Homeಕರ್ನಾಟಕಕೊರೊನಾ ಪರಿಹಾರ: ರಂಗಕರ್ಮಿಗಳ ನಡುವೆ ತಾರತಮ್ಯಕ್ಕೆ ಕೆವಿಎಸ್‌ ಆಕ್ರೋಶ

ಕೊರೊನಾ ಪರಿಹಾರ: ರಂಗಕರ್ಮಿಗಳ ನಡುವೆ ತಾರತಮ್ಯಕ್ಕೆ ಕೆವಿಎಸ್‌ ಆಕ್ರೋಶ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಜನರಿಗೆ ನೆರವು ನೀಡಲು ಸಿಎಂ ಯಡಿಯೂರಪ್ಪ ಅವರು 1,200 ಕೋಟಿ ರೂ ಪ್ಯಾಕೇಜ್‌ ಘೋಷಿಸಿದ್ದಾರೆ. ಇದರಲ್ಲಿ ರಂಗಕರ್ಮಿಗಳಿಗೂ ಪ್ರೋತ್ಸಾಹ ಧನ ಘೋಷಿಸಿದ್ದು, 35 ವರ್ಷ ಮೇಲ್ಪಟ್ಟ ರಂಗಕರ್ಮಿಗಳಿಗೆ ಮಾತ್ರ 3,000 ರೂ ನೀಡುವುದಾಗಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ರಂಗಕರ್ಮಿಗಳ ವಿಚಾರದಲ್ಲಿ ವಯಸ್ಸಿನ ಆಧಾರದ ಮೇಲೆ ತಾರತಮ್ಯ ಮಾಡುತ್ತಿದೆ ಎಂದು ರಂಗಕರ್ಮಿ, ಕೆವಿಎಸ್‌ ಮುಖಂಡ ಲಕ್ಷ್ಮಣ್ ಮಂಡಲಗೆರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಸರ್ಕಾರ ಕೊಡುವ ಸಣ್ಣ ಮೊತ್ತಕ್ಕೆ ಕಲಾವಿದರು ಅರ್ಜಿ ಸಲ್ಲಿಸಲು ಅರ್ಧ ಖರ್ಚಾಗುತ್ತದೆ. ಎರಡು ಮೂರು ವರ್ಷಗಳಿಂದ ಕೊರೊನಾ ನೆಪ ಹೇಳಿ ಇಲಾಖೆಗಳಿಗೆ, ಅಕಾಡೆಮಿಗಳಿಗೆ ಹಣವೇ ಬಿಡುಗಡೆ ಆಗಿಲ್ಲ. ಏನಿಲ್ಲಂದರೂ 200 – 300 ಕೋಟಿ ರೂ. ಹಣ ಅಕಾಡೆಮಿಗಳಿಗೆ, ಪ್ರಾಧಿಕಾರಗಳಿಗೆ, ಸಾಹಿತ್ಯ ಪರಿಷತ್ತುಗಳಿಗೆ, ಇಲಾಖೆಗಳಿಗೆ ಬಿಡುಗಡೆ ಆಗಬೇಕಾದ ಹಣ ಎಲ್ಲಿ ಹೋಯಿತು?  ಕೊನೆ ಪಕ್ಷ ಕಲಾವಿದರ ಕಷ್ಟಕ್ಕಾದರು ಅ ಹಣ ಉಪಯೋಗ ಆಗುವುದು ಬೇಡವೇ?” ಎಂದು ರಾಜ್ಯ ಸರ್ಕಾರವನ್ನು ಪಶ್ನಿಸಿದ್ದಾರೆ.

“ರಂಗ ಚಟುವಟಿಕೆಗಳು ನಡೆಸಲು ಅವಕಾಶ ಇಲ್ಲದೆ, ಕಾರ್ಯಕ್ರಮಗಳು ಇಲ್ಲದೆ, ಒಂದಿಷ್ಟು ದುಡಿಮೆ ಇರುವ ಬೇಸಿಗೆ ಶಿಬಿರಗಳು ಇಲ್ಲ. ಸಣ್ಣ ಪುಟ್ಟ ರಂಗ ತಂಡಗಳಲ್ಲಿ ನಾಟಕ ತಯಾರು ಮಾಡಿಕೊಂಡು ಸುತ್ತಾಟ ಮಾಡುತ್ತ, ಸಂಕಷ್ಟಗಳನ್ನು ಎದುರಿಸುತ್ತ ರಂಗಭೂಮಿಯನ್ನೇ ನಂಬಿ ತಮ್ಮ ಬದುಕನ್ನಾಗಿಸಿಕೊಂಡ ಕಲಾವಿದರಿಗೆ ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರ ಸಹಾಯಕ್ಕೆ ನಿಲ್ಲದಿರುವಂತಹ ದುಸ್ಥಿತಿ ಬಂದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

“ನೊಂದ ಕಲಾವಿದರ ಕುಟುಂಬ ನಿರ್ವಹಣೆಗಾದರೂ ಸರ್ಕಾರ ಸಹಾಯ ಮಾಡಬಹುದು ಅಂದುಕೊಂಡರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು, ಅಕಾಡೆಮಿ ಅಧ್ಯಕ್ಷರು, ಸದಸ್ಯರುಗಳು ಮತ್ತು ರಾಜ್ಯ ಸರ್ಕಾರ ಈ ಎಲ್ಲರೂ ಸೇರಿ ಕಲಾವಿದರ ವಯಸ್ಸಿನ ಆಧಾರದಲ್ಲಿ ಅರ್ಜಿ ಆಹ್ವಾನಿಸಿ ಅನ್ಯಾಯ ಮಾಡಿದೆ. 35 ವರ್ಷದೊಳಗಿನವರಿಗೆ, ಮಾಶಾಸನ ಪಡೆಯುವವರಿಗೆ ಹಾಗೂ ಧನಸಹಾಯ ಪಡೆಯುವ ಸಂಘ – ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಎಂಬ ನಿಯಮಗಳಿವೆ…ಹಾಗಾದರೆ ಸರ್ಕಾರವು ಮಧ್ಯ ವಯಸ್ಸಿನ ಎಷ್ಟು ಕಲಾವಿದರಿಗೆ ಕೊಡತ್ತೀರಿ ಎನ್ನುವುದು ನನ್ನ ಪ್ರಶ್ನೆಯಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ಕರ್ನಾಟಕದಲ್ಲಿ ರಂಗಭೂಮಿ ಇಷ್ಟೆಲ್ಲ ಕ್ರಿಯಾಶೀಲವಾಗಿ ಕೆಲಸ ಮಾಡಲು ಜೀವಂತವಾಗಿರುವುದಕ್ಕೆ ಈ 35 ವಯಸ್ಸಿನ ಒಳಗಿರುವ ಯುವ ರಂಗ ಕಲಾವಿದರು. ಬೇಸಿಗೆ ಶಿಬಿರಗಳಲ್ಲಿ, ದೊಡ್ಡ ದೊಡ್ಡ ರೆಪರ್ಟರಿಗಳಲ್ಲಿ, ಸಣ್ಣ ಸಣ್ಣ ರಂಗತಂಡಗಳಲ್ಲಿ ಕ್ರಿಯಾಶೀಲವಾಗಿ ಹೊಸ ಹೊಸ ಯೋಚನೆಗಳೊಂದಿಗೆ ನಾಟಕಗಳನ್ನು ನಿರ್ದೇಶಿಸಿ ನಟಿಸಿ, ಸಂಘಟಿಸುವುದರ ಮೂಲಕ  ಇಂದು ಯುವರಂಗ ಕಲಾವಿದರು ರಂಗಭೂಮಿಯನ್ನು, ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿದ್ದಾರೆ ಮತ್ತು ರಂಗಭೂಮಿಯನ್ನೇ ಬದುಕನ್ನಾಗಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಲಕ್ಷ್ಮಣ್ ಮಂಡಲಗೆರ

“ಆದರೆ ಈ ಕಲಾವಿದರನ್ನು ಸರ್ಕಾರಗಳು ಕಡೆಗಣಿಸುತ್ತಿರುವುದು ವಿಷಾದನೀಯ. ಸರ್ಕಾರದ ಅಡಿಯಲ್ಲಿ ನಡೆಯುವ ರಂಗಭೂಮಿಯ ದೊಡ್ಡ ರೆಪರ್ಟರಿಗಳು ಎನಿಸಿಕೊಂಡಿರುವ ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು ಹೇಳುತ್ತಾರೆ. ಅಂತವರನ್ನೇ ಆಯ್ಕೆ ಮಾಡಿ ರಂಗಾಯಣಗಳಿಗೆ ದುಡಿಸಿಕೊಳ್ಳುತ್ತಾರೆ. ಆಗ ಮಾತ್ರ ಯುವ ಕಲಾವಿದರು ಬೇಕು, ಕೊರೊನಾ ಪರಿಹಾರ ನೀಡುವ ಸಮಯದಲ್ಲಿ ಬೇಡ ಎನ್ನುತ್ತಾರೆ…ಇದ್ಯಾವ ಸೀಮೆ ನ್ಯಾಯ, ಈ ನಿರ್ಧಾರ ಸರಿಯಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಮತಾ v/s BJP – ಮಾಜಿ ಮುಖ್ಯಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ ಕೇಂದ್ರ!

“ರಾಜ್ಯದ ಯುವ ರಂಗಕಲಾವಿದರು ಬೀದಿಗಿಳಿಯುವ ಮುಂಚೆ ವಯಸ್ಸಿನ ಮಿತಿಯನ್ನು ಸಡಿಲಗೊಳಿಸಿ, ಆರ್ಥಿಕ ನೆರವನ್ನು 10,000  (ಹತ್ತು ಸಾವಿರ)ರೂ. ಗೆ ಏರಿಸಿ. 10 ವರ್ಷಗಳ ಕಲಾಸೇವೆಯನ್ನು 5 ವರ್ಷಕ್ಕೆ ಇಳಿಸಿ. ಕಲಾವಿದರಿಗೆ ಪರಿಹಾರ ಅಲ್ಲ, ಗೌರವಧನವಾಗಿ ಹಣವನ್ನು ತಲುಪುವಂತೆ ಮಾಡಬೇಕು ಜೊತೆಗೆ ಆನ್‌ಲೈನ್ ಮೂಲಕ ಅರ್ಜಿ ಹಾಕುವ ಕೊನೆಯ ದಿನಾಂಕವನ್ನು ಮುಂದೂಡಬೇಕು” ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

“ಕಲಾವಿದರಿಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಲು ಆಗಲಿಲ್ಲ ಎಂದರೂ, ಜಿಲ್ಲಾ ಕಛೇರಿಗಳಲ್ಲಿ ಕಲಾವಿದರ ಮಾಹಿತಿ ಇರುತ್ತದೆ. ಅಲ್ಲಿ ಕಲಾವಿದರನ್ನು ಗುರುತಿಸಿ ದಾಖಲಾತಿಯನ್ನು ಪಡೆದು ಜಿಲ್ಲಾ ಕಛೇರಿ ಆಫೀಸ್‌ನಲ್ಲಿರುವ ಕಂಪ್ಯೂಟರ್  ಮೂಲಕವಾದರು ಅರ್ಜಿ ಹಾಕಿಸಿ ಎಲ್ಲಾ ಕಲಾವಿದರಿಗೆ ಆರ್ಥಿಕ ನೆರವು ಸಿಗಬೇಕು” ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಕಲೆಗೆ ಜಾತಿ,ಮತ, ಧರ್ಮ, ವಯಸ್ಸು ಇಲ್ಲ. ಕಲೆ ಎನ್ನುವುದು ಪ್ರತಿಯೊಬ್ಬರಲ್ಲೂ ಅಡಗಿರುವ ಪ್ರತಿಭೆಯಾಗಿದೆ. ಈ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವುದು, ನಿದ್ದೆಯಲ್ಲಿರುವ ಅಧಿಕಾರ ವ್ಯವಸ್ಥೆಯನ್ನು  ಎಚ್ಚರಿಸಿ ಮುನ್ನಡೆಸುವಂತೆ ಮಾಡುವುದು ಈ ಕಲೆಯ ಕೆಲಸವಾಗಿದೆ. ಯುವ ಕಲಾವಿದರನ್ನು ನೀವು ನಿರ್ಲಕ್ಷ್ಯ ಮಾಡಿದರೆ ಮುಂದೆ ಯುವ ರಂಗ ಕರ್ಮಿಗಳ ಮೂಲಕ ಸರ್ಕಾರ ಸಾಕಷ್ಟು ಪ್ರತಿರೋಧಗಳನ್ನು ಎದುರಿಸಬೇಕಾಗುತ್ತದೆ” ಎಂದು ಲಕ್ಷ್ಮಣ್ ಮಂಡಲಗೇರಾ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...