Homeಕರ್ನಾಟಕಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಒಳ್ಳೆಯದಾಗಿದೆ: ಕಾರ್ಮಿಕ ಸಚಿವರ ಹೇಳಿಕೆಗೆ ತೀವ್ರ ವಿರೋಧ

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಒಳ್ಳೆಯದಾಗಿದೆ: ಕಾರ್ಮಿಕ ಸಚಿವರ ಹೇಳಿಕೆಗೆ ತೀವ್ರ ವಿರೋಧ

ಇಡೀ ದೇಶದಲ್ಲಿನ ಯಾವ ರಾಜ್ಯ ಸರ್ಕಾರಗಳಿಗೂ ಸಾಂಕ್ರಾಮಿಕದ ಸಮಯದಲ್ಲಿ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ನ್ಯಾಯ ಕೊಡಲು ಸಾಧ್ಯವಾಗಿಲ್ಲ - ಶಿವರಾಮ್ ಹೆಬ್ಬಾರ್

- Advertisement -
- Advertisement -

“ಕಳೆದ ಆರೇಳು ತಿಂಗಳಿನಿಂದ ಕಾರ್ಮಿಕರು ಸಾಕಷ್ಟು ಕಷ್ಟ ಅನುಭವಿಸಿದರು. ಎಷ್ಟೋ ಕಾರ್ಮಿಕರು ಬದುಕುವ ಹಕ್ಕು ಹಾಗೂ ಶಕ್ತಿಯನ್ನು ಕಳೆದುಕೊಂಡಿದ್ದನ್ನು ನಾವು ಗಮನಿಸಿದ್ದೇವೆ. ಕಾರ್ಮಿಕ ಇಲಾಖೆ ಇರುವುದು ಕಾರ್ಮಿಕರ ರಕ್ಷಣೆಗಾಗಿ. ಆದರೆ ಈ ಆರೇಳು ತಿಂಗಳಿನ ಸಂದರ್ಭದ್ಲಿ ಕಾರ್ಮಿಕರಿಗೆ ನೂರಕ್ಕೆ ನೂರರಷ್ಟು ನ್ಯಾಯ ಕೊಡಲು ಸಾಧ್ಯವಾಗಿಲ್ಲ ಇದು ನಮಗೆ ಗೊತ್ತಿದೆ. ಆದರೂ ಅನೇಕ ಕಾರ್ಮಿಕ ಕಾನೂನು ತಿದ್ದುಪಡಿಗಳಿಂದ ಕಾರ್ಮಿಕರಿಗೆ ನ್ಯಾಯವು ಸಿಕ್ಕಿದೆ. ಅನೇಕ ಸಂದರ್ಭಗಳಲ್ಲಿ ನ್ಯಾಯ ಸಿಕ್ಕಿಲ್ಲ” ಎಂದು ರಾಜ್ಯ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಕಾರ್ಮಿಕರು ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಿಂದ ಕಾರ್ಮಿಕರಿಗೆ ನ್ಯಾಯ ಸಿಗುವ ಬದಲು ಅನ್ಯಾಯವಾಗಿದೆ. ತಿದ್ದುಪಡಿ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು. ಇದರಿಂದ ಸಚಿವರು ತಬ್ಬಿಬ್ಬಾದರೆ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಂತರ ಕಾರ್ಮಿಕರ ಮುಖಂಡರು ಪರಿಸ್ಥಿತಿ ತಿಳಿಗೊಳಿಸಿದರು.

ಇದು ಇಂದು ಮಧ್ಯಾಹ್ನ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ಘಟನೆ. ಸಿಐಟಿಯು ನೇತೃತ್ವದಲ್ಲಿ ಸಾವಿರಾರು ಕಾರ್ಮಿಕರು ಹಲವು ಹಕ್ಕೊತ್ತಾಯಗಳ ಈಡೇರಿಕೆಗೆ ಒತ್ತಾಯಿಸಿ ಇಂದಿನಿಂದ ಬೃಹತ್ ಧರಣಿ ಆರಂಭಿಸಿದ್ದಾರೆ. ಈ ಸಮಯದಲ್ಲಿ ಕಾರ್ಮಿಕರ ಮನವಿ ಸ್ವೀಕರಿಸಲು ಬಂದಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್‌ ವಿರುದ್ಧ ಕಾರ್ಮಿಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಂತರ ಮಾತನಾಡಿದ ಸಚಿವರು “ಇಡೀ ದೇಶದಲ್ಲಿನ ಯಾವ ರಾಜ್ಯ ಸರ್ಕಾರಗಳಿಗೂ ಸಾಂಕ್ರಾಮಿಕದ ಸಮಯದಲ್ಲಿ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ನ್ಯಾಯ ಕೊಡಲು ಸಾಧ್ಯವಾಗಿಲ್ಲ. ಆದರೆ ಈ ಸಮಯದಲ್ಲಿ ನಾವು ಸಾಧ್ಯವಾದಷ್ಟು ಸೌಹಾರ್ದಯುತವಾಗಿ ಕಾರ್ಮಿಕ ಸಂಘಟನೆಗಳೊಂದಿಗೆ ಮಾತಾಡಿದ್ದೇವೆ. ಕಾರ್ಮಿಕರು ಮತ್ತು ಮಾಲೀಕರ ನಡುವೆ ಸೇತುವೆಯಾಗಿ ಕೆಲಸ ಮಾಡಿದ್ದೇವೆ ಎಂದರು.

ಕಾರ್ಮಿಕ ಕಾಯ್ದೆಗಳ ತಿದ್ದುಪಡಿಗಳ ಬಗ್ಗೆ ಕಾರ್ಮಿಕರಲ್ಲಿ ಅಸಮಾಧಾನ ಇರುವುದನ್ನು ಗಮನಿಸಿದ್ದೇವೆ. ಇದನ್ನು ಮುಖ್ಯಮಂತ್ರಿಗಳು ಜೊತೆ ಕೂತು ಚರ್ಚೆ ಮಾಡುತ್ತೇವೆ. ಕಾರ್ಮಿಕರ ಭಾವನೆಯನ್ನು ಸರ್ಕಾರಕ್ಕೆ ತಲುಪಿಸುತ್ತೇನೆ. ಕಾರ್ಮಿಕರಿಗೆ ಬದುಕುವ ಶಕ್ತಿ ನೀಡುವುದು ನಮ್ಮ ಮೊದಲ ಆದ್ಯತೆಯಾದರೆ, ಕಾರ್ಮಿಕರ ಹಕ್ಕುಗಳನ್ನು ರಕ್ಷಣೆ ಮಾಡುವುದು ಎರಡನೇ ಆದ್ಯತೆಯಾಗಿದೆ ಎಂದರು. ಹಾಗಾಗಿ ಮುಖ್ಯಮಂತ್ರಿಗಳೊಂದಿಗೆ ಶೀಘ್ರದಲ್ಲಿಯೇ ಸಭೆ ಏರ್ಪಡಿಸುವುದಾಗಿ ಭರವಸೆ ನೀಡಿದರು.

ಕಾರ್ಮಿಕರ ಹಕ್ಕೊತ್ತಾಯಗಳು

  • ಕೆಲಸದ ಅವಧಿ ಹೆಚ್ಚಳ, ವಾರದ ಕೆಲಸದ ಮಿತಿಯ ಹೆಚ್ಚಳದಂತಹ ತಿದ್ದುಪಡಿಗಳನ್ನು ಕೈಬಿಡಬೇಕು.
  • 2021-21 ರ ಸಾಲಿನ ತುಟ್ಟಿಭತ್ಯೆ ಮುಂದೂಡಿಕೆ ಆದೇಶ ರದ್ದು ಮಾಡಿ, ಬಾಕಿ ಹಣ ನೀಡಬೇಕು.
  • ಅಂತರರಾಜ್ಯ ವಲಸೆ ಕಾರ್ಮಿಕ (ಉದ್ಯೋಗ ಮತ್ತು ಸೇವಾ ಶರತ್ತುಗಳ) ಕಾಯ್ದೆ-1970 ಅನ್ನು ಜಾರಿಗೊಳಿಸಬೇಕು.
  • ಕೇಂದ್ರ ಸರ್ಕಾರ ರಾಜ್ಯದ ಜಿಎಸ್‌ಟಿ ಪಾಲು ಮತ್ತು ಪ್ರವಾಹ ಪರಿಹಾರವನ್ನು ಕೂಡಲೇ ನೀಡಬೇಕು.
  • ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ, ಅಗತ್ಯ ಸರಕುಗಳ ಕಾಯ್ದೆ, ವಿದ್ಯುತ್ ಕಾಯ್ದೆಗಳಿಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿ ಸುಗ್ರೀವಾಜ್ಞೆಗಳನ್ನು ವಾಪಸ್ ಪಡೆಯಬೇಕು.
  • ಶಿಕ್ಷಣ, ಆರೋಗ್ಯ, ರೈಲು, ರಸ್ತೆ, ವಿದ್ಯುತ್, ದೂರಸಂಪರ್ಕ, ವಿಮಾ, ಬ್ಯಾಂಕ್ ಮುಂತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಬೇಕು.
  • ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಎಲ್ಲಾ ಕುಟುಂಬಗಳಿಗೆ ಮಾಸಿಕ 7,500 ರೂಗಳ ನೆರವನ್ನು ಆರು ತಿಂಗಳ ಕಾಲ ನೀಡಬೇಕು. ಎಲ್ಲಾ ಕುಟುಂಬಗಳ ಪ್ರತಿ ಸದಸ್ಯರಿಗೆ ಮಾಸಿಕ ತಲಾ 10 ಕೆ.ಜಿ. ಆಹಾರ ಪದಾರ್ಥಗಳನ್ನು ನೀಡಬೇಕು.
  • ನಗರ ಹಾಗೂ ಗ್ರಾಮೀಣ ಪ್ರದೇಶದ ಅಗತ್ಯವಿರುವ ಎಲ್ಲರಿಗೂ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷಕ್ಕೆ 200 ದಿನಗಳ ಉದ್ಯೋಗ ನೀಡಬೇಕು. ಕನಿಷ್ಟ ಕೂಲಿ 600 ರೂಗಳಿಗೆ ಹೆಚ್ಚಿಸಬೇಕು.
  • ವಿದ್ಯಾವಂತ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ನಿರುದ್ಯೋಗ ಭತ್ಯೆ ಮಾಸಿಕ 10,000 ರೂಗಳನ್ನು ನೀಡಬೇಕು.
  • ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಬೇಕು. ಜಿಡಿಪಿಯ 3 ಶೇಕಡ ಹಣವನ್ನು ಆರೋಗ್ಯಕ್ಕೆ ಒದಗಿಸಬೇಕು.
  • ಆನ್ ಲೈನ್ ಶಿಕ್ಷಣ ನೆಪದ ಲೂಟಿ ತಡೆಯಬೇಕು. ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಉದ್ಯೋಗ ಮತ್ತು ವೇತನ ಸಂರಕ್ಷಿಸಬೇಕು.
  • ಕೇಂದ್ರೀಕರಣ, ವಾಣಿಜ್ಯೀಕರಣ ಮತ್ತು ಕೋಮುವಾದೀಕರಣಕ್ಕೆ ಎಡೆ ಮಾಡುವ ನೂತನ ಶಿಕ್ಷಣ ನೀತಿ-2020 (NEP) ರದ್ದುಪಡಿಸಬೇಕು. ಸಾರ್ವತ್ರಿಕ ಶಿಕ್ಷಣ ಬಲಪಡಿಸಬೇಕು. ಐಸಿಡಿಎಸ್ ಯೋಜನೆ ಬಲಪಡಿಸಬೇಕು.
  • ರೂ.21,000/- ಸಮಾನ ಕನಿಷ್ಟ ವೇತನ ನಿಗದಿ ಮಾಡಬೇಕು. ಕಾರ್ಮಿಕ ಸಂಘದ ಕಡ್ಡಾಯ ಮಾನ್ಯತೆಯ ಶಾಸನ ರೂಪಿಸಬೇಕು, ಗುತ್ತಿಗೆ ಕಾರ್ಮಿಕರ ಖಾಯಂಗೆ ಅಸ್ಸಾಂ ಮತ್ತು ತಮಿಳುನಾಡು ಮಾದರಿಯಲ್ಲಿ ಶಾಸನ ರೂಪಿಸಬೇಕು.

ಇದನ್ನೂ ಓದಿ: ಭಾರತ ಮೋದಿ, ಯಡಿಯೂರಪ್ಪನವರದಲ್ಲ, ಭಾರತವನ್ನು ಕಟ್ಟಿದವರು ನಾವು – ಕೆ.ಎನ್ ಉಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....