Homeಕರ್ನಾಟಕಕೊರೊನಾ ಪರಿಹಾರ: ರಂಗಕರ್ಮಿಗಳ ನಡುವೆ ತಾರತಮ್ಯಕ್ಕೆ ಕೆವಿಎಸ್‌ ಆಕ್ರೋಶ

ಕೊರೊನಾ ಪರಿಹಾರ: ರಂಗಕರ್ಮಿಗಳ ನಡುವೆ ತಾರತಮ್ಯಕ್ಕೆ ಕೆವಿಎಸ್‌ ಆಕ್ರೋಶ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಜನರಿಗೆ ನೆರವು ನೀಡಲು ಸಿಎಂ ಯಡಿಯೂರಪ್ಪ ಅವರು 1,200 ಕೋಟಿ ರೂ ಪ್ಯಾಕೇಜ್‌ ಘೋಷಿಸಿದ್ದಾರೆ. ಇದರಲ್ಲಿ ರಂಗಕರ್ಮಿಗಳಿಗೂ ಪ್ರೋತ್ಸಾಹ ಧನ ಘೋಷಿಸಿದ್ದು, 35 ವರ್ಷ ಮೇಲ್ಪಟ್ಟ ರಂಗಕರ್ಮಿಗಳಿಗೆ ಮಾತ್ರ 3,000 ರೂ ನೀಡುವುದಾಗಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ರಂಗಕರ್ಮಿಗಳ ವಿಚಾರದಲ್ಲಿ ವಯಸ್ಸಿನ ಆಧಾರದ ಮೇಲೆ ತಾರತಮ್ಯ ಮಾಡುತ್ತಿದೆ ಎಂದು ರಂಗಕರ್ಮಿ, ಕೆವಿಎಸ್‌ ಮುಖಂಡ ಲಕ್ಷ್ಮಣ್ ಮಂಡಲಗೆರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಸರ್ಕಾರ ಕೊಡುವ ಸಣ್ಣ ಮೊತ್ತಕ್ಕೆ ಕಲಾವಿದರು ಅರ್ಜಿ ಸಲ್ಲಿಸಲು ಅರ್ಧ ಖರ್ಚಾಗುತ್ತದೆ. ಎರಡು ಮೂರು ವರ್ಷಗಳಿಂದ ಕೊರೊನಾ ನೆಪ ಹೇಳಿ ಇಲಾಖೆಗಳಿಗೆ, ಅಕಾಡೆಮಿಗಳಿಗೆ ಹಣವೇ ಬಿಡುಗಡೆ ಆಗಿಲ್ಲ. ಏನಿಲ್ಲಂದರೂ 200 – 300 ಕೋಟಿ ರೂ. ಹಣ ಅಕಾಡೆಮಿಗಳಿಗೆ, ಪ್ರಾಧಿಕಾರಗಳಿಗೆ, ಸಾಹಿತ್ಯ ಪರಿಷತ್ತುಗಳಿಗೆ, ಇಲಾಖೆಗಳಿಗೆ ಬಿಡುಗಡೆ ಆಗಬೇಕಾದ ಹಣ ಎಲ್ಲಿ ಹೋಯಿತು?  ಕೊನೆ ಪಕ್ಷ ಕಲಾವಿದರ ಕಷ್ಟಕ್ಕಾದರು ಅ ಹಣ ಉಪಯೋಗ ಆಗುವುದು ಬೇಡವೇ?” ಎಂದು ರಾಜ್ಯ ಸರ್ಕಾರವನ್ನು ಪಶ್ನಿಸಿದ್ದಾರೆ.

“ರಂಗ ಚಟುವಟಿಕೆಗಳು ನಡೆಸಲು ಅವಕಾಶ ಇಲ್ಲದೆ, ಕಾರ್ಯಕ್ರಮಗಳು ಇಲ್ಲದೆ, ಒಂದಿಷ್ಟು ದುಡಿಮೆ ಇರುವ ಬೇಸಿಗೆ ಶಿಬಿರಗಳು ಇಲ್ಲ. ಸಣ್ಣ ಪುಟ್ಟ ರಂಗ ತಂಡಗಳಲ್ಲಿ ನಾಟಕ ತಯಾರು ಮಾಡಿಕೊಂಡು ಸುತ್ತಾಟ ಮಾಡುತ್ತ, ಸಂಕಷ್ಟಗಳನ್ನು ಎದುರಿಸುತ್ತ ರಂಗಭೂಮಿಯನ್ನೇ ನಂಬಿ ತಮ್ಮ ಬದುಕನ್ನಾಗಿಸಿಕೊಂಡ ಕಲಾವಿದರಿಗೆ ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರ ಸಹಾಯಕ್ಕೆ ನಿಲ್ಲದಿರುವಂತಹ ದುಸ್ಥಿತಿ ಬಂದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

“ನೊಂದ ಕಲಾವಿದರ ಕುಟುಂಬ ನಿರ್ವಹಣೆಗಾದರೂ ಸರ್ಕಾರ ಸಹಾಯ ಮಾಡಬಹುದು ಅಂದುಕೊಂಡರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು, ಅಕಾಡೆಮಿ ಅಧ್ಯಕ್ಷರು, ಸದಸ್ಯರುಗಳು ಮತ್ತು ರಾಜ್ಯ ಸರ್ಕಾರ ಈ ಎಲ್ಲರೂ ಸೇರಿ ಕಲಾವಿದರ ವಯಸ್ಸಿನ ಆಧಾರದಲ್ಲಿ ಅರ್ಜಿ ಆಹ್ವಾನಿಸಿ ಅನ್ಯಾಯ ಮಾಡಿದೆ. 35 ವರ್ಷದೊಳಗಿನವರಿಗೆ, ಮಾಶಾಸನ ಪಡೆಯುವವರಿಗೆ ಹಾಗೂ ಧನಸಹಾಯ ಪಡೆಯುವ ಸಂಘ – ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಎಂಬ ನಿಯಮಗಳಿವೆ…ಹಾಗಾದರೆ ಸರ್ಕಾರವು ಮಧ್ಯ ವಯಸ್ಸಿನ ಎಷ್ಟು ಕಲಾವಿದರಿಗೆ ಕೊಡತ್ತೀರಿ ಎನ್ನುವುದು ನನ್ನ ಪ್ರಶ್ನೆಯಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ಕರ್ನಾಟಕದಲ್ಲಿ ರಂಗಭೂಮಿ ಇಷ್ಟೆಲ್ಲ ಕ್ರಿಯಾಶೀಲವಾಗಿ ಕೆಲಸ ಮಾಡಲು ಜೀವಂತವಾಗಿರುವುದಕ್ಕೆ ಈ 35 ವಯಸ್ಸಿನ ಒಳಗಿರುವ ಯುವ ರಂಗ ಕಲಾವಿದರು. ಬೇಸಿಗೆ ಶಿಬಿರಗಳಲ್ಲಿ, ದೊಡ್ಡ ದೊಡ್ಡ ರೆಪರ್ಟರಿಗಳಲ್ಲಿ, ಸಣ್ಣ ಸಣ್ಣ ರಂಗತಂಡಗಳಲ್ಲಿ ಕ್ರಿಯಾಶೀಲವಾಗಿ ಹೊಸ ಹೊಸ ಯೋಚನೆಗಳೊಂದಿಗೆ ನಾಟಕಗಳನ್ನು ನಿರ್ದೇಶಿಸಿ ನಟಿಸಿ, ಸಂಘಟಿಸುವುದರ ಮೂಲಕ  ಇಂದು ಯುವರಂಗ ಕಲಾವಿದರು ರಂಗಭೂಮಿಯನ್ನು, ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿದ್ದಾರೆ ಮತ್ತು ರಂಗಭೂಮಿಯನ್ನೇ ಬದುಕನ್ನಾಗಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಲಕ್ಷ್ಮಣ್ ಮಂಡಲಗೆರ

“ಆದರೆ ಈ ಕಲಾವಿದರನ್ನು ಸರ್ಕಾರಗಳು ಕಡೆಗಣಿಸುತ್ತಿರುವುದು ವಿಷಾದನೀಯ. ಸರ್ಕಾರದ ಅಡಿಯಲ್ಲಿ ನಡೆಯುವ ರಂಗಭೂಮಿಯ ದೊಡ್ಡ ರೆಪರ್ಟರಿಗಳು ಎನಿಸಿಕೊಂಡಿರುವ ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು ಹೇಳುತ್ತಾರೆ. ಅಂತವರನ್ನೇ ಆಯ್ಕೆ ಮಾಡಿ ರಂಗಾಯಣಗಳಿಗೆ ದುಡಿಸಿಕೊಳ್ಳುತ್ತಾರೆ. ಆಗ ಮಾತ್ರ ಯುವ ಕಲಾವಿದರು ಬೇಕು, ಕೊರೊನಾ ಪರಿಹಾರ ನೀಡುವ ಸಮಯದಲ್ಲಿ ಬೇಡ ಎನ್ನುತ್ತಾರೆ…ಇದ್ಯಾವ ಸೀಮೆ ನ್ಯಾಯ, ಈ ನಿರ್ಧಾರ ಸರಿಯಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಮತಾ v/s BJP – ಮಾಜಿ ಮುಖ್ಯಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ ಕೇಂದ್ರ!

“ರಾಜ್ಯದ ಯುವ ರಂಗಕಲಾವಿದರು ಬೀದಿಗಿಳಿಯುವ ಮುಂಚೆ ವಯಸ್ಸಿನ ಮಿತಿಯನ್ನು ಸಡಿಲಗೊಳಿಸಿ, ಆರ್ಥಿಕ ನೆರವನ್ನು 10,000  (ಹತ್ತು ಸಾವಿರ)ರೂ. ಗೆ ಏರಿಸಿ. 10 ವರ್ಷಗಳ ಕಲಾಸೇವೆಯನ್ನು 5 ವರ್ಷಕ್ಕೆ ಇಳಿಸಿ. ಕಲಾವಿದರಿಗೆ ಪರಿಹಾರ ಅಲ್ಲ, ಗೌರವಧನವಾಗಿ ಹಣವನ್ನು ತಲುಪುವಂತೆ ಮಾಡಬೇಕು ಜೊತೆಗೆ ಆನ್‌ಲೈನ್ ಮೂಲಕ ಅರ್ಜಿ ಹಾಕುವ ಕೊನೆಯ ದಿನಾಂಕವನ್ನು ಮುಂದೂಡಬೇಕು” ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

“ಕಲಾವಿದರಿಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಲು ಆಗಲಿಲ್ಲ ಎಂದರೂ, ಜಿಲ್ಲಾ ಕಛೇರಿಗಳಲ್ಲಿ ಕಲಾವಿದರ ಮಾಹಿತಿ ಇರುತ್ತದೆ. ಅಲ್ಲಿ ಕಲಾವಿದರನ್ನು ಗುರುತಿಸಿ ದಾಖಲಾತಿಯನ್ನು ಪಡೆದು ಜಿಲ್ಲಾ ಕಛೇರಿ ಆಫೀಸ್‌ನಲ್ಲಿರುವ ಕಂಪ್ಯೂಟರ್  ಮೂಲಕವಾದರು ಅರ್ಜಿ ಹಾಕಿಸಿ ಎಲ್ಲಾ ಕಲಾವಿದರಿಗೆ ಆರ್ಥಿಕ ನೆರವು ಸಿಗಬೇಕು” ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಕಲೆಗೆ ಜಾತಿ,ಮತ, ಧರ್ಮ, ವಯಸ್ಸು ಇಲ್ಲ. ಕಲೆ ಎನ್ನುವುದು ಪ್ರತಿಯೊಬ್ಬರಲ್ಲೂ ಅಡಗಿರುವ ಪ್ರತಿಭೆಯಾಗಿದೆ. ಈ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವುದು, ನಿದ್ದೆಯಲ್ಲಿರುವ ಅಧಿಕಾರ ವ್ಯವಸ್ಥೆಯನ್ನು  ಎಚ್ಚರಿಸಿ ಮುನ್ನಡೆಸುವಂತೆ ಮಾಡುವುದು ಈ ಕಲೆಯ ಕೆಲಸವಾಗಿದೆ. ಯುವ ಕಲಾವಿದರನ್ನು ನೀವು ನಿರ್ಲಕ್ಷ್ಯ ಮಾಡಿದರೆ ಮುಂದೆ ಯುವ ರಂಗ ಕರ್ಮಿಗಳ ಮೂಲಕ ಸರ್ಕಾರ ಸಾಕಷ್ಟು ಪ್ರತಿರೋಧಗಳನ್ನು ಎದುರಿಸಬೇಕಾಗುತ್ತದೆ” ಎಂದು ಲಕ್ಷ್ಮಣ್ ಮಂಡಲಗೇರಾ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...