Homeಕರ್ನಾಟಕಸಿ.ಟಿ.ರವಿಯ ಬಾಯಲ್ಲಿ ಕುವೆಂಪು, ಶಾಂತವೇರಿಯವರ ಹೆಸರು: ಹೇಳಿಕೊಳ್ಳಲು ಸಿ.ಟಿ.ರವಿಗೆ ಒಂದೂ ಸಂಘಪರಿವಾರದ ಹೆಸರು ಸಿಗಲಿಲ್ಲವೇಕೆ?

ಸಿ.ಟಿ.ರವಿಯ ಬಾಯಲ್ಲಿ ಕುವೆಂಪು, ಶಾಂತವೇರಿಯವರ ಹೆಸರು: ಹೇಳಿಕೊಳ್ಳಲು ಸಿ.ಟಿ.ರವಿಗೆ ಒಂದೂ ಸಂಘಪರಿವಾರದ ಹೆಸರು ಸಿಗಲಿಲ್ಲವೇಕೆ?

- Advertisement -
- Advertisement -

ಡಿ.ಕೆ.ಶಿವಕುಮಾರ್ ರ ಬಂಧನಕ್ಕೆ ಒಕ್ಕಲಿಗರ ಸಂಘಗಳು ಸೇರಿ ಮಾಡಿದ ಪ್ರತಿಭಟನೆಯ ಕುರಿತು ಒಕ್ಕಲಿಗ ಸಮುದಾಯಕ್ಕೆ ಸೇರಿದ ಬಿಜೆಪಿ ಸಚಿವ ಸಿ.ಟಿ.ರವಿ ಆಕ್ಷೇಪಣೆ ಎತ್ತಿ ಮಾತನಾಡಿದರು. ಜಾತಿಯ ಆಧಾರದಲ್ಲಿ ಪ್ರತಿಭಟಿಸಬೇಡಿ ಎಂದು ಅವರು ಹೇಳಲಿಲ್ಲ. ಈ ಮಾತನ್ನು ಬೇರೆ ಕೆಲವರು ಹೇಳಿದ್ದಾರೆ. ಆರ್.ಅಶೋಕ್ ಸೇರಿದಂತೆ ಹಲವರು ತಪ್ಪು ಮಾಡಿದ್ದಾರೆ, ಅನುಭವಿಸುತ್ತಾರೆ ಅಷ್ಟೇ ಹೊರತು ಇದಕ್ಕೆ ಜಾತಿಯ ಬಣ್ಣ ಬಳಿಯಬೇಡಿ ಎಂದು ಹೇಳಿದರು. ಆದರೆ, ಸಿ.ಟಿ.ರವಿ ತಾನು ಭಿನ್ನವಾಗಿ ಹೇಳಬೇಕು ಎಂಬ ಕಾರಣಕ್ಕೆ ಆಶ್ಚರ್ಯಕರವಾದ ಮಾತುಗಳನ್ನು ಹೇಳಿದರು.

‘ಒಕ್ಕಲಿಗ ಸಮುದಾಯದಲ್ಲಿ ಶಾಂತವೇರಿ ಗೋಪಾಲಗೌಡ, ಕುವೆಂಪು, ಕೆಂಗಲ್ ಹನುಮಂತಯ್ಯರಂಥವರು ಇದ್ದರು. ಅವರನ್ನು ಬಿಟ್ಟು ಡಿ.ಕೆ.ಶಿವಕುಮಾರ್ ಥರದವರನ್ನು ನಿಮ್ಮ ನಾಯಕರೆಂದು ಆರಿಸಿಕೊಳ್ಳುತ್ತೀರಾ (ಡಿಕೆಶಿ ಹೆಸರು ಹೇಳದಿದ್ದರೂ, ಅದೇ ಉದ್ದೇಶದಿಂದ ಹೇಳಿದ್ದು) ಯೋಚಿಸಿ’ ಎಂಬುದು ರವಿಯವರ ಹೇಳಿಕೆಯಾಗಿತ್ತು.

ವಿಪರ್ಯಾಸವೆಂದರೆ, ಕೆಂಗಲ್ ಹನುಮಂತಯ್ಯನವರು ಸಿ.ಟಿ.ರವಿಯವರ ಪಕ್ಷದ ಹಿಂದಿನ ಅವತಾರವಾಗಿದ್ದ ಜನಸಂಘದಲ್ಲೇನೂ ಇರಲಿಲ್ಲ. ಅವರು ಕಾಂಗ್ರೆಸ್ ನಾಯಕರಾಗಿದ್ದರು. ಸಿ.ಟಿ.ರವಿಯವರ ಸಂಘಟನೆ ಆರೆಸ್ಸೆಸ್ ಬ್ರಿಟಿಷರ ಪರವಾಗಿ ಕೆಲಸ ಮಾಡಿದರೆ, ಹನುಮಂತಯ್ಯನವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು 9 ಸಾರಿ ಜೈಲು ಅನುಭವಿಸಿದ್ದರು.

ಇನ್ನು ಶಾಂತವೇರಿ ಗೋಪಾಲಗೌಡರು. ಅವರು ಕಾಂಗ್ರೆಸ್ ವಿರುದ್ಧ ಇದ್ದರು. ಆದರೆ, ಬಿಜೆಪಿ ಹಾಗೂ ಆರೆಸ್ಸೆಸ್‍ಅನ್ನು ಸಂಪೂರ್ಣವಾಗಿ ವಿರೋಧಿಸುವ ಸಮಾಜವಾದಿ ಆಶಯದ ಪಕ್ಷದಲ್ಲಿದ್ದರು. ಸಿ.ಟಿ.ರವಿಯವರ ಪಕ್ಷ ಅಥವಾ ಅವರ ಪೂರ್ವಸೂರಿಗಳು ಭೂಮಾಲೀಕರ ಪರವಾಗಿದ್ದರೆ, ಗೋಪಾಲಗೌಡರು ಗೇಣೀದಾರರ ಪರವಾಗಿದ್ದರು. ಇನ್ನು ರವಿಯವರೇ ಕೊಂಡಾಡಿದ ಗೌಡರ ಸರಳತೆ, ಅತ್ಯಂತ ಕೆಳಸ್ತರದಲ್ಲಿದ್ದ ಜನರ ಪರವಾಗಿ ದನಿಯೆತ್ತುವುದೂ ಸಹಾ ರವಿಯವರ ಪಕ್ಷದ ಧೋರಣೆಯಲ್ಲ. ಹಾಗೆಯೇ ಗೋಪಾಲಗೌಡರು ಜಾತಿ ರಾಜಕಾರಣ ಮಾಡಿರಲಿಲ್ಲ. ರವಿ ಬಂದಿರುವ ಮಲೆನಾಡಿನಿಂದಲೇ ಬಂದ ಗೋಪಾಲಗೌಡರು ಕಾಂಗ್ರೆಸ್ಸಿಗೆ ಸಲ್ಲುವ ವ್ಯಕ್ತಿಯಾಗಿರಲಿಲ್ಲ; ಬಿಜೆಪಿಗಂತೂ ಹತ್ತಿರವೂ ಬರುತ್ತಿರಲಿಲ್ಲ.


ಸಿ.ಟಿ.ರವಿಯಂತಹ ವ್ಯಕ್ತಿಗಳು ಕುವೆಂಪು ಅವರ ಹೆಸರಂತೂ ಹೇಳುವುದೇ ಅಪಚಾರ. ಜಾತಿ, ಧರ್ಮ, ಜನಾಂಗಗಳ ಕಾರಣಕ್ಕೆ ದೂರವಿಡುವ ಸಂಸ್ಕೃತಿಯ ರವಿ, ವಿಶ್ವಮಾನವ ತತ್ವವನ್ನು ಹೇಳಿದ ಕುವೆಂಪು ಅವರ ಹೆಸರನ್ನು ಹೇಳಿದ್ದು ವಿಪರ್ಯಾಸ. ರವಿ ಪ್ರತಿಪಾದಿಸುವ ಹಿಂದಿ, ಹಿಂದೂ ಮತ್ತು ಹಿಂದೂರಾಷ್ಟ್ರದ ಕಟುವಿರೋಧಿಗಳಾಗಿದ್ದ ಕುವೆಂಪು ಆರೆಸ್ಸೆಸ್‍ಅನ್ನು ವಿರೋಧಿಸುತ್ತಿದ್ದರಷ್ಟೇ ಅಲ್ಲ, ತಮ್ಮನ್ನು ಒಕ್ಕಲಿಗರೆಂದು ಕರೆಯುವುದನ್ನೂ ಇಷ್ಟಪಡುತ್ತಿರಲಿಲ್ಲ. ಅವರು ಬದುಕಿರುವಷ್ಟು ಕಾಲ ಆದಿಚುಂಚನಗಿರಿ ಮಠಕ್ಕೆ ಭೇಟಿಯೂ ಕೊಡಲಿಲ್ಲ. ಅಂತರ್ಜಾತಿ ಮದುವೆಗಳನ್ನು ಪ್ರೋತ್ಸಾಹಿಸಿದರು. ಸ್ವತಃ ಅವರ ಮಗನ ಅಂತರ್ಜಾತಿ ಮದುವೆಗೆ ಬೆಂಬಲವಾಗಿ ನಿಂತರು.

ಈಗ ಸಿ.ಟಿ.ರವಿಯ ಮಾತನ್ನೇ ಪರಿಗಣಿಸಿ ಕುವೆಂಪು, ಶಾಂತವೇರಿ ಗೋಪಾಲಗೌಡರು, ಕೆಂಗಲ್ ಹನುಮಂತಯ್ಯರವರನ್ನು ಒಕ್ಕಲಿಗ ಸಮುದಾಯ ಆದರ್ಶವಾಗಿ ಪರಿಗಣಿಸಿದರೆ, ಬಿಜೆಪಿ ಒಕ್ಕಲಿಗ ಸಮುದಾಯದ ಮೊದಲ ಶತ್ರುವಾಗಿಬಿಡುತ್ತದೆ. ಜೊತೆಗೆ ಆರೆಸ್ಸೆಸ್‍ನ ಸಿದ್ಧಾಂತದ ಕಡುವಿರೋಧಿಗಳಾಗಿ ಬದಲಾಗಲೇಬೇಕಾಗುತ್ತದೆ. ಹೀಗಾಗಿಯೇ ಉಳಿದವರು ಅಂತಹ ದೊಡ್ಡವರ ಹೆಸರನ್ನು ಹೇಳುವುದಕ್ಕೆ ಹೆದರುತ್ತಾರೆ. ಒಕ್ಕಲಿಗರ ಸಂಘದ ಬೃಹತ್ ಕಾರ್ಯಕ್ರಮವೊಂದರಲ್ಲಿ ಕುವೆಂಪು ಅವರ ಫೋಟೋ ಹಾಕಿಕೊಂಡಿದ್ದಕ್ಕೆ ದೊಡ್ಡ ವಿರೋಧ ಕೇಳಿ ಬಂದಿತ್ತು.

ದುರಂತವೆಂದರೆ, ಸಿ.ಟಿ.ರವಿ ‘ಇವರು ನಿಮ್ಮ ಆದರ್ಶ’ ಎಂದು ತನ್ನ ಪರಿವಾರದ ಹೆಸರುಗಳನ್ನು ಹೇಳುವುದು ಸಾಧ್ಯವಿಲ್ಲ. ಹಾಗಾಗಿ ಈ ಸದ್ಯ ಡಿ.ಕೆ.ಶಿವಕುಮಾರ್‍ರ ಮೇಲೆ ಕೇಂದ್ರ ಸರ್ಕಾರ ಮುಗಿಬಿದ್ದಿರುವ ಸಂದರ್ಭದಲ್ಲಿ ಒಕ್ಕಲಿಗರು ಬಿಜೆಪಿಯ ವಿರುದ್ಧ ತಿರುಗಿ ಬೀಳುತ್ತಿರುವುದನ್ನು ರವಿ ಗ್ರಹಿಸಿದ್ದಾರೆ. ಜಾತಿಯಾಚೆ ಯೋಚಿಸಿ ಎಂದು ‘ಸಂಘಪರಿವಾರದ ಮೂಲದವರಲ್ಲದ’ ಅಶ್ವತ್ಥನಾರಾಯಣ ಹೇಳುತ್ತಿದ್ದರೆ, ಜಾತಿ-ಧರ್ಮಗಳನ್ನು ಬಳಸಿಯೇ ರಾಜಕಾರಣ ಮಾಡುವ ಅಭ್ಯಾಸದ ರವಿಗೆ ಒಕ್ಕಲಿಗ ಹೆಸರುಗಳನ್ನೇ ಮುಂದೆ ಮಾಡುವ ಆಲೋಚನೆ ಬಂದಿದೆ. ಆದರೆ, ಅದಕ್ಕೆ ಅವರು ಆರಿಸಿಕೊಂಡಿರುವ ಹೆಸರುಗಳು ಮಾತ್ರ ಅವರ ವಿರೋಧಿ ಪಾಳೆಯದ್ದು ಎಂಬುದನ್ನು ನೆನಪಿಸುವ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...