Homeಚಳವಳಿಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ

- Advertisement -
- Advertisement -

ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಪೋರ್ಟರ್, ಉಬರ್ ರೀತಿಯ ‘ಗಿಗ್‌ ಕಂಪೆನಿ’ಗಳ ವ್ಯವಹಾರ ವರ್ಷ ಕಳೆದಂತೆ ಹೆಚ್ಚುತ್ತಿದ್ದರೂ, ತಮ್ಮ ಕೆಲಸಗಾರರಿಗೆ ಸರಿಯಾದ ಸವಲತ್ತುಗಳನ್ನು ನೀಡುತ್ತಿಲ್ಲ ಎಂದು ಫೇರ್‌ವರ್ಕ್ ಇಂಡಿಯಾ ವರದಿ 2024ರ ವರದಿ ಹೇಳಿದೆ. ಇಂತಹ ಕಂಪೆನಿಗಳಲ್ಲಿ ಅಸಮಾನತೆಗಳು ಅಸ್ತಿತ್ವದಲ್ಲಿದ್ದು, ಹಲವಾರು ಕಂಪನಿಗಳು ನ್ಯಾಯಯುತ ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿವೆ ಎಂದು ಅಧ್ಯಯನ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂಟರ್‌ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಬೆಂಗಳೂರು (ಐಐಐ ಟಿಬಿ)ನ ಮಾಹಿತಿ ತಂತ್ರಜ್ಞಾನ ಮತ್ತು ಸಾರ್ವಜನಿಕ ನೀತಿ ಕೇಂದ್ರ (ಸಿಐಟಿಎಪಿಪಿ) ಈ ವರದಿ ಬಿಡುಗಡೆ ಮಾಡಿದ್ದು, ವರದಿಯು 11 ಗಿಗ್ ಕಂಪೆನಿಗಳನ್ನು ಮೌಲ್ಯಮಾಪನ ಮಾಡಿದೆ.

ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಪೋರ್ಟರ್, ಉಬರ್ ಮತ್ತು ಇತರ ಪ್ರಮುಖ ಗಿಗ್ ಕಂಪೆನಿಗಳು ನ್ಯಾಯಯುತ ವೇತನ, ಒಪ್ಪಂದದ ಪಾರದರ್ಶಕತೆ ಮತ್ತು ಕಾರ್ಮಿಕರ ಪ್ರಾತಿನಿಧ್ಯಕ್ಕಾಗಿ ಮೂಲಭೂತ ಮಾನದಂಡಗಳನ್ನು ಪೂರೈಸಲು ವಿಫಲವಾಗಿವೆ ಎಂದು ವರದಿ ಉಲ್ಲೇಖಿಸಿದೆ.

ಫೇರ್‌ವರ್ಕ್ ಇಂಡಿಯಾ ತಂಡವು, ‘ನ್ಯಾಯಯುತ ವೇತನ, ನ್ಯಾಯೋಚಿತ ಪರಿಸ್ಥಿತಿಗಳು, ನ್ಯಾಯಯುತ ಒಪ್ಪಂದಗಳು, ನ್ಯಾಯಯುತ ನಿರ್ವಹಣೆ ಮತ್ತು ನ್ಯಾಯಯುತ ಪ್ರಾತಿನಿಧ್ಯ’ ಎಂಬ ಐದು ತತ್ವಗಳ ಮೇಲೆ ಗಿಗ್ ಕಂಪೆನಿಗಳನ್ನು ಮೌಲ್ಯಮಾಪನ ಮಾಡಿದೆ. ಅಧ್ಯಯನವು ಗಿಗ್‌ ಕಂಪೆನಿಗಳಲ್ಲಿ ಬದಲಾಗುತ್ತಿರುವ ಕೆಲಸದ ಸ್ವರೂಪವನ್ನು ಪರಿಶೀಲಿಸಿದೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಕಿರಿಯರಿಗೆ ಬೆಂಬಲಿಸಿ ರಾಜೀನಾಮೆ ಕೊಟ್ಟ 45ಕ್ಕೂ ಹೆಚ್ಚು ಹಿರಿಯ ವೈದ್ಯರು

ಅಮೆಜಾನ್ ಫ್ಲೆಕ್ಸ್‌, 10 ರಲ್ಲಿ 2 ಅಂಕಗಳನ್ನು ಗಳಿಸಿದೆ ಎಂದು ಫೇರ್‌ವರ್ಕ್‌ ಇಂಡಿಯಾ ಅಧ್ಯಯನ ಹೇಳಿದೆ. ಅಮೆಜಾನ್ ತನ್ನ ಕೆಲಸಗಾರರಿಗೆ ಕೆಲವು ಸುರಕ್ಷತಾ ಸಾಧನಗಳು ಮತ್ತು ತರಬೇತಿಯನ್ನು ಒದಗಿಸುತ್ತೆಯಾದರೂ, ನ್ಯಾಯಯುತ ವೇತನವನ್ನು ಖಚಿತಪಡಿಸಿಕೊಳ್ಳಲು ವಿಫಲವಾಗಿದೆ ಎಂದು ಅಧ್ಯಯನ ಹೇಳಿದೆ. ಈ ಗಿಗ್‌ನಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಗಳಿಕೆಯು ಸ್ಥಳೀಯ ಕನಿಷ್ಠ ವೇತನ ಮಾನದಂಡಗಳನ್ನು ಇದು ಪೂರೈಸುತ್ತಿಲ್ಲ ಎಂದು ಅಧ್ಯಯನ ಹೇಳಿದೆ.

ನ್ಯಾಯಯುತ ಒಪ್ಪಂದಗಳು, ನ್ಯಾಯೋಚಿತ ನಿರ್ವಹಣೆ ಮತ್ತು ನ್ಯಾಯಯುತ ಪ್ರಾತಿನಿಧ್ಯದ ವಿಷಯದಲ್ಲಿ ಕೂಡಾ ಅಮೇಜಾನ್ ಫ್ಲೆಕ್ಸ್‌ ಅಗತ್ಯ ಮಿತಿಗಳನ್ನು ಪೂರೈಸುತ್ತಿಲ್ಲ ಎಂದು ಅಧ್ಯಯನ ಹೇಳಿದೆ.

ಭಾರತದ ಅತಿದೊಡ್ಡ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದಾದ ಫ್ಲಿಪ್‌ಕಾರ್ಟ್ ಇನ್ನೂ ಕೆಟ್ಟದಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವರದಿ ಹೇಳಿದೆ. ಫ್ಲಿಪ್‌ಕಾರ್ಟ್‌ 10 ರಲ್ಲಿ ಕೇವಲ 1 ಅಂಕವನ್ನು ಗಳಿಸಿದ್ದು, ನ್ಯಾಯಯುತ ವೇತನದ ಮಾನದಂಡಗಳನ್ನು ಕಂಪೆನಿ ಪೂರೈಸಲಿಲ್ಲ ಎಂದು ವರದಿ ಹೇಳಿದೆ. ಅಲ್ಲದೆ, ಫ್ಲಿಪ್‌ಕಾರ್ಟ್‌ನ ಒಪ್ಪಂದದ ನಿಯಮಗಳು ಅಸ್ಪಷ್ಟವಾಗಿದ್ದು, ಕಾರ್ಮಿಕರಿಗೆ ಅದು ಸಿಗುವುದಿಲ್ಲ ಎಂದು ವರದಿ ಟೀಕಿಸಿದೆ. ಫ್ಲಿಪ್‌ಕಾರ್ಟ್‌ ತನ್ನ ನಿರ್ವಹಣಾ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆಯನ್ನು ಹೊಂದಿಲ್ಲ ಮತ್ತು ಕಾರ್ಮಿಕರ ಪ್ರಾತಿನಿಧ್ಯವನ್ನು ಗುರುತಿಸಲು ಯಾವುದೇ ಪ್ರಯತ್ನಗಳನ್ನು ಮಾಡಲಿಲ್ಲ ಎಂದು ವರದಿ ಹೇಳಿದೆ.

ಇದನ್ನೂಓದಿ: ಸಚಿವರ ಕೈ ಕುಲುಕಿದ್ದಕ್ಕೆ ವಿದ್ಯಾರ್ಥಿನಿಯ ಚಾರಿತ್ರ್ಯಹರಣ : ಆರೋಪಿ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಕಾರ

ಪೋರ್ಟರ್ ಮತ್ತು ಉಬರ್ ಗಿಗ್‌ ಕಂಪೆನಿಗಳು ಫೇರ್‌ವರ್ಕ್‌ನ ಎಲ್ಲಾ ಐದು ತತ್ವಗಳಲ್ಲಿ ಶೂನ್ಯ ಅಂಕ ಗಳಿಸಿವೆ. ಈ ಎರಡು ಗಿಗ್ ಕಂಪೆನಿಗಳು ಮೂಲಭೂತ ಕಾರ್ಮಿಕ ರಕ್ಷಣೆಗಳ ಪುರಾವೆಗಳನ್ನು ಒದಗಿಸಲು ವಿಫಲವಾಗಿವೆ ಎಂದು ಅಧ್ಯಯನ ಹೇಳಿದೆ. ಎರಡೂ ಪ್ಲಾಟ್‌ಫಾರ್ಮ್‌ಗಳಲ್ಲಿನ ಕೆಲಸಗಾರರು ಅಸುರಕ್ಷಿತ ಕೆಲಸದ ಪರಿಸ್ಥಿತಿಗಳಿಗೆ ಒಡ್ಡಿಕೊಳ್ಳುತ್ತಾರೆ ಮತ್ತು ಯಾವುದೆ ಅಪಾಯ ತಗ್ಗಿಸುವ ಕ್ರಮಗಳಿಲ್ಲ ಎಂದು ವರದಿ ಉಲ್ಲೇಖಿಸಿದೆ.

ಜೊತೆಗೆ ಈ ಎರಡು ಸಂಸ್ಥೆಗಳ ಒಪ್ಪಂದಗಳು ಜಟಿಲವಾಗಿದ್ದು, ಯಾವುದೇ ಮನವಿಯ ವಿಧಾನವಿಲ್ಲದೆ ಹಠಾತ್ ನಿಷ್ಕ್ರಿಯಗೊಳಿಸುವಿಕೆ ಅಥವಾ ಪಾವತಿ ಸಮಸ್ಯೆಗಳಿಂದ ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗುತ್ತಾರೆ ಎಂದು ವರದಿ ಹೇಳಿದೆ.

ಆದಾಗ್ಯೂ, ಬಿಗ್‌ಬಾಸ್ಕೆಟ್ ಮತ್ತು ಅರ್ಬನ್ ಕಂಪನಿಗಳು ಮಾತ್ರ ಕನಿಷ್ಠ ವೇತನ ನೀತಿಯನ್ನು ಅಳವಡಿಸಿಕೊಂಡಿದೆ. ಜೊತೆಗೆ ಬಿಗ್‌ಬಾಸ್ಕೆಟ್, ಸ್ವಿಗ್ಗಿ, ಅರ್ಬನ್ ಕಂಪನಿ, ಝೆಪ್ಟೋ ಮತ್ತು ಝೊಮಾಟೊ ಕಂಪೆನಿಗಳು ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ ಅಪಘಾತ ವಿಮಾ ರಕ್ಷಣೆಯನ್ನು ಒದಗಿಸುತ್ತಿದೆ. ಅಲ್ಲದೆ, ಅಪಘಾತಗಳನ್ನು ಹೊರತುಪಡಿಸಿ ವೈದ್ಯಕೀಯ ಕಾರಣಗಳಿಂದ ಕೆಲಸ ಮಾಡಲು ಸಾಧ್ಯವಾಗದ ಸಂದರ್ಭಗಳಲ್ಲಿ ಆದಾಯ ನಷ್ಟಕ್ಕೆ ವಿತ್ತೀಯ ಪರಿಹಾರ ಸೇರಿದಂತೆ ಇನ್ನಿತರ ಕೆಲವು ಅನುಕೂಲಗಳನ್ನು ಸಂಸ್ಥೆ ಮಾಡಿವೆ.

ವಿಡಿಯೊ ನೋಡಿ: ಕೇರಳ ಸಿನಿಮಾ ರಂಗದಲ್ಲಿ ಲೈಂಗಿಕ ದೌರ್ಜನ್ಯದ ಭಯಾನಕ ಕಥೆಗಳನ್ನು ಬಿಚ್ಚಿಟ್ಟ ಹೇಮಾ ಸಮಿತಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...