Homeಅಂತರಾಷ್ಟ್ರೀಯ‘ಎಂದೆಂದಿಗೂ ನೀ ಕನ್ನಡವಾಗಿರು’; ಕೆನಡಾದ ಸಂಸತ್ತಿನಲ್ಲಿ ಮೊಳಗಿದ ರಾಷ್ಟ್ರಕವಿ ಕುವೆಂಪು ಗೀತೆ!

‘ಎಂದೆಂದಿಗೂ ನೀ ಕನ್ನಡವಾಗಿರು’; ಕೆನಡಾದ ಸಂಸತ್ತಿನಲ್ಲಿ ಮೊಳಗಿದ ರಾಷ್ಟ್ರಕವಿ ಕುವೆಂಪು ಗೀತೆ!

- Advertisement -
- Advertisement -

‘ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು’ ಎಂಬ ರಾಷ್ಟ್ರಕವಿ ಕುವೆಂಪು ಅವರ ಗೀತೆಯನ್ನು ಕೆನಡಾದ ಸಂಸತ್ತಿನಲ್ಲಿ ಮೊಳಗಿಸಲಾಗಿದೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಂದ್ರ ಆರ್ಯ ಅವರು ಕೆನಡಾದಲ್ಲಿ ಸಂಸತ್‌ ಸದಸ್ಯರಾಗಿದ್ದು, ಅವರು ಗುರುವಾರ ಸಂಸತ್ತಿನಲ್ಲಿ ತಮ್ಮ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದಾರೆ.

ಹೌಸ್ ಆಫ್ ಕಾಮನ್ಸ್‌ನಲ್ಲಿ ನೇಪಿಯನ್ ಚುನಾವಣಾ ಜಿಲ್ಲೆಯನ್ನು ಪ್ರತಿನಿಧಿಸುವ ಆರ್ಯ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. “ನಾನು ಕೆನಡಾದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ (ಮೊದಲ ಭಾಷೆ) ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗೆ ಜಗತ್ತಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು” ಎಂದು ಅವರು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಟ್ವೀಟ್‌ ಮಾಡಿದ ವಿಡಿಯೊದಲ್ಲಿ ಅವರು, “ಮಾನ್ಯ ಸಭಾಪತಿ ಕೆನಡಾ ಸಂಸತ್ತಿನಲ್ಲಿ ನನ್ನ ಮಾತೃಭಾಷೆಯಾದ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ವ್ಯಕ್ತಿಯೊಬ್ಬ ಕೆನಾಡದ ಸಂಸತ್‌ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು ಸುಮಾರು ಐದು ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ” ಎಂದು ಅವರು ಹೇಳಿದ್ದಾರೆ.

“ಕೆನಡಾ ದೇಶದ ಕನ್ನಡಿಗರು 2018 ನೇ ಇಸವಿಯಲ್ಲಿ ಕೆನಡಾದ ಈ ಸಂಸತ್ತಿನಲ್ಲಿ ‘ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ರಾಷ್ಟ್ರ ಕವಿ ಕುವೆಂಪು ಬರೆದಿರುವ ಮತ್ತು ನಟಸಾರ್ವಭೌಮ ಡಾ. ರಾಜ್‌ಕುಮಾರ್‌ ಹಾಡಿರುವ ಭಾವಗೀತೆಯ ಕೆಲವು ಪದಗಳೊಂದಿಗೆ ನನ್ನ ಹೇಳಿಕೆಯನ್ನು ಮುಗಿಸುತ್ತಿದ್ದೇನೆ. ‘ಎಲ್ಲಾದರೂ ಇರು ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು’. ಧನ್ಯವಾದಗಳು ಸಭಾಪತಿಗಳೇ” ಎಂದು ಅವರು ತಮ್ಮ ಮಾತನ್ನು ಮುಗಿಸಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಭಾಷೆಯ ಕಲ್ಪನೆ ಮತ್ತು ಕನ್ನಡದ ಅಸ್ಮಿತೆ

ಕರ್ನಾಟಕದ ತುಮಕೂರು ಜಿಲ್ಲೆಯವರಾದ ಆರ್ಯ ಅವರು 2019 ರ ಫೆಡರಲ್ ಚುನಾವಣೆಯಲ್ಲಿ ಕೆನಡಾದ ಲಿಬರಲ್ ಪಾರ್ಟಿಯಿಂದ ಮರು ಆಯ್ಕೆಯಾಗಿದ್ದಾರೆ. ಅವರು ರಾಮನಗರದಿಂದ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಮತ್ತು ಕರ್ನಾಟಕದ ಧಾರವಾಡದಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ಅವರು ರಾಜಕೀಯ ಪ್ರವೇಶಿಸುವ ಮೊದಲು ಅವರು ಉನ್ನತ ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಒಟ್ಟಾವಾ ಕ್ಯಾಥೋಲಿಕ್ ಸ್ಕೂಲ್ ಬೋರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ಅವರ ಪತ್ನಿ ಸಂಗೀತಾ ಅವರೊಂದಿಗೆ ಅವರು ನೇಪಿಯನ್‌ನಲ್ಲಿ ವಾಸಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...