Homeಮುಖಪುಟಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ 'ಎಲ್‌2 : ಎಂಪುರಾನ್‌ ಚಿತ್ರ'; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ‘ಎಲ್‌2 : ಎಂಪುರಾನ್‌ ಚಿತ್ರ’; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

- Advertisement -
- Advertisement -

ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮೋಹನ್ ಲಾಲ್ ಅಭಿನಯದ ‘ಎಂಪುರಾನ್’ (L2: Empuraan) ಚಿತ್ರದ ನಿರ್ಮಾಪಕರು ಚಿತ್ರದಲ್ಲಿ ಸ್ವಯಂಪ್ರೇರಿತ ಮಾರ್ಪಾಡುಗಳನ್ನು ಮಾಡಲು ನಿರ್ಧರಿಸಿದ್ದಾರೆ ಎಂದು ತಿರುವನಂತಪುರಂನಲ್ಲಿರುವ ಪ್ರಾದೇಶಿಕ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (ಸಿಬಿಎಫ್‌ಸಿ) ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ವರದಿಯಾಗಿದೆ.

“ಸೆನ್ಸಾರ್ ಮಂಡಳಿಯಿಂದ ಈಗಾಗಲೇ ಪ್ರಮಾಣೀಕರಿಸಲ್ಪಟ್ಟ ಚಲನಚಿತ್ರದ ಸ್ವಯಂಪ್ರೇರಿತ ಮಾರ್ಪಾಡುಗಳಿಗೆ ಅವಕಾಶವಿದೆ. ಈ ಸಂಬಂಧ ನಿರ್ಮಾಪಕರು ಈಗಾಗಲೇ ಮಂಡಳಿಯನ್ನು ಸಂಪರ್ಕಿಸಿದ್ದಾರೆ. ಏನೆಲ್ಲ ಮಾರ್ಪಾಡುಗಳನ್ನು ಮಾಡಬೇಕೆಂಬುದು ಅವರ ವಿವೇಚನೆಗೆ ಬಿಟ್ಟದ್ದು. ನಮ್ಮ ಕಾರ್ಯವಿಧಾನದ ಪ್ರಕಾರ, ನಾವು ಸ್ವಯಂಪ್ರೇರಿತ ಮಾರ್ಪಾಡುಗಳಿಗೆ ಅನುಮತಿಸುತ್ತೇವೆ” ಎಂದು ಅಧಿಕಾರಿ ಹೇಳಿದ್ದಾಗಿ ವರದಿ ತಿಳಿಸಿದೆ.

ಗುರುವಾರ ವಿಶ್ವದಾದ್ಯಂತ ತೆರೆ ಕಂಡಿರುವ ನಟ-ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದ ಎಂಪುರಾನ್ ಚಿತ್ರದಲ್ಲಿ, 2002ರ ಗುಜರಾತ್ ಗಲಭೆಯ ಉಲ್ಲೇಖ ಬಲಪಂಥೀಯ ಗುಂಪುಗಳು ಮತ್ತು ಬೆಂಬಲಿಗರ ವಿರೋಧಕ್ಕೆ ಕಾರಣವಾಗಿದೆ. “ಈ ಚಿತ್ರವು ಹಿಂದೂ ಧರ್ಮವನ್ನು ಅಪಮಾನಗೊಳಿಸಿದೆ ಮತ್ತು ರಾಷ್ಟ್ರ ವಿರೋಧಿ ಅಂಶಗಳನ್ನು ಸಮಾಧಾನಪಡಿಸುವ ಗುರಿ ಹೊಂದಿದೆ” ಎಂದು ಬಲಪಂಥೀಯರು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಎಂಪುರಾನ್ ಚಿತ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರೆ, ಬಿಜೆಪಿ ಪಕ್ಷ ಅಧಿಕೃತವಾಗಿ ಚಿತ್ರವನ್ನು ವಿರೋಧಿಸಿಲ್ಲ. ವಿವಾದದಿಂದ ದೂರವಿರಲು ಪ್ರಯತ್ನಿಸಿರುವ ಬಿಜೆಪಿ, “ಚಿತ್ರದ ವಿರುದ್ಧ ಪ್ರಚಾರ ಮಾಡುವುದಿಲ್ಲ. ಇದನ್ನು ಒಂದು ಸಿನಿಮಾ ಆಗಿ ಮಾತ್ರ ನೋಡಬೇಕು” ಎಂದಿದೆ.

“ಸಿನಿಮಾವನ್ನು ವಿಭಜನಕಾರಿ ರಾಜಕೀಯ ಕಾರ್ಯಸೂಚಿಗೆ ವೇದಿಕೆಯಾಗಿ ಬಳಸಲಾಗುತ್ತಿದೆಯೇ ಎಂದು ವಿಮರ್ಶಕರು ಮತ್ತು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ” ಎಂದು ಆರ್‌ಎಸ್‌ಎಸ್ ಮುಖವಾಣಿ ಆರ್ಗನೈಸರ್‌ನ ವೆಬ್‌ಸೈಟ್‌ನಲ್ಲಿನಲ್ಲಿ ಪ್ರಕಟಗೊಂಡ ಲೇಖನವೊಂದು ತಿಳಿಸಿದೆ.

“ಇಡೀ ಹಿಂದೂ ಸಮುದಾಯವನ್ನು ಅವಹೇಳನ ಮಾಡಲು, ಗುಜರಾತ್ ಹಿಂಸಾಚಾರವನ್ನು ಉಲ್ಲೇಖಿಸಿ ಮಲಯಾಳಂ ಚಲನಚಿತ್ರವು ಹಿಂದೂಗಳನ್ನು ರಕ್ಷಕರಂತೆ ಚಿತ್ರಿಸಬಹುದಾದ ಸಂದರ್ಭಗಳಲ್ಲಿಯೂ ಸಹ ಖಳನಾಯಕರಂತೆ ಚಿತ್ರಿಸಿದೆ” ಎಂದು ಲೇಖನ ಹೇಳಿದೆ.

“2002ರ ಗುಜರಾತ್ ಗಲಭೆಯಲ್ಲಿ ಹಿಂದೂಗಳು ಪ್ರಾಥಮಿಕ ಆಕ್ರಮಣಕಾರರು ಎಂಬ ಚಿತ್ರಣವನ್ನು ಬಲಪಡಿಸಲು, ಎರಡು ಸಮುದಾಯಗಳ ನಡುವೆ ದ್ವೇಷವನ್ನು ಶಾಶ್ವತಗೊಳಿಸಲು ಮತ್ತು ಹಿಂದೂಗಳನ್ನು ಖಳನಾಯಕರಂತೆ ಬಿಂಬಿಸಲು ಚಿತ್ರದಲ್ಲಿ ಉದ್ದೇಶಪೂರ್ವಕವಾಗಿ ಪ್ರಯತ್ನಿಸಲಾಗಿದೆ” ಎಂದು ಲೇಖನ ತಿಳಿಸಿದೆ.

“ವಿಭಜಕ ಮತ್ತು ರಾಜಕೀಯವಾಗಿ ಪ್ರಭಾವಿತವಾದ ನಿರೂಪಣೆಯನ್ನು ಉತ್ತೇಜಿಸುವ ಚಿತ್ರದಲ್ಲಿ ನಟಿಸುವ ನಟನ ನಿರ್ಧಾರವು ಅವರ ನಿಷ್ಠಾವಂತ ಅಭಿಮಾನಿ ಬಳಗಕ್ಕೆ ಮಾಡಿದ ದ್ರೋಹವಾಗಿದೆ” ಎಂದು ಲೇಖನವು ಮೋಹನ್ ಲಾಲ್ ಅವರನ್ನು ಉಲ್ಲೇಖಿಸಿ ಹೇಳಿದೆ.

ಕೆಲವು ಬಿಜೆಪಿ ನಾಯಕರು ಚಿತ್ರದ ವಿರುದ್ಧ ಧ್ವನಿ ಎತ್ತಿದ್ದಾರೆ. ಭಾರತೀಯ ಜನತಾ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ, ಬಿಜೆಪಿ ಯುವ ಘಟಕದ ನಾಯಕ ಕೆ. ಗಣೇಶ್ ಶನಿವಾರ ಈ ಚಿತ್ರವು “ರಾಷ್ಟ್ರವಿರೋಧಿ ಅಂಶಗಳಿಂದ ತುಂಬಿದೆ” ಎಂದು ಹೇಳಿದ್ದಾರೆ. “ನಿರ್ದೇಶಕ ಪೃಥ್ವಿರಾಜ್ ಅವರ ವಿದೇಶಿ ಸಂಪರ್ಕಗಳನ್ನು ತನಿಖೆ ಮಾಡಬೇಕು. ಅವರು ಇಸ್ಲಾಮಿಕ್ ಸ್ಟೇಟ್‌ನ ಸಿದ್ಧಾಂತದಿಂದ ಪ್ರಭಾವಿತರಾಗಿದ್ದಾರೆಯೇ ಎಂದು ಅನುಮಾನ ಬರುತ್ತಿದೆ” ಎಂದಿದ್ದಾರೆ.

“ವಿವಾದ ಉಲ್ಬಣಗೊಳ್ಳುತ್ತಿದ್ದಂತೆ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಗೋಕುಲಂ ಗೋಪಾಲನ್ ಅವರು ಪ್ರತಿಕ್ರಿಯಿಸಿ, ಚಿತ್ರದಲ್ಲಿ ಮಾರ್ಪಾಡುಗಳನ್ನು ಮಾಡಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ನಮ್ಮ ಚಿತ್ರ ಯಾರನ್ನೂ ನೋಯಿಸುವ ಉದ್ದೇಶ ಹೊಂದಿಲ್ಲ” ಎಂದು ತಿಳಿಸಿದ್ದಾರೆ.

ಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ ‘ಫರೀಷಾ ಆಬಿದ್’: ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...