Homeಚಳವಳಿಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

- Advertisement -
- Advertisement -

ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಪೋರ್ಟರ್, ಉಬರ್ ರೀತಿಯ ‘ಗಿಗ್‌ ಕಂಪೆನಿ’ಗಳ ವ್ಯವಹಾರ ವರ್ಷ ಕಳೆದಂತೆ ಹೆಚ್ಚುತ್ತಿದ್ದರೂ, ತಮ್ಮ ಕೆಲಸಗಾರರಿಗೆ ಸರಿಯಾದ ಸವಲತ್ತುಗಳನ್ನು ನೀಡುತ್ತಿಲ್ಲ ಎಂದು ಫೇರ್‌ವರ್ಕ್ ಇಂಡಿಯಾ ವರದಿ 2024ರ ವರದಿ ಹೇಳಿದೆ. ಇಂತಹ ಕಂಪೆನಿಗಳಲ್ಲಿ ಅಸಮಾನತೆಗಳು ಅಸ್ತಿತ್ವದಲ್ಲಿದ್ದು, ಹಲವಾರು ಕಂಪನಿಗಳು ನ್ಯಾಯಯುತ ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿವೆ ಎಂದು ಅಧ್ಯಯನ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಬೆಂಗಳೂರು (ಐಐಐ ಟಿಬಿ)ನ ಮಾಹಿತಿ ತಂತ್ರಜ್ಞಾನ ಮತ್ತು ಸಾರ್ವಜನಿಕ ನೀತಿ ಕೇಂದ್ರ (ಸಿಐಟಿಎಪಿಪಿ) ಈ ವರದಿ ಬಿಡುಗಡೆ ಮಾಡಿದ್ದು, ವರದಿಯು 11 ಗಿಗ್ ಕಂಪೆನಿಗಳನ್ನು ಮೌಲ್ಯಮಾಪನ ಮಾಡಿದೆ.

ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಪೋರ್ಟರ್, ಉಬರ್ ಮತ್ತು ಇತರ ಪ್ರಮುಖ ಗಿಗ್ ಕಂಪೆನಿಗಳು ನ್ಯಾಯಯುತ ವೇತನ, ಒಪ್ಪಂದದ ಪಾರದರ್ಶಕತೆ ಮತ್ತು ಕಾರ್ಮಿಕರ ಪ್ರಾತಿನಿಧ್ಯಕ್ಕಾಗಿ ಮೂಲಭೂತ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ ಎಂದು ವರದಿ ಉಲ್ಲೇಖಿಸಿದೆ.

ಫೇರ್‌ವರ್ಕ್ ಇಂಡಿಯಾ ತಂಡವು, ‘ನ್ಯಾಯಯುತ ವೇತನ, ನ್ಯಾಯೋಚಿತ ಪರಿಸ್ಥಿತಿಗಳು, ನ್ಯಾಯಯುತ ಒಪ್ಪಂದಗಳು, ನ್ಯಾಯಯುತ ನಿರ್ವಹಣೆ ಮತ್ತು ನ್ಯಾಯಯುತ ಪ್ರಾತಿನಿಧ್ಯ’ ಎಂಬ ಐದು ತತ್ವಗಳ ಮೇಲೆ ಗಿಗ್ ಕಂಪೆನಿಗಳನ್ನು ಮೌಲ್ಯಮಾಪನ ಮಾಡಿದೆ. ಅಧ್ಯಯನವು ಗಿಗ್‌ ಕಂಪೆನಿಗಳಲ್ಲಿ ಬದಲಾಗುತ್ತಿರುವ ಕೆಲಸದ ಸ್ವರೂಪವನ್ನು ಪರಿಶೀಲಿಸಿದೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರಿಗೆ ಬೆಂಬಲಿಸಿ ರಾಜೀನಾಮೆ ಕೊಟ್ಟ 45ಕ್ಕೂ ಹೆಚ್ಚು ಹಿರಿಯ ವೈದ್ಯರು

ಅಮೆಜಾನ್ ಫ್ಲೆಕ್ಸ್‌, 10 ರಲ್ಲಿ 2 ಅಂಕಗಳನ್ನು ಗಳಿಸಿದೆ ಎಂದು ಫೇರ್‌ವರ್ಕ್‌ ಇಂಡಿಯಾ ಅಧ್ಯಯನ ಹೇಳಿದೆ. ಅಮೆಜಾನ್ ತನ್ನ ಕೆಲಸಗಾರರಿಗೆ ಕೆಲವು ಸುರಕ್ಷತಾ ಸಾಧನಗಳು ಮತ್ತು ತರಬೇತಿಯನ್ನು ಒದಗಿಸುತ್ತೆಯಾದರೂ, ನ್ಯಾಯಯುತ ವೇತನವನ್ನು ಖಚಿತಪಡಿಸಿಕೊಳ್ಳಲು ವಿಫಲವಾಗಿದೆ ಎಂದು ಅಧ್ಯಯನ ಹೇಳಿದೆ. ಈ ಗಿಗ್‌ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಗಳಿಕೆಯು ಸ್ಥಳೀಯ ಕನಿಷ್ಠ ವೇತನ ಮಾನದಂಡಗಳನ್ನು ಇದು ಪೂರೈಸುತ್ತಿಲ್ಲ ಎಂದು ಅಧ್ಯಯನ ಹೇಳಿದೆ.

ನ್ಯಾಯಯುತ ಒಪ್ಪಂದಗಳು, ನ್ಯಾಯೋಚಿತ ನಿರ್ವಹಣೆ ಮತ್ತು ನ್ಯಾಯಯುತ ಪ್ರಾತಿನಿಧ್ಯದ ವಿಷಯದಲ್ಲಿ ಕೂಡಾ ಅಮೇಜಾನ್ ಫ್ಲೆಕ್ಸ್‌ ಅಗತ್ಯ ಮಿತಿಗಳನ್ನು ಪೂರೈಸುತ್ತಿಲ್ಲ ಎಂದು ಅಧ್ಯಯನ ಹೇಳಿದೆ.

ಭಾರತದ ಅತಿದೊಡ್ಡ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದಾದ ಫ್ಲಿಪ್‌ಕಾರ್ಟ್ ಇನ್ನೂ ಕೆಟ್ಟದಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿ ಹೇಳಿದೆ. ಫ್ಲಿಪ್‌ಕಾರ್ಟ್‌ 10 ರಲ್ಲಿ ಕೇವಲ 1 ಅಂಕವನ್ನು ಗಳಿಸಿದ್ದು, ನ್ಯಾಯಯುತ ವೇತನದ ಮಾನದಂಡಗಳನ್ನು ಕಂಪೆನಿ ಪೂರೈಸಲಿಲ್ಲ ಎಂದು ವರದಿ ಹೇಳಿದೆ. ಅಲ್ಲದೆ, ಫ್ಲಿಪ್‌ಕಾರ್ಟ್‌ನ ಒಪ್ಪಂದದ ನಿಯಮಗಳು ಅಸ್ಪಷ್ಟವಾಗಿದ್ದು, ಕಾರ್ಮಿಕರಿಗೆ ಅದು ಸಿಗುವುದಿಲ್ಲ ಎಂದು ವರದಿ ಟೀಕಿಸಿದೆ. ಫ್ಲಿಪ್‌ಕಾರ್ಟ್‌ ತನ್ನ ನಿರ್ವಹಣಾ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆಯನ್ನು ಹೊಂದಿಲ್ಲ ಮತ್ತು ಕಾರ್ಮಿಕರ ಪ್ರಾತಿನಿಧ್ಯವನ್ನು ಗುರುತಿಸಲು ಯಾವುದೇ ಪ್ರಯತ್ನಗಳನ್ನು ಮಾಡಲಿಲ್ಲ ಎಂದು ವರದಿ ಹೇಳಿದೆ.

ಇದನ್ನೂಓದಿ: ಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಪೋರ್ಟರ್ ಮತ್ತು ಉಬರ್ ಗಿಗ್‌ ಕಂಪೆನಿಗಳು ಫೇರ್‌ವರ್ಕ್‌ನ ಎಲ್ಲಾ ಐದು ತತ್ವಗಳಲ್ಲಿ ಶೂನ್ಯ ಅಂಕ ಗಳಿಸಿವೆ. ಈ ಎರಡು ಗಿಗ್ ಕಂಪೆನಿಗಳು ಮೂಲಭೂತ ಕಾರ್ಮಿಕ ರಕ್ಷಣೆಗಳ ಪುರಾವೆಗಳನ್ನು ಒದಗಿಸಲು ವಿಫಲವಾಗಿವೆ ಎಂದು ಅಧ್ಯಯನ ಹೇಳಿದೆ. ಎರಡೂ ಪ್ಲಾಟ್‌ಫಾರ್ಮ್‌ಗಳಲ್ಲಿನ ಕೆಲಸಗಾರರು ಅಸುರಕ್ಷಿತ ಕೆಲಸದ ಪರಿಸ್ಥಿತಿಗಳಿಗೆ ಒಡ್ಡಿಕೊಳ್ಳುತ್ತಾರೆ ಮತ್ತು ಯಾವುದೆ ಅಪಾಯ ತಗ್ಗಿಸುವ ಕ್ರಮಗಳಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಜೊತೆಗೆ ಈ ಎರಡು ಸಂಸ್ಥೆಗಳ ಒಪ್ಪಂದಗಳು ಜಟಿಲವಾಗಿದ್ದು, ಯಾವುದೇ ಮನವಿಯ ವಿಧಾನವಿಲ್ಲದೆ ಹಠಾತ್ ನಿಷ್ಕ್ರಿಯಗೊಳಿಸುವಿಕೆ ಅಥವಾ ಪಾವತಿ ಸಮಸ್ಯೆಗಳಿಂದ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗುತ್ತಾರೆ ಎಂದು ವರದಿ ಹೇಳಿದೆ.

ಆದಾಗ್ಯೂ, ಬಿಗ್‌ಬಾಸ್ಕೆಟ್ ಮತ್ತು ಅರ್ಬನ್ ಕಂಪನಿಗಳು ಮಾತ್ರ ಕನಿಷ್ಠ ವೇತನ ನೀತಿಯನ್ನು ಅಳವಡಿಸಿಕೊಂಡಿದೆ. ಜೊತೆಗೆ ಬಿಗ್‌ಬಾಸ್ಕೆಟ್, ಸ್ವಿಗ್ಗಿ, ಅರ್ಬನ್ ಕಂಪನಿ, ಝೆಪ್ಟೋ ಮತ್ತು ಝೊಮಾಟೊ ಕಂಪೆನಿಗಳು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಅಪಘಾತ ವಿಮಾ ರಕ್ಷಣೆಯನ್ನು ಒದಗಿಸುತ್ತಿದೆ. ಅಲ್ಲದೆ, ಅಪಘಾತಗಳನ್ನು ಹೊರತುಪಡಿಸಿ ವೈದ್ಯಕೀಯ ಕಾರಣಗಳಿಂದ ಕೆಲಸ ಮಾಡಲು ಸಾಧ್ಯವಾಗದ ಸಂದರ್ಭಗಳಲ್ಲಿ ಆದಾಯ ನಷ್ಟಕ್ಕೆ ವಿತ್ತೀಯ ಪರಿಹಾರ ಸೇರಿದಂತೆ ಇನ್ನಿತರ ಕೆಲವು ಅನುಕೂಲಗಳನ್ನು ಸಂಸ್ಥೆ ಮಾಡಿವೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...