Homeಮುಖಪುಟಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ 'ಎಲ್‌2 : ಎಂಪುರಾನ್‌ ಚಿತ್ರ'; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ‘ಎಲ್‌2 : ಎಂಪುರಾನ್‌ ಚಿತ್ರ’; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

- Advertisement -
- Advertisement -

ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮೋಹನ್ ಲಾಲ್ ಅಭಿನಯದ ‘ಎಂಪುರಾನ್’ (L2: Empuraan) ಚಿತ್ರದ ನಿರ್ಮಾಪಕರು ಚಿತ್ರದಲ್ಲಿ ಸ್ವಯಂಪ್ರೇರಿತ ಮಾರ್ಪಾಡುಗಳನ್ನು ಮಾಡಲು ನಿರ್ಧರಿಸಿದ್ದಾರೆ ಎಂದು ತಿರುವನಂತಪುರಂನಲ್ಲಿರುವ ಪ್ರಾದೇಶಿಕ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (ಸಿಬಿಎಫ್‌ಸಿ) ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ವರದಿಯಾಗಿದೆ.

“ಸೆನ್ಸಾರ್ ಮಂಡಳಿಯಿಂದ ಈಗಾಗಲೇ ಪ್ರಮಾಣೀಕರಿಸಲ್ಪಟ್ಟ ಚಲನಚಿತ್ರದ ಸ್ವಯಂಪ್ರೇರಿತ ಮಾರ್ಪಾಡುಗಳಿಗೆ ಅವಕಾಶವಿದೆ. ಈ ಸಂಬಂಧ ನಿರ್ಮಾಪಕರು ಈಗಾಗಲೇ ಮಂಡಳಿಯನ್ನು ಸಂಪರ್ಕಿಸಿದ್ದಾರೆ. ಏನೆಲ್ಲ ಮಾರ್ಪಾಡುಗಳನ್ನು ಮಾಡಬೇಕೆಂಬುದು ಅವರ ವಿವೇಚನೆಗೆ ಬಿಟ್ಟದ್ದು. ನಮ್ಮ ಕಾರ್ಯವಿಧಾನದ ಪ್ರಕಾರ, ನಾವು ಸ್ವಯಂಪ್ರೇರಿತ ಮಾರ್ಪಾಡುಗಳಿಗೆ ಅನುಮತಿಸುತ್ತೇವೆ” ಎಂದು ಅಧಿಕಾರಿ ಹೇಳಿದ್ದಾಗಿ ವರದಿ ತಿಳಿಸಿದೆ.

ಗುರುವಾರ ವಿಶ್ವದಾದ್ಯಂತ ತೆರೆ ಕಂಡಿರುವ ನಟ-ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದ ಎಂಪುರಾನ್ ಚಿತ್ರದಲ್ಲಿ, 2002ರ ಗುಜರಾತ್ ಗಲಭೆಯ ಉಲ್ಲೇಖ ಬಲಪಂಥೀಯ ಗುಂಪುಗಳು ಮತ್ತು ಬೆಂಬಲಿಗರ ವಿರೋಧಕ್ಕೆ ಕಾರಣವಾಗಿದೆ. “ಈ ಚಿತ್ರವು ಹಿಂದೂ ಧರ್ಮವನ್ನು ಅಪಮಾನಗೊಳಿಸಿದೆ ಮತ್ತು ರಾಷ್ಟ್ರ ವಿರೋಧಿ ಅಂಶಗಳನ್ನು ಸಮಾಧಾನಪಡಿಸುವ ಗುರಿ ಹೊಂದಿದೆ” ಎಂದು ಬಲಪಂಥೀಯರು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಎಂಪುರಾನ್ ಚಿತ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರೆ, ಬಿಜೆಪಿ ಪಕ್ಷ ಅಧಿಕೃತವಾಗಿ ಚಿತ್ರವನ್ನು ವಿರೋಧಿಸಿಲ್ಲ. ವಿವಾದದಿಂದ ದೂರವಿರಲು ಪ್ರಯತ್ನಿಸಿರುವ ಬಿಜೆಪಿ, “ಚಿತ್ರದ ವಿರುದ್ಧ ಪ್ರಚಾರ ಮಾಡುವುದಿಲ್ಲ. ಇದನ್ನು ಒಂದು ಸಿನಿಮಾ ಆಗಿ ಮಾತ್ರ ನೋಡಬೇಕು” ಎಂದಿದೆ.

“ಸಿನಿಮಾವನ್ನು ವಿಭಜನಕಾರಿ ರಾಜಕೀಯ ಕಾರ್ಯಸೂಚಿಗೆ ವೇದಿಕೆಯಾಗಿ ಬಳಸಲಾಗುತ್ತಿದೆಯೇ ಎಂದು ವಿಮರ್ಶಕರು ಮತ್ತು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ” ಎಂದು ಆರ್‌ಎಸ್‌ಎಸ್ ಮುಖವಾಣಿ ಆರ್ಗನೈಸರ್‌ನ ವೆಬ್‌ಸೈಟ್‌ನಲ್ಲಿನಲ್ಲಿ ಪ್ರಕಟಗೊಂಡ ಲೇಖನವೊಂದು ತಿಳಿಸಿದೆ.

“ಇಡೀ ಹಿಂದೂ ಸಮುದಾಯವನ್ನು ಅವಹೇಳನ ಮಾಡಲು, ಗುಜರಾತ್ ಹಿಂಸಾಚಾರವನ್ನು ಉಲ್ಲೇಖಿಸಿ ಮಲಯಾಳಂ ಚಲನಚಿತ್ರವು ಹಿಂದೂಗಳನ್ನು ರಕ್ಷಕರಂತೆ ಚಿತ್ರಿಸಬಹುದಾದ ಸಂದರ್ಭಗಳಲ್ಲಿಯೂ ಸಹ ಖಳನಾಯಕರಂತೆ ಚಿತ್ರಿಸಿದೆ” ಎಂದು ಲೇಖನ ಹೇಳಿದೆ.

“2002ರ ಗುಜರಾತ್ ಗಲಭೆಯಲ್ಲಿ ಹಿಂದೂಗಳು ಪ್ರಾಥಮಿಕ ಆಕ್ರಮಣಕಾರರು ಎಂಬ ಚಿತ್ರಣವನ್ನು ಬಲಪಡಿಸಲು, ಎರಡು ಸಮುದಾಯಗಳ ನಡುವೆ ದ್ವೇಷವನ್ನು ಶಾಶ್ವತಗೊಳಿಸಲು ಮತ್ತು ಹಿಂದೂಗಳನ್ನು ಖಳನಾಯಕರಂತೆ ಬಿಂಬಿಸಲು ಚಿತ್ರದಲ್ಲಿ ಉದ್ದೇಶಪೂರ್ವಕವಾಗಿ ಪ್ರಯತ್ನಿಸಲಾಗಿದೆ” ಎಂದು ಲೇಖನ ತಿಳಿಸಿದೆ.

“ವಿಭಜಕ ಮತ್ತು ರಾಜಕೀಯವಾಗಿ ಪ್ರಭಾವಿತವಾದ ನಿರೂಪಣೆಯನ್ನು ಉತ್ತೇಜಿಸುವ ಚಿತ್ರದಲ್ಲಿ ನಟಿಸುವ ನಟನ ನಿರ್ಧಾರವು ಅವರ ನಿಷ್ಠಾವಂತ ಅಭಿಮಾನಿ ಬಳಗಕ್ಕೆ ಮಾಡಿದ ದ್ರೋಹವಾಗಿದೆ” ಎಂದು ಲೇಖನವು ಮೋಹನ್ ಲಾಲ್ ಅವರನ್ನು ಉಲ್ಲೇಖಿಸಿ ಹೇಳಿದೆ.

ಕೆಲವು ಬಿಜೆಪಿ ನಾಯಕರು ಚಿತ್ರದ ವಿರುದ್ಧ ಧ್ವನಿ ಎತ್ತಿದ್ದಾರೆ. ಭಾರತೀಯ ಜನತಾ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ, ಬಿಜೆಪಿ ಯುವ ಘಟಕದ ನಾಯಕ ಕೆ. ಗಣೇಶ್ ಶನಿವಾರ ಈ ಚಿತ್ರವು “ರಾಷ್ಟ್ರವಿರೋಧಿ ಅಂಶಗಳಿಂದ ತುಂಬಿದೆ” ಎಂದು ಹೇಳಿದ್ದಾರೆ. “ನಿರ್ದೇಶಕ ಪೃಥ್ವಿರಾಜ್ ಅವರ ವಿದೇಶಿ ಸಂಪರ್ಕಗಳನ್ನು ತನಿಖೆ ಮಾಡಬೇಕು. ಅವರು ಇಸ್ಲಾಮಿಕ್ ಸ್ಟೇಟ್‌ನ ಸಿದ್ಧಾಂತದಿಂದ ಪ್ರಭಾವಿತರಾಗಿದ್ದಾರೆಯೇ ಎಂದು ಅನುಮಾನ ಬರುತ್ತಿದೆ” ಎಂದಿದ್ದಾರೆ.

“ವಿವಾದ ಉಲ್ಬಣಗೊಳ್ಳುತ್ತಿದ್ದಂತೆ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಗೋಕುಲಂ ಗೋಪಾಲನ್ ಅವರು ಪ್ರತಿಕ್ರಿಯಿಸಿ, ಚಿತ್ರದಲ್ಲಿ ಮಾರ್ಪಾಡುಗಳನ್ನು ಮಾಡಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ನಮ್ಮ ಚಿತ್ರ ಯಾರನ್ನೂ ನೋಯಿಸುವ ಉದ್ದೇಶ ಹೊಂದಿಲ್ಲ” ಎಂದು ತಿಳಿಸಿದ್ದಾರೆ.

ಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ ‘ಫರೀಷಾ ಆಬಿದ್’: ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...