Homeಕರ್ನಾಟಕಕೊರೊನಾ ಪರಿಹಾರ: ರಂಗಕರ್ಮಿಗಳ ನಡುವೆ ತಾರತಮ್ಯಕ್ಕೆ ಕೆವಿಎಸ್‌ ಆಕ್ರೋಶ

ಕೊರೊನಾ ಪರಿಹಾರ: ರಂಗಕರ್ಮಿಗಳ ನಡುವೆ ತಾರತಮ್ಯಕ್ಕೆ ಕೆವಿಎಸ್‌ ಆಕ್ರೋಶ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಜನರಿಗೆ ನೆರವು ನೀಡಲು ಸಿಎಂ ಯಡಿಯೂರಪ್ಪ ಅವರು 1,200 ಕೋಟಿ ರೂ ಪ್ಯಾಕೇಜ್‌ ಘೋಷಿಸಿದ್ದಾರೆ. ಇದರಲ್ಲಿ ರಂಗಕರ್ಮಿಗಳಿಗೂ ಪ್ರೋತ್ಸಾಹ ಧನ ಘೋಷಿಸಿದ್ದು, 35 ವರ್ಷ ಮೇಲ್ಪಟ್ಟ ರಂಗಕರ್ಮಿಗಳಿಗೆ ಮಾತ್ರ 3,000 ರೂ ನೀಡುವುದಾಗಿ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ರಂಗಕರ್ಮಿಗಳ ವಿಚಾರದಲ್ಲಿ ವಯಸ್ಸಿನ ಆಧಾರದ ಮೇಲೆ ತಾರತಮ್ಯ ಮಾಡುತ್ತಿದೆ ಎಂದು ರಂಗಕರ್ಮಿ, ಕೆವಿಎಸ್‌ ಮುಖಂಡ ಲಕ್ಷ್ಮಣ್ ಮಂಡಲಗೆರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಸರ್ಕಾರ ಕೊಡುವ ಸಣ್ಣ ಮೊತ್ತಕ್ಕೆ ಕಲಾವಿದರು ಅರ್ಜಿ ಸಲ್ಲಿಸಲು ಅರ್ಧ ಖರ್ಚಾಗುತ್ತದೆ. ಎರಡು ಮೂರು ವರ್ಷಗಳಿಂದ ಕೊರೊನಾ ನೆಪ ಹೇಳಿ ಇಲಾಖೆಗಳಿಗೆ, ಅಕಾಡೆಮಿಗಳಿಗೆ ಹಣವೇ ಬಿಡುಗಡೆ ಆಗಿಲ್ಲ. ಏನಿಲ್ಲಂದರೂ 200 – 300 ಕೋಟಿ ರೂ. ಹಣ ಅಕಾಡೆಮಿಗಳಿಗೆ, ಪ್ರಾಧಿಕಾರಗಳಿಗೆ, ಸಾಹಿತ್ಯ ಪರಿಷತ್ತುಗಳಿಗೆ, ಇಲಾಖೆಗಳಿಗೆ ಬಿಡುಗಡೆ ಆಗಬೇಕಾದ ಹಣ ಎಲ್ಲಿ ಹೋಯಿತು?  ಕೊನೆ ಪಕ್ಷ ಕಲಾವಿದರ ಕಷ್ಟಕ್ಕಾದರು ಅ ಹಣ ಉಪಯೋಗ ಆಗುವುದು ಬೇಡವೇ?” ಎಂದು ರಾಜ್ಯ ಸರ್ಕಾರವನ್ನು ಪಶ್ನಿಸಿದ್ದಾರೆ.

“ರಂಗ ಚಟುವಟಿಕೆಗಳು ನಡೆಸಲು ಅವಕಾಶ ಇಲ್ಲದೆ, ಕಾರ್ಯಕ್ರಮಗಳು ಇಲ್ಲದೆ, ಒಂದಿಷ್ಟು ದುಡಿಮೆ ಇರುವ ಬೇಸಿಗೆ ಶಿಬಿರಗಳು ಇಲ್ಲ. ಸಣ್ಣ ಪುಟ್ಟ ರಂಗ ತಂಡಗಳಲ್ಲಿ ನಾಟಕ ತಯಾರು ಮಾಡಿಕೊಂಡು ಸುತ್ತಾಟ ಮಾಡುತ್ತ, ಸಂಕಷ್ಟಗಳನ್ನು ಎದುರಿಸುತ್ತ ರಂಗಭೂಮಿಯನ್ನೇ ನಂಬಿ ತಮ್ಮ ಬದುಕನ್ನಾಗಿಸಿಕೊಂಡ ಕಲಾವಿದರಿಗೆ ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರ ಸಹಾಯಕ್ಕೆ ನಿಲ್ಲದಿರುವಂತಹ ದುಸ್ಥಿತಿ ಬಂದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಲಪಾನ್‌ ಬಂದೋಪಾದ್ಯಾಯ್‌ರವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ಕೇಂದ್ರಕ್ಕಿದೆಯೇ?

“ನೊಂದ ಕಲಾವಿದರ ಕುಟುಂಬ ನಿರ್ವಹಣೆಗಾದರೂ ಸರ್ಕಾರ ಸಹಾಯ ಮಾಡಬಹುದು ಅಂದುಕೊಂಡರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು, ಅಕಾಡೆಮಿ ಅಧ್ಯಕ್ಷರು, ಸದಸ್ಯರುಗಳು ಮತ್ತು ರಾಜ್ಯ ಸರ್ಕಾರ ಈ ಎಲ್ಲರೂ ಸೇರಿ ಕಲಾವಿದರ ವಯಸ್ಸಿನ ಆಧಾರದಲ್ಲಿ ಅರ್ಜಿ ಆಹ್ವಾನಿಸಿ ಅನ್ಯಾಯ ಮಾಡಿದೆ. 35 ವರ್ಷದೊಳಗಿನವರಿಗೆ, ಮಾಶಾಸನ ಪಡೆಯುವವರಿಗೆ ಹಾಗೂ ಧನಸಹಾಯ ಪಡೆಯುವ ಸಂಘ – ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ ಎಂಬ ನಿಯಮಗಳಿವೆ…ಹಾಗಾದರೆ ಸರ್ಕಾರವು ಮಧ್ಯ ವಯಸ್ಸಿನ ಎಷ್ಟು ಕಲಾವಿದರಿಗೆ ಕೊಡತ್ತೀರಿ ಎನ್ನುವುದು ನನ್ನ ಪ್ರಶ್ನೆಯಾಗಿದೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ಕರ್ನಾಟಕದಲ್ಲಿ ರಂಗಭೂಮಿ ಇಷ್ಟೆಲ್ಲ ಕ್ರಿಯಾಶೀಲವಾಗಿ ಕೆಲಸ ಮಾಡಲು ಜೀವಂತವಾಗಿರುವುದಕ್ಕೆ ಈ 35 ವಯಸ್ಸಿನ ಒಳಗಿರುವ ಯುವ ರಂಗ ಕಲಾವಿದರು. ಬೇಸಿಗೆ ಶಿಬಿರಗಳಲ್ಲಿ, ದೊಡ್ಡ ದೊಡ್ಡ ರೆಪರ್ಟರಿಗಳಲ್ಲಿ, ಸಣ್ಣ ಸಣ್ಣ ರಂಗತಂಡಗಳಲ್ಲಿ ಕ್ರಿಯಾಶೀಲವಾಗಿ ಹೊಸ ಹೊಸ ಯೋಚನೆಗಳೊಂದಿಗೆ ನಾಟಕಗಳನ್ನು ನಿರ್ದೇಶಿಸಿ ನಟಿಸಿ, ಸಂಘಟಿಸುವುದರ ಮೂಲಕ  ಇಂದು ಯುವರಂಗ ಕಲಾವಿದರು ರಂಗಭೂಮಿಯನ್ನು, ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿದ್ದಾರೆ ಮತ್ತು ರಂಗಭೂಮಿಯನ್ನೇ ಬದುಕನ್ನಾಗಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಲಕ್ಷ್ಮಣ್ ಮಂಡಲಗೆರ

“ಆದರೆ ಈ ಕಲಾವಿದರನ್ನು ಸರ್ಕಾರಗಳು ಕಡೆಗಣಿಸುತ್ತಿರುವುದು ವಿಷಾದನೀಯ. ಸರ್ಕಾರದ ಅಡಿಯಲ್ಲಿ ನಡೆಯುವ ರಂಗಭೂಮಿಯ ದೊಡ್ಡ ರೆಪರ್ಟರಿಗಳು ಎನಿಸಿಕೊಂಡಿರುವ ರಂಗಾಯಣಗಳಿಗೆ ಕಲಾವಿದರ ಆಯ್ಕೆ ಮಾಡುವಾಗ 35 ವರ್ಷದ ಒಳಗಿರುವ ಯುವ ರಂಗ ಕಲಾವಿದರೇ ಬೇಕು ಎಂದು ಹೇಳುತ್ತಾರೆ. ಅಂತವರನ್ನೇ ಆಯ್ಕೆ ಮಾಡಿ ರಂಗಾಯಣಗಳಿಗೆ ದುಡಿಸಿಕೊಳ್ಳುತ್ತಾರೆ. ಆಗ ಮಾತ್ರ ಯುವ ಕಲಾವಿದರು ಬೇಕು, ಕೊರೊನಾ ಪರಿಹಾರ ನೀಡುವ ಸಮಯದಲ್ಲಿ ಬೇಡ ಎನ್ನುತ್ತಾರೆ…ಇದ್ಯಾವ ಸೀಮೆ ನ್ಯಾಯ, ಈ ನಿರ್ಧಾರ ಸರಿಯಿಲ್ಲ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಮತಾ v/s BJP – ಮಾಜಿ ಮುಖ್ಯಕಾರ್ಯದರ್ಶಿಗೆ ಶೋಕಾಸ್ ನೋಟಿಸ್ ನೀಡಿದ ಕೇಂದ್ರ!

“ರಾಜ್ಯದ ಯುವ ರಂಗಕಲಾವಿದರು ಬೀದಿಗಿಳಿಯುವ ಮುಂಚೆ ವಯಸ್ಸಿನ ಮಿತಿಯನ್ನು ಸಡಿಲಗೊಳಿಸಿ, ಆರ್ಥಿಕ ನೆರವನ್ನು 10,000  (ಹತ್ತು ಸಾವಿರ)ರೂ. ಗೆ ಏರಿಸಿ. 10 ವರ್ಷಗಳ ಕಲಾಸೇವೆಯನ್ನು 5 ವರ್ಷಕ್ಕೆ ಇಳಿಸಿ. ಕಲಾವಿದರಿಗೆ ಪರಿಹಾರ ಅಲ್ಲ, ಗೌರವಧನವಾಗಿ ಹಣವನ್ನು ತಲುಪುವಂತೆ ಮಾಡಬೇಕು ಜೊತೆಗೆ ಆನ್‌ಲೈನ್ ಮೂಲಕ ಅರ್ಜಿ ಹಾಕುವ ಕೊನೆಯ ದಿನಾಂಕವನ್ನು ಮುಂದೂಡಬೇಕು” ಎಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

“ಕಲಾವಿದರಿಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಲು ಆಗಲಿಲ್ಲ ಎಂದರೂ, ಜಿಲ್ಲಾ ಕಛೇರಿಗಳಲ್ಲಿ ಕಲಾವಿದರ ಮಾಹಿತಿ ಇರುತ್ತದೆ. ಅಲ್ಲಿ ಕಲಾವಿದರನ್ನು ಗುರುತಿಸಿ ದಾಖಲಾತಿಯನ್ನು ಪಡೆದು ಜಿಲ್ಲಾ ಕಛೇರಿ ಆಫೀಸ್‌ನಲ್ಲಿರುವ ಕಂಪ್ಯೂಟರ್  ಮೂಲಕವಾದರು ಅರ್ಜಿ ಹಾಕಿಸಿ ಎಲ್ಲಾ ಕಲಾವಿದರಿಗೆ ಆರ್ಥಿಕ ನೆರವು ಸಿಗಬೇಕು” ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

“ಕಲೆಗೆ ಜಾತಿ,ಮತ, ಧರ್ಮ, ವಯಸ್ಸು ಇಲ್ಲ. ಕಲೆ ಎನ್ನುವುದು ಪ್ರತಿಯೊಬ್ಬರಲ್ಲೂ ಅಡಗಿರುವ ಪ್ರತಿಭೆಯಾಗಿದೆ. ಈ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವುದು, ನಿದ್ದೆಯಲ್ಲಿರುವ ಅಧಿಕಾರ ವ್ಯವಸ್ಥೆಯನ್ನು  ಎಚ್ಚರಿಸಿ ಮುನ್ನಡೆಸುವಂತೆ ಮಾಡುವುದು ಈ ಕಲೆಯ ಕೆಲಸವಾಗಿದೆ. ಯುವ ಕಲಾವಿದರನ್ನು ನೀವು ನಿರ್ಲಕ್ಷ್ಯ ಮಾಡಿದರೆ ಮುಂದೆ ಯುವ ರಂಗ ಕರ್ಮಿಗಳ ಮೂಲಕ ಸರ್ಕಾರ ಸಾಕಷ್ಟು ಪ್ರತಿರೋಧಗಳನ್ನು ಎದುರಿಸಬೇಕಾಗುತ್ತದೆ” ಎಂದು ಲಕ್ಷ್ಮಣ್ ಮಂಡಲಗೇರಾ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಹಸಿದ ಅಲೆಮಾರಿಗಳಿಗೂ ವಿಶೇಷ ಪ್ಯಾಕೇಜ್ ನೀಡಿ: ಮುಖ್ಯಮಂತ್ರಿಗೆ ಸಿ.ಎಸ್.ದ್ವಾರಕಾನಾಥ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...