Homeಮುಖಪುಟಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ 'ಎಲ್‌2 : ಎಂಪುರಾನ್‌ ಚಿತ್ರ'; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ‘ಎಲ್‌2 : ಎಂಪುರಾನ್‌ ಚಿತ್ರ’; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

- Advertisement -
- Advertisement -

ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮೋಹನ್ ಲಾಲ್ ಅಭಿನಯದ ‘ಎಂಪುರಾನ್’ (L2: Empuraan) ಚಿತ್ರದ ನಿರ್ಮಾಪಕರು ಚಿತ್ರದಲ್ಲಿ ಸ್ವಯಂಪ್ರೇರಿತ ಮಾರ್ಪಾಡುಗಳನ್ನು ಮಾಡಲು ನಿರ್ಧರಿಸಿದ್ದಾರೆ ಎಂದು ತಿರುವನಂತಪುರಂನಲ್ಲಿರುವ ಪ್ರಾದೇಶಿಕ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (ಸಿಬಿಎಫ್‌ಸಿ) ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ವರದಿಯಾಗಿದೆ.

“ಸೆನ್ಸಾರ್ ಮಂಡಳಿಯಿಂದ ಈಗಾಗಲೇ ಪ್ರಮಾಣೀಕರಿಸಲ್ಪಟ್ಟ ಚಲನಚಿತ್ರದ ಸ್ವಯಂಪ್ರೇರಿತ ಮಾರ್ಪಾಡುಗಳಿಗೆ ಅವಕಾಶವಿದೆ. ಈ ಸಂಬಂಧ ನಿರ್ಮಾಪಕರು ಈಗಾಗಲೇ ಮಂಡಳಿಯನ್ನು ಸಂಪರ್ಕಿಸಿದ್ದಾರೆ. ಏನೆಲ್ಲ ಮಾರ್ಪಾಡುಗಳನ್ನು ಮಾಡಬೇಕೆಂಬುದು ಅವರ ವಿವೇಚನೆಗೆ ಬಿಟ್ಟದ್ದು. ನಮ್ಮ ಕಾರ್ಯವಿಧಾನದ ಪ್ರಕಾರ, ನಾವು ಸ್ವಯಂಪ್ರೇರಿತ ಮಾರ್ಪಾಡುಗಳಿಗೆ ಅನುಮತಿಸುತ್ತೇವೆ” ಎಂದು ಅಧಿಕಾರಿ ಹೇಳಿದ್ದಾಗಿ ವರದಿ ತಿಳಿಸಿದೆ.

ಗುರುವಾರ ವಿಶ್ವದಾದ್ಯಂತ ತೆರೆ ಕಂಡಿರುವ ನಟ-ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದ ಎಂಪುರಾನ್ ಚಿತ್ರದಲ್ಲಿ, 2002ರ ಗುಜರಾತ್ ಗಲಭೆಯ ಉಲ್ಲೇಖ ಬಲಪಂಥೀಯ ಗುಂಪುಗಳು ಮತ್ತು ಬೆಂಬಲಿಗರ ವಿರೋಧಕ್ಕೆ ಕಾರಣವಾಗಿದೆ. “ಈ ಚಿತ್ರವು ಹಿಂದೂ ಧರ್ಮವನ್ನು ಅಪಮಾನಗೊಳಿಸಿದೆ ಮತ್ತು ರಾಷ್ಟ್ರ ವಿರೋಧಿ ಅಂಶಗಳನ್ನು ಸಮಾಧಾನಪಡಿಸುವ ಗುರಿ ಹೊಂದಿದೆ” ಎಂದು ಬಲಪಂಥೀಯರು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಎಂಪುರಾನ್ ಚಿತ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರೆ, ಬಿಜೆಪಿ ಪಕ್ಷ ಅಧಿಕೃತವಾಗಿ ಚಿತ್ರವನ್ನು ವಿರೋಧಿಸಿಲ್ಲ. ವಿವಾದದಿಂದ ದೂರವಿರಲು ಪ್ರಯತ್ನಿಸಿರುವ ಬಿಜೆಪಿ, “ಚಿತ್ರದ ವಿರುದ್ಧ ಪ್ರಚಾರ ಮಾಡುವುದಿಲ್ಲ. ಇದನ್ನು ಒಂದು ಸಿನಿಮಾ ಆಗಿ ಮಾತ್ರ ನೋಡಬೇಕು” ಎಂದಿದೆ.

“ಸಿನಿಮಾವನ್ನು ವಿಭಜನಕಾರಿ ರಾಜಕೀಯ ಕಾರ್ಯಸೂಚಿಗೆ ವೇದಿಕೆಯಾಗಿ ಬಳಸಲಾಗುತ್ತಿದೆಯೇ ಎಂದು ವಿಮರ್ಶಕರು ಮತ್ತು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ” ಎಂದು ಆರ್‌ಎಸ್‌ಎಸ್ ಮುಖವಾಣಿ ಆರ್ಗನೈಸರ್‌ನ ವೆಬ್‌ಸೈಟ್‌ನಲ್ಲಿನಲ್ಲಿ ಪ್ರಕಟಗೊಂಡ ಲೇಖನವೊಂದು ತಿಳಿಸಿದೆ.

“ಇಡೀ ಹಿಂದೂ ಸಮುದಾಯವನ್ನು ಅವಹೇಳನ ಮಾಡಲು, ಗುಜರಾತ್ ಹಿಂಸಾಚಾರವನ್ನು ಉಲ್ಲೇಖಿಸಿ ಮಲಯಾಳಂ ಚಲನಚಿತ್ರವು ಹಿಂದೂಗಳನ್ನು ರಕ್ಷಕರಂತೆ ಚಿತ್ರಿಸಬಹುದಾದ ಸಂದರ್ಭಗಳಲ್ಲಿಯೂ ಸಹ ಖಳನಾಯಕರಂತೆ ಚಿತ್ರಿಸಿದೆ” ಎಂದು ಲೇಖನ ಹೇಳಿದೆ.

“2002ರ ಗುಜರಾತ್ ಗಲಭೆಯಲ್ಲಿ ಹಿಂದೂಗಳು ಪ್ರಾಥಮಿಕ ಆಕ್ರಮಣಕಾರರು ಎಂಬ ಚಿತ್ರಣವನ್ನು ಬಲಪಡಿಸಲು, ಎರಡು ಸಮುದಾಯಗಳ ನಡುವೆ ದ್ವೇಷವನ್ನು ಶಾಶ್ವತಗೊಳಿಸಲು ಮತ್ತು ಹಿಂದೂಗಳನ್ನು ಖಳನಾಯಕರಂತೆ ಬಿಂಬಿಸಲು ಚಿತ್ರದಲ್ಲಿ ಉದ್ದೇಶಪೂರ್ವಕವಾಗಿ ಪ್ರಯತ್ನಿಸಲಾಗಿದೆ” ಎಂದು ಲೇಖನ ತಿಳಿಸಿದೆ.

“ವಿಭಜಕ ಮತ್ತು ರಾಜಕೀಯವಾಗಿ ಪ್ರಭಾವಿತವಾದ ನಿರೂಪಣೆಯನ್ನು ಉತ್ತೇಜಿಸುವ ಚಿತ್ರದಲ್ಲಿ ನಟಿಸುವ ನಟನ ನಿರ್ಧಾರವು ಅವರ ನಿಷ್ಠಾವಂತ ಅಭಿಮಾನಿ ಬಳಗಕ್ಕೆ ಮಾಡಿದ ದ್ರೋಹವಾಗಿದೆ” ಎಂದು ಲೇಖನವು ಮೋಹನ್ ಲಾಲ್ ಅವರನ್ನು ಉಲ್ಲೇಖಿಸಿ ಹೇಳಿದೆ.

ಕೆಲವು ಬಿಜೆಪಿ ನಾಯಕರು ಚಿತ್ರದ ವಿರುದ್ಧ ಧ್ವನಿ ಎತ್ತಿದ್ದಾರೆ. ಭಾರತೀಯ ಜನತಾ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ, ಬಿಜೆಪಿ ಯುವ ಘಟಕದ ನಾಯಕ ಕೆ. ಗಣೇಶ್ ಶನಿವಾರ ಈ ಚಿತ್ರವು “ರಾಷ್ಟ್ರವಿರೋಧಿ ಅಂಶಗಳಿಂದ ತುಂಬಿದೆ” ಎಂದು ಹೇಳಿದ್ದಾರೆ. “ನಿರ್ದೇಶಕ ಪೃಥ್ವಿರಾಜ್ ಅವರ ವಿದೇಶಿ ಸಂಪರ್ಕಗಳನ್ನು ತನಿಖೆ ಮಾಡಬೇಕು. ಅವರು ಇಸ್ಲಾಮಿಕ್ ಸ್ಟೇಟ್‌ನ ಸಿದ್ಧಾಂತದಿಂದ ಪ್ರಭಾವಿತರಾಗಿದ್ದಾರೆಯೇ ಎಂದು ಅನುಮಾನ ಬರುತ್ತಿದೆ” ಎಂದಿದ್ದಾರೆ.

“ವಿವಾದ ಉಲ್ಬಣಗೊಳ್ಳುತ್ತಿದ್ದಂತೆ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಗೋಕುಲಂ ಗೋಪಾಲನ್ ಅವರು ಪ್ರತಿಕ್ರಿಯಿಸಿ, ಚಿತ್ರದಲ್ಲಿ ಮಾರ್ಪಾಡುಗಳನ್ನು ಮಾಡಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ನಮ್ಮ ಚಿತ್ರ ಯಾರನ್ನೂ ನೋಯಿಸುವ ಉದ್ದೇಶ ಹೊಂದಿಲ್ಲ” ಎಂದು ತಿಳಿಸಿದ್ದಾರೆ.

ಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ ‘ಫರೀಷಾ ಆಬಿದ್’: ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...