Homeಕರ್ನಾಟಕಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಒಳ್ಳೆಯದಾಗಿದೆ: ಕಾರ್ಮಿಕ ಸಚಿವರ ಹೇಳಿಕೆಗೆ ತೀವ್ರ ವಿರೋಧ

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಒಳ್ಳೆಯದಾಗಿದೆ: ಕಾರ್ಮಿಕ ಸಚಿವರ ಹೇಳಿಕೆಗೆ ತೀವ್ರ ವಿರೋಧ

ಇಡೀ ದೇಶದಲ್ಲಿನ ಯಾವ ರಾಜ್ಯ ಸರ್ಕಾರಗಳಿಗೂ ಸಾಂಕ್ರಾಮಿಕದ ಸಮಯದಲ್ಲಿ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ನ್ಯಾಯ ಕೊಡಲು ಸಾಧ್ಯವಾಗಿಲ್ಲ - ಶಿವರಾಮ್ ಹೆಬ್ಬಾರ್

- Advertisement -
- Advertisement -

“ಕಳೆದ ಆರೇಳು ತಿಂಗಳಿನಿಂದ ಕಾರ್ಮಿಕರು ಸಾಕಷ್ಟು ಕಷ್ಟ ಅನುಭವಿಸಿದರು. ಎಷ್ಟೋ ಕಾರ್ಮಿಕರು ಬದುಕುವ ಹಕ್ಕು ಹಾಗೂ ಶಕ್ತಿಯನ್ನು ಕಳೆದುಕೊಂಡಿದ್ದನ್ನು ನಾವು ಗಮನಿಸಿದ್ದೇವೆ. ಕಾರ್ಮಿಕ ಇಲಾಖೆ ಇರುವುದು ಕಾರ್ಮಿಕರ ರಕ್ಷಣೆಗಾಗಿ. ಆದರೆ ಈ ಆರೇಳು ತಿಂಗಳಿನ ಸಂದರ್ಭದ್ಲಿ ಕಾರ್ಮಿಕರಿಗೆ ನೂರಕ್ಕೆ ನೂರರಷ್ಟು ನ್ಯಾಯ ಕೊಡಲು ಸಾಧ್ಯವಾಗಿಲ್ಲ ಇದು ನಮಗೆ ಗೊತ್ತಿದೆ. ಆದರೂ ಅನೇಕ ಕಾರ್ಮಿಕ ಕಾನೂನು ತಿದ್ದುಪಡಿಗಳಿಂದ ಕಾರ್ಮಿಕರಿಗೆ ನ್ಯಾಯವು ಸಿಕ್ಕಿದೆ. ಅನೇಕ ಸಂದರ್ಭಗಳಲ್ಲಿ ನ್ಯಾಯ ಸಿಕ್ಕಿಲ್ಲ” ಎಂದು ರಾಜ್ಯ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಕಾರ್ಮಿಕರು ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಕಾರ್ಮಿಕರಿಗೆ ನ್ಯಾಯ ಸಿಗುವ ಬದಲು ಅನ್ಯಾಯವಾಗಿದೆ. ತಿದ್ದುಪಡಿ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಇದರಿಂದ ಸಚಿವರು ತಬ್ಬಿಬ್ಬಾದರೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಂತರ ಕಾರ್ಮಿಕರ ಮುಖಂಡರು ಪರಿಸ್ಥಿತಿ ತಿಳಿಗೊಳಿಸಿದರು.

ಇದು ಇಂದು ಮಧ್ಯಾಹ್ನ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ಘಟನೆ. ಸಿಐಟಿಯು ನೇತೃತ್ವದಲ್ಲಿ ಸಾವಿರಾರು ಕಾರ್ಮಿಕರು ಹಲವು ಹಕ್ಕೊತ್ತಾಯಗಳ ಈಡೇರಿಕೆಗೆ ಒತ್ತಾಯಿಸಿ ಇಂದಿನಿಂದ ಬೃಹತ್ ಧರಣಿ ಆರಂಭಿಸಿದ್ದಾರೆ. ಈ ಸಮಯದಲ್ಲಿ ಕಾರ್ಮಿಕರ ಮನವಿ ಸ್ವೀಕರಿಸಲು ಬಂದಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್‌ ವಿರುದ್ಧ ಕಾರ್ಮಿಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂತರ ಮಾತನಾಡಿದ ಸಚಿವರು “ಇಡೀ ದೇಶದಲ್ಲಿನ ಯಾವ ರಾಜ್ಯ ಸರ್ಕಾರಗಳಿಗೂ ಸಾಂಕ್ರಾಮಿಕದ ಸಮಯದಲ್ಲಿ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ನ್ಯಾಯ ಕೊಡಲು ಸಾಧ್ಯವಾಗಿಲ್ಲ. ಆದರೆ ಈ ಸಮಯದಲ್ಲಿ ನಾವು ಸಾಧ್ಯವಾದಷ್ಟು ಸೌಹಾರ್ದಯುತವಾಗಿ ಕಾರ್ಮಿಕ ಸಂಘಟನೆಗಳೊಂದಿಗೆ ಮಾತಾಡಿದ್ದೇವೆ. ಕಾರ್ಮಿಕರು ಮತ್ತು ಮಾಲೀಕರ ನಡುವೆ ಸೇತುವೆಯಾಗಿ ಕೆಲಸ ಮಾಡಿದ್ದೇವೆ ಎಂದರು.

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಗಳ ಬಗ್ಗೆ ಕಾರ್ಮಿಕರಲ್ಲಿ ಅಸಮಾಧಾನ ಇರುವುದನ್ನು ಗಮನಿಸಿದ್ದೇವೆ. ಇದನ್ನು ಮುಖ್ಯಮಂತ್ರಿಗಳು ಜೊತೆ ಕೂತು ಚರ್ಚೆ ಮಾಡುತ್ತೇವೆ. ಕಾರ್ಮಿಕರ ಭಾವನೆಯನ್ನು ಸರ್ಕಾರಕ್ಕೆ ತಲುಪಿಸುತ್ತೇನೆ. ಕಾರ್ಮಿಕರಿಗೆ ಬದುಕುವ ಶಕ್ತಿ ನೀಡುವುದು ನಮ್ಮ ಮೊದಲ ಆದ್ಯತೆಯಾದರೆ, ಕಾರ್ಮಿಕರ ಹಕ್ಕುಗಳನ್ನು ರಕ್ಷಣೆ ಮಾಡುವುದು ಎರಡನೇ ಆದ್ಯತೆಯಾಗಿದೆ ಎಂದರು. ಹಾಗಾಗಿ ಮುಖ್ಯಮಂತ್ರಿಗಳೊಂದಿಗೆ ಶೀಘ್ರದಲ್ಲಿಯೇ ಸಭೆ ಏರ್ಪಡಿಸುವುದಾಗಿ ಭರವಸೆ ನೀಡಿದರು.

ಕಾರ್ಮಿಕರ ಹಕ್ಕೊತ್ತಾಯಗಳು

  • ಕೆಲಸದ ಅವಧಿ ಹೆಚ್ಚಳ, ವಾರದ ಕೆಲಸದ ಮಿತಿಯ ಹೆಚ್ಚಳದಂತಹ ತಿದ್ದುಪಡಿಗಳನ್ನು ಕೈಬಿಡಬೇಕು.
  • 2021-21 ರ ಸಾಲಿನ ತುಟ್ಟಿಭತ್ಯೆ ಮುಂದೂಡಿಕೆ ಆದೇಶ ರದ್ದು ಮಾಡಿ, ಬಾಕಿ ಹಣ ನೀಡಬೇಕು.
  • ಅಂತರರಾಜ್ಯ ವಲಸೆ ಕಾರ್ಮಿಕ (ಉದ್ಯೋಗ ಮತ್ತು ಸೇವಾ ಶರತ್ತುಗಳ) ಕಾಯ್ದೆ-1970 ಅನ್ನು ಜಾರಿಗೊಳಿಸಬೇಕು.
  • ಕೇಂದ್ರ ಸರ್ಕಾರ ರಾಜ್ಯದ ಜಿಎಸ್‌ಟಿ ಪಾಲು ಮತ್ತು ಪ್ರವಾಹ ಪರಿಹಾರವನ್ನು ಕೂಡಲೇ ನೀಡಬೇಕು.
  • ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ಅಗತ್ಯ ಸರಕುಗಳ ಕಾಯ್ದೆ, ವಿದ್ಯುತ್ ಕಾಯ್ದೆಗಳಿಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿ ಸುಗ್ರೀವಾಜ್ಞೆಗಳನ್ನು ವಾಪಸ್ ಪಡೆಯಬೇಕು.
  • ಶಿಕ್ಷಣ, ಆರೋಗ್ಯ, ರೈಲು, ರಸ್ತೆ, ವಿದ್ಯುತ್, ದೂರಸಂಪರ್ಕ, ವಿಮಾ, ಬ್ಯಾಂಕ್ ಮುಂತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಬೇಕು.
  • ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಎಲ್ಲಾ ಕುಟುಂಬಗಳಿಗೆ ಮಾಸಿಕ 7,500 ರೂಗಳ ನೆರವನ್ನು ಆರು ತಿಂಗಳ ಕಾಲ ನೀಡಬೇಕು. ಎಲ್ಲಾ ಕುಟುಂಬಗಳ ಪ್ರತಿ ಸದಸ್ಯರಿಗೆ ಮಾಸಿಕ ತಲಾ 10 ಕೆ.ಜಿ. ಆಹಾರ ಪದಾರ್ಥಗಳನ್ನು ನೀಡಬೇಕು.
  • ನಗರ ಹಾಗೂ ಗ್ರಾಮೀಣ ಪ್ರದೇಶದ ಅಗತ್ಯವಿರುವ ಎಲ್ಲರಿಗೂ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷಕ್ಕೆ 200 ದಿನಗಳ ಉದ್ಯೋಗ ನೀಡಬೇಕು. ಕನಿಷ್ಟ ಕೂಲಿ 600 ರೂಗಳಿಗೆ ಹೆಚ್ಚಿಸಬೇಕು.
  • ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ನಿರುದ್ಯೋಗ ಭತ್ಯೆ ಮಾಸಿಕ 10,000 ರೂಗಳನ್ನು ನೀಡಬೇಕು.
  • ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಬೇಕು. ಜಿಡಿಪಿಯ 3 ಶೇಕಡ ಹಣವನ್ನು ಆರೋಗ್ಯಕ್ಕೆ ಒದಗಿಸಬೇಕು.
  • ಆನ್ ಲೈನ್ ಶಿಕ್ಷಣ ನೆಪದ ಲೂಟಿ ತಡೆಯಬೇಕು. ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಉದ್ಯೋಗ ಮತ್ತು ವೇತನ ಸಂರಕ್ಷಿಸಬೇಕು.
  • ಕೇಂದ್ರೀಕರಣ, ವಾಣಿಜ್ಯೀಕರಣ ಮತ್ತು ಕೋಮುವಾದೀಕರಣಕ್ಕೆ ಎಡೆ ಮಾಡುವ ನೂತನ ಶಿಕ್ಷಣ ನೀತಿ-2020 (NEP) ರದ್ದುಪಡಿಸಬೇಕು. ಸಾರ್ವತ್ರಿಕ ಶಿಕ್ಷಣ ಬಲಪಡಿಸಬೇಕು. ಐಸಿಡಿಎಸ್ ಯೋಜನೆ ಬಲಪಡಿಸಬೇಕು.
  • ರೂ.21,000/- ಸಮಾನ ಕನಿಷ್ಟ ವೇತನ ನಿಗದಿ ಮಾಡಬೇಕು. ಕಾರ್ಮಿಕ ಸಂಘದ ಕಡ್ಡಾಯ ಮಾನ್ಯತೆಯ ಶಾಸನ ರೂಪಿಸಬೇಕು, ಗುತ್ತಿಗೆ ಕಾರ್ಮಿಕರ ಖಾಯಂಗೆ ಅಸ್ಸಾಂ ಮತ್ತು ತಮಿಳುನಾಡು ಮಾದರಿಯಲ್ಲಿ ಶಾಸನ ರೂಪಿಸಬೇಕು.

ಇದನ್ನೂ ಓದಿ: ಭಾರತ ಮೋದಿ, ಯಡಿಯೂರಪ್ಪನವರದಲ್ಲ, ಭಾರತವನ್ನು ಕಟ್ಟಿದವರು ನಾವು – ಕೆ.ಎನ್ ಉಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...