Homeಕರ್ನಾಟಕಸಿ.ಟಿ.ರವಿಯ ಬಾಯಲ್ಲಿ ಕುವೆಂಪು, ಶಾಂತವೇರಿಯವರ ಹೆಸರು: ಹೇಳಿಕೊಳ್ಳಲು ಸಿ.ಟಿ.ರವಿಗೆ ಒಂದೂ ಸಂಘಪರಿವಾರದ ಹೆಸರು ಸಿಗಲಿಲ್ಲವೇಕೆ?

ಸಿ.ಟಿ.ರವಿಯ ಬಾಯಲ್ಲಿ ಕುವೆಂಪು, ಶಾಂತವೇರಿಯವರ ಹೆಸರು: ಹೇಳಿಕೊಳ್ಳಲು ಸಿ.ಟಿ.ರವಿಗೆ ಒಂದೂ ಸಂಘಪರಿವಾರದ ಹೆಸರು ಸಿಗಲಿಲ್ಲವೇಕೆ?

- Advertisement -
- Advertisement -

ಡಿ.ಕೆ.ಶಿವಕುಮಾರ್ ರ ಬಂಧನಕ್ಕೆ ಒಕ್ಕಲಿಗರ ಸಂಘಗಳು ಸೇರಿ ಮಾಡಿದ ಪ್ರತಿಭಟನೆಯ ಕುರಿತು ಒಕ್ಕಲಿಗ ಸಮುದಾಯಕ್ಕೆ ಸೇರಿದ ಬಿಜೆಪಿ ಸಚಿವ ಸಿ.ಟಿ.ರವಿ ಆಕ್ಷೇಪಣೆ ಎತ್ತಿ ಮಾತನಾಡಿದರು. ಜಾತಿಯ ಆಧಾರದಲ್ಲಿ ಪ್ರತಿಭಟಿಸಬೇಡಿ ಎಂದು ಅವರು ಹೇಳಲಿಲ್ಲ. ಈ ಮಾತನ್ನು ಬೇರೆ ಕೆಲವರು ಹೇಳಿದ್ದಾರೆ. ಆರ್.ಅಶೋಕ್ ಸೇರಿದಂತೆ ಹಲವರು ತಪ್ಪು ಮಾಡಿದ್ದಾರೆ, ಅನುಭವಿಸುತ್ತಾರೆ ಅಷ್ಟೇ ಹೊರತು ಇದಕ್ಕೆ ಜಾತಿಯ ಬಣ್ಣ ಬಳಿಯಬೇಡಿ ಎಂದು ಹೇಳಿದರು. ಆದರೆ, ಸಿ.ಟಿ.ರವಿ ತಾನು ಭಿನ್ನವಾಗಿ ಹೇಳಬೇಕು ಎಂಬ ಕಾರಣಕ್ಕೆ ಆಶ್ಚರ್ಯಕರವಾದ ಮಾತುಗಳನ್ನು ಹೇಳಿದರು.

‘ಒಕ್ಕಲಿಗ ಸಮುದಾಯದಲ್ಲಿ ಶಾಂತವೇರಿ ಗೋಪಾಲಗೌಡ, ಕುವೆಂಪು, ಕೆಂಗಲ್ ಹನುಮಂತಯ್ಯರಂಥವರು ಇದ್ದರು. ಅವರನ್ನು ಬಿಟ್ಟು ಡಿ.ಕೆ.ಶಿವಕುಮಾರ್ ಥರದವರನ್ನು ನಿಮ್ಮ ನಾಯಕರೆಂದು ಆರಿಸಿಕೊಳ್ಳುತ್ತೀರಾ (ಡಿಕೆಶಿ ಹೆಸರು ಹೇಳದಿದ್ದರೂ, ಅದೇ ಉದ್ದೇಶದಿಂದ ಹೇಳಿದ್ದು) ಯೋಚಿಸಿ’ ಎಂಬುದು ರವಿಯವರ ಹೇಳಿಕೆಯಾಗಿತ್ತು.

ವಿಪರ್ಯಾಸವೆಂದರೆ, ಕೆಂಗಲ್ ಹನುಮಂತಯ್ಯನವರು ಸಿ.ಟಿ.ರವಿಯವರ ಪಕ್ಷದ ಹಿಂದಿನ ಅವತಾರವಾಗಿದ್ದ ಜನಸಂಘದಲ್ಲೇನೂ ಇರಲಿಲ್ಲ. ಅವರು ಕಾಂಗ್ರೆಸ್ ನಾಯಕರಾಗಿದ್ದರು. ಸಿ.ಟಿ.ರವಿಯವರ ಸಂಘಟನೆ ಆರೆಸ್ಸೆಸ್ ಬ್ರಿಟಿಷರ ಪರವಾಗಿ ಕೆಲಸ ಮಾಡಿದರೆ, ಹನುಮಂತಯ್ಯನವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು 9 ಸಾರಿ ಜೈಲು ಅನುಭವಿಸಿದ್ದರು.

ಇನ್ನು ಶಾಂತವೇರಿ ಗೋಪಾಲಗೌಡರು. ಅವರು ಕಾಂಗ್ರೆಸ್ ವಿರುದ್ಧ ಇದ್ದರು. ಆದರೆ, ಬಿಜೆಪಿ ಹಾಗೂ ಆರೆಸ್ಸೆಸ್‍ಅನ್ನು ಸಂಪೂರ್ಣವಾಗಿ ವಿರೋಧಿಸುವ ಸಮಾಜವಾದಿ ಆಶಯದ ಪಕ್ಷದಲ್ಲಿದ್ದರು. ಸಿ.ಟಿ.ರವಿಯವರ ಪಕ್ಷ ಅಥವಾ ಅವರ ಪೂರ್ವಸೂರಿಗಳು ಭೂಮಾಲೀಕರ ಪರವಾಗಿದ್ದರೆ, ಗೋಪಾಲಗೌಡರು ಗೇಣೀದಾರರ ಪರವಾಗಿದ್ದರು. ಇನ್ನು ರವಿಯವರೇ ಕೊಂಡಾಡಿದ ಗೌಡರ ಸರಳತೆ, ಅತ್ಯಂತ ಕೆಳಸ್ತರದಲ್ಲಿದ್ದ ಜನರ ಪರವಾಗಿ ದನಿಯೆತ್ತುವುದೂ ಸಹಾ ರವಿಯವರ ಪಕ್ಷದ ಧೋರಣೆಯಲ್ಲ. ಹಾಗೆಯೇ ಗೋಪಾಲಗೌಡರು ಜಾತಿ ರಾಜಕಾರಣ ಮಾಡಿರಲಿಲ್ಲ. ರವಿ ಬಂದಿರುವ ಮಲೆನಾಡಿನಿಂದಲೇ ಬಂದ ಗೋಪಾಲಗೌಡರು ಕಾಂಗ್ರೆಸ್ಸಿಗೆ ಸಲ್ಲುವ ವ್ಯಕ್ತಿಯಾಗಿರಲಿಲ್ಲ; ಬಿಜೆಪಿಗಂತೂ ಹತ್ತಿರವೂ ಬರುತ್ತಿರಲಿಲ್ಲ.


ಸಿ.ಟಿ.ರವಿಯಂತಹ ವ್ಯಕ್ತಿಗಳು ಕುವೆಂಪು ಅವರ ಹೆಸರಂತೂ ಹೇಳುವುದೇ ಅಪಚಾರ. ಜಾತಿ, ಧರ್ಮ, ಜನಾಂಗಗಳ ಕಾರಣಕ್ಕೆ ದೂರವಿಡುವ ಸಂಸ್ಕೃತಿಯ ರವಿ, ವಿಶ್ವಮಾನವ ತತ್ವವನ್ನು ಹೇಳಿದ ಕುವೆಂಪು ಅವರ ಹೆಸರನ್ನು ಹೇಳಿದ್ದು ವಿಪರ್ಯಾಸ. ರವಿ ಪ್ರತಿಪಾದಿಸುವ ಹಿಂದಿ, ಹಿಂದೂ ಮತ್ತು ಹಿಂದೂರಾಷ್ಟ್ರದ ಕಟುವಿರೋಧಿಗಳಾಗಿದ್ದ ಕುವೆಂಪು ಆರೆಸ್ಸೆಸ್‍ಅನ್ನು ವಿರೋಧಿಸುತ್ತಿದ್ದರಷ್ಟೇ ಅಲ್ಲ, ತಮ್ಮನ್ನು ಒಕ್ಕಲಿಗರೆಂದು ಕರೆಯುವುದನ್ನೂ ಇಷ್ಟಪಡುತ್ತಿರಲಿಲ್ಲ. ಅವರು ಬದುಕಿರುವಷ್ಟು ಕಾಲ ಆದಿಚುಂಚನಗಿರಿ ಮಠಕ್ಕೆ ಭೇಟಿಯೂ ಕೊಡಲಿಲ್ಲ. ಅಂತರ್ಜಾತಿ ಮದುವೆಗಳನ್ನು ಪ್ರೋತ್ಸಾಹಿಸಿದರು. ಸ್ವತಃ ಅವರ ಮಗನ ಅಂತರ್ಜಾತಿ ಮದುವೆಗೆ ಬೆಂಬಲವಾಗಿ ನಿಂತರು.

ಈಗ ಸಿ.ಟಿ.ರವಿಯ ಮಾತನ್ನೇ ಪರಿಗಣಿಸಿ ಕುವೆಂಪು, ಶಾಂತವೇರಿ ಗೋಪಾಲಗೌಡರು, ಕೆಂಗಲ್ ಹನುಮಂತಯ್ಯರವರನ್ನು ಒಕ್ಕಲಿಗ ಸಮುದಾಯ ಆದರ್ಶವಾಗಿ ಪರಿಗಣಿಸಿದರೆ, ಬಿಜೆಪಿ ಒಕ್ಕಲಿಗ ಸಮುದಾಯದ ಮೊದಲ ಶತ್ರುವಾಗಿಬಿಡುತ್ತದೆ. ಜೊತೆಗೆ ಆರೆಸ್ಸೆಸ್‍ನ ಸಿದ್ಧಾಂತದ ಕಡುವಿರೋಧಿಗಳಾಗಿ ಬದಲಾಗಲೇಬೇಕಾಗುತ್ತದೆ. ಹೀಗಾಗಿಯೇ ಉಳಿದವರು ಅಂತಹ ದೊಡ್ಡವರ ಹೆಸರನ್ನು ಹೇಳುವುದಕ್ಕೆ ಹೆದರುತ್ತಾರೆ. ಒಕ್ಕಲಿಗರ ಸಂಘದ ಬೃಹತ್ ಕಾರ್ಯಕ್ರಮವೊಂದರಲ್ಲಿ ಕುವೆಂಪು ಅವರ ಫೋಟೋ ಹಾಕಿಕೊಂಡಿದ್ದಕ್ಕೆ ದೊಡ್ಡ ವಿರೋಧ ಕೇಳಿ ಬಂದಿತ್ತು.

ದುರಂತವೆಂದರೆ, ಸಿ.ಟಿ.ರವಿ ‘ಇವರು ನಿಮ್ಮ ಆದರ್ಶ’ ಎಂದು ತನ್ನ ಪರಿವಾರದ ಹೆಸರುಗಳನ್ನು ಹೇಳುವುದು ಸಾಧ್ಯವಿಲ್ಲ. ಹಾಗಾಗಿ ಈ ಸದ್ಯ ಡಿ.ಕೆ.ಶಿವಕುಮಾರ್‍ರ ಮೇಲೆ ಕೇಂದ್ರ ಸರ್ಕಾರ ಮುಗಿಬಿದ್ದಿರುವ ಸಂದರ್ಭದಲ್ಲಿ ಒಕ್ಕಲಿಗರು ಬಿಜೆಪಿಯ ವಿರುದ್ಧ ತಿರುಗಿ ಬೀಳುತ್ತಿರುವುದನ್ನು ರವಿ ಗ್ರಹಿಸಿದ್ದಾರೆ. ಜಾತಿಯಾಚೆ ಯೋಚಿಸಿ ಎಂದು ‘ಸಂಘಪರಿವಾರದ ಮೂಲದವರಲ್ಲದ’ ಅಶ್ವತ್ಥನಾರಾಯಣ ಹೇಳುತ್ತಿದ್ದರೆ, ಜಾತಿ-ಧರ್ಮಗಳನ್ನು ಬಳಸಿಯೇ ರಾಜಕಾರಣ ಮಾಡುವ ಅಭ್ಯಾಸದ ರವಿಗೆ ಒಕ್ಕಲಿಗ ಹೆಸರುಗಳನ್ನೇ ಮುಂದೆ ಮಾಡುವ ಆಲೋಚನೆ ಬಂದಿದೆ. ಆದರೆ, ಅದಕ್ಕೆ ಅವರು ಆರಿಸಿಕೊಂಡಿರುವ ಹೆಸರುಗಳು ಮಾತ್ರ ಅವರ ವಿರೋಧಿ ಪಾಳೆಯದ್ದು ಎಂಬುದನ್ನು ನೆನಪಿಸುವ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...