Homeಮುಖಪುಟಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಒಳ್ಳೆಯದಾಗಿದೆ: ಕಾರ್ಮಿಕ ಸಚಿವರ ಹೇಳಿಕೆಗೆ ತೀವ್ರ ವಿರೋಧ

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಒಳ್ಳೆಯದಾಗಿದೆ: ಕಾರ್ಮಿಕ ಸಚಿವರ ಹೇಳಿಕೆಗೆ ತೀವ್ರ ವಿರೋಧ

ಇಡೀ ದೇಶದಲ್ಲಿನ ಯಾವ ರಾಜ್ಯ ಸರ್ಕಾರಗಳಿಗೂ ಸಾಂಕ್ರಾಮಿಕದ ಸಮಯದಲ್ಲಿ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ನ್ಯಾಯ ಕೊಡಲು ಸಾಧ್ಯವಾಗಿಲ್ಲ - ಶಿವರಾಮ್ ಹೆಬ್ಬಾರ್

- Advertisement -
- Advertisement -

“ಕಳೆದ ಆರೇಳು ತಿಂಗಳಿನಿಂದ ಕಾರ್ಮಿಕರು ಸಾಕಷ್ಟು ಕಷ್ಟ ಅನುಭವಿಸಿದರು. ಎಷ್ಟೋ ಕಾರ್ಮಿಕರು ಬದುಕುವ ಹಕ್ಕು ಹಾಗೂ ಶಕ್ತಿಯನ್ನು ಕಳೆದುಕೊಂಡಿದ್ದನ್ನು ನಾವು ಗಮನಿಸಿದ್ದೇವೆ. ಕಾರ್ಮಿಕ ಇಲಾಖೆ ಇರುವುದು ಕಾರ್ಮಿಕರ ರಕ್ಷಣೆಗಾಗಿ. ಆದರೆ ಈ ಆರೇಳು ತಿಂಗಳಿನ ಸಂದರ್ಭದ್ಲಿ ಕಾರ್ಮಿಕರಿಗೆ ನೂರಕ್ಕೆ ನೂರರಷ್ಟು ನ್ಯಾಯ ಕೊಡಲು ಸಾಧ್ಯವಾಗಿಲ್ಲ ಇದು ನಮಗೆ ಗೊತ್ತಿದೆ. ಆದರೂ ಅನೇಕ ಕಾರ್ಮಿಕ ಕಾನೂನು ತಿದ್ದುಪಡಿಗಳಿಂದ ಕಾರ್ಮಿಕರಿಗೆ ನ್ಯಾಯವು ಸಿಕ್ಕಿದೆ. ಅನೇಕ ಸಂದರ್ಭಗಳಲ್ಲಿ ನ್ಯಾಯ ಸಿಕ್ಕಿಲ್ಲ” ಎಂದು ರಾಜ್ಯ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಕಾರ್ಮಿಕರು ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಕಾರ್ಮಿಕರಿಗೆ ನ್ಯಾಯ ಸಿಗುವ ಬದಲು ಅನ್ಯಾಯವಾಗಿದೆ. ತಿದ್ದುಪಡಿ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಇದರಿಂದ ಸಚಿವರು ತಬ್ಬಿಬ್ಬಾದರೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಂತರ ಕಾರ್ಮಿಕರ ಮುಖಂಡರು ಪರಿಸ್ಥಿತಿ ತಿಳಿಗೊಳಿಸಿದರು.

ಇದು ಇಂದು ಮಧ್ಯಾಹ್ನ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ಘಟನೆ. ಸಿಐಟಿಯು ನೇತೃತ್ವದಲ್ಲಿ ಸಾವಿರಾರು ಕಾರ್ಮಿಕರು ಹಲವು ಹಕ್ಕೊತ್ತಾಯಗಳ ಈಡೇರಿಕೆಗೆ ಒತ್ತಾಯಿಸಿ ಇಂದಿನಿಂದ ಬೃಹತ್ ಧರಣಿ ಆರಂಭಿಸಿದ್ದಾರೆ. ಈ ಸಮಯದಲ್ಲಿ ಕಾರ್ಮಿಕರ ಮನವಿ ಸ್ವೀಕರಿಸಲು ಬಂದಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್‌ ವಿರುದ್ಧ ಕಾರ್ಮಿಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂತರ ಮಾತನಾಡಿದ ಸಚಿವರು “ಇಡೀ ದೇಶದಲ್ಲಿನ ಯಾವ ರಾಜ್ಯ ಸರ್ಕಾರಗಳಿಗೂ ಸಾಂಕ್ರಾಮಿಕದ ಸಮಯದಲ್ಲಿ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ನ್ಯಾಯ ಕೊಡಲು ಸಾಧ್ಯವಾಗಿಲ್ಲ. ಆದರೆ ಈ ಸಮಯದಲ್ಲಿ ನಾವು ಸಾಧ್ಯವಾದಷ್ಟು ಸೌಹಾರ್ದಯುತವಾಗಿ ಕಾರ್ಮಿಕ ಸಂಘಟನೆಗಳೊಂದಿಗೆ ಮಾತಾಡಿದ್ದೇವೆ. ಕಾರ್ಮಿಕರು ಮತ್ತು ಮಾಲೀಕರ ನಡುವೆ ಸೇತುವೆಯಾಗಿ ಕೆಲಸ ಮಾಡಿದ್ದೇವೆ ಎಂದರು.

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಗಳ ಬಗ್ಗೆ ಕಾರ್ಮಿಕರಲ್ಲಿ ಅಸಮಾಧಾನ ಇರುವುದನ್ನು ಗಮನಿಸಿದ್ದೇವೆ. ಇದನ್ನು ಮುಖ್ಯಮಂತ್ರಿಗಳು ಜೊತೆ ಕೂತು ಚರ್ಚೆ ಮಾಡುತ್ತೇವೆ. ಕಾರ್ಮಿಕರ ಭಾವನೆಯನ್ನು ಸರ್ಕಾರಕ್ಕೆ ತಲುಪಿಸುತ್ತೇನೆ. ಕಾರ್ಮಿಕರಿಗೆ ಬದುಕುವ ಶಕ್ತಿ ನೀಡುವುದು ನಮ್ಮ ಮೊದಲ ಆದ್ಯತೆಯಾದರೆ, ಕಾರ್ಮಿಕರ ಹಕ್ಕುಗಳನ್ನು ರಕ್ಷಣೆ ಮಾಡುವುದು ಎರಡನೇ ಆದ್ಯತೆಯಾಗಿದೆ ಎಂದರು. ಹಾಗಾಗಿ ಮುಖ್ಯಮಂತ್ರಿಗಳೊಂದಿಗೆ ಶೀಘ್ರದಲ್ಲಿಯೇ ಸಭೆ ಏರ್ಪಡಿಸುವುದಾಗಿ ಭರವಸೆ ನೀಡಿದರು.

ಕಾರ್ಮಿಕರ ಹಕ್ಕೊತ್ತಾಯಗಳು

  • ಕೆಲಸದ ಅವಧಿ ಹೆಚ್ಚಳ, ವಾರದ ಕೆಲಸದ ಮಿತಿಯ ಹೆಚ್ಚಳದಂತಹ ತಿದ್ದುಪಡಿಗಳನ್ನು ಕೈಬಿಡಬೇಕು.
  • 2021-21 ರ ಸಾಲಿನ ತುಟ್ಟಿಭತ್ಯೆ ಮುಂದೂಡಿಕೆ ಆದೇಶ ರದ್ದು ಮಾಡಿ, ಬಾಕಿ ಹಣ ನೀಡಬೇಕು.
  • ಅಂತರರಾಜ್ಯ ವಲಸೆ ಕಾರ್ಮಿಕ (ಉದ್ಯೋಗ ಮತ್ತು ಸೇವಾ ಶರತ್ತುಗಳ) ಕಾಯ್ದೆ-1970 ಅನ್ನು ಜಾರಿಗೊಳಿಸಬೇಕು.
  • ಕೇಂದ್ರ ಸರ್ಕಾರ ರಾಜ್ಯದ ಜಿಎಸ್‌ಟಿ ಪಾಲು ಮತ್ತು ಪ್ರವಾಹ ಪರಿಹಾರವನ್ನು ಕೂಡಲೇ ನೀಡಬೇಕು.
  • ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ಅಗತ್ಯ ಸರಕುಗಳ ಕಾಯ್ದೆ, ವಿದ್ಯುತ್ ಕಾಯ್ದೆಗಳಿಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿ ಸುಗ್ರೀವಾಜ್ಞೆಗಳನ್ನು ವಾಪಸ್ ಪಡೆಯಬೇಕು.
  • ಶಿಕ್ಷಣ, ಆರೋಗ್ಯ, ರೈಲು, ರಸ್ತೆ, ವಿದ್ಯುತ್, ದೂರಸಂಪರ್ಕ, ವಿಮಾ, ಬ್ಯಾಂಕ್ ಮುಂತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಬೇಕು.
  • ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಎಲ್ಲಾ ಕುಟುಂಬಗಳಿಗೆ ಮಾಸಿಕ 7,500 ರೂಗಳ ನೆರವನ್ನು ಆರು ತಿಂಗಳ ಕಾಲ ನೀಡಬೇಕು. ಎಲ್ಲಾ ಕುಟುಂಬಗಳ ಪ್ರತಿ ಸದಸ್ಯರಿಗೆ ಮಾಸಿಕ ತಲಾ 10 ಕೆ.ಜಿ. ಆಹಾರ ಪದಾರ್ಥಗಳನ್ನು ನೀಡಬೇಕು.
  • ನಗರ ಹಾಗೂ ಗ್ರಾಮೀಣ ಪ್ರದೇಶದ ಅಗತ್ಯವಿರುವ ಎಲ್ಲರಿಗೂ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷಕ್ಕೆ 200 ದಿನಗಳ ಉದ್ಯೋಗ ನೀಡಬೇಕು. ಕನಿಷ್ಟ ಕೂಲಿ 600 ರೂಗಳಿಗೆ ಹೆಚ್ಚಿಸಬೇಕು.
  • ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ನಿರುದ್ಯೋಗ ಭತ್ಯೆ ಮಾಸಿಕ 10,000 ರೂಗಳನ್ನು ನೀಡಬೇಕು.
  • ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಬೇಕು. ಜಿಡಿಪಿಯ 3 ಶೇಕಡ ಹಣವನ್ನು ಆರೋಗ್ಯಕ್ಕೆ ಒದಗಿಸಬೇಕು.
  • ಆನ್ ಲೈನ್ ಶಿಕ್ಷಣ ನೆಪದ ಲೂಟಿ ತಡೆಯಬೇಕು. ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಉದ್ಯೋಗ ಮತ್ತು ವೇತನ ಸಂರಕ್ಷಿಸಬೇಕು.
  • ಕೇಂದ್ರೀಕರಣ, ವಾಣಿಜ್ಯೀಕರಣ ಮತ್ತು ಕೋಮುವಾದೀಕರಣಕ್ಕೆ ಎಡೆ ಮಾಡುವ ನೂತನ ಶಿಕ್ಷಣ ನೀತಿ-2020 (NEP) ರದ್ದುಪಡಿಸಬೇಕು. ಸಾರ್ವತ್ರಿಕ ಶಿಕ್ಷಣ ಬಲಪಡಿಸಬೇಕು. ಐಸಿಡಿಎಸ್ ಯೋಜನೆ ಬಲಪಡಿಸಬೇಕು.
  • ರೂ.21,000/- ಸಮಾನ ಕನಿಷ್ಟ ವೇತನ ನಿಗದಿ ಮಾಡಬೇಕು. ಕಾರ್ಮಿಕ ಸಂಘದ ಕಡ್ಡಾಯ ಮಾನ್ಯತೆಯ ಶಾಸನ ರೂಪಿಸಬೇಕು, ಗುತ್ತಿಗೆ ಕಾರ್ಮಿಕರ ಖಾಯಂಗೆ ಅಸ್ಸಾಂ ಮತ್ತು ತಮಿಳುನಾಡು ಮಾದರಿಯಲ್ಲಿ ಶಾಸನ ರೂಪಿಸಬೇಕು.

ಇದನ್ನೂ ಓದಿ: ಭಾರತ ಮೋದಿ, ಯಡಿಯೂರಪ್ಪನವರದಲ್ಲ, ಭಾರತವನ್ನು ಕಟ್ಟಿದವರು ನಾವು – ಕೆ.ಎನ್ ಉಮೇಶ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...