಪಿ ಹಾಗೂ ಆರೆಸ್ಸೆಸ್‍ಅನ್ನು ಸಂಪೂರ್ಣವಾಗಿ ವಿರೋಧಿಸುವ ಸಮಾಜವಾದಿ ಆಶಯದ ಪಕ್ಷದಲ್ಲಿದ್ದರು. ಸಿ.ಟಿ.ರವಿಯವರ ಪಕ್ಷ ಅಥವಾ ಅವರ ಪೂರ್ವಸೂರಿಗಳು ಭೂಮಾಲೀಕರ ಪರವಾಗಿದ್ದರೆ, ಗೋಪಾಲಗೌಡರು ಗೇಣೀದಾರರ ಪರವಾಗಿದ್ದರು. ಇನ್ನು ರವಿಯವರೇ ಕೊಂಡಾಡಿದ ಗೌಡರ ಸರಳತೆ, ಅತ್ಯಂತ ಕೆಳಸ್ತರದಲ್ಲಿದ್ದ ಜನರ ಪರವಾಗಿ ದನಿಯೆತ್ತುವುದೂ ಸಹಾ ರವಿಯವರ ಪಕ್ಷದ ಧೋರಣೆಯಲ್ಲ. ಹಾಗೆಯೇ ಗೋಪಾಲಗೌಡರು ಜಾತಿ ರಾಜಕಾರಣ ಮಾಡಿರಲಿಲ್ಲ. ರವಿ ಬಂದಿರುವ ಮಲೆನಾಡಿನಿಂದಲೇ ಬಂದ ಗೋಪಾಲಗೌಡರು ಕಾಂಗ್ರೆಸ್ಸಿಗೆ ಸಲ್ಲುವ ವ್ಯಕ್ತಿಯಾಗಿರಲಿಲ್ಲ; ಬಿಜೆಪಿಗಂತೂ ಹತ್ತಿರವೂ ಬರುತ್ತಿರಲಿಲ್ಲ.


ಸಿ.ಟಿ.ರವಿಯಂತಹ ವ್ಯಕ್ತಿಗಳು ಕುವೆಂಪು ಅವರ ಹೆಸರಂತೂ ಹೇಳುವುದೇ ಅಪಚಾರ. ಜಾತಿ, ಧರ್ಮ, ಜನಾಂಗಗಳ ಕಾರಣಕ್ಕೆ ದೂರವಿಡುವ ಸಂಸ್ಕೃತಿಯ ರವಿ, ವಿಶ್ವಮಾನವ ತತ್ವವನ್ನು ಹೇಳಿದ ಕುವೆಂಪು ಅವರ ಹೆಸರನ್ನು ಹೇಳಿದ್ದು ವಿಪರ್ಯಾಸ. ರವಿ ಪ್ರತಿಪಾದಿಸುವ ಹಿಂದಿ, ಹಿಂದೂ ಮತ್ತು ಹಿಂದೂರಾಷ್ಟ್ರದ ಕಟುವಿರೋಧಿಗಳಾಗಿದ್ದ ಕುವೆಂಪು ಆರೆಸ್ಸೆಸ್‍ಅನ್ನು ವಿರೋಧಿಸುತ್ತಿದ್ದರಷ್ಟೇ ಅಲ್ಲ, ತಮ್ಮನ್ನು ಒಕ್ಕಲಿಗರೆಂದು ಕರೆಯುವುದನ್ನೂ ಇಷ್ಟಪಡುತ್ತಿರಲಿಲ್ಲ. ಅವರು ಬದುಕಿರುವಷ್ಟು ಕಾಲ ಆದಿಚುಂಚನಗಿರಿ ಮಠಕ್ಕೆ ಭೇಟಿಯೂ ಕೊಡಲಿಲ್ಲ. ಅಂತರ್ಜಾತಿ ಮದುವೆಗಳನ್ನು ಪ್ರೋತ್ಸಾಹಿಸಿದರು. ಸ್ವತಃ ಅವರ ಮಗನ ಅಂತರ್ಜಾತಿ ಮದುವೆಗೆ ಬೆಂಬಲವಾಗಿ ನಿಂತರು.

ಈಗ ಸಿ.ಟಿ.ರವಿಯ ಮಾತನ್ನೇ ಪರಿಗಣಿಸಿ ಕುವೆಂಪು, ಶಾಂತವೇರಿ ಗೋಪಾಲಗೌಡರು, ಕೆಂಗಲ್ ಹನುಮಂತಯ್ಯರವರನ್ನು ಒಕ್ಕಲಿಗ ಸಮುದಾಯ ಆದರ್ಶವಾಗಿ ಪರಿಗಣಿಸಿದರೆ, ಬಿಜೆಪಿ ಒಕ್ಕಲಿಗ ಸಮುದಾಯದ ಮೊದಲ ಶತ್ರುವಾಗಿಬಿಡುತ್ತದೆ. ಜೊತೆಗೆ ಆರೆಸ್ಸೆಸ್‍ನ ಸಿದ್ಧಾಂತದ ಕಡುವಿರೋಧಿಗಳಾಗಿ ಬದಲಾಗಲೇಬೇಕಾಗುತ್ತದೆ. ಹೀಗಾಗಿಯೇ ಉಳಿದವರು ಅಂತಹ ದೊಡ್ಡವರ ಹೆಸರನ್ನು ಹೇಳುವುದಕ್ಕೆ ಹೆದರುತ್ತಾರೆ. ಒಕ್ಕಲಿಗರ ಸಂಘದ ಬೃಹತ್ ಕಾರ್ಯಕ್ರಮವೊಂದರಲ್ಲಿ ಕುವೆಂಪು ಅವರ ಫೋಟೋ ಹಾಕಿಕೊಂಡಿದ್ದಕ್ಕೆ ದೊಡ್ಡ ವಿರೋಧ ಕೇಳಿ ಬಂದಿತ್ತು.

ದುರಂತವೆಂದರೆ, ಸಿ.ಟಿ.ರವಿ ‘ಇವರು ನಿಮ್ಮ ಆದರ್ಶ’ ಎಂದು ತನ್ನ ಪರಿವಾರದ ಹೆಸರುಗಳನ್ನು ಹೇಳುವುದು ಸಾಧ್ಯವಿಲ್ಲ. ಹಾಗಾಗಿ ಈ ಸದ್ಯ ಡಿ.ಕೆ.ಶಿವಕುಮಾರ್‍ರ ಮೇಲೆ ಕೇಂದ್ರ ಸರ್ಕಾರ ಮುಗಿಬಿದ್ದಿರುವ ಸಂದರ್ಭದಲ್ಲಿ ಒಕ್ಕಲಿಗರು ಬಿಜೆಪಿಯ ವಿರುದ್ಧ ತಿರುಗಿ ಬೀಳುತ್ತಿರುವುದನ್ನು ರವಿ ಗ್ರಹಿಸಿದ್ದಾರೆ. ಜಾತಿಯಾಚೆ ಯೋಚಿಸಿ ಎಂದು ‘ಸಂಘಪರಿವಾರದ ಮೂಲದವರಲ್ಲದ’ ಅಶ್ವತ್ಥನಾರಾಯಣ ಹೇಳುತ್ತಿದ್ದರೆ, ಜಾತಿ-ಧರ್ಮಗಳನ್ನು ಬಳಸಿಯೇ ರಾಜಕಾರಣ ಮಾಡುವ ಅಭ್ಯಾಸದ ರವಿಗೆ ಒಕ್ಕಲಿಗ ಹೆಸರುಗಳನ್ನೇ ಮುಂದೆ ಮಾಡುವ ಆಲೋಚನೆ ಬಂದಿದೆ. ಆದರೆ, ಅದಕ್ಕೆ ಅವರು ಆರಿಸಿಕೊಂಡಿರುವ ಹೆಸರುಗಳು ಮಾತ್ರ ಅವರ ವಿರೋಧಿ ಪಾಳೆಯದ್ದು ಎಂಬುದನ್ನು ನೆನಪಿಸುವ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...