Homeಮುಖಪುಟಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ 'ಎಲ್‌2 : ಎಂಪುರಾನ್‌ ಚಿತ್ರ'; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ‘ಎಲ್‌2 : ಎಂಪುರಾನ್‌ ಚಿತ್ರ’; ಹಲವು ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ

- Advertisement -
- Advertisement -

ಸಂಘ ಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ ಮೋಹನ್ ಲಾಲ್ ಅಭಿನಯದ ‘ಎಂಪುರಾನ್’ (L2: Empuraan) ಚಿತ್ರದ ನಿರ್ಮಾಪಕರು ಚಿತ್ರದಲ್ಲಿ ಸ್ವಯಂಪ್ರೇರಿತ ಮಾರ್ಪಾಡುಗಳನ್ನು ಮಾಡಲು ನಿರ್ಧರಿಸಿದ್ದಾರೆ ಎಂದು ತಿರುವನಂತಪುರಂನಲ್ಲಿರುವ ಪ್ರಾದೇಶಿಕ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯ (ಸಿಬಿಎಫ್‌ಸಿ) ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ವರದಿಯಾಗಿದೆ.

“ಸೆನ್ಸಾರ್ ಮಂಡಳಿಯಿಂದ ಈಗಾಗಲೇ ಪ್ರಮಾಣೀಕರಿಸಲ್ಪಟ್ಟ ಚಲನಚಿತ್ರದ ಸ್ವಯಂಪ್ರೇರಿತ ಮಾರ್ಪಾಡುಗಳಿಗೆ ಅವಕಾಶವಿದೆ. ಈ ಸಂಬಂಧ ನಿರ್ಮಾಪಕರು ಈಗಾಗಲೇ ಮಂಡಳಿಯನ್ನು ಸಂಪರ್ಕಿಸಿದ್ದಾರೆ. ಏನೆಲ್ಲ ಮಾರ್ಪಾಡುಗಳನ್ನು ಮಾಡಬೇಕೆಂಬುದು ಅವರ ವಿವೇಚನೆಗೆ ಬಿಟ್ಟದ್ದು. ನಮ್ಮ ಕಾರ್ಯವಿಧಾನದ ಪ್ರಕಾರ, ನಾವು ಸ್ವಯಂಪ್ರೇರಿತ ಮಾರ್ಪಾಡುಗಳಿಗೆ ಅನುಮತಿಸುತ್ತೇವೆ” ಎಂದು ಅಧಿಕಾರಿ ಹೇಳಿದ್ದಾಗಿ ವರದಿ ತಿಳಿಸಿದೆ.

ಗುರುವಾರ ವಿಶ್ವದಾದ್ಯಂತ ತೆರೆ ಕಂಡಿರುವ ನಟ-ನಿರ್ದೇಶಕ ಪೃಥ್ವಿರಾಜ್ ಸುಕುಮಾರನ್ ನಿರ್ದೇಶನದ ಎಂಪುರಾನ್ ಚಿತ್ರದಲ್ಲಿ, 2002ರ ಗುಜರಾತ್ ಗಲಭೆಯ ಉಲ್ಲೇಖ ಬಲಪಂಥೀಯ ಗುಂಪುಗಳು ಮತ್ತು ಬೆಂಬಲಿಗರ ವಿರೋಧಕ್ಕೆ ಕಾರಣವಾಗಿದೆ. “ಈ ಚಿತ್ರವು ಹಿಂದೂ ಧರ್ಮವನ್ನು ಅಪಮಾನಗೊಳಿಸಿದೆ ಮತ್ತು ರಾಷ್ಟ್ರ ವಿರೋಧಿ ಅಂಶಗಳನ್ನು ಸಮಾಧಾನಪಡಿಸುವ ಗುರಿ ಹೊಂದಿದೆ” ಎಂದು ಬಲಪಂಥೀಯರು ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಸಂಘಪರಿವಾರದ ನಾಯಕರು ಎಂಪುರಾನ್ ಚಿತ್ರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರೆ, ಬಿಜೆಪಿ ಪಕ್ಷ ಅಧಿಕೃತವಾಗಿ ಚಿತ್ರವನ್ನು ವಿರೋಧಿಸಿಲ್ಲ. ವಿವಾದದಿಂದ ದೂರವಿರಲು ಪ್ರಯತ್ನಿಸಿರುವ ಬಿಜೆಪಿ, “ಚಿತ್ರದ ವಿರುದ್ಧ ಪ್ರಚಾರ ಮಾಡುವುದಿಲ್ಲ. ಇದನ್ನು ಒಂದು ಸಿನಿಮಾ ಆಗಿ ಮಾತ್ರ ನೋಡಬೇಕು” ಎಂದಿದೆ.

“ಸಿನಿಮಾವನ್ನು ವಿಭಜನಕಾರಿ ರಾಜಕೀಯ ಕಾರ್ಯಸೂಚಿಗೆ ವೇದಿಕೆಯಾಗಿ ಬಳಸಲಾಗುತ್ತಿದೆಯೇ ಎಂದು ವಿಮರ್ಶಕರು ಮತ್ತು ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ” ಎಂದು ಆರ್‌ಎಸ್‌ಎಸ್ ಮುಖವಾಣಿ ಆರ್ಗನೈಸರ್‌ನ ವೆಬ್‌ಸೈಟ್‌ನಲ್ಲಿನಲ್ಲಿ ಪ್ರಕಟಗೊಂಡ ಲೇಖನವೊಂದು ತಿಳಿಸಿದೆ.

“ಇಡೀ ಹಿಂದೂ ಸಮುದಾಯವನ್ನು ಅವಹೇಳನ ಮಾಡಲು, ಗುಜರಾತ್ ಹಿಂಸಾಚಾರವನ್ನು ಉಲ್ಲೇಖಿಸಿ ಮಲಯಾಳಂ ಚಲನಚಿತ್ರವು ಹಿಂದೂಗಳನ್ನು ರಕ್ಷಕರಂತೆ ಚಿತ್ರಿಸಬಹುದಾದ ಸಂದರ್ಭಗಳಲ್ಲಿಯೂ ಸಹ ಖಳನಾಯಕರಂತೆ ಚಿತ್ರಿಸಿದೆ” ಎಂದು ಲೇಖನ ಹೇಳಿದೆ.

“2002ರ ಗುಜರಾತ್ ಗಲಭೆಯಲ್ಲಿ ಹಿಂದೂಗಳು ಪ್ರಾಥಮಿಕ ಆಕ್ರಮಣಕಾರರು ಎಂಬ ಚಿತ್ರಣವನ್ನು ಬಲಪಡಿಸಲು, ಎರಡು ಸಮುದಾಯಗಳ ನಡುವೆ ದ್ವೇಷವನ್ನು ಶಾಶ್ವತಗೊಳಿಸಲು ಮತ್ತು ಹಿಂದೂಗಳನ್ನು ಖಳನಾಯಕರಂತೆ ಬಿಂಬಿಸಲು ಚಿತ್ರದಲ್ಲಿ ಉದ್ದೇಶಪೂರ್ವಕವಾಗಿ ಪ್ರಯತ್ನಿಸಲಾಗಿದೆ” ಎಂದು ಲೇಖನ ತಿಳಿಸಿದೆ.

“ವಿಭಜಕ ಮತ್ತು ರಾಜಕೀಯವಾಗಿ ಪ್ರಭಾವಿತವಾದ ನಿರೂಪಣೆಯನ್ನು ಉತ್ತೇಜಿಸುವ ಚಿತ್ರದಲ್ಲಿ ನಟಿಸುವ ನಟನ ನಿರ್ಧಾರವು ಅವರ ನಿಷ್ಠಾವಂತ ಅಭಿಮಾನಿ ಬಳಗಕ್ಕೆ ಮಾಡಿದ ದ್ರೋಹವಾಗಿದೆ” ಎಂದು ಲೇಖನವು ಮೋಹನ್ ಲಾಲ್ ಅವರನ್ನು ಉಲ್ಲೇಖಿಸಿ ಹೇಳಿದೆ.

ಕೆಲವು ಬಿಜೆಪಿ ನಾಯಕರು ಚಿತ್ರದ ವಿರುದ್ಧ ಧ್ವನಿ ಎತ್ತಿದ್ದಾರೆ. ಭಾರತೀಯ ಜನತಾ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ, ಬಿಜೆಪಿ ಯುವ ಘಟಕದ ನಾಯಕ ಕೆ. ಗಣೇಶ್ ಶನಿವಾರ ಈ ಚಿತ್ರವು “ರಾಷ್ಟ್ರವಿರೋಧಿ ಅಂಶಗಳಿಂದ ತುಂಬಿದೆ” ಎಂದು ಹೇಳಿದ್ದಾರೆ. “ನಿರ್ದೇಶಕ ಪೃಥ್ವಿರಾಜ್ ಅವರ ವಿದೇಶಿ ಸಂಪರ್ಕಗಳನ್ನು ತನಿಖೆ ಮಾಡಬೇಕು. ಅವರು ಇಸ್ಲಾಮಿಕ್ ಸ್ಟೇಟ್‌ನ ಸಿದ್ಧಾಂತದಿಂದ ಪ್ರಭಾವಿತರಾಗಿದ್ದಾರೆಯೇ ಎಂದು ಅನುಮಾನ ಬರುತ್ತಿದೆ” ಎಂದಿದ್ದಾರೆ.

“ವಿವಾದ ಉಲ್ಬಣಗೊಳ್ಳುತ್ತಿದ್ದಂತೆ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಗೋಕುಲಂ ಗೋಪಾಲನ್ ಅವರು ಪ್ರತಿಕ್ರಿಯಿಸಿ, ಚಿತ್ರದಲ್ಲಿ ಮಾರ್ಪಾಡುಗಳನ್ನು ಮಾಡಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ನಮ್ಮ ಚಿತ್ರ ಯಾರನ್ನೂ ನೋಯಿಸುವ ಉದ್ದೇಶ ಹೊಂದಿಲ್ಲ” ಎಂದು ತಿಳಿಸಿದ್ದಾರೆ.

ಡ್ರಗ್ಸ್‌ ವಿರುದ್ಧ ಸಮರಕ್ಕಿಳಿದ ‘ಫರೀಷಾ ಆಬಿದ್’: ಪಂಚಾಯತ್ ಅಧ್ಯಕ್ಷೆಯ ಬೆನ್ನಿಗೆ ನಿಂತ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...