Homeಮುಖಪುಟಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ 'ಎಲ್‌2 : ಎಂಪುರಾನ್‌ ಚಿತ್ರ'; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ‘ಎಲ್‌2 : ಎಂಪುರಾನ್‌ ಚಿತ್ರ’; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

- Advertisement -
- Advertisement -

ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮೋಹನ್ ಲಾಲ್ ಅಭಿನಯದ ‘ಎಂಪುರಾನ್’ (L2: Empuraan) ಚಿತ್ರದ ನಿರ್ಮಾಪಕರು ಚಿತ್ರದಲ್ಲಿ ಸ್ವಯಂಪ್ರೇರಿತ ಮಾರ್ಪಾಡುಗಳನ್ನು ಮಾಡಲು ನಿರ್ಧರಿಸಿದ್ದಾರೆ ಎಂದು ತಿರುವನಂತಪುರಂನಲ್ಲಿರುವ ಪ್ರಾದೇಶಿಕ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (ಸಿಬಿಎಫ್‌ಸಿ) ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ವರದಿಯಾಗಿದೆ.

“ಸೆನ್ಸಾರ್ ಮಂಡಳಿಯಿಂದ ಈಗಾಗಲೇ ಪ್ರಮಾಣೀಕರಿಸಲ್ಪಟ್ಟ ಚಲನಚಿತ್ರದ ಸ್ವಯಂಪ್ರೇರಿತ ಮಾರ್ಪಾಡುಗಳಿಗೆ ಅವಕಾಶವಿದೆ. ಈ ಸಂಬಂಧ ನಿರ್ಮಾಪಕರು ಈಗಾಗಲೇ ಮಂಡಳಿಯನ್ನು ಸಂಪರ್ಕಿಸಿದ್ದಾರೆ. ಏನೆಲ್ಲ ಮಾರ್ಪಾಡುಗಳನ್ನು ಮಾಡಬೇಕೆಂಬುದು ಅವರ ವಿವೇಚನೆಗೆ ಬಿಟ್ಟದ್ದು. ನಮ್ಮ ಕಾರ್ಯವಿಧಾನದ ಪ್ರಕಾರ, ನಾವು ಸ್ವಯಂಪ್ರೇರಿತ ಮಾರ್ಪಾಡುಗಳಿಗೆ ಅನುಮತಿಸುತ್ತೇವೆ” ಎಂದು ಅಧಿಕಾರಿ ಹೇಳಿದ್ದಾಗಿ ವರದಿ ತಿಳಿಸಿದೆ.

ಗುರುವಾರ ವಿಶ್ವದಾದ್ಯಂತ ತೆರೆ ಕಂಡಿರುವ ನಟ-ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದ ಎಂಪುರಾನ್ ಚಿತ್ರದಲ್ಲಿ, 2002ರ ಗುಜರಾತ್ ಗಲಭೆಯ ಉಲ್ಲೇಖ ಬಲಪಂಥೀಯ ಗುಂಪುಗಳು ಮತ್ತು ಬೆಂಬಲಿಗರ ವಿರೋಧಕ್ಕೆ ಕಾರಣವಾಗಿದೆ. “ಈ ಚಿತ್ರವು ಹಿಂದೂ ಧರ್ಮವನ್ನು ಅಪಮಾನಗೊಳಿಸಿದೆ ಮತ್ತು ರಾಷ್ಟ್ರ ವಿರೋಧಿ ಅಂಶಗಳನ್ನು ಸಮಾಧಾನಪಡಿಸುವ ಗುರಿ ಹೊಂದಿದೆ” ಎಂದು ಬಲಪಂಥೀಯರು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಎಂಪುರಾನ್ ಚಿತ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರೆ, ಬಿಜೆಪಿ ಪಕ್ಷ ಅಧಿಕೃತವಾಗಿ ಚಿತ್ರವನ್ನು ವಿರೋಧಿಸಿಲ್ಲ. ವಿವಾದದಿಂದ ದೂರವಿರಲು ಪ್ರಯತ್ನಿಸಿರುವ ಬಿಜೆಪಿ, “ಚಿತ್ರದ ವಿರುದ್ಧ ಪ್ರಚಾರ ಮಾಡುವುದಿಲ್ಲ. ಇದನ್ನು ಒಂದು ಸಿನಿಮಾ ಆಗಿ ಮಾತ್ರ ನೋಡಬೇಕು” ಎಂದಿದೆ.

“ಸಿನಿಮಾವನ್ನು ವಿಭಜನಕಾರಿ ರಾಜಕೀಯ ಕಾರ್ಯಸೂಚಿಗೆ ವೇದಿಕೆಯಾಗಿ ಬಳಸಲಾಗುತ್ತಿದೆಯೇ ಎಂದು ವಿಮರ್ಶಕರು ಮತ್ತು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ” ಎಂದು ಆರ್‌ಎಸ್‌ಎಸ್ ಮುಖವಾಣಿ ಆರ್ಗನೈಸರ್‌ನ ವೆಬ್‌ಸೈಟ್‌ನಲ್ಲಿನಲ್ಲಿ ಪ್ರಕಟಗೊಂಡ ಲೇಖನವೊಂದು ತಿಳಿಸಿದೆ.

“ಇಡೀ ಹಿಂದೂ ಸಮುದಾಯವನ್ನು ಅವಹೇಳನ ಮಾಡಲು, ಗುಜರಾತ್ ಹಿಂಸಾಚಾರವನ್ನು ಉಲ್ಲೇಖಿಸಿ ಮಲಯಾಳಂ ಚಲನಚಿತ್ರವು ಹಿಂದೂಗಳನ್ನು ರಕ್ಷಕರಂತೆ ಚಿತ್ರಿಸಬಹುದಾದ ಸಂದರ್ಭಗಳಲ್ಲಿಯೂ ಸಹ ಖಳನಾಯಕರಂತೆ ಚಿತ್ರಿಸಿದೆ” ಎಂದು ಲೇಖನ ಹೇಳಿದೆ.

“2002ರ ಗುಜರಾತ್ ಗಲಭೆಯಲ್ಲಿ ಹಿಂದೂಗಳು ಪ್ರಾಥಮಿಕ ಆಕ್ರಮಣಕಾರರು ಎಂಬ ಚಿತ್ರಣವನ್ನು ಬಲಪಡಿಸಲು, ಎರಡು ಸಮುದಾಯಗಳ ನಡುವೆ ದ್ವೇಷವನ್ನು ಶಾಶ್ವತಗೊಳಿಸಲು ಮತ್ತು ಹಿಂದೂಗಳನ್ನು ಖಳನಾಯಕರಂತೆ ಬಿಂಬಿಸಲು ಚಿತ್ರದಲ್ಲಿ ಉದ್ದೇಶಪೂರ್ವಕವಾಗಿ ಪ್ರಯತ್ನಿಸಲಾಗಿದೆ” ಎಂದು ಲೇಖನ ತಿಳಿಸಿದೆ.

“ವಿಭಜಕ ಮತ್ತು ರಾಜಕೀಯವಾಗಿ ಪ್ರಭಾವಿತವಾದ ನಿರೂಪಣೆಯನ್ನು ಉತ್ತೇಜಿಸುವ ಚಿತ್ರದಲ್ಲಿ ನಟಿಸುವ ನಟನ ನಿರ್ಧಾರವು ಅವರ ನಿಷ್ಠಾವಂತ ಅಭಿಮಾನಿ ಬಳಗಕ್ಕೆ ಮಾಡಿದ ದ್ರೋಹವಾಗಿದೆ” ಎಂದು ಲೇಖನವು ಮೋಹನ್ ಲಾಲ್ ಅವರನ್ನು ಉಲ್ಲೇಖಿಸಿ ಹೇಳಿದೆ.

ಕೆಲವು ಬಿಜೆಪಿ ನಾಯಕರು ಚಿತ್ರದ ವಿರುದ್ಧ ಧ್ವನಿ ಎತ್ತಿದ್ದಾರೆ. ಭಾರತೀಯ ಜನತಾ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ, ಬಿಜೆಪಿ ಯುವ ಘಟಕದ ನಾಯಕ ಕೆ. ಗಣೇಶ್ ಶನಿವಾರ ಈ ಚಿತ್ರವು “ರಾಷ್ಟ್ರವಿರೋಧಿ ಅಂಶಗಳಿಂದ ತುಂಬಿದೆ” ಎಂದು ಹೇಳಿದ್ದಾರೆ. “ನಿರ್ದೇಶಕ ಪೃಥ್ವಿರಾಜ್ ಅವರ ವಿದೇಶಿ ಸಂಪರ್ಕಗಳನ್ನು ತನಿಖೆ ಮಾಡಬೇಕು. ಅವರು ಇಸ್ಲಾಮಿಕ್ ಸ್ಟೇಟ್‌ನ ಸಿದ್ಧಾಂತದಿಂದ ಪ್ರಭಾವಿತರಾಗಿದ್ದಾರೆಯೇ ಎಂದು ಅನುಮಾನ ಬರುತ್ತಿದೆ” ಎಂದಿದ್ದಾರೆ.

“ವಿವಾದ ಉಲ್ಬಣಗೊಳ್ಳುತ್ತಿದ್ದಂತೆ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಗೋಕುಲಂ ಗೋಪಾಲನ್ ಅವರು ಪ್ರತಿಕ್ರಿಯಿಸಿ, ಚಿತ್ರದಲ್ಲಿ ಮಾರ್ಪಾಡುಗಳನ್ನು ಮಾಡಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ನಮ್ಮ ಚಿತ್ರ ಯಾರನ್ನೂ ನೋಯಿಸುವ ಉದ್ದೇಶ ಹೊಂದಿಲ್ಲ” ಎಂದು ತಿಳಿಸಿದ್ದಾರೆ.

ಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ ‘ಫರೀಷಾ ಆಬಿದ್’: ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...