Homeಚಳವಳಿಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

- Advertisement -
- Advertisement -

ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಪೋರ್ಟರ್, ಉಬರ್ ರೀತಿಯ ‘ಗಿಗ್‌ ಕಂಪೆನಿ’ಗಳ ವ್ಯವಹಾರ ವರ್ಷ ಕಳೆದಂತೆ ಹೆಚ್ಚುತ್ತಿದ್ದರೂ, ತಮ್ಮ ಕೆಲಸಗಾರರಿಗೆ ಸರಿಯಾದ ಸವಲತ್ತುಗಳನ್ನು ನೀಡುತ್ತಿಲ್ಲ ಎಂದು ಫೇರ್‌ವರ್ಕ್ ಇಂಡಿಯಾ ವರದಿ 2024ರ ವರದಿ ಹೇಳಿದೆ. ಇಂತಹ ಕಂಪೆನಿಗಳಲ್ಲಿ ಅಸಮಾನತೆಗಳು ಅಸ್ತಿತ್ವದಲ್ಲಿದ್ದು, ಹಲವಾರು ಕಂಪನಿಗಳು ನ್ಯಾಯಯುತ ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿವೆ ಎಂದು ಅಧ್ಯಯನ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಬೆಂಗಳೂರು (ಐಐಐ ಟಿಬಿ)ನ ಮಾಹಿತಿ ತಂತ್ರಜ್ಞಾನ ಮತ್ತು ಸಾರ್ವಜನಿಕ ನೀತಿ ಕೇಂದ್ರ (ಸಿಐಟಿಎಪಿಪಿ) ಈ ವರದಿ ಬಿಡುಗಡೆ ಮಾಡಿದ್ದು, ವರದಿಯು 11 ಗಿಗ್ ಕಂಪೆನಿಗಳನ್ನು ಮೌಲ್ಯಮಾಪನ ಮಾಡಿದೆ.

ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಪೋರ್ಟರ್, ಉಬರ್ ಮತ್ತು ಇತರ ಪ್ರಮುಖ ಗಿಗ್ ಕಂಪೆನಿಗಳು ನ್ಯಾಯಯುತ ವೇತನ, ಒಪ್ಪಂದದ ಪಾರದರ್ಶಕತೆ ಮತ್ತು ಕಾರ್ಮಿಕರ ಪ್ರಾತಿನಿಧ್ಯಕ್ಕಾಗಿ ಮೂಲಭೂತ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ ಎಂದು ವರದಿ ಉಲ್ಲೇಖಿಸಿದೆ.

ಫೇರ್‌ವರ್ಕ್ ಇಂಡಿಯಾ ತಂಡವು, ‘ನ್ಯಾಯಯುತ ವೇತನ, ನ್ಯಾಯೋಚಿತ ಪರಿಸ್ಥಿತಿಗಳು, ನ್ಯಾಯಯುತ ಒಪ್ಪಂದಗಳು, ನ್ಯಾಯಯುತ ನಿರ್ವಹಣೆ ಮತ್ತು ನ್ಯಾಯಯುತ ಪ್ರಾತಿನಿಧ್ಯ’ ಎಂಬ ಐದು ತತ್ವಗಳ ಮೇಲೆ ಗಿಗ್ ಕಂಪೆನಿಗಳನ್ನು ಮೌಲ್ಯಮಾಪನ ಮಾಡಿದೆ. ಅಧ್ಯಯನವು ಗಿಗ್‌ ಕಂಪೆನಿಗಳಲ್ಲಿ ಬದಲಾಗುತ್ತಿರುವ ಕೆಲಸದ ಸ್ವರೂಪವನ್ನು ಪರಿಶೀಲಿಸಿದೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರಿಗೆ ಬೆಂಬಲಿಸಿ ರಾಜೀನಾಮೆ ಕೊಟ್ಟ 45ಕ್ಕೂ ಹೆಚ್ಚು ಹಿರಿಯ ವೈದ್ಯರು

ಅಮೆಜಾನ್ ಫ್ಲೆಕ್ಸ್‌, 10 ರಲ್ಲಿ 2 ಅಂಕಗಳನ್ನು ಗಳಿಸಿದೆ ಎಂದು ಫೇರ್‌ವರ್ಕ್‌ ಇಂಡಿಯಾ ಅಧ್ಯಯನ ಹೇಳಿದೆ. ಅಮೆಜಾನ್ ತನ್ನ ಕೆಲಸಗಾರರಿಗೆ ಕೆಲವು ಸುರಕ್ಷತಾ ಸಾಧನಗಳು ಮತ್ತು ತರಬೇತಿಯನ್ನು ಒದಗಿಸುತ್ತೆಯಾದರೂ, ನ್ಯಾಯಯುತ ವೇತನವನ್ನು ಖಚಿತಪಡಿಸಿಕೊಳ್ಳಲು ವಿಫಲವಾಗಿದೆ ಎಂದು ಅಧ್ಯಯನ ಹೇಳಿದೆ. ಈ ಗಿಗ್‌ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಗಳಿಕೆಯು ಸ್ಥಳೀಯ ಕನಿಷ್ಠ ವೇತನ ಮಾನದಂಡಗಳನ್ನು ಇದು ಪೂರೈಸುತ್ತಿಲ್ಲ ಎಂದು ಅಧ್ಯಯನ ಹೇಳಿದೆ.

ನ್ಯಾಯಯುತ ಒಪ್ಪಂದಗಳು, ನ್ಯಾಯೋಚಿತ ನಿರ್ವಹಣೆ ಮತ್ತು ನ್ಯಾಯಯುತ ಪ್ರಾತಿನಿಧ್ಯದ ವಿಷಯದಲ್ಲಿ ಕೂಡಾ ಅಮೇಜಾನ್ ಫ್ಲೆಕ್ಸ್‌ ಅಗತ್ಯ ಮಿತಿಗಳನ್ನು ಪೂರೈಸುತ್ತಿಲ್ಲ ಎಂದು ಅಧ್ಯಯನ ಹೇಳಿದೆ.

ಭಾರತದ ಅತಿದೊಡ್ಡ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದಾದ ಫ್ಲಿಪ್‌ಕಾರ್ಟ್ ಇನ್ನೂ ಕೆಟ್ಟದಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿ ಹೇಳಿದೆ. ಫ್ಲಿಪ್‌ಕಾರ್ಟ್‌ 10 ರಲ್ಲಿ ಕೇವಲ 1 ಅಂಕವನ್ನು ಗಳಿಸಿದ್ದು, ನ್ಯಾಯಯುತ ವೇತನದ ಮಾನದಂಡಗಳನ್ನು ಕಂಪೆನಿ ಪೂರೈಸಲಿಲ್ಲ ಎಂದು ವರದಿ ಹೇಳಿದೆ. ಅಲ್ಲದೆ, ಫ್ಲಿಪ್‌ಕಾರ್ಟ್‌ನ ಒಪ್ಪಂದದ ನಿಯಮಗಳು ಅಸ್ಪಷ್ಟವಾಗಿದ್ದು, ಕಾರ್ಮಿಕರಿಗೆ ಅದು ಸಿಗುವುದಿಲ್ಲ ಎಂದು ವರದಿ ಟೀಕಿಸಿದೆ. ಫ್ಲಿಪ್‌ಕಾರ್ಟ್‌ ತನ್ನ ನಿರ್ವಹಣಾ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆಯನ್ನು ಹೊಂದಿಲ್ಲ ಮತ್ತು ಕಾರ್ಮಿಕರ ಪ್ರಾತಿನಿಧ್ಯವನ್ನು ಗುರುತಿಸಲು ಯಾವುದೇ ಪ್ರಯತ್ನಗಳನ್ನು ಮಾಡಲಿಲ್ಲ ಎಂದು ವರದಿ ಹೇಳಿದೆ.

ಇದನ್ನೂಓದಿ: ಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಪೋರ್ಟರ್ ಮತ್ತು ಉಬರ್ ಗಿಗ್‌ ಕಂಪೆನಿಗಳು ಫೇರ್‌ವರ್ಕ್‌ನ ಎಲ್ಲಾ ಐದು ತತ್ವಗಳಲ್ಲಿ ಶೂನ್ಯ ಅಂಕ ಗಳಿಸಿವೆ. ಈ ಎರಡು ಗಿಗ್ ಕಂಪೆನಿಗಳು ಮೂಲಭೂತ ಕಾರ್ಮಿಕ ರಕ್ಷಣೆಗಳ ಪುರಾವೆಗಳನ್ನು ಒದಗಿಸಲು ವಿಫಲವಾಗಿವೆ ಎಂದು ಅಧ್ಯಯನ ಹೇಳಿದೆ. ಎರಡೂ ಪ್ಲಾಟ್‌ಫಾರ್ಮ್‌ಗಳಲ್ಲಿನ ಕೆಲಸಗಾರರು ಅಸುರಕ್ಷಿತ ಕೆಲಸದ ಪರಿಸ್ಥಿತಿಗಳಿಗೆ ಒಡ್ಡಿಕೊಳ್ಳುತ್ತಾರೆ ಮತ್ತು ಯಾವುದೆ ಅಪಾಯ ತಗ್ಗಿಸುವ ಕ್ರಮಗಳಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಜೊತೆಗೆ ಈ ಎರಡು ಸಂಸ್ಥೆಗಳ ಒಪ್ಪಂದಗಳು ಜಟಿಲವಾಗಿದ್ದು, ಯಾವುದೇ ಮನವಿಯ ವಿಧಾನವಿಲ್ಲದೆ ಹಠಾತ್ ನಿಷ್ಕ್ರಿಯಗೊಳಿಸುವಿಕೆ ಅಥವಾ ಪಾವತಿ ಸಮಸ್ಯೆಗಳಿಂದ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗುತ್ತಾರೆ ಎಂದು ವರದಿ ಹೇಳಿದೆ.

ಆದಾಗ್ಯೂ, ಬಿಗ್‌ಬಾಸ್ಕೆಟ್ ಮತ್ತು ಅರ್ಬನ್ ಕಂಪನಿಗಳು ಮಾತ್ರ ಕನಿಷ್ಠ ವೇತನ ನೀತಿಯನ್ನು ಅಳವಡಿಸಿಕೊಂಡಿದೆ. ಜೊತೆಗೆ ಬಿಗ್‌ಬಾಸ್ಕೆಟ್, ಸ್ವಿಗ್ಗಿ, ಅರ್ಬನ್ ಕಂಪನಿ, ಝೆಪ್ಟೋ ಮತ್ತು ಝೊಮಾಟೊ ಕಂಪೆನಿಗಳು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಅಪಘಾತ ವಿಮಾ ರಕ್ಷಣೆಯನ್ನು ಒದಗಿಸುತ್ತಿದೆ. ಅಲ್ಲದೆ, ಅಪಘಾತಗಳನ್ನು ಹೊರತುಪಡಿಸಿ ವೈದ್ಯಕೀಯ ಕಾರಣಗಳಿಂದ ಕೆಲಸ ಮಾಡಲು ಸಾಧ್ಯವಾಗದ ಸಂದರ್ಭಗಳಲ್ಲಿ ಆದಾಯ ನಷ್ಟಕ್ಕೆ ವಿತ್ತೀಯ ಪರಿಹಾರ ಸೇರಿದಂತೆ ಇನ್ನಿತರ ಕೆಲವು ಅನುಕೂಲಗಳನ್ನು ಸಂಸ್ಥೆ ಮಾಡಿವೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...