Homeಮುಖಪುಟಕೆವೈಸಿ ದಾಖಲೆಗಾಗಿ ಗ್ರಾಹಕರಿಗೆ ಪದೇ ಪದೇ ಕರೆ ಮಾಡದಿರಿ: ಬ್ಯಾಂಕ್‌ಗಳಿಗೆ ಆರ್‌ಬಿಐ ಗವರ್ನರ್ ಸೂಚನೆ

ಕೆವೈಸಿ ದಾಖಲೆಗಾಗಿ ಗ್ರಾಹಕರಿಗೆ ಪದೇ ಪದೇ ಕರೆ ಮಾಡದಿರಿ: ಬ್ಯಾಂಕ್‌ಗಳಿಗೆ ಆರ್‌ಬಿಐ ಗವರ್ನರ್ ಸೂಚನೆ

- Advertisement -
- Advertisement -

ಕೆವೈಸಿ ದಾಖಲೆಗಳಿಗಾಗಿ ಗ್ರಾಹಕರಿಗೆ ಪದೇ ಪದೇ ಕರೆ ಮಾಡುವುದನ್ನು ನಿಲ್ಲಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್ ಮಲ್ಹೋತ್ರಾ ಸೋಮವಾರ ಬ್ಯಾಂಕುಗಳಿಗೆ ಒತ್ತಾಯಿಸಿದ್ದಾರೆ. ಈ ಪದ್ಧತಿಯನ್ನು ಅವರು “ತಪ್ಪಿಸಿಕೊಳ್ಳಬಹುದಾದ ಅನಾನುಕೂಲತೆ” ಎಂದು ಉಲ್ಲೇಖಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಕೆವೈಸಿ ದಾಖಲೆಗಾಗಿ

ಆರ್‌ಬಿಐ ಒಂಬುಡ್ಸ್‌ಮೆನ್‌ಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಮಲ್ಹೋತ್ರಾ, ಹಣಕಾಸು ಪ್ರಾಧಿಕಾರದಿಂದ ನಿಯಂತ್ರಿಸಲ್ಪಡುವ ಯಾವುದೇ ಘಟಕಕ್ಕೆ ದಾಖಲೆಗಳನ್ನು ಸಲ್ಲಿಸುವುದರಿಂದ ಇತರರು ಕೇಂದ್ರೀಯ ಡೇಟಾಬೇಸ್‌ನಿಂದ ಅವುಗಳನ್ನು ಪ್ರವೇಶಿಸಲು ಅನುಮತಿಸುತ್ತದೆ ಎಂದು ಹೇಳಿದ್ದಾರೆ.

“ಗ್ರಾಹಕರು ಹಣಕಾಸು ಸಂಸ್ಥೆಗೆ ದಾಖಲೆಗಳನ್ನು ಸಲ್ಲಿಸಿದ ನಂತರ, ನಾವು ಮತ್ತೆ ಅದೇ ದಾಖಲೆಗಳನ್ನು ಪಡೆಯಲು ಒತ್ತಾಯಿಸುವುದಿಲ್ಲ ಎಂದು ನಾವು ಖಚಿತಪಡಿಸಿಕೊಳ್ಳಬೇಕು” ಎಂದು ಮಲ್ಹೋತ್ರಾ ಹೇಳಿದ್ದಾರೆ. ಕೆವೈಸಿ ದಾಖಲೆಗಾಗಿ

ಹೆಚ್ಚಿನ ಬ್ಯಾಂಕುಗಳು ಮತ್ತು ಬ್ಯಾಂಕೇತರ ಹಣಕಾಸು ಕಂಪನಿಗಳು ತಮ್ಮ ಶಾಖೆಗಳು ಅಥವಾ ಕಚೇರಿಗಳು ಕೇಂದ್ರೀಯ ಡೇಟಾಬೇಸ್‌ನಿಂದ ಮಾಹಿತಿಯನ್ನು ಹಿಂಪಡೆಯಲು ಅವಕಾಶ ನೀಡಿಲ್ಲ. ಹಾಗಾಗಿ ಪುನರಾವರ್ತಿತ ಕೆವೈಸಿ ವಿನಂತಿಗಳನ್ನು ಮಾಡಲಾಗುತ್ತಿದ್ದು, ಇದು ಗ್ರಾಹಕರಿಗೆ ಅನಾನುಕೂಲತೆಯನ್ನು ಉಂಟುಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನು ಮೊದಲೇ ಸುಗಮಗೊಳಿಸಬಹುದು ಎಂದು ಹೇಳಿರುವ ಮಲ್ಹೋತ್ರಾ ಅವರು, ಇದು ಎಲ್ಲರ ಹಿತದೃಷ್ಟಿಯಿಂದ ಇರುತ್ತದೆ ಎಂದು ತಿಳಿಸಿದ್ದಾರೆ. ಕೆವೈಸಿ ದಾಖಲೆಗಳನ್ನು ಮರುಸಲ್ಲಿಸಲು ಪದೇ ಪದೇ ವಿನಂತಿಸುವ ಬಗ್ಗೆ ಬ್ಯಾಂಕ್ ಗ್ರಾಹಕರು ಸಾಮಾಜಿಕ ಮಾಧ್ಯಮದಲ್ಲಿ ಆಗಾಗ್ಗೆ ದೂರುಗಳನ್ನು ನೀಡುತ್ತಿರುವ ನಡುವೆ ಅವರು ಈ ಹೇಳಿಕೆ ನೀಡಿದ್ದಾರೆ.

ಗ್ರಾಹಕರ ದೂರುಗಳ ಸಂಖ್ಯೆಗಳನ್ನು ಮುಚ್ಚಿಡಲು ಬೇಕಾಗಿ ಅದನ್ನು ತಪ್ಪಾಗಿ ವರ್ಗೀಕರಿಸುವುದರ ವಿರುದ್ಧ ಮಲ್ಹೋತ್ರಾ ಅವರು ಬ್ಯಾಂಕುಗಳಿಗೆ ಎಚ್ಚರಿಕೆ ನೀಡಿದ್ದು, ಅಂತಹ ಕ್ರಮಗಳು “ಸಮಗ್ರ ನಿಯಂತ್ರಕ ಉಲ್ಲಂಘನೆ”ಯಾಗಿದೆ ಎಂದು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

2023-24ರ ಹಣಕಾಸು ವರ್ಷದಲ್ಲಿ ಬ್ಯಾಂಕುಗಳು ಒಂದು ಕೋಟಿ ಗ್ರಾಹಕರ ದೂರುಗಳನ್ನು ಸ್ವೀಕರಿಸಿವೆ ಮತ್ತು ಇತರ ನಿಯಂತ್ರಿತ ಸಂಸ್ಥೆಗಳ ವಿರುದ್ಧದ ದೂರುಗಳನ್ನು ಸೇರಿಸಿದರೆ ಈ ಸಂಖ್ಯೆ ಹೆಚ್ಚಾಗಿರುತ್ತದೆ ಎಂದು ಅವರು ಹೇಳಿದ್ದಾರೆ. ಇವುಗಳಲ್ಲಿ, 57% ರಷ್ಟು ದೂರುಗಳಲ್ಲಿ ಆರ್‌ಬಿಐ ಒಂಬುಡ್ಸ್‌ಮೆನ್‌ಗಳ ಮಧ್ಯಸ್ಥಿಕೆ ಅಥವಾ ಹಸ್ತಕ್ಷೇಪದ ಅಗತ್ಯವಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

“ಇದು ಅತ್ಯಂತ ಅತೃಪ್ತಿಕರ ಪರಿಸ್ಥಿತಿಯಾಗಿದ್ದು, ಇದಕ್ಕೆ ನಮ್ಮ ತುರ್ತು ಗಮನದ ಅಗತ್ಯವಿದೆ ಎಂದು ನೀವೆಲ್ಲರೂ ಒಪ್ಪುತ್ತೀರಿ. ಗ್ರಾಹಕ ಸೇವೆಯನ್ನು ಸುಧಾರಿಸುವುದು ಕೇವಲ ಕರ್ತವ್ಯ ಮಾತ್ರವಲ್ಲ, ಬದಲಾಗಿ ಉದ್ಯಮದಲ್ಲಿನ ಸ್ಪರ್ಧೆಯನ್ನು ಗಮನಿಸಿದರೆ ಬ್ಯಾಂಕುಗಳ ‘ಸ್ವಾರ್ಥ ಹಿತಾಸಕ್ತಿ’ ಕೂಡ ಆಗಿದೆ” ಎಂದು ಅವರು ಹೇಳಿದರು.

ವ್ಯವಸ್ಥಾಪಕ ನಿರ್ದೇಶಕರಿಂದ ಶಾಖಾ ವ್ಯವಸ್ಥಾಪಕರವರೆಗೆ ದೂರುಗಳನ್ನು ಪರಿಹರಿಸಲು ಪ್ರತಿ ವಾರ ಸಮಯವನ್ನು ಮೀಸಲಿಡುವಂತೆ ಮಲ್ಹೋತ್ರಾ ಬ್ಯಾಂಕ್ ನಾಯಕತ್ವಕ್ಕೆ ಸಲಹೆ ನೀಡಿದ್ದಾರೆ. “ಇದು ಎಲ್ಲಾ ಬ್ಯಾಂಕುಗಳಿಗೆ ಅತ್ಯಗತ್ಯವಾಗಿದೆ. ಪ್ರಪಂಚದಾದ್ಯಂತದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇದನ್ನು ತಮ್ಮ ವೇಳಾಪಟ್ಟಿಯಲ್ಲಿ ಸೇರಿಸಿಕೊಳ್ಳುತ್ತಾರೆ. ಇಂತಹ ಸಮಸ್ಯೆಗಳನ್ನು ಪರಿಹರಿಸದೆ ಬಿಟ್ಟರೆ, ಅಂತಹ ಪ್ರತಿಯೊಂದು ಸಮಸ್ಯೆಯೂ ಗ್ರಾಹಕರ ವಿಶ್ವಾಸವನ್ನು ನಾಶಪಡಿಸಲಿದ್ದು, ಅದು ಇಡೀ ಬ್ಯಾಂಕಿಂಗ್ ವ್ಯವಸ್ಥೆಯನ್ನು ಕಳಂಕಿತಗೊಳಿಸಲಿದೆ.” ಎಂದು ಅವರು ಹೇಳಿದ್ದಾರೆ.

ದೂರುಗಳನ್ನು ತೊಂದರೆಯಾಗಿ ನೋಡಬಾರದು ಮತ್ತು ಪದೇ ಪದೇ ಬರುವ ದೂರುಗಳು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ವ್ಯವಸ್ಥಿತ ದೋಷಗಳನ್ನು ಬಹಿರಂಗಪಡಿಸುತ್ತವೆ ಎಂದು ಮಲ್ಹೋತ್ರಾ ಹೇಳಿದ್ದಾರೆ. ದೂರು ಪರಿಹಾರಕ್ಕಾಗಿ ಕೃತಕ ಬುದ್ಧಿಮತ್ತೆಯನ್ನು ಬಳಸಲು ಸೂಚಿಸಿದ ಅವರು, ಗ್ರಾಹಕರ ಗೌಪ್ಯತೆಯನ್ನು ಗೌರವಿಸುವ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ್ದಾರೆ.

ಬ್ಯಾಂಕುಗಳು ತಪ್ಪು ಮಾರಾಟ, ಡಿಜಿಟಲ್ ವಂಚನೆ ಮತ್ತು ಗ್ರಾಹಕರು ಎದುರಿಸುತ್ತಿರುವ ಆಕ್ರಮಣಕಾರಿ ವಸೂಲಾತಿ ಪ್ರಕ್ರಿಯೆಗಳಂತಹ ಇತರ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನಹರಿಸಬೇಕು ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  Grok VS IT Cell : ಬಲಪಂಥೀಯ ಪ್ರೊಪಗಂಡದ ನಿದ್ದೆಗೆಡಿಸಿದ ‘ಮಸ್ಕ್‌ನ ಎಐ ಚಾಟ್‌ಬಾಟ್’

Grok VS IT Cell : ಬಲಪಂಥೀಯ ಪ್ರೊಪಗಂಡದ ನಿದ್ದೆಗೆಡಿಸಿದ ‘ಮಸ್ಕ್‌ನ ಎಐ ಚಾಟ್‌ಬಾಟ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...