Homeಮುಖಪುಟಲಾಕ್‌ಡೌನ್‌ ಸಮಯದಲ್ಲಿಯೂ ಆನ್‌ಲೈನ್‌ನಲ್ಲಿ ದಂಡದೊಂದಿಗೆ ಪರೀಕ್ಷಾ ಶುಲ್ಕ ವಸೂಲಿಗೆ ಕೆವಿಎಸ್‌ ವಿರೋಧ

ಲಾಕ್‌ಡೌನ್‌ ಸಮಯದಲ್ಲಿಯೂ ಆನ್‌ಲೈನ್‌ನಲ್ಲಿ ದಂಡದೊಂದಿಗೆ ಪರೀಕ್ಷಾ ಶುಲ್ಕ ವಸೂಲಿಗೆ ಕೆವಿಎಸ್‌ ವಿರೋಧ

ಪರೀಕ್ಷಾ ಶುಲ್ಕ ಪಾವತಿಯ ಗೊಂದಲ ನಿವಾರಿಸಲು, ಮುಂಬರುವ ದಿನಗಳಲ್ಲಿ ಪರೀಕ್ಷಾ ಶುಲ್ಕ ಹಾಗೂ ಶಾಲಾ ಕಾಲೇಜಿನ ಶುಲ್ಕಗಳಿಗೆ ರಿಯಾಯಿತಿ ನೀಡಲು ವಿದ್ಯಾರ್ಥಿ ಸಂಘಟನೆ ಆಗ್ರಹಿಸಿದೆ.

- Advertisement -
- Advertisement -

ಲಾಕ್‌ಡೌನ್‌ನಿಂದ ಬಹುತೇಕ ಭಾರತೀಯರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಸಮಯದಲ್ಲಿಯೂ ಆನ್‌ಲೈನ್‌ನಲ್ಲಿ ದಂಡದೊಂದಿಗೆ ಪರೀಕ್ಷಾ ಶುಲ್ಕ ವಸೂಲಿ ಮಾಡುತ್ತಿರುವ ಕೆಲ ಕಾಲೇಜುಗಳ ನಡೆಗೆ ಕೆವಿಎಸ್‌ ವಿರೋಧ ವ್ಯಕ್ತಪಡಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೆವಿಎಸ್‌ ರಾಜ್ಯಸಂಚಾಲಕ ಸರೋವರ್‌ ಬೆಂಕಿಕರೆಯವರು “ಲಾಕ್‌ಡೌನ್‌ ಸಮಯದಲ್ಲಿ ಪರೀಕ್ಷಾ ಶುಲ್ಕ ಕಟ್ಟಬೇಕೆ, ಬೇಡವೇ ಎಂಬುದರ ಬಗ್ಗೆ ಗೊಂದಲಗಳುಂಟಾಗಿವೆ. ಬೆಂಗಳೂರು ವಿವಿ ಪರೀಕ್ಷೆ ಮತ್ತು ಶುಲ್ಕ ಪಾವತಿಯನ್ನು ಮುಂದೂಡಿದೆ. ಆದರೆ ಈ ವಿಚಾರ ಅನೇಕ ವಿದ್ಯಾರ್ಥಿಗಳಿಗೆ ತಲುಪಿಲ್ಲ. ಇದರ ದುರುಪಯೋಗಪಡಿಸಿಕೊಂಡು ಕೆಲ ಕಾಲೇಜುಗಳು ಆನ್‌ಲೈನ್‌ದಲ್ಲಿ ದಂಡದೊಂದಿಗೆ ಶುಲ್ಕ ಕಟ್ಟಿಸಿಕೊಳ್ಳುತ್ತಿರುವುದು ಅಕ್ಷಮ್ಯ” ಎಂದು ದೂರಿದ್ದಾರೆ.

ದಿನಾಂಕ 20-3-2020 ರಂದು ಬೆಂಗಳೂರಿನ ಕೇಂದ್ರಿಯ ವಿಶ್ವವಿದ್ಯಾಲಯ ಹೊರಡಿಸಿರುವ ಪತ್ರದ ಪ್ರಕಾರ ವಿದ್ಯಾರ್ಥಿಗಳು ಏಪ್ರಿಲ್ 13ರ ವರೆಗೂ ದಂಡದ ಜೊತೆ ಶುಲ್ಕ ಹಾಗೂ ಏಪ್ರಿಲ್ 17ರ ಒಳಗಾಗಿ ವಿಶೇಷ ದಂಡದ ಜೊತೆ ಶುಲ್ಕ ಪಾವತಿ ಮಾಡಲು ಕಡೆಯ ದಿನಾಂಕದ ಗಡುವು ನೀಡಲಾಗಿತ್ತು. ಆದರೆ 24ರಂದು ಲಾಕ್‌ಡೌನ್ ಘೋಷಿಸಿದ್ದರಿಂದ ವಿವಿಯು ಮಾರ್ಚ್ 25 ರಂದು ಮತ್ತೊಂದು ಸುತ್ತೋಲೆ ಹೊರಡಿಸಿ ಅನಿರ್ಧಿಷ್ಠಾವಧಿಗೆ ಪರೀಕ್ಷಾ ಶುಲ್ಕ ಹಾಗೂ ಪರೀಕ್ಷೆಯ ವೇಳಾಪಟ್ಟಿಯನ್ನು ಎರಡನ್ನೂ ಮುಂದೂಡಲಾಗಿದೆ ಎಂದು ತಿಳಿಸಿದೆ.

ಆದರೆ ಈ ವಿಚಾರ ವಿದ್ಯಾರ್ಥಿಗಳಿಗೆ ಮನವರಿಕೆಯಾಗದ ಕಾರನ ಏಪ್ರಿಲ್‌ 7ರವರೆಗೂ ಕೆಲವು ವಿದ್ಯಾರ್ಥಿಗಳಿಂದ ದಂಡಸಹಿತ ಶುಲ್ಕ ಕಟ್ಟಿಸಿಕೊಂಡ ಆರೋಪಗಳು ಕೇಳಿಬಂದಿವೆ. ಇದನ್ನು ಕೂಡಲೇ ನಿಲ್ಲಿಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಒತ್ತಾಯಿಸಿದೆ.

ಹಾಗಾಗಿ ಸರ್ಕಾರ ಈ ಕೂಡಲೇ ಮಧ್ಯಪ್ರವೇಶ ಮಾಡಿ ವಿದ್ಯಾರ್ಥಿಗಳಲ್ಲಿ ಇರುವ ಪರೀಕ್ಷಾ ಶುಲ್ಕದ ಈ ಗೊಂದಲ ಹಾಗೂ ಆತಂಕವನ್ನು ನಿವಾರಣೆ ಮಾಡಬೇಕು. ಆರ್ಥಿಕ ಬಿಕ್ಕಟಿನ ಈ ಕಾಲದಲ್ಲಿ ಮುಂಬರುವ ಪರೀಕ್ಷಾ ಶುಲ್ಕ ಹಾಗೂ ಪ್ರವೇಶಾತಿ ಸಮಯದಲ್ಲಿಯೂ ಶುಲ್ಕವನ್ನು ಸಾಧ್ಯವಾದಷ್ಟು ಸರ್ಕಾರವೇ ಭರಿಸಬೇಕು, ಅಥವಾ ಕಂತುಗಳಲ್ಲಿ ಪಾವತಿಸುವ ಹಾಗೂ ಶುಲ್ಕದಲ್ಲಿ ರಿಯಾಯಿತಿಯನ್ನು ನೀಡುವ ಕ್ರಮಗಳನ್ನು ಸರ್ಕಾರ ಅಗತ್ಯವಾಗಿ ಮಾಡಬೇಕು. ಖಾಸಗೀ ಶಿಕ್ಷಣ ಸಂಸ್ಥೆಗಳ ಮೇಲೆ ನಿಯಂತ್ರಣವನ್ನೂ ಹೇರಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...