Homeಮುಖಪುಟಲಾಕ್‌ಡೌನ್‌ ಸಮಯದಲ್ಲಿಯೂ ಆನ್‌ಲೈನ್‌ನಲ್ಲಿ ದಂಡದೊಂದಿಗೆ ಪರೀಕ್ಷಾ ಶುಲ್ಕ ವಸೂಲಿಗೆ ಕೆವಿಎಸ್‌ ವಿರೋಧ

ಲಾಕ್‌ಡೌನ್‌ ಸಮಯದಲ್ಲಿಯೂ ಆನ್‌ಲೈನ್‌ನಲ್ಲಿ ದಂಡದೊಂದಿಗೆ ಪರೀಕ್ಷಾ ಶುಲ್ಕ ವಸೂಲಿಗೆ ಕೆವಿಎಸ್‌ ವಿರೋಧ

ಪರೀಕ್ಷಾ ಶುಲ್ಕ ಪಾವತಿಯ ಗೊಂದಲ ನಿವಾರಿಸಲು, ಮುಂಬರುವ ದಿನಗಳಲ್ಲಿ ಪರೀಕ್ಷಾ ಶುಲ್ಕ ಹಾಗೂ ಶಾಲಾ ಕಾಲೇಜಿನ ಶುಲ್ಕಗಳಿಗೆ ರಿಯಾಯಿತಿ ನೀಡಲು ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.

- Advertisement -
- Advertisement -

ಲಾಕ್‌ಡೌನ್‌ನಿಂದ ಬಹುತೇಕ ಭಾರತೀಯರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಸಮಯದಲ್ಲಿಯೂ ಆನ್‌ಲೈನ್‌ನಲ್ಲಿ ದಂಡದೊಂದಿಗೆ ಪರೀಕ್ಷಾ ಶುಲ್ಕ ವಸೂಲಿ ಮಾಡುತ್ತಿರುವ ಕೆಲ ಕಾಲೇಜುಗಳ ನಡೆಗೆ ಕೆವಿಎಸ್‌ ವಿರೋಧ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೆವಿಎಸ್‌ ರಾಜ್ಯಸಂಚಾಲಕ ಸರೋವರ್‌ ಬೆಂಕಿಕರೆಯವರು “ಲಾಕ್‌ಡೌನ್‌ ಸಮಯದಲ್ಲಿ ಪರೀಕ್ಷಾ ಶುಲ್ಕ ಕಟ್ಟಬೇಕೆ, ಬೇಡವೇ ಎಂಬುದರ ಬಗ್ಗೆ ಗೊಂದಲಗಳುಂಟಾಗಿವೆ. ಬೆಂಗಳೂರು ವಿವಿ ಪರೀಕ್ಷೆ ಮತ್ತು ಶುಲ್ಕ ಪಾವತಿಯನ್ನು ಮುಂದೂಡಿದೆ. ಆದರೆ ಈ ವಿಚಾರ ಅನೇಕ ವಿದ್ಯಾರ್ಥಿಗಳಿಗೆ ತಲುಪಿಲ್ಲ. ಇದರ ದುರುಪಯೋಗಪಡಿಸಿಕೊಂಡು ಕೆಲ ಕಾಲೇಜುಗಳು ಆನ್‌ಲೈನ್‌ದಲ್ಲಿ ದಂಡದೊಂದಿಗೆ ಶುಲ್ಕ ಕಟ್ಟಿಸಿಕೊಳ್ಳುತ್ತಿರುವುದು ಅಕ್ಷಮ್ಯ” ಎಂದು ದೂರಿದ್ದಾರೆ.

ದಿನಾಂಕ 20-3-2020 ರಂದು ಬೆಂಗಳೂರಿನ ಕೇಂದ್ರಿಯ ವಿಶ್ವವಿದ್ಯಾಲಯ ಹೊರಡಿಸಿರುವ ಪತ್ರದ ಪ್ರಕಾರ ವಿದ್ಯಾರ್ಥಿಗಳು ಏಪ್ರಿಲ್ 13ರ ವರೆಗೂ ದಂಡದ ಜೊತೆ ಶುಲ್ಕ ಹಾಗೂ ಏಪ್ರಿಲ್ 17ರ ಒಳಗಾಗಿ ವಿಶೇಷ ದಂಡದ ಜೊತೆ ಶುಲ್ಕ ಪಾವತಿ ಮಾಡಲು ಕಡೆಯ ದಿನಾಂಕದ ಗಡುವು ನೀಡಲಾಗಿತ್ತು. ಆದರೆ 24ರಂದು ಲಾಕ್‌ಡೌನ್ ಘೋಷಿಸಿದ್ದರಿಂದ ವಿವಿಯು ಮಾರ್ಚ್ 25 ರಂದು ಮತ್ತೊಂದು ಸುತ್ತೋಲೆ ಹೊರಡಿಸಿ ಅನಿರ್ಧಿಷ್ಠಾವಧಿಗೆ ಪರೀಕ್ಷಾ ಶುಲ್ಕ ಹಾಗೂ ಪರೀಕ್ಷೆಯ ವೇಳಾಪಟ್ಟಿಯನ್ನು ಎರಡನ್ನೂ ಮುಂದೂಡಲಾಗಿದೆ ಎಂದು ತಿಳಿಸಿದೆ.

ಆದರೆ ಈ ವಿಚಾರ ವಿದ್ಯಾರ್ಥಿಗಳಿಗೆ ಮನವರಿಕೆಯಾಗದ ಕಾರನ ಏಪ್ರಿಲ್‌ 7ರವರೆಗೂ ಕೆಲವು ವಿದ್ಯಾರ್ಥಿಗಳಿಂದ ದಂಡಸಹಿತ ಶುಲ್ಕ ಕಟ್ಟಿಸಿಕೊಂಡ ಆರೋಪಗಳು ಕೇಳಿಬಂದಿವೆ. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಒತ್ತಾಯಿಸಿದೆ.

ಹಾಗಾಗಿ ಸರ್ಕಾರ ಈ ಕೂಡಲೇ ಮಧ್ಯಪ್ರವೇಶ ಮಾಡಿ ವಿದ್ಯಾರ್ಥಿಗಳಲ್ಲಿ ಇರುವ ಪರೀಕ್ಷಾ ಶುಲ್ಕದ ಈ ಗೊಂದಲ ಹಾಗೂ ಆತಂಕವನ್ನು ನಿವಾರಣೆ ಮಾಡಬೇಕು. ಆರ್ಥಿಕ ಬಿಕ್ಕಟಿನ ಈ ಕಾಲದಲ್ಲಿ ಮುಂಬರುವ ಪರೀಕ್ಷಾ ಶುಲ್ಕ ಹಾಗೂ ಪ್ರವೇಶಾತಿ ಸಮಯದಲ್ಲಿಯೂ ಶುಲ್ಕವನ್ನು ಸಾಧ್ಯವಾದಷ್ಟು ಸರ್ಕಾರವೇ ಭರಿಸಬೇಕು, ಅಥವಾ ಕಂತುಗಳಲ್ಲಿ ಪಾವತಿಸುವ ಹಾಗೂ ಶುಲ್ಕದಲ್ಲಿ ರಿಯಾಯಿತಿಯನ್ನು ನೀಡುವ ಕ್ರಮಗಳನ್ನು ಸರ್ಕಾರ ಅಗತ್ಯವಾಗಿ ಮಾಡಬೇಕು. ಖಾಸಗೀ ಶಿಕ್ಷಣ ಸಂಸ್ಥೆಗಳ ಮೇಲೆ ನಿಯಂತ್ರಣವನ್ನೂ ಹೇರಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...