Homeಕರ್ನಾಟಕಸಿ.ಟಿ.ರವಿಯ ಬಾಯಲ್ಲಿ ಕುವೆಂಪು, ಶಾಂತವೇರಿಯವರ ಹೆಸರು: ಹೇಳಿಕೊಳ್ಳಲು ಸಿ.ಟಿ.ರವಿಗೆ ಒಂದೂ ಸಂಘಪರಿವಾರದ ಹೆಸರು ಸಿಗಲಿಲ್ಲವೇಕೆ?

ಸಿ.ಟಿ.ರವಿಯ ಬಾಯಲ್ಲಿ ಕುವೆಂಪು, ಶಾಂತವೇರಿಯವರ ಹೆಸರು: ಹೇಳಿಕೊಳ್ಳಲು ಸಿ.ಟಿ.ರವಿಗೆ ಒಂದೂ ಸಂಘಪರಿವಾರದ ಹೆಸರು ಸಿಗಲಿಲ್ಲವೇಕೆ?

- Advertisement -
- Advertisement -

ಡಿ.ಕೆ.ಶಿವಕುಮಾರ್ ರ ಬಂಧನಕ್ಕೆ ಒಕ್ಕಲಿಗರ ಸಂಘಗಳು ಸೇರಿ ಮಾಡಿದ ಪ್ರತಿಭಟನೆಯ ಕುರಿತು ಒಕ್ಕಲಿಗ ಸಮುದಾಯಕ್ಕೆ ಸೇರಿದ ಬಿಜೆಪಿ ಸಚಿವ ಸಿ.ಟಿ.ರವಿ ಆಕ್ಷೇಪಣೆ ಎತ್ತಿ ಮಾತನಾಡಿದರು. ಜಾತಿಯ ಆಧಾರದಲ್ಲಿ ಪ್ರತಿಭಟಿಸಬೇಡಿ ಎಂದು ಅವರು ಹೇಳಲಿಲ್ಲ. ಈ ಮಾತನ್ನು ಬೇರೆ ಕೆಲವರು ಹೇಳಿದ್ದಾರೆ. ಆರ್.ಅಶೋಕ್ ಸೇರಿದಂತೆ ಹಲವರು ತಪ್ಪು ಮಾಡಿದ್ದಾರೆ, ಅನುಭವಿಸುತ್ತಾರೆ ಅಷ್ಟೇ ಹೊರತು ಇದಕ್ಕೆ ಜಾತಿಯ ಬಣ್ಣ ಬಳಿಯಬೇಡಿ ಎಂದು ಹೇಳಿದರು. ಆದರೆ, ಸಿ.ಟಿ.ರವಿ ತಾನು ಭಿನ್ನವಾಗಿ ಹೇಳಬೇಕು ಎಂಬ ಕಾರಣಕ್ಕೆ ಆಶ್ಚರ್ಯಕರವಾದ ಮಾತುಗಳನ್ನು ಹೇಳಿದರು.

‘ಒಕ್ಕಲಿಗ ಸಮುದಾಯದಲ್ಲಿ ಶಾಂತವೇರಿ ಗೋಪಾಲಗೌಡ, ಕುವೆಂಪು, ಕೆಂಗಲ್ ಹನುಮಂತಯ್ಯರಂಥವರು ಇದ್ದರು. ಅವರನ್ನು ಬಿಟ್ಟು ಡಿ.ಕೆ.ಶಿವಕುಮಾರ್ ಥರದವರನ್ನು ನಿಮ್ಮ ನಾಯಕರೆಂದು ಆರಿಸಿಕೊಳ್ಳುತ್ತೀರಾ (ಡಿಕೆಶಿ ಹೆಸರು ಹೇಳದಿದ್ದರೂ, ಅದೇ ಉದ್ದೇಶದಿಂದ ಹೇಳಿದ್ದು) ಯೋಚಿಸಿ’ ಎಂಬುದು ರವಿಯವರ ಹೇಳಿಕೆಯಾಗಿತ್ತು.

ವಿಪರ್ಯಾಸವೆಂದರೆ, ಕೆಂಗಲ್ ಹನುಮಂತಯ್ಯನವರು ಸಿ.ಟಿ.ರವಿಯವರ ಪಕ್ಷದ ಹಿಂದಿನ ಅವತಾರವಾಗಿದ್ದ ಜನಸಂಘದಲ್ಲೇನೂ ಇರಲಿಲ್ಲ. ಅವರು ಕಾಂಗ್ರೆಸ್ ನಾಯಕರಾಗಿದ್ದರು. ಸಿ.ಟಿ.ರವಿಯವರ ಸಂಘಟನೆ ಆರೆಸ್ಸೆಸ್ ಬ್ರಿಟಿಷರ ಪರವಾಗಿ ಕೆಲಸ ಮಾಡಿದರೆ, ಹನುಮಂತಯ್ಯನವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು 9 ಸಾರಿ ಜೈಲು ಅನುಭವಿಸಿದ್ದರು.

ಇನ್ನು ಶಾಂತವೇರಿ ಗೋಪಾಲಗೌಡರು. ಅವರು ಕಾಂಗ್ರೆಸ್ ವಿರುದ್ಧ ಇದ್ದರು. ಆದರೆ, ಬಿಜೆಪಿ ಹಾಗೂ ಆರೆಸ್ಸೆಸ್‍ಅನ್ನು ಸಂಪೂರ್ಣವಾಗಿ ವಿರೋಧಿಸುವ ಸಮಾಜವಾದಿ ಆಶಯದ ಪಕ್ಷದಲ್ಲಿದ್ದರು. ಸಿ.ಟಿ.ರವಿಯವರ ಪಕ್ಷ ಅಥವಾ ಅವರ ಪೂರ್ವಸೂರಿಗಳು ಭೂಮಾಲೀಕರ ಪರವಾಗಿದ್ದರೆ, ಗೋಪಾಲಗೌಡರು ಗೇಣೀದಾರರ ಪರವಾಗಿದ್ದರು. ಇನ್ನು ರವಿಯವರೇ ಕೊಂಡಾಡಿದ ಗೌಡರ ಸರಳತೆ, ಅತ್ಯಂತ ಕೆಳಸ್ತರದಲ್ಲಿದ್ದ ಜನರ ಪರವಾಗಿ ದನಿಯೆತ್ತುವುದೂ ಸಹಾ ರವಿಯವರ ಪಕ್ಷದ ಧೋರಣೆಯಲ್ಲ. ಹಾಗೆಯೇ ಗೋಪಾಲಗೌಡರು ಜಾತಿ ರಾಜಕಾರಣ ಮಾಡಿರಲಿಲ್ಲ. ರವಿ ಬಂದಿರುವ ಮಲೆನಾಡಿನಿಂದಲೇ ಬಂದ ಗೋಪಾಲಗೌಡರು ಕಾಂಗ್ರೆಸ್ಸಿಗೆ ಸಲ್ಲುವ ವ್ಯಕ್ತಿಯಾಗಿರಲಿಲ್ಲ; ಬಿಜೆಪಿಗಂತೂ ಹತ್ತಿರವೂ ಬರುತ್ತಿರಲಿಲ್ಲ.


ಸಿ.ಟಿ.ರವಿಯಂತಹ ವ್ಯಕ್ತಿಗಳು ಕುವೆಂಪು ಅವರ ಹೆಸರಂತೂ ಹೇಳುವುದೇ ಅಪಚಾರ. ಜಾತಿ, ಧರ್ಮ, ಜನಾಂಗಗಳ ಕಾರಣಕ್ಕೆ ದೂರವಿಡುವ ಸಂಸ್ಕೃತಿಯ ರವಿ, ವಿಶ್ವಮಾನವ ತತ್ವವನ್ನು ಹೇಳಿದ ಕುವೆಂಪು ಅವರ ಹೆಸರನ್ನು ಹೇಳಿದ್ದು ವಿಪರ್ಯಾಸ. ರವಿ ಪ್ರತಿಪಾದಿಸುವ ಹಿಂದಿ, ಹಿಂದೂ ಮತ್ತು ಹಿಂದೂರಾಷ್ಟ್ರದ ಕಟುವಿರೋಧಿಗಳಾಗಿದ್ದ ಕುವೆಂಪು ಆರೆಸ್ಸೆಸ್‍ಅನ್ನು ವಿರೋಧಿಸುತ್ತಿದ್ದರಷ್ಟೇ ಅಲ್ಲ, ತಮ್ಮನ್ನು ಒಕ್ಕಲಿಗರೆಂದು ಕರೆಯುವುದನ್ನೂ ಇಷ್ಟಪಡುತ್ತಿರಲಿಲ್ಲ. ಅವರು ಬದುಕಿರುವಷ್ಟು ಕಾಲ ಆದಿಚುಂಚನಗಿರಿ ಮಠಕ್ಕೆ ಭೇಟಿಯೂ ಕೊಡಲಿಲ್ಲ. ಅಂತರ್ಜಾತಿ ಮದುವೆಗಳನ್ನು ಪ್ರೋತ್ಸಾಹಿಸಿದರು. ಸ್ವತಃ ಅವರ ಮಗನ ಅಂತರ್ಜಾತಿ ಮದುವೆಗೆ ಬೆಂಬಲವಾಗಿ ನಿಂತರು.

ಈಗ ಸಿ.ಟಿ.ರವಿಯ ಮಾತನ್ನೇ ಪರಿಗಣಿಸಿ ಕುವೆಂಪು, ಶಾಂತವೇರಿ ಗೋಪಾಲಗೌಡರು, ಕೆಂಗಲ್ ಹನುಮಂತಯ್ಯರವರನ್ನು ಒಕ್ಕಲಿಗ ಸಮುದಾಯ ಆದರ್ಶವಾಗಿ ಪರಿಗಣಿಸಿದರೆ, ಬಿಜೆಪಿ ಒಕ್ಕಲಿಗ ಸಮುದಾಯದ ಮೊದಲ ಶತ್ರುವಾಗಿಬಿಡುತ್ತದೆ. ಜೊತೆಗೆ ಆರೆಸ್ಸೆಸ್‍ನ ಸಿದ್ಧಾಂತದ ಕಡುವಿರೋಧಿಗಳಾಗಿ ಬದಲಾಗಲೇಬೇಕಾಗುತ್ತದೆ. ಹೀಗಾಗಿಯೇ ಉಳಿದವರು ಅಂತಹ ದೊಡ್ಡವರ ಹೆಸರನ್ನು ಹೇಳುವುದಕ್ಕೆ ಹೆದರುತ್ತಾರೆ. ಒಕ್ಕಲಿಗರ ಸಂಘದ ಬೃಹತ್ ಕಾರ್ಯಕ್ರಮವೊಂದರಲ್ಲಿ ಕುವೆಂಪು ಅವರ ಫೋಟೋ ಹಾಕಿಕೊಂಡಿದ್ದಕ್ಕೆ ದೊಡ್ಡ ವಿರೋಧ ಕೇಳಿ ಬಂದಿತ್ತು.

ದುರಂತವೆಂದರೆ, ಸಿ.ಟಿ.ರವಿ ‘ಇವರು ನಿಮ್ಮ ಆದರ್ಶ’ ಎಂದು ತನ್ನ ಪರಿವಾರದ ಹೆಸರುಗಳನ್ನು ಹೇಳುವುದು ಸಾಧ್ಯವಿಲ್ಲ. ಹಾಗಾಗಿ ಈ ಸದ್ಯ ಡಿ.ಕೆ.ಶಿವಕುಮಾರ್‍ರ ಮೇಲೆ ಕೇಂದ್ರ ಸರ್ಕಾರ ಮುಗಿಬಿದ್ದಿರುವ ಸಂದರ್ಭದಲ್ಲಿ ಒಕ್ಕಲಿಗರು ಬಿಜೆಪಿಯ ವಿರುದ್ಧ ತಿರುಗಿ ಬೀಳುತ್ತಿರುವುದನ್ನು ರವಿ ಗ್ರಹಿಸಿದ್ದಾರೆ. ಜಾತಿಯಾಚೆ ಯೋಚಿಸಿ ಎಂದು ‘ಸಂಘಪರಿವಾರದ ಮೂಲದವರಲ್ಲದ’ ಅಶ್ವತ್ಥನಾರಾಯಣ ಹೇಳುತ್ತಿದ್ದರೆ, ಜಾತಿ-ಧರ್ಮಗಳನ್ನು ಬಳಸಿಯೇ ರಾಜಕಾರಣ ಮಾಡುವ ಅಭ್ಯಾಸದ ರವಿಗೆ ಒಕ್ಕಲಿಗ ಹೆಸರುಗಳನ್ನೇ ಮುಂದೆ ಮಾಡುವ ಆಲೋಚನೆ ಬಂದಿದೆ. ಆದರೆ, ಅದಕ್ಕೆ ಅವರು ಆರಿಸಿಕೊಂಡಿರುವ ಹೆಸರುಗಳು ಮಾತ್ರ ಅವರ ವಿರೋಧಿ ಪಾಳೆಯದ್ದು ಎಂಬುದನ್ನು ನೆನಪಿಸುವ ಅಗತ್ಯವಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...