Homeಚಳವಳಿಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

- Advertisement -
- Advertisement -

ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಪೋರ್ಟರ್, ಉಬರ್ ರೀತಿಯ ‘ಗಿಗ್‌ ಕಂಪೆನಿ’ಗಳ ವ್ಯವಹಾರ ವರ್ಷ ಕಳೆದಂತೆ ಹೆಚ್ಚುತ್ತಿದ್ದರೂ, ತಮ್ಮ ಕೆಲಸಗಾರರಿಗೆ ಸರಿಯಾದ ಸವಲತ್ತುಗಳನ್ನು ನೀಡುತ್ತಿಲ್ಲ ಎಂದು ಫೇರ್‌ವರ್ಕ್ ಇಂಡಿಯಾ ವರದಿ 2024ರ ವರದಿ ಹೇಳಿದೆ. ಇಂತಹ ಕಂಪೆನಿಗಳಲ್ಲಿ ಅಸಮಾನತೆಗಳು ಅಸ್ತಿತ್ವದಲ್ಲಿದ್ದು, ಹಲವಾರು ಕಂಪನಿಗಳು ನ್ಯಾಯಯುತ ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿವೆ ಎಂದು ಅಧ್ಯಯನ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಬೆಂಗಳೂರು (ಐಐಐ ಟಿಬಿ)ನ ಮಾಹಿತಿ ತಂತ್ರಜ್ಞಾನ ಮತ್ತು ಸಾರ್ವಜನಿಕ ನೀತಿ ಕೇಂದ್ರ (ಸಿಐಟಿಎಪಿಪಿ) ಈ ವರದಿ ಬಿಡುಗಡೆ ಮಾಡಿದ್ದು, ವರದಿಯು 11 ಗಿಗ್ ಕಂಪೆನಿಗಳನ್ನು ಮೌಲ್ಯಮಾಪನ ಮಾಡಿದೆ.

ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಪೋರ್ಟರ್, ಉಬರ್ ಮತ್ತು ಇತರ ಪ್ರಮುಖ ಗಿಗ್ ಕಂಪೆನಿಗಳು ನ್ಯಾಯಯುತ ವೇತನ, ಒಪ್ಪಂದದ ಪಾರದರ್ಶಕತೆ ಮತ್ತು ಕಾರ್ಮಿಕರ ಪ್ರಾತಿನಿಧ್ಯಕ್ಕಾಗಿ ಮೂಲಭೂತ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ ಎಂದು ವರದಿ ಉಲ್ಲೇಖಿಸಿದೆ.

ಫೇರ್‌ವರ್ಕ್ ಇಂಡಿಯಾ ತಂಡವು, ‘ನ್ಯಾಯಯುತ ವೇತನ, ನ್ಯಾಯೋಚಿತ ಪರಿಸ್ಥಿತಿಗಳು, ನ್ಯಾಯಯುತ ಒಪ್ಪಂದಗಳು, ನ್ಯಾಯಯುತ ನಿರ್ವಹಣೆ ಮತ್ತು ನ್ಯಾಯಯುತ ಪ್ರಾತಿನಿಧ್ಯ’ ಎಂಬ ಐದು ತತ್ವಗಳ ಮೇಲೆ ಗಿಗ್ ಕಂಪೆನಿಗಳನ್ನು ಮೌಲ್ಯಮಾಪನ ಮಾಡಿದೆ. ಅಧ್ಯಯನವು ಗಿಗ್‌ ಕಂಪೆನಿಗಳಲ್ಲಿ ಬದಲಾಗುತ್ತಿರುವ ಕೆಲಸದ ಸ್ವರೂಪವನ್ನು ಪರಿಶೀಲಿಸಿದೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರಿಗೆ ಬೆಂಬಲಿಸಿ ರಾಜೀನಾಮೆ ಕೊಟ್ಟ 45ಕ್ಕೂ ಹೆಚ್ಚು ಹಿರಿಯ ವೈದ್ಯರು

ಅಮೆಜಾನ್ ಫ್ಲೆಕ್ಸ್‌, 10 ರಲ್ಲಿ 2 ಅಂಕಗಳನ್ನು ಗಳಿಸಿದೆ ಎಂದು ಫೇರ್‌ವರ್ಕ್‌ ಇಂಡಿಯಾ ಅಧ್ಯಯನ ಹೇಳಿದೆ. ಅಮೆಜಾನ್ ತನ್ನ ಕೆಲಸಗಾರರಿಗೆ ಕೆಲವು ಸುರಕ್ಷತಾ ಸಾಧನಗಳು ಮತ್ತು ತರಬೇತಿಯನ್ನು ಒದಗಿಸುತ್ತೆಯಾದರೂ, ನ್ಯಾಯಯುತ ವೇತನವನ್ನು ಖಚಿತಪಡಿಸಿಕೊಳ್ಳಲು ವಿಫಲವಾಗಿದೆ ಎಂದು ಅಧ್ಯಯನ ಹೇಳಿದೆ. ಈ ಗಿಗ್‌ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಗಳಿಕೆಯು ಸ್ಥಳೀಯ ಕನಿಷ್ಠ ವೇತನ ಮಾನದಂಡಗಳನ್ನು ಇದು ಪೂರೈಸುತ್ತಿಲ್ಲ ಎಂದು ಅಧ್ಯಯನ ಹೇಳಿದೆ.

ನ್ಯಾಯಯುತ ಒಪ್ಪಂದಗಳು, ನ್ಯಾಯೋಚಿತ ನಿರ್ವಹಣೆ ಮತ್ತು ನ್ಯಾಯಯುತ ಪ್ರಾತಿನಿಧ್ಯದ ವಿಷಯದಲ್ಲಿ ಕೂಡಾ ಅಮೇಜಾನ್ ಫ್ಲೆಕ್ಸ್‌ ಅಗತ್ಯ ಮಿತಿಗಳನ್ನು ಪೂರೈಸುತ್ತಿಲ್ಲ ಎಂದು ಅಧ್ಯಯನ ಹೇಳಿದೆ.

ಭಾರತದ ಅತಿದೊಡ್ಡ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದಾದ ಫ್ಲಿಪ್‌ಕಾರ್ಟ್ ಇನ್ನೂ ಕೆಟ್ಟದಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿ ಹೇಳಿದೆ. ಫ್ಲಿಪ್‌ಕಾರ್ಟ್‌ 10 ರಲ್ಲಿ ಕೇವಲ 1 ಅಂಕವನ್ನು ಗಳಿಸಿದ್ದು, ನ್ಯಾಯಯುತ ವೇತನದ ಮಾನದಂಡಗಳನ್ನು ಕಂಪೆನಿ ಪೂರೈಸಲಿಲ್ಲ ಎಂದು ವರದಿ ಹೇಳಿದೆ. ಅಲ್ಲದೆ, ಫ್ಲಿಪ್‌ಕಾರ್ಟ್‌ನ ಒಪ್ಪಂದದ ನಿಯಮಗಳು ಅಸ್ಪಷ್ಟವಾಗಿದ್ದು, ಕಾರ್ಮಿಕರಿಗೆ ಅದು ಸಿಗುವುದಿಲ್ಲ ಎಂದು ವರದಿ ಟೀಕಿಸಿದೆ. ಫ್ಲಿಪ್‌ಕಾರ್ಟ್‌ ತನ್ನ ನಿರ್ವಹಣಾ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆಯನ್ನು ಹೊಂದಿಲ್ಲ ಮತ್ತು ಕಾರ್ಮಿಕರ ಪ್ರಾತಿನಿಧ್ಯವನ್ನು ಗುರುತಿಸಲು ಯಾವುದೇ ಪ್ರಯತ್ನಗಳನ್ನು ಮಾಡಲಿಲ್ಲ ಎಂದು ವರದಿ ಹೇಳಿದೆ.

ಇದನ್ನೂಓದಿ: ಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಪೋರ್ಟರ್ ಮತ್ತು ಉಬರ್ ಗಿಗ್‌ ಕಂಪೆನಿಗಳು ಫೇರ್‌ವರ್ಕ್‌ನ ಎಲ್ಲಾ ಐದು ತತ್ವಗಳಲ್ಲಿ ಶೂನ್ಯ ಅಂಕ ಗಳಿಸಿವೆ. ಈ ಎರಡು ಗಿಗ್ ಕಂಪೆನಿಗಳು ಮೂಲಭೂತ ಕಾರ್ಮಿಕ ರಕ್ಷಣೆಗಳ ಪುರಾವೆಗಳನ್ನು ಒದಗಿಸಲು ವಿಫಲವಾಗಿವೆ ಎಂದು ಅಧ್ಯಯನ ಹೇಳಿದೆ. ಎರಡೂ ಪ್ಲಾಟ್‌ಫಾರ್ಮ್‌ಗಳಲ್ಲಿನ ಕೆಲಸಗಾರರು ಅಸುರಕ್ಷಿತ ಕೆಲಸದ ಪರಿಸ್ಥಿತಿಗಳಿಗೆ ಒಡ್ಡಿಕೊಳ್ಳುತ್ತಾರೆ ಮತ್ತು ಯಾವುದೆ ಅಪಾಯ ತಗ್ಗಿಸುವ ಕ್ರಮಗಳಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಜೊತೆಗೆ ಈ ಎರಡು ಸಂಸ್ಥೆಗಳ ಒಪ್ಪಂದಗಳು ಜಟಿಲವಾಗಿದ್ದು, ಯಾವುದೇ ಮನವಿಯ ವಿಧಾನವಿಲ್ಲದೆ ಹಠಾತ್ ನಿಷ್ಕ್ರಿಯಗೊಳಿಸುವಿಕೆ ಅಥವಾ ಪಾವತಿ ಸಮಸ್ಯೆಗಳಿಂದ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗುತ್ತಾರೆ ಎಂದು ವರದಿ ಹೇಳಿದೆ.

ಆದಾಗ್ಯೂ, ಬಿಗ್‌ಬಾಸ್ಕೆಟ್ ಮತ್ತು ಅರ್ಬನ್ ಕಂಪನಿಗಳು ಮಾತ್ರ ಕನಿಷ್ಠ ವೇತನ ನೀತಿಯನ್ನು ಅಳವಡಿಸಿಕೊಂಡಿದೆ. ಜೊತೆಗೆ ಬಿಗ್‌ಬಾಸ್ಕೆಟ್, ಸ್ವಿಗ್ಗಿ, ಅರ್ಬನ್ ಕಂಪನಿ, ಝೆಪ್ಟೋ ಮತ್ತು ಝೊಮಾಟೊ ಕಂಪೆನಿಗಳು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಅಪಘಾತ ವಿಮಾ ರಕ್ಷಣೆಯನ್ನು ಒದಗಿಸುತ್ತಿದೆ. ಅಲ್ಲದೆ, ಅಪಘಾತಗಳನ್ನು ಹೊರತುಪಡಿಸಿ ವೈದ್ಯಕೀಯ ಕಾರಣಗಳಿಂದ ಕೆಲಸ ಮಾಡಲು ಸಾಧ್ಯವಾಗದ ಸಂದರ್ಭಗಳಲ್ಲಿ ಆದಾಯ ನಷ್ಟಕ್ಕೆ ವಿತ್ತೀಯ ಪರಿಹಾರ ಸೇರಿದಂತೆ ಇನ್ನಿತರ ಕೆಲವು ಅನುಕೂಲಗಳನ್ನು ಸಂಸ್ಥೆ ಮಾಡಿವೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...