Homeಚಳವಳಿಕಾರ್ಮಿಕ ಹೋರಾಟ | ಮೇ 20ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ನಿರ್ಧಾರ

ಕಾರ್ಮಿಕ ಹೋರಾಟ | ಮೇ 20ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ನಿರ್ಧಾರ

- Advertisement -
- Advertisement -

ಕೇಂದ್ರ ಕಾರ್ಮಿಕ ಸಂಘಗಳು, ಸ್ವತಂತ್ರ ವಲಯ ಒಕ್ಕೂಟಗಳು ಮತ್ತು ಸಂಘಗಳ ವೇದಿಕೆಯು ಮೇ 20 ರಂದು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ. ಉದ್ದೇಶಿತ ಮುಷ್ಕರಕ್ಕೂ ಮೊದಲು ದೇಶಾದ್ಯಂತ ಎರಡು ತಿಂಗಳ ಕಾಲದ ಪ್ರಚಾರ ಅಭಿಯಾನವನ್ನು ನಡೆಸಲು ದೇಶದ ಕಾರ್ಮಿಕರಿಗೆ ಕರೆ ನೀಡಿದೆ. ಮಾರ್ಚ್ 18ರ ಗುರುವಾರ ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಮಿಕರ ರಾಷ್ಟ್ರೀಯ ಸಮಾವೇಶದಲ್ಲಿ ಈ ನಿರ್ಣಯವನ್ನು ಅಂಗೀಕರಿಸಲಾಗಿತ್ತು. ಕಾರ್ಮಿಕ ಹೋರಾಟ

ಕೇಂದ್ರ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದು ಮಾಡಬೇಕು, ಭಾರತೀಯ ಕಾರ್ಮಿಕ ಸಮ್ಮೇಳನ(ಐಎಲ್‍ಸಿ)ವನ್ನು ಆಯೋಜಿಸಬೇಕು ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳ ಮತ್ತು ಸಾರ್ವಜನಿಕ ಸೇವೆಗಳ ಖಾಸಗೀಕರಣವನ್ನು ನಿಲ್ಲಿಸಬೇಕು ಎಂದು ದೆಹಲಿಯ ಸಮಾವೇಶ ಆಗ್ರಹಿಸಿದೆ. ದೇಶದ ಹೆಚ್ಚಿನ ಎಲ್ಲಾ ವಲಯದ ಕಾರ್ಮಿಕ ಮುಖಂಡರು ಮತ್ತು ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸಿದ್ದರು. ಕಾರ್ಮಿಕ ಹೋರಾಟ

ಬಿಜೆಪಿ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ಜನ ವಿರೋಧಿ ನೀತಿಗಳ ವಿರುದ್ಧದ ಪ್ರತಿರೋಧದಲ್ಲಿ ಒಗ್ಗಟ್ಟಿನ ಪ್ರದರ್ಶನಕ್ಕಾಗಿ ನವದೆಹಲಿಯ ಪ್ಯಾರೆಲಾಲ್ ಭವನದಲ್ಲಿ ಎಲ್ಲಾ ರಾಜ್ಯಗಳ ಎಲ್ಲಾ ಕೇಂದ್ರೀಯ ಕಾರ್ಮಿಕ ಸಂಘಟನೆಗಳ ಮತ್ತು ವಲಯ ಒಕ್ಕೂಟಗಳ ಪ್ರತಿನಿಧಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದರು.

ಕಾರ್ಮಿಕ ಸಂಘಟನೆಗಳು ಸತತವಾಗಿ ಎತ್ತುತ್ತಿರುವ ಬೇಡಿಕೆಗಳಿಗೆ ಒಂದು ದಶಕಕ್ಕೂ ಹೆಚ್ಚು ಕಾಲ ಉದ್ದೇಶಪೂರ್ವಕವಾಗಿ ಕಿವಿಗೊಡದಿರುವ ಕೇಂದ್ರ ಸರಕಾರದ ನಡೆಗೆ ಖಂಡಿಸಿದ ಕಾರ್ಮಿಕ ಸಂಘಟನೆಗಳು, ಸರಕಾರದ ಇಂತಹ ನೀತಿಗಳ ವಿರುದ್ಧ ಸಾಮೂಹಿಕವಾಗಿ ತಿರಸ್ಕಾರ ವ್ಯಕ್ತಪಡಿಸಿದವು. ಜೊತೆಗೆ ಮೇ 20, 2025 ರಂದು ಒಂದು ದಿನದ ರಾಷ್ಟ್ರೀಯ ಮುಷ್ಕರಕ್ಕಾಗಿ ಕರೆ ನೀಡಲಾಗಿದೆ ಎಂದು ಸಭೆಯ ನಂತರ ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ನೀಡಿದ ಹೇಳಿಕೆಯಲ್ಲಿ ತಿಳಿಸಿವೆ.

ಸರ್ಕಾರದ ಸವಾಲನ್ನು ಸ್ವೀಕರಿಸಲು ದುಡಿಯುವ ಜನರು ಸಿದ್ಧರಾಗಬೇಕು ಎಂದು ಕರೆ ನೀಡಿರುವ ಸಮಾವೇಶವು, ಮೇ 20 ಕಾರ್ಮಿಕರು ಮತ್ತು ರೈತರ ರಾಷ್ಟ್ರವ್ಯಾಪಿ ನಿರ್ಣಾಯಕ ಹೋರಾಟಗಳ ಸರಣಿಗೆ ಚಾಲನೆ ನೀಡುವ ವೇದಿಕೆಯಾಗಲಿದೆ, ಶೋಷಣೆ, ಆಳವಾಗುತ್ತಿರುವ ಆದಾಯ ಅಸಮಾನತೆ, ಸಾಂವಿಧಾನಿಕ ಹಕ್ಕುಗಳ ನಿರಾಕರಣೆ ಮತ್ತು ಭಾರತದ ಜನರ ಮೇಲೆ ಆಗುತ್ತಿರುವ ಒಟ್ಟಾರೆ ಅನ್ಯಾಯವನ್ನು ಹೊಸ ಶಕ್ತಿಯಿಂದ ಎದುರಿಸಲಾಗುವುದು ಎಂದು ಸಾರಿದೆ.

ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವ ತನ್ನ ಬಹುದಿನಗಳ ಆಗ್ರಹವನ್ನು ಪುನರುಚ್ಚರಿಸುವುದರ ಜೊತೆಗೆ, ತನ್ನ 17 ಅಂಶಗಳ ಆಗ್ರಹಗಳ ಪಟ್ಟಿಯನ್ನು ಕಾರ್ಮಿಕರ ರಾಷ್ಟ್ರೀಯ ಸಮಾವೇಶದ ಘೋಷಣೆಯು ಪುನರುಚ್ಚರಿಸಿದೆ. ಅಲ್ಲದೆ ನವ ಉದಾರವಾದದ ವಿನಾಶಕಾರಿ ನೀತಿಗಳಿಗೆ ಪರ್ಯಾಯವನ್ನು ಸಹ ಸೂಚಿಸಿದ ಸಮಾವೇಶವು ಧರ್ಮ, ಪ್ರದೇಶ, ಜಾತಿ, ಸಂಸ್ಕೃತಿ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ಕಾರ್ಮಿಕರನ್ನು ವಿಭಜಿಸುವ ಎನ್‍ಡಿಎ ಸರ್ಕಾರದ ಎಲ್ಲಾ ಕೆಟ್ಟ ಪ್ರಯತ್ನಗಳನ್ನು ವಿಫಲಗೊಳಿಸುವುದಾಗಿಯೂ ಸಾರಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೇಸರಿ ಬಟ್ಟೆಯಲ್ಲಿ ಕಡತ ಸಾಗಣೆ ಆರೋಪ: ಉಪವಾಸ ನಿರತ ಸರ್ಕಾರಿ ಮುಸ್ಲಿಂ ಸಿಬ್ಬಂದಿ ಬೆನ್ನಟ್ಟಿ ಮಾರಾಣಾಂತಿಕ ಹಲ್ಲೆ; ವೀಡಿಯೋ ವೈರಲ್

ಕೇಸರಿ ಬಟ್ಟೆಯಲ್ಲಿ ಕಡತ ಸಾಗಣೆ ಆರೋಪ: ಉಪವಾಸ ನಿರತ ಸರ್ಕಾರಿ ಮುಸ್ಲಿಂ ಸಿಬ್ಬಂದಿ ಬೆನ್ನಟ್ಟಿ ಮಾರಾಣಾಂತಿಕ ಹಲ್ಲೆ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...