Homeಕರ್ನಾಟಕಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

ಬೆಂಗಳೂರು: ಕಾರ್ಮಿಕ ಸಂಘಟನೆ ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನ ಉದ್ಘಾಟನೆ

ಜನವರಿ 18ರ ಬುಧವಾರದಿಂದ 22ರ ಭಾನುವಾರದ ವರೆಗೆ ಒಟ್ಟು ಐದು ದಿನಗಳ ಕಾಲ ಬೆಂಗಳೂರಿನಲ್ಲಿ ಸಮ್ಮೇಳನ ನಡೆಯಲಿದೆ

- Advertisement -
- Advertisement -

ದೇಶದ ಪ್ರಮುಖ ಕಾರ್ಮಿಕ ಸಂಘಟನೆಯಾದ ‘ಸೆಂಟರ್‌ ಆಫ್‌‌ ಇಂಡಿಯನ್ ಟ್ರೇಡ್ ಯುನಿಯನ್ಸ್‌‌’(ಸಿಐಟಿಯು)ನ 17ನೇ ಅಖಿಲ ಭಾರತ ಸಮ್ಮೇಳನದ ಉದ್ಘಾಟನೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ನಡೆಯಿತು. ಸಮ್ಮೇಳನವು ಜನವರಿ 18ರ ಬುಧವಾರದಿಂದ 22ರ ಭಾನುವಾರದ ವರೆಗೆ ಒಟ್ಟು ಐದು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ.

ಸಮ್ಮೇಳನದ ಧ್ವಜಾರೋಹಣ ನೆರವೇರಿಸಿದ ಸಿಐಟಿಯು ಅಖಿಲ ಭಾರತ ಅಧ್ಯಕ್ಷೆ ಕೆ.ಹೇಮಲತಾ, ಕೋಮುವಾದಿ ಶಕ್ತಿಗಳ ವಿರುದ್ಧ ವರ್ಗ ಹೋರಾಟವನ್ನು ಒಗ್ಗಟ್ಟಿನಿಂದ ನಡೆಸುವಂತೆ ಕರೆ ನೀಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅರಮನೆ ಮೈದಾನದಲ್ಲಿ ಬುಧವಾರ ಬೆಳಗ್ಗೆ 9 ಗಂಟೆಗೆ ಆರಂಭವಾದ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕೆಜಿಎಫ್ ಹುತಾತ್ಮರ ಸ್ಮಾರಕದಿಂದ ತಂದ ಜ್ಯೋತಿಯನ್ನು ಸಮ್ಮೇಳನದ ಮೈದಾನದಲ್ಲಿ ಬೆಳಗಿಸಲಾಯಿತು. ನಂತರ ರೆಡ್ ಆರ್ಮಿ ಸದಸ್ಯರಿಂದ ಗೌರವ ವಂದನೆ ಮತ್ತು ನಂತರ ಪುಷ್ಪ ನಮನ ಕಾರ್ಯಕ್ರಮ ನಡೆಯಿತು.

‘ರಂಜನಾ ನೀರುಲಾ – ರಘುನಾಥ್ ಸಿಂಗ್’ ವೇದಿಕೆಯನ್ನು ಪ್ರತಿನಿಧಿಗಳ ಸಭೆಯ ಉದ್ಘಾಟನೆ ಮಾಡಿದ ಸಿಐಟಿಯು ಪ್ರಧಾನ ಕಾರ್ಯದರ್ಶಿ ತಪನ್ ಸೇನ್‌ ಮುಖ್ಯ ಭಾಷಣ ಮಾಡಿದರು. ವಿಶ್ವ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪಂಬಿಸ್ ಕಿರಿಟ್ರಿಸ್ ಮತ್ತು ಸಿಐಟಿಯು ಮುಖಂಡರು ಅಭಿನಂದನಾ ಭಾಷಣ ಮಾಡಿದರು.

ಹೈಟೆಕ್ ನಗರವಾದ ಬೆಂಗಳೂರಿನಲ್ಲಿ ನಡೆಯುತ್ತಿರುವ ಸಮ್ಮೇಳನವು ಆಧುನಿಕ ಕಾಲದ ಸವಾಲುಗಳನ್ನು ಮುಂದಕ್ಕೆ ಹೇಗೆ ಎದುರಿಸುತ್ತದೆ ಎಂಬುದರ ಕುರಿತು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಜೊತೆಗೆ ಕಾರ್ಮಿಕ-ರೈತ ಐಕ್ಯ ಪ್ರತಿಭಟನೆಗಳ ಯಶಸ್ಸಿನಿಂದ ಪಡೆದ ಪಾಠಗಳನ್ನು ಅಳವಡಿಸಿಕೊಂಡು, ಐಕ್ಯ ಹೋರಾಟವನ್ನು ಬಲಪಡಿಸುವ ಮಾರ್ಗಗಳ ಬಗ್ಗೆ ಸಮ್ಮೇಳನವು ಚರ್ಚಿಸಲಿದೆ.

ಮೋದಿ ಸರಕಾರದ ನವ ಉದಾರವಾದಿ ನೀತಿಗಳ ವಿರುದ್ಧ ಐಕ್ಯ ಹೋರಾಟದ ಕ್ರಮದ ಬಗ್ಗೆ ಕೂಡಾ ಸಮ್ಮೇಳನವೂ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ.

ಸಮ್ಮೇಳನದಲ್ಲಿ ದೇಶಾದ್ಯಂತ 2000 ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಐದು ದಿನಗಳ ಸಮ್ಮೇಳನವು ಜನವರಿ 22ರ ಭಾನುವಾರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಭೆಯೊಂದಿಗೆ ಮುಕ್ತಾಯಗೊಳ್ಳಲಿದೆ.

ಇದನ್ನೂ ಓದಿ: ಕಾರ್ಮಿಕರಿಗೆ ಕೂಲಿ | ಕೇರಳ, ಜಮ್ಮುಕಾಶ್ಮೀರ ಟಾಪ್‌‌; ಗುಜರಾತ್‌, ಮಧ್ಯಪ್ರದೇಶ ಅತ್ಯಂತ ಕಡಿಮೆ – RBI ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...