Homeಮುಖಪುಟಲಾಕ್‌ಡೌನ್‌ ಸಮಯದಲ್ಲಿಯೂ ಆನ್‌ಲೈನ್‌ನಲ್ಲಿ ದಂಡದೊಂದಿಗೆ ಪರೀಕ್ಷಾ ಶುಲ್ಕ ವಸೂಲಿಗೆ ಕೆವಿಎಸ್‌ ವಿರೋಧ

ಲಾಕ್‌ಡೌನ್‌ ಸಮಯದಲ್ಲಿಯೂ ಆನ್‌ಲೈನ್‌ನಲ್ಲಿ ದಂಡದೊಂದಿಗೆ ಪರೀಕ್ಷಾ ಶುಲ್ಕ ವಸೂಲಿಗೆ ಕೆವಿಎಸ್‌ ವಿರೋಧ

ಪರೀಕ್ಷಾ ಶುಲ್ಕ ಪಾವತಿಯ ಗೊಂದಲ ನಿವಾರಿಸಲು, ಮುಂಬರುವ ದಿನಗಳಲ್ಲಿ ಪರೀಕ್ಷಾ ಶುಲ್ಕ ಹಾಗೂ ಶಾಲಾ ಕಾಲೇಜಿನ ಶುಲ್ಕಗಳಿಗೆ ರಿಯಾಯಿತಿ ನೀಡಲು ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.

- Advertisement -
- Advertisement -

ಲಾಕ್‌ಡೌನ್‌ನಿಂದ ಬಹುತೇಕ ಭಾರತೀಯರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಸಮಯದಲ್ಲಿಯೂ ಆನ್‌ಲೈನ್‌ನಲ್ಲಿ ದಂಡದೊಂದಿಗೆ ಪರೀಕ್ಷಾ ಶುಲ್ಕ ವಸೂಲಿ ಮಾಡುತ್ತಿರುವ ಕೆಲ ಕಾಲೇಜುಗಳ ನಡೆಗೆ ಕೆವಿಎಸ್‌ ವಿರೋಧ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೆವಿಎಸ್‌ ರಾಜ್ಯಸಂಚಾಲಕ ಸರೋವರ್‌ ಬೆಂಕಿಕರೆಯವರು “ಲಾಕ್‌ಡೌನ್‌ ಸಮಯದಲ್ಲಿ ಪರೀಕ್ಷಾ ಶುಲ್ಕ ಕಟ್ಟಬೇಕೆ, ಬೇಡವೇ ಎಂಬುದರ ಬಗ್ಗೆ ಗೊಂದಲಗಳುಂಟಾಗಿವೆ. ಬೆಂಗಳೂರು ವಿವಿ ಪರೀಕ್ಷೆ ಮತ್ತು ಶುಲ್ಕ ಪಾವತಿಯನ್ನು ಮುಂದೂಡಿದೆ. ಆದರೆ ಈ ವಿಚಾರ ಅನೇಕ ವಿದ್ಯಾರ್ಥಿಗಳಿಗೆ ತಲುಪಿಲ್ಲ. ಇದರ ದುರುಪಯೋಗಪಡಿಸಿಕೊಂಡು ಕೆಲ ಕಾಲೇಜುಗಳು ಆನ್‌ಲೈನ್‌ದಲ್ಲಿ ದಂಡದೊಂದಿಗೆ ಶುಲ್ಕ ಕಟ್ಟಿಸಿಕೊಳ್ಳುತ್ತಿರುವುದು ಅಕ್ಷಮ್ಯ” ಎಂದು ದೂರಿದ್ದಾರೆ.

ದಿನಾಂಕ 20-3-2020 ರಂದು ಬೆಂಗಳೂರಿನ ಕೇಂದ್ರಿಯ ವಿಶ್ವವಿದ್ಯಾಲಯ ಹೊರಡಿಸಿರುವ ಪತ್ರದ ಪ್ರಕಾರ ವಿದ್ಯಾರ್ಥಿಗಳು ಏಪ್ರಿಲ್ 13ರ ವರೆಗೂ ದಂಡದ ಜೊತೆ ಶುಲ್ಕ ಹಾಗೂ ಏಪ್ರಿಲ್ 17ರ ಒಳಗಾಗಿ ವಿಶೇಷ ದಂಡದ ಜೊತೆ ಶುಲ್ಕ ಪಾವತಿ ಮಾಡಲು ಕಡೆಯ ದಿನಾಂಕದ ಗಡುವು ನೀಡಲಾಗಿತ್ತು. ಆದರೆ 24ರಂದು ಲಾಕ್‌ಡೌನ್ ಘೋಷಿಸಿದ್ದರಿಂದ ವಿವಿಯು ಮಾರ್ಚ್ 25 ರಂದು ಮತ್ತೊಂದು ಸುತ್ತೋಲೆ ಹೊರಡಿಸಿ ಅನಿರ್ಧಿಷ್ಠಾವಧಿಗೆ ಪರೀಕ್ಷಾ ಶುಲ್ಕ ಹಾಗೂ ಪರೀಕ್ಷೆಯ ವೇಳಾಪಟ್ಟಿಯನ್ನು ಎರಡನ್ನೂ ಮುಂದೂಡಲಾಗಿದೆ ಎಂದು ತಿಳಿಸಿದೆ.

ಆದರೆ ಈ ವಿಚಾರ ವಿದ್ಯಾರ್ಥಿಗಳಿಗೆ ಮನವರಿಕೆಯಾಗದ ಕಾರನ ಏಪ್ರಿಲ್‌ 7ರವರೆಗೂ ಕೆಲವು ವಿದ್ಯಾರ್ಥಿಗಳಿಂದ ದಂಡಸಹಿತ ಶುಲ್ಕ ಕಟ್ಟಿಸಿಕೊಂಡ ಆರೋಪಗಳು ಕೇಳಿಬಂದಿವೆ. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಒತ್ತಾಯಿಸಿದೆ.

ಹಾಗಾಗಿ ಸರ್ಕಾರ ಈ ಕೂಡಲೇ ಮಧ್ಯಪ್ರವೇಶ ಮಾಡಿ ವಿದ್ಯಾರ್ಥಿಗಳಲ್ಲಿ ಇರುವ ಪರೀಕ್ಷಾ ಶುಲ್ಕದ ಈ ಗೊಂದಲ ಹಾಗೂ ಆತಂಕವನ್ನು ನಿವಾರಣೆ ಮಾಡಬೇಕು. ಆರ್ಥಿಕ ಬಿಕ್ಕಟಿನ ಈ ಕಾಲದಲ್ಲಿ ಮುಂಬರುವ ಪರೀಕ್ಷಾ ಶುಲ್ಕ ಹಾಗೂ ಪ್ರವೇಶಾತಿ ಸಮಯದಲ್ಲಿಯೂ ಶುಲ್ಕವನ್ನು ಸಾಧ್ಯವಾದಷ್ಟು ಸರ್ಕಾರವೇ ಭರಿಸಬೇಕು, ಅಥವಾ ಕಂತುಗಳಲ್ಲಿ ಪಾವತಿಸುವ ಹಾಗೂ ಶುಲ್ಕದಲ್ಲಿ ರಿಯಾಯಿತಿಯನ್ನು ನೀಡುವ ಕ್ರಮಗಳನ್ನು ಸರ್ಕಾರ ಅಗತ್ಯವಾಗಿ ಮಾಡಬೇಕು. ಖಾಸಗೀ ಶಿಕ್ಷಣ ಸಂಸ್ಥೆಗಳ ಮೇಲೆ ನಿಯಂತ್ರಣವನ್ನೂ ಹೇರಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...