Homeಮುಖಪುಟಲಾಕ್‌ಡೌನ್‌ ಸಮಯದಲ್ಲಿಯೂ ಆನ್‌ಲೈನ್‌ನಲ್ಲಿ ದಂಡದೊಂದಿಗೆ ಪರೀಕ್ಷಾ ಶುಲ್ಕ ವಸೂಲಿಗೆ ಕೆವಿಎಸ್‌ ವಿರೋಧ

ಲಾಕ್‌ಡೌನ್‌ ಸಮಯದಲ್ಲಿಯೂ ಆನ್‌ಲೈನ್‌ನಲ್ಲಿ ದಂಡದೊಂದಿಗೆ ಪರೀಕ್ಷಾ ಶುಲ್ಕ ವಸೂಲಿಗೆ ಕೆವಿಎಸ್‌ ವಿರೋಧ

ಪರೀಕ್ಷಾ ಶುಲ್ಕ ಪಾವತಿಯ ಗೊಂದಲ ನಿವಾರಿಸಲು, ಮುಂಬರುವ ದಿನಗಳಲ್ಲಿ ಪರೀಕ್ಷಾ ಶುಲ್ಕ ಹಾಗೂ ಶಾಲಾ ಕಾಲೇಜಿನ ಶುಲ್ಕಗಳಿಗೆ ರಿಯಾಯಿತಿ ನೀಡಲು ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.

- Advertisement -
- Advertisement -

ಲಾಕ್‌ಡೌನ್‌ನಿಂದ ಬಹುತೇಕ ಭಾರತೀಯರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಸಮಯದಲ್ಲಿಯೂ ಆನ್‌ಲೈನ್‌ನಲ್ಲಿ ದಂಡದೊಂದಿಗೆ ಪರೀಕ್ಷಾ ಶುಲ್ಕ ವಸೂಲಿ ಮಾಡುತ್ತಿರುವ ಕೆಲ ಕಾಲೇಜುಗಳ ನಡೆಗೆ ಕೆವಿಎಸ್‌ ವಿರೋಧ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೆವಿಎಸ್‌ ರಾಜ್ಯಸಂಚಾಲಕ ಸರೋವರ್‌ ಬೆಂಕಿಕರೆಯವರು “ಲಾಕ್‌ಡೌನ್‌ ಸಮಯದಲ್ಲಿ ಪರೀಕ್ಷಾ ಶುಲ್ಕ ಕಟ್ಟಬೇಕೆ, ಬೇಡವೇ ಎಂಬುದರ ಬಗ್ಗೆ ಗೊಂದಲಗಳುಂಟಾಗಿವೆ. ಬೆಂಗಳೂರು ವಿವಿ ಪರೀಕ್ಷೆ ಮತ್ತು ಶುಲ್ಕ ಪಾವತಿಯನ್ನು ಮುಂದೂಡಿದೆ. ಆದರೆ ಈ ವಿಚಾರ ಅನೇಕ ವಿದ್ಯಾರ್ಥಿಗಳಿಗೆ ತಲುಪಿಲ್ಲ. ಇದರ ದುರುಪಯೋಗಪಡಿಸಿಕೊಂಡು ಕೆಲ ಕಾಲೇಜುಗಳು ಆನ್‌ಲೈನ್‌ದಲ್ಲಿ ದಂಡದೊಂದಿಗೆ ಶುಲ್ಕ ಕಟ್ಟಿಸಿಕೊಳ್ಳುತ್ತಿರುವುದು ಅಕ್ಷಮ್ಯ” ಎಂದು ದೂರಿದ್ದಾರೆ.

ದಿನಾಂಕ 20-3-2020 ರಂದು ಬೆಂಗಳೂರಿನ ಕೇಂದ್ರಿಯ ವಿಶ್ವವಿದ್ಯಾಲಯ ಹೊರಡಿಸಿರುವ ಪತ್ರದ ಪ್ರಕಾರ ವಿದ್ಯಾರ್ಥಿಗಳು ಏಪ್ರಿಲ್ 13ರ ವರೆಗೂ ದಂಡದ ಜೊತೆ ಶುಲ್ಕ ಹಾಗೂ ಏಪ್ರಿಲ್ 17ರ ಒಳಗಾಗಿ ವಿಶೇಷ ದಂಡದ ಜೊತೆ ಶುಲ್ಕ ಪಾವತಿ ಮಾಡಲು ಕಡೆಯ ದಿನಾಂಕದ ಗಡುವು ನೀಡಲಾಗಿತ್ತು. ಆದರೆ 24ರಂದು ಲಾಕ್‌ಡೌನ್ ಘೋಷಿಸಿದ್ದರಿಂದ ವಿವಿಯು ಮಾರ್ಚ್ 25 ರಂದು ಮತ್ತೊಂದು ಸುತ್ತೋಲೆ ಹೊರಡಿಸಿ ಅನಿರ್ಧಿಷ್ಠಾವಧಿಗೆ ಪರೀಕ್ಷಾ ಶುಲ್ಕ ಹಾಗೂ ಪರೀಕ್ಷೆಯ ವೇಳಾಪಟ್ಟಿಯನ್ನು ಎರಡನ್ನೂ ಮುಂದೂಡಲಾಗಿದೆ ಎಂದು ತಿಳಿಸಿದೆ.

ಆದರೆ ಈ ವಿಚಾರ ವಿದ್ಯಾರ್ಥಿಗಳಿಗೆ ಮನವರಿಕೆಯಾಗದ ಕಾರನ ಏಪ್ರಿಲ್‌ 7ರವರೆಗೂ ಕೆಲವು ವಿದ್ಯಾರ್ಥಿಗಳಿಂದ ದಂಡಸಹಿತ ಶುಲ್ಕ ಕಟ್ಟಿಸಿಕೊಂಡ ಆರೋಪಗಳು ಕೇಳಿಬಂದಿವೆ. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಒತ್ತಾಯಿಸಿದೆ.

ಹಾಗಾಗಿ ಸರ್ಕಾರ ಈ ಕೂಡಲೇ ಮಧ್ಯಪ್ರವೇಶ ಮಾಡಿ ವಿದ್ಯಾರ್ಥಿಗಳಲ್ಲಿ ಇರುವ ಪರೀಕ್ಷಾ ಶುಲ್ಕದ ಈ ಗೊಂದಲ ಹಾಗೂ ಆತಂಕವನ್ನು ನಿವಾರಣೆ ಮಾಡಬೇಕು. ಆರ್ಥಿಕ ಬಿಕ್ಕಟಿನ ಈ ಕಾಲದಲ್ಲಿ ಮುಂಬರುವ ಪರೀಕ್ಷಾ ಶುಲ್ಕ ಹಾಗೂ ಪ್ರವೇಶಾತಿ ಸಮಯದಲ್ಲಿಯೂ ಶುಲ್ಕವನ್ನು ಸಾಧ್ಯವಾದಷ್ಟು ಸರ್ಕಾರವೇ ಭರಿಸಬೇಕು, ಅಥವಾ ಕಂತುಗಳಲ್ಲಿ ಪಾವತಿಸುವ ಹಾಗೂ ಶುಲ್ಕದಲ್ಲಿ ರಿಯಾಯಿತಿಯನ್ನು ನೀಡುವ ಕ್ರಮಗಳನ್ನು ಸರ್ಕಾರ ಅಗತ್ಯವಾಗಿ ಮಾಡಬೇಕು. ಖಾಸಗೀ ಶಿಕ್ಷಣ ಸಂಸ್ಥೆಗಳ ಮೇಲೆ ನಿಯಂತ್ರಣವನ್ನೂ ಹೇರಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...