Homeಕರ್ನಾಟಕಸಿ.ಟಿ.ರವಿಯ ಬಾಯಲ್ಲಿ ಕುವೆಂಪು, ಶಾಂತವೇರಿಯವರ ಹೆಸರು: ಹೇಳಿಕೊಳ್ಳಲು ಸಿ.ಟಿ.ರವಿಗೆ ಒಂದೂ ಸಂಘಪರಿವಾರದ ಹೆಸರು ಸಿಗಲಿಲ್ಲವೇಕೆ?

ಸಿ.ಟಿ.ರವಿಯ ಬಾಯಲ್ಲಿ ಕುವೆಂಪು, ಶಾಂತವೇರಿಯವರ ಹೆಸರು: ಹೇಳಿಕೊಳ್ಳಲು ಸಿ.ಟಿ.ರವಿಗೆ ಒಂದೂ ಸಂಘಪರಿವಾರದ ಹೆಸರು ಸಿಗಲಿಲ್ಲವೇಕೆ?

- Advertisement -
- Advertisement -

ಡಿ.ಕೆ.ಶಿವಕುಮಾರ್ ರ ಬಂಧನಕ್ಕೆ ಒಕ್ಕಲಿಗರ ಸಂಘಗಳು ಸೇರಿ ಮಾಡಿದ ಪ್ರತಿಭಟನೆಯ ಕುರಿತು ಒಕ್ಕಲಿಗ ಸಮುದಾಯಕ್ಕೆ ಸೇರಿದ ಬಿಜೆಪಿ ಸಚಿವ ಸಿ.ಟಿ.ರವಿ ಆಕ್ಷೇಪಣೆ ಎತ್ತಿ ಮಾತನಾಡಿದರು. ಜಾತಿಯ ಆಧಾರದಲ್ಲಿ ಪ್ರತಿಭಟಿಸಬೇಡಿ ಎಂದು ಅವರು ಹೇಳಲಿಲ್ಲ. ಈ ಮಾತನ್ನು ಬೇರೆ ಕೆಲವರು ಹೇಳಿದ್ದಾರೆ. ಆರ್.ಅಶೋಕ್ ಸೇರಿದಂತೆ ಹಲವರು ತಪ್ಪು ಮಾಡಿದ್ದಾರೆ, ಅನುಭವಿಸುತ್ತಾರೆ ಅಷ್ಟೇ ಹೊರತು ಇದಕ್ಕೆ ಜಾತಿಯ ಬಣ್ಣ ಬಳಿಯಬೇಡಿ ಎಂದು ಹೇಳಿದರು. ಆದರೆ, ಸಿ.ಟಿ.ರವಿ ತಾನು ಭಿನ್ನವಾಗಿ ಹೇಳಬೇಕು ಎಂಬ ಕಾರಣಕ್ಕೆ ಆಶ್ಚರ್ಯಕರವಾದ ಮಾತುಗಳನ್ನು ಹೇಳಿದರು.

‘ಒಕ್ಕಲಿಗ ಸಮುದಾಯದಲ್ಲಿ ಶಾಂತವೇರಿ ಗೋಪಾಲಗೌಡ, ಕುವೆಂಪು, ಕೆಂಗಲ್ ಹನುಮಂತಯ್ಯರಂಥವರು ಇದ್ದರು. ಅವರನ್ನು ಬಿಟ್ಟು ಡಿ.ಕೆ.ಶಿವಕುಮಾರ್ ಥರದವರನ್ನು ನಿಮ್ಮ ನಾಯಕರೆಂದು ಆರಿಸಿಕೊಳ್ಳುತ್ತೀರಾ (ಡಿಕೆಶಿ ಹೆಸರು ಹೇಳದಿದ್ದರೂ, ಅದೇ ಉದ್ದೇಶದಿಂದ ಹೇಳಿದ್ದು) ಯೋಚಿಸಿ’ ಎಂಬುದು ರವಿಯವರ ಹೇಳಿಕೆಯಾಗಿತ್ತು.

ವಿಪರ್ಯಾಸವೆಂದರೆ, ಕೆಂಗಲ್ ಹನುಮಂತಯ್ಯನವರು ಸಿ.ಟಿ.ರವಿಯವರ ಪಕ್ಷದ ಹಿಂದಿನ ಅವತಾರವಾಗಿದ್ದ ಜನಸಂಘದಲ್ಲೇನೂ ಇರಲಿಲ್ಲ. ಅವರು ಕಾಂಗ್ರೆಸ್ ನಾಯಕರಾಗಿದ್ದರು. ಸಿ.ಟಿ.ರವಿಯವರ ಸಂಘಟನೆ ಆರೆಸ್ಸೆಸ್ ಬ್ರಿಟಿಷರ ಪರವಾಗಿ ಕೆಲಸ ಮಾಡಿದರೆ, ಹನುಮಂತಯ್ಯನವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು 9 ಸಾರಿ ಜೈಲು ಅನುಭವಿಸಿದ್ದರು.

ಇನ್ನು ಶಾಂತವೇರಿ ಗೋಪಾಲಗೌಡರು. ಅವರು ಕಾಂಗ್ರೆಸ್ ವಿರುದ್ಧ ಇದ್ದರು. ಆದರೆ, ಬಿಜೆಪಿ ಹಾಗೂ ಆರೆಸ್ಸೆಸ್‍ಅನ್ನು ಸಂಪೂರ್ಣವಾಗಿ ವಿರೋಧಿಸುವ ಸಮಾಜವಾದಿ ಆಶಯದ ಪಕ್ಷದಲ್ಲಿದ್ದರು. ಸಿ.ಟಿ.ರವಿಯವರ ಪಕ್ಷ ಅಥವಾ ಅವರ ಪೂರ್ವಸೂರಿಗಳು ಭೂಮಾಲೀಕರ ಪರವಾಗಿದ್ದರೆ, ಗೋಪಾಲಗೌಡರು ಗೇಣೀದಾರರ ಪರವಾಗಿದ್ದರು. ಇನ್ನು ರವಿಯವರೇ ಕೊಂಡಾಡಿದ ಗೌಡರ ಸರಳತೆ, ಅತ್ಯಂತ ಕೆಳಸ್ತರದಲ್ಲಿದ್ದ ಜನರ ಪರವಾಗಿ ದನಿಯೆತ್ತುವುದೂ ಸಹಾ ರವಿಯವರ ಪಕ್ಷದ ಧೋರಣೆಯಲ್ಲ. ಹಾಗೆಯೇ ಗೋಪಾಲಗೌಡರು ಜಾತಿ ರಾಜಕಾರಣ ಮಾಡಿರಲಿಲ್ಲ. ರವಿ ಬಂದಿರುವ ಮಲೆನಾಡಿನಿಂದಲೇ ಬಂದ ಗೋಪಾಲಗೌಡರು ಕಾಂಗ್ರೆಸ್ಸಿಗೆ ಸಲ್ಲುವ ವ್ಯಕ್ತಿಯಾಗಿರಲಿಲ್ಲ; ಬಿಜೆಪಿಗಂತೂ ಹತ್ತಿರವೂ ಬರುತ್ತಿರಲಿಲ್ಲ.


ಸಿ.ಟಿ.ರವಿಯಂತಹ ವ್ಯಕ್ತಿಗಳು ಕುವೆಂಪು ಅವರ ಹೆಸರಂತೂ ಹೇಳುವುದೇ ಅಪಚಾರ. ಜಾತಿ, ಧರ್ಮ, ಜನಾಂಗಗಳ ಕಾರಣಕ್ಕೆ ದೂರವಿಡುವ ಸಂಸ್ಕೃತಿಯ ರವಿ, ವಿಶ್ವಮಾನವ ತತ್ವವನ್ನು ಹೇಳಿದ ಕುವೆಂಪು ಅವರ ಹೆಸರನ್ನು ಹೇಳಿದ್ದು ವಿಪರ್ಯಾಸ. ರವಿ ಪ್ರತಿಪಾದಿಸುವ ಹಿಂದಿ, ಹಿಂದೂ ಮತ್ತು ಹಿಂದೂರಾಷ್ಟ್ರದ ಕಟುವಿರೋಧಿಗಳಾಗಿದ್ದ ಕುವೆಂಪು ಆರೆಸ್ಸೆಸ್‍ಅನ್ನು ವಿರೋಧಿಸುತ್ತಿದ್ದರಷ್ಟೇ ಅಲ್ಲ, ತಮ್ಮನ್ನು ಒಕ್ಕಲಿಗರೆಂದು ಕರೆಯುವುದನ್ನೂ ಇಷ್ಟಪಡುತ್ತಿರಲಿಲ್ಲ. ಅವರು ಬದುಕಿರುವಷ್ಟು ಕಾಲ ಆದಿಚುಂಚನಗಿರಿ ಮಠಕ್ಕೆ ಭೇಟಿಯೂ ಕೊಡಲಿಲ್ಲ. ಅಂತರ್ಜಾತಿ ಮದುವೆಗಳನ್ನು ಪ್ರೋತ್ಸಾಹಿಸಿದರು. ಸ್ವತಃ ಅವರ ಮಗನ ಅಂತರ್ಜಾತಿ ಮದುವೆಗೆ ಬೆಂಬಲವಾಗಿ ನಿಂತರು.

ಈಗ ಸಿ.ಟಿ.ರವಿಯ ಮಾತನ್ನೇ ಪರಿಗಣಿಸಿ ಕುವೆಂಪು, ಶಾಂತವೇರಿ ಗೋಪಾಲಗೌಡರು, ಕೆಂಗಲ್ ಹನುಮಂತಯ್ಯರವರನ್ನು ಒಕ್ಕಲಿಗ ಸಮುದಾಯ ಆದರ್ಶವಾಗಿ ಪರಿಗಣಿಸಿದರೆ, ಬಿಜೆಪಿ ಒಕ್ಕಲಿಗ ಸಮುದಾಯದ ಮೊದಲ ಶತ್ರುವಾಗಿಬಿಡುತ್ತದೆ. ಜೊತೆಗೆ ಆರೆಸ್ಸೆಸ್‍ನ ಸಿದ್ಧಾಂತದ ಕಡುವಿರೋಧಿಗಳಾಗಿ ಬದಲಾಗಲೇಬೇಕಾಗುತ್ತದೆ. ಹೀಗಾಗಿಯೇ ಉಳಿದವರು ಅಂತಹ ದೊಡ್ಡವರ ಹೆಸರನ್ನು ಹೇಳುವುದಕ್ಕೆ ಹೆದರುತ್ತಾರೆ. ಒಕ್ಕಲಿಗರ ಸಂಘದ ಬೃಹತ್ ಕಾರ್ಯಕ್ರಮವೊಂದರಲ್ಲಿ ಕುವೆಂಪು ಅವರ ಫೋಟೋ ಹಾಕಿಕೊಂಡಿದ್ದಕ್ಕೆ ದೊಡ್ಡ ವಿರೋಧ ಕೇಳಿ ಬಂದಿತ್ತು.

ದುರಂತವೆಂದರೆ, ಸಿ.ಟಿ.ರವಿ ‘ಇವರು ನಿಮ್ಮ ಆದರ್ಶ’ ಎಂದು ತನ್ನ ಪರಿವಾರದ ಹೆಸರುಗಳನ್ನು ಹೇಳುವುದು ಸಾಧ್ಯವಿಲ್ಲ. ಹಾಗಾಗಿ ಈ ಸದ್ಯ ಡಿ.ಕೆ.ಶಿವಕುಮಾರ್‍ರ ಮೇಲೆ ಕೇಂದ್ರ ಸರ್ಕಾರ ಮುಗಿಬಿದ್ದಿರುವ ಸಂದರ್ಭದಲ್ಲಿ ಒಕ್ಕಲಿಗರು ಬಿಜೆಪಿಯ ವಿರುದ್ಧ ತಿರುಗಿ ಬೀಳುತ್ತಿರುವುದನ್ನು ರವಿ ಗ್ರಹಿಸಿದ್ದಾರೆ. ಜಾತಿಯಾಚೆ ಯೋಚಿಸಿ ಎಂದು ‘ಸಂಘಪರಿವಾರದ ಮೂಲದವರಲ್ಲದ’ ಅಶ್ವತ್ಥನಾರಾಯಣ ಹೇಳುತ್ತಿದ್ದರೆ, ಜಾತಿ-ಧರ್ಮಗಳನ್ನು ಬಳಸಿಯೇ ರಾಜಕಾರಣ ಮಾಡುವ ಅಭ್ಯಾಸದ ರವಿಗೆ ಒಕ್ಕಲಿಗ ಹೆಸರುಗಳನ್ನೇ ಮುಂದೆ ಮಾಡುವ ಆಲೋಚನೆ ಬಂದಿದೆ. ಆದರೆ, ಅದಕ್ಕೆ ಅವರು ಆರಿಸಿಕೊಂಡಿರುವ ಹೆಸರುಗಳು ಮಾತ್ರ ಅವರ ವಿರೋಧಿ ಪಾಳೆಯದ್ದು ಎಂಬುದನ್ನು ನೆನಪಿಸುವ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...