Homeಚಳವಳಿಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

- Advertisement -
- Advertisement -

ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಪೋರ್ಟರ್, ಉಬರ್ ರೀತಿಯ ‘ಗಿಗ್‌ ಕಂಪೆನಿ’ಗಳ ವ್ಯವಹಾರ ವರ್ಷ ಕಳೆದಂತೆ ಹೆಚ್ಚುತ್ತಿದ್ದರೂ, ತಮ್ಮ ಕೆಲಸಗಾರರಿಗೆ ಸರಿಯಾದ ಸವಲತ್ತುಗಳನ್ನು ನೀಡುತ್ತಿಲ್ಲ ಎಂದು ಫೇರ್‌ವರ್ಕ್ ಇಂಡಿಯಾ ವರದಿ 2024ರ ವರದಿ ಹೇಳಿದೆ. ಇಂತಹ ಕಂಪೆನಿಗಳಲ್ಲಿ ಅಸಮಾನತೆಗಳು ಅಸ್ತಿತ್ವದಲ್ಲಿದ್ದು, ಹಲವಾರು ಕಂಪನಿಗಳು ನ್ಯಾಯಯುತ ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿವೆ ಎಂದು ಅಧ್ಯಯನ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಬೆಂಗಳೂರು (ಐಐಐ ಟಿಬಿ)ನ ಮಾಹಿತಿ ತಂತ್ರಜ್ಞಾನ ಮತ್ತು ಸಾರ್ವಜನಿಕ ನೀತಿ ಕೇಂದ್ರ (ಸಿಐಟಿಎಪಿಪಿ) ಈ ವರದಿ ಬಿಡುಗಡೆ ಮಾಡಿದ್ದು, ವರದಿಯು 11 ಗಿಗ್ ಕಂಪೆನಿಗಳನ್ನು ಮೌಲ್ಯಮಾಪನ ಮಾಡಿದೆ.

ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಪೋರ್ಟರ್, ಉಬರ್ ಮತ್ತು ಇತರ ಪ್ರಮುಖ ಗಿಗ್ ಕಂಪೆನಿಗಳು ನ್ಯಾಯಯುತ ವೇತನ, ಒಪ್ಪಂದದ ಪಾರದರ್ಶಕತೆ ಮತ್ತು ಕಾರ್ಮಿಕರ ಪ್ರಾತಿನಿಧ್ಯಕ್ಕಾಗಿ ಮೂಲಭೂತ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ ಎಂದು ವರದಿ ಉಲ್ಲೇಖಿಸಿದೆ.

ಫೇರ್‌ವರ್ಕ್ ಇಂಡಿಯಾ ತಂಡವು, ‘ನ್ಯಾಯಯುತ ವೇತನ, ನ್ಯಾಯೋಚಿತ ಪರಿಸ್ಥಿತಿಗಳು, ನ್ಯಾಯಯುತ ಒಪ್ಪಂದಗಳು, ನ್ಯಾಯಯುತ ನಿರ್ವಹಣೆ ಮತ್ತು ನ್ಯಾಯಯುತ ಪ್ರಾತಿನಿಧ್ಯ’ ಎಂಬ ಐದು ತತ್ವಗಳ ಮೇಲೆ ಗಿಗ್ ಕಂಪೆನಿಗಳನ್ನು ಮೌಲ್ಯಮಾಪನ ಮಾಡಿದೆ. ಅಧ್ಯಯನವು ಗಿಗ್‌ ಕಂಪೆನಿಗಳಲ್ಲಿ ಬದಲಾಗುತ್ತಿರುವ ಕೆಲಸದ ಸ್ವರೂಪವನ್ನು ಪರಿಶೀಲಿಸಿದೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರಿಗೆ ಬೆಂಬಲಿಸಿ ರಾಜೀನಾಮೆ ಕೊಟ್ಟ 45ಕ್ಕೂ ಹೆಚ್ಚು ಹಿರಿಯ ವೈದ್ಯರು

ಅಮೆಜಾನ್ ಫ್ಲೆಕ್ಸ್‌, 10 ರಲ್ಲಿ 2 ಅಂಕಗಳನ್ನು ಗಳಿಸಿದೆ ಎಂದು ಫೇರ್‌ವರ್ಕ್‌ ಇಂಡಿಯಾ ಅಧ್ಯಯನ ಹೇಳಿದೆ. ಅಮೆಜಾನ್ ತನ್ನ ಕೆಲಸಗಾರರಿಗೆ ಕೆಲವು ಸುರಕ್ಷತಾ ಸಾಧನಗಳು ಮತ್ತು ತರಬೇತಿಯನ್ನು ಒದಗಿಸುತ್ತೆಯಾದರೂ, ನ್ಯಾಯಯುತ ವೇತನವನ್ನು ಖಚಿತಪಡಿಸಿಕೊಳ್ಳಲು ವಿಫಲವಾಗಿದೆ ಎಂದು ಅಧ್ಯಯನ ಹೇಳಿದೆ. ಈ ಗಿಗ್‌ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಗಳಿಕೆಯು ಸ್ಥಳೀಯ ಕನಿಷ್ಠ ವೇತನ ಮಾನದಂಡಗಳನ್ನು ಇದು ಪೂರೈಸುತ್ತಿಲ್ಲ ಎಂದು ಅಧ್ಯಯನ ಹೇಳಿದೆ.

ನ್ಯಾಯಯುತ ಒಪ್ಪಂದಗಳು, ನ್ಯಾಯೋಚಿತ ನಿರ್ವಹಣೆ ಮತ್ತು ನ್ಯಾಯಯುತ ಪ್ರಾತಿನಿಧ್ಯದ ವಿಷಯದಲ್ಲಿ ಕೂಡಾ ಅಮೇಜಾನ್ ಫ್ಲೆಕ್ಸ್‌ ಅಗತ್ಯ ಮಿತಿಗಳನ್ನು ಪೂರೈಸುತ್ತಿಲ್ಲ ಎಂದು ಅಧ್ಯಯನ ಹೇಳಿದೆ.

ಭಾರತದ ಅತಿದೊಡ್ಡ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದಾದ ಫ್ಲಿಪ್‌ಕಾರ್ಟ್ ಇನ್ನೂ ಕೆಟ್ಟದಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿ ಹೇಳಿದೆ. ಫ್ಲಿಪ್‌ಕಾರ್ಟ್‌ 10 ರಲ್ಲಿ ಕೇವಲ 1 ಅಂಕವನ್ನು ಗಳಿಸಿದ್ದು, ನ್ಯಾಯಯುತ ವೇತನದ ಮಾನದಂಡಗಳನ್ನು ಕಂಪೆನಿ ಪೂರೈಸಲಿಲ್ಲ ಎಂದು ವರದಿ ಹೇಳಿದೆ. ಅಲ್ಲದೆ, ಫ್ಲಿಪ್‌ಕಾರ್ಟ್‌ನ ಒಪ್ಪಂದದ ನಿಯಮಗಳು ಅಸ್ಪಷ್ಟವಾಗಿದ್ದು, ಕಾರ್ಮಿಕರಿಗೆ ಅದು ಸಿಗುವುದಿಲ್ಲ ಎಂದು ವರದಿ ಟೀಕಿಸಿದೆ. ಫ್ಲಿಪ್‌ಕಾರ್ಟ್‌ ತನ್ನ ನಿರ್ವಹಣಾ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆಯನ್ನು ಹೊಂದಿಲ್ಲ ಮತ್ತು ಕಾರ್ಮಿಕರ ಪ್ರಾತಿನಿಧ್ಯವನ್ನು ಗುರುತಿಸಲು ಯಾವುದೇ ಪ್ರಯತ್ನಗಳನ್ನು ಮಾಡಲಿಲ್ಲ ಎಂದು ವರದಿ ಹೇಳಿದೆ.

ಇದನ್ನೂಓದಿ: ಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಪೋರ್ಟರ್ ಮತ್ತು ಉಬರ್ ಗಿಗ್‌ ಕಂಪೆನಿಗಳು ಫೇರ್‌ವರ್ಕ್‌ನ ಎಲ್ಲಾ ಐದು ತತ್ವಗಳಲ್ಲಿ ಶೂನ್ಯ ಅಂಕ ಗಳಿಸಿವೆ. ಈ ಎರಡು ಗಿಗ್ ಕಂಪೆನಿಗಳು ಮೂಲಭೂತ ಕಾರ್ಮಿಕ ರಕ್ಷಣೆಗಳ ಪುರಾವೆಗಳನ್ನು ಒದಗಿಸಲು ವಿಫಲವಾಗಿವೆ ಎಂದು ಅಧ್ಯಯನ ಹೇಳಿದೆ. ಎರಡೂ ಪ್ಲಾಟ್‌ಫಾರ್ಮ್‌ಗಳಲ್ಲಿನ ಕೆಲಸಗಾರರು ಅಸುರಕ್ಷಿತ ಕೆಲಸದ ಪರಿಸ್ಥಿತಿಗಳಿಗೆ ಒಡ್ಡಿಕೊಳ್ಳುತ್ತಾರೆ ಮತ್ತು ಯಾವುದೆ ಅಪಾಯ ತಗ್ಗಿಸುವ ಕ್ರಮಗಳಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಜೊತೆಗೆ ಈ ಎರಡು ಸಂಸ್ಥೆಗಳ ಒಪ್ಪಂದಗಳು ಜಟಿಲವಾಗಿದ್ದು, ಯಾವುದೇ ಮನವಿಯ ವಿಧಾನವಿಲ್ಲದೆ ಹಠಾತ್ ನಿಷ್ಕ್ರಿಯಗೊಳಿಸುವಿಕೆ ಅಥವಾ ಪಾವತಿ ಸಮಸ್ಯೆಗಳಿಂದ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗುತ್ತಾರೆ ಎಂದು ವರದಿ ಹೇಳಿದೆ.

ಆದಾಗ್ಯೂ, ಬಿಗ್‌ಬಾಸ್ಕೆಟ್ ಮತ್ತು ಅರ್ಬನ್ ಕಂಪನಿಗಳು ಮಾತ್ರ ಕನಿಷ್ಠ ವೇತನ ನೀತಿಯನ್ನು ಅಳವಡಿಸಿಕೊಂಡಿದೆ. ಜೊತೆಗೆ ಬಿಗ್‌ಬಾಸ್ಕೆಟ್, ಸ್ವಿಗ್ಗಿ, ಅರ್ಬನ್ ಕಂಪನಿ, ಝೆಪ್ಟೋ ಮತ್ತು ಝೊಮಾಟೊ ಕಂಪೆನಿಗಳು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಅಪಘಾತ ವಿಮಾ ರಕ್ಷಣೆಯನ್ನು ಒದಗಿಸುತ್ತಿದೆ. ಅಲ್ಲದೆ, ಅಪಘಾತಗಳನ್ನು ಹೊರತುಪಡಿಸಿ ವೈದ್ಯಕೀಯ ಕಾರಣಗಳಿಂದ ಕೆಲಸ ಮಾಡಲು ಸಾಧ್ಯವಾಗದ ಸಂದರ್ಭಗಳಲ್ಲಿ ಆದಾಯ ನಷ್ಟಕ್ಕೆ ವಿತ್ತೀಯ ಪರಿಹಾರ ಸೇರಿದಂತೆ ಇನ್ನಿತರ ಕೆಲವು ಅನುಕೂಲಗಳನ್ನು ಸಂಸ್ಥೆ ಮಾಡಿವೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...

ಬುರ್ಖಾ ಧರಿಸದ ಕಾರಣಕ್ಕೆ ಪತ್ನಿ-ಮಕ್ಕಳ ಕೊಲೆ; ಮನೆಯೊಳಗೆ ಹೂತುಹಾಕಿದ ವ್ಯಕ್ತಿ

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ಘೋರ ಘಟನೆಯಿಂದು ವರದಿಯಾಗಿದೆ, ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ತ್ರಿವಳಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿ ಫಾರೂಕ್ ಎಂದು...

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ: ಮೊಬೈಲ್ ಫೋನ್, ಗಾಂಜಾ ವಶ: ಡಿಜಿಪಿ ಅಲೋಕ್ ಕುಮಾರ್

ಕರ್ನಾಟಕದ ಕಾರಾಗೃಹಗಳಲ್ಲಿ 36 ಗಂಟೆಗಳ ಕಾಲ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು, ಚಾಕುಗಳು ಮತ್ತು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿದ್ದುಪಡಿ ಸೌಲಭ್ಯಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಯಲು...