Homeಚಳವಳಿಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

- Advertisement -
- Advertisement -

ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಪೋರ್ಟರ್, ಉಬರ್ ರೀತಿಯ ‘ಗಿಗ್‌ ಕಂಪೆನಿ’ಗಳ ವ್ಯವಹಾರ ವರ್ಷ ಕಳೆದಂತೆ ಹೆಚ್ಚುತ್ತಿದ್ದರೂ, ತಮ್ಮ ಕೆಲಸಗಾರರಿಗೆ ಸರಿಯಾದ ಸವಲತ್ತುಗಳನ್ನು ನೀಡುತ್ತಿಲ್ಲ ಎಂದು ಫೇರ್‌ವರ್ಕ್ ಇಂಡಿಯಾ ವರದಿ 2024ರ ವರದಿ ಹೇಳಿದೆ. ಇಂತಹ ಕಂಪೆನಿಗಳಲ್ಲಿ ಅಸಮಾನತೆಗಳು ಅಸ್ತಿತ್ವದಲ್ಲಿದ್ದು, ಹಲವಾರು ಕಂಪನಿಗಳು ನ್ಯಾಯಯುತ ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿವೆ ಎಂದು ಅಧ್ಯಯನ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಬೆಂಗಳೂರು (ಐಐಐ ಟಿಬಿ)ನ ಮಾಹಿತಿ ತಂತ್ರಜ್ಞಾನ ಮತ್ತು ಸಾರ್ವಜನಿಕ ನೀತಿ ಕೇಂದ್ರ (ಸಿಐಟಿಎಪಿಪಿ) ಈ ವರದಿ ಬಿಡುಗಡೆ ಮಾಡಿದ್ದು, ವರದಿಯು 11 ಗಿಗ್ ಕಂಪೆನಿಗಳನ್ನು ಮೌಲ್ಯಮಾಪನ ಮಾಡಿದೆ.

ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಪೋರ್ಟರ್, ಉಬರ್ ಮತ್ತು ಇತರ ಪ್ರಮುಖ ಗಿಗ್ ಕಂಪೆನಿಗಳು ನ್ಯಾಯಯುತ ವೇತನ, ಒಪ್ಪಂದದ ಪಾರದರ್ಶಕತೆ ಮತ್ತು ಕಾರ್ಮಿಕರ ಪ್ರಾತಿನಿಧ್ಯಕ್ಕಾಗಿ ಮೂಲಭೂತ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ ಎಂದು ವರದಿ ಉಲ್ಲೇಖಿಸಿದೆ.

ಫೇರ್‌ವರ್ಕ್ ಇಂಡಿಯಾ ತಂಡವು, ‘ನ್ಯಾಯಯುತ ವೇತನ, ನ್ಯಾಯೋಚಿತ ಪರಿಸ್ಥಿತಿಗಳು, ನ್ಯಾಯಯುತ ಒಪ್ಪಂದಗಳು, ನ್ಯಾಯಯುತ ನಿರ್ವಹಣೆ ಮತ್ತು ನ್ಯಾಯಯುತ ಪ್ರಾತಿನಿಧ್ಯ’ ಎಂಬ ಐದು ತತ್ವಗಳ ಮೇಲೆ ಗಿಗ್ ಕಂಪೆನಿಗಳನ್ನು ಮೌಲ್ಯಮಾಪನ ಮಾಡಿದೆ. ಅಧ್ಯಯನವು ಗಿಗ್‌ ಕಂಪೆನಿಗಳಲ್ಲಿ ಬದಲಾಗುತ್ತಿರುವ ಕೆಲಸದ ಸ್ವರೂಪವನ್ನು ಪರಿಶೀಲಿಸಿದೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರಿಗೆ ಬೆಂಬಲಿಸಿ ರಾಜೀನಾಮೆ ಕೊಟ್ಟ 45ಕ್ಕೂ ಹೆಚ್ಚು ಹಿರಿಯ ವೈದ್ಯರು

ಅಮೆಜಾನ್ ಫ್ಲೆಕ್ಸ್‌, 10 ರಲ್ಲಿ 2 ಅಂಕಗಳನ್ನು ಗಳಿಸಿದೆ ಎಂದು ಫೇರ್‌ವರ್ಕ್‌ ಇಂಡಿಯಾ ಅಧ್ಯಯನ ಹೇಳಿದೆ. ಅಮೆಜಾನ್ ತನ್ನ ಕೆಲಸಗಾರರಿಗೆ ಕೆಲವು ಸುರಕ್ಷತಾ ಸಾಧನಗಳು ಮತ್ತು ತರಬೇತಿಯನ್ನು ಒದಗಿಸುತ್ತೆಯಾದರೂ, ನ್ಯಾಯಯುತ ವೇತನವನ್ನು ಖಚಿತಪಡಿಸಿಕೊಳ್ಳಲು ವಿಫಲವಾಗಿದೆ ಎಂದು ಅಧ್ಯಯನ ಹೇಳಿದೆ. ಈ ಗಿಗ್‌ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಗಳಿಕೆಯು ಸ್ಥಳೀಯ ಕನಿಷ್ಠ ವೇತನ ಮಾನದಂಡಗಳನ್ನು ಇದು ಪೂರೈಸುತ್ತಿಲ್ಲ ಎಂದು ಅಧ್ಯಯನ ಹೇಳಿದೆ.

ನ್ಯಾಯಯುತ ಒಪ್ಪಂದಗಳು, ನ್ಯಾಯೋಚಿತ ನಿರ್ವಹಣೆ ಮತ್ತು ನ್ಯಾಯಯುತ ಪ್ರಾತಿನಿಧ್ಯದ ವಿಷಯದಲ್ಲಿ ಕೂಡಾ ಅಮೇಜಾನ್ ಫ್ಲೆಕ್ಸ್‌ ಅಗತ್ಯ ಮಿತಿಗಳನ್ನು ಪೂರೈಸುತ್ತಿಲ್ಲ ಎಂದು ಅಧ್ಯಯನ ಹೇಳಿದೆ.

ಭಾರತದ ಅತಿದೊಡ್ಡ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದಾದ ಫ್ಲಿಪ್‌ಕಾರ್ಟ್ ಇನ್ನೂ ಕೆಟ್ಟದಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿ ಹೇಳಿದೆ. ಫ್ಲಿಪ್‌ಕಾರ್ಟ್‌ 10 ರಲ್ಲಿ ಕೇವಲ 1 ಅಂಕವನ್ನು ಗಳಿಸಿದ್ದು, ನ್ಯಾಯಯುತ ವೇತನದ ಮಾನದಂಡಗಳನ್ನು ಕಂಪೆನಿ ಪೂರೈಸಲಿಲ್ಲ ಎಂದು ವರದಿ ಹೇಳಿದೆ. ಅಲ್ಲದೆ, ಫ್ಲಿಪ್‌ಕಾರ್ಟ್‌ನ ಒಪ್ಪಂದದ ನಿಯಮಗಳು ಅಸ್ಪಷ್ಟವಾಗಿದ್ದು, ಕಾರ್ಮಿಕರಿಗೆ ಅದು ಸಿಗುವುದಿಲ್ಲ ಎಂದು ವರದಿ ಟೀಕಿಸಿದೆ. ಫ್ಲಿಪ್‌ಕಾರ್ಟ್‌ ತನ್ನ ನಿರ್ವಹಣಾ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆಯನ್ನು ಹೊಂದಿಲ್ಲ ಮತ್ತು ಕಾರ್ಮಿಕರ ಪ್ರಾತಿನಿಧ್ಯವನ್ನು ಗುರುತಿಸಲು ಯಾವುದೇ ಪ್ರಯತ್ನಗಳನ್ನು ಮಾಡಲಿಲ್ಲ ಎಂದು ವರದಿ ಹೇಳಿದೆ.

ಇದನ್ನೂಓದಿ: ಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಪೋರ್ಟರ್ ಮತ್ತು ಉಬರ್ ಗಿಗ್‌ ಕಂಪೆನಿಗಳು ಫೇರ್‌ವರ್ಕ್‌ನ ಎಲ್ಲಾ ಐದು ತತ್ವಗಳಲ್ಲಿ ಶೂನ್ಯ ಅಂಕ ಗಳಿಸಿವೆ. ಈ ಎರಡು ಗಿಗ್ ಕಂಪೆನಿಗಳು ಮೂಲಭೂತ ಕಾರ್ಮಿಕ ರಕ್ಷಣೆಗಳ ಪುರಾವೆಗಳನ್ನು ಒದಗಿಸಲು ವಿಫಲವಾಗಿವೆ ಎಂದು ಅಧ್ಯಯನ ಹೇಳಿದೆ. ಎರಡೂ ಪ್ಲಾಟ್‌ಫಾರ್ಮ್‌ಗಳಲ್ಲಿನ ಕೆಲಸಗಾರರು ಅಸುರಕ್ಷಿತ ಕೆಲಸದ ಪರಿಸ್ಥಿತಿಗಳಿಗೆ ಒಡ್ಡಿಕೊಳ್ಳುತ್ತಾರೆ ಮತ್ತು ಯಾವುದೆ ಅಪಾಯ ತಗ್ಗಿಸುವ ಕ್ರಮಗಳಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಜೊತೆಗೆ ಈ ಎರಡು ಸಂಸ್ಥೆಗಳ ಒಪ್ಪಂದಗಳು ಜಟಿಲವಾಗಿದ್ದು, ಯಾವುದೇ ಮನವಿಯ ವಿಧಾನವಿಲ್ಲದೆ ಹಠಾತ್ ನಿಷ್ಕ್ರಿಯಗೊಳಿಸುವಿಕೆ ಅಥವಾ ಪಾವತಿ ಸಮಸ್ಯೆಗಳಿಂದ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗುತ್ತಾರೆ ಎಂದು ವರದಿ ಹೇಳಿದೆ.

ಆದಾಗ್ಯೂ, ಬಿಗ್‌ಬಾಸ್ಕೆಟ್ ಮತ್ತು ಅರ್ಬನ್ ಕಂಪನಿಗಳು ಮಾತ್ರ ಕನಿಷ್ಠ ವೇತನ ನೀತಿಯನ್ನು ಅಳವಡಿಸಿಕೊಂಡಿದೆ. ಜೊತೆಗೆ ಬಿಗ್‌ಬಾಸ್ಕೆಟ್, ಸ್ವಿಗ್ಗಿ, ಅರ್ಬನ್ ಕಂಪನಿ, ಝೆಪ್ಟೋ ಮತ್ತು ಝೊಮಾಟೊ ಕಂಪೆನಿಗಳು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಅಪಘಾತ ವಿಮಾ ರಕ್ಷಣೆಯನ್ನು ಒದಗಿಸುತ್ತಿದೆ. ಅಲ್ಲದೆ, ಅಪಘಾತಗಳನ್ನು ಹೊರತುಪಡಿಸಿ ವೈದ್ಯಕೀಯ ಕಾರಣಗಳಿಂದ ಕೆಲಸ ಮಾಡಲು ಸಾಧ್ಯವಾಗದ ಸಂದರ್ಭಗಳಲ್ಲಿ ಆದಾಯ ನಷ್ಟಕ್ಕೆ ವಿತ್ತೀಯ ಪರಿಹಾರ ಸೇರಿದಂತೆ ಇನ್ನಿತರ ಕೆಲವು ಅನುಕೂಲಗಳನ್ನು ಸಂಸ್ಥೆ ಮಾಡಿವೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...