Homeಚಳವಳಿಕಾರ್ಮಿಕರನ್ನು ಗುಲಾಮರನ್ನಾಗಿಸುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು.

ಕಾರ್ಮಿಕರನ್ನು ಗುಲಾಮರನ್ನಾಗಿಸುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು.

- Advertisement -
- Advertisement -

ಕಾರ್ಪೊರೇಟ್ ಧಣಿಗಳ ವ್ಯಾಪಾರವನ್ನು ಸುಲಲಿತಗೊಳಿಸುವ ಉದ್ದೇಶಕ್ಕೆ ಅತಿ ಅಗತ್ಯ ಎಂದು ಪ್ರತಿಪಾದಿಸುತ್ತಿರುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು ಅಕ್ಷರಶಃ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಧೋರಣೆಗಳಾಗಿವೆ. ಕಾರ್ಮಿಕರಿಗೆ ಕಾನೂನು ಬದ್ದವಾಗಿ ಇರುವ ಹಕ್ಕುಗಳನ್ನು ಹಾಗೂ ರಕ್ಷಣೆಗಳನ್ನು ದಮನ ಮಾಡುವುದೇ ಈ ಕಾರ್ಮಿಕ ಕಾನೂನು ಸುಧಾರಣೆಗಳ ಹೂರಣ ಎಂಬುದು ಗಮನಾರ್ಹ.

ಎರಡನೇ ಬಾರಿ ಪ್ರಧಾನಮಂತ್ರಿಯಾಗಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಕೇಂದ್ರ ಸಂಪುಟ ಸಭೆಯು ಮಾನವ ಘನತೆಗೆ ವಿರುದ್ದವಾದ ಅಮಾನವೀಯ ಧೋರಣೆಗೆ ಅನುಮತಿ ಕೊಟ್ಟಿದೆ. ಸ್ವತಃ ಕೇಂದ್ರ ಕಾರ್ಮಿಕ ಸಚಿವರು, ಇತರೆ ಸಚಿವರ ಜೊತೆ ದಿನಾಂಕ 10-07-19 ರಂದು ಪತ್ರಿಕಾಗೋಷ್ಠಿ ನಡೆಸಿ ‘ಔದ್ಯೋಗಿಕ ಸುರಕ್ಷತೆ ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಮಸೂದೆ 2019 ‘ಅನ್ನು ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸಭೆಯು ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ. ಈ ಮಸೂದೆಯು ಹಾಲಿ ಅಸ್ತಿತ್ವದಲ್ಲಿರುವ 13 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ ರೂಪಿಸಿರುವ ಸಂಹಿತೆಯಾಗಿದೆ. ಈ ಮಸೂದೆಯಲ್ಲಿ ಮಾಲೀಕರಿಗೆ ಅನುಕೂಲಕರವಾಗಿರುವ ಹಿಂದಿನ ಕಾಯಿದೆಯ ಅಂಶಗಳೆಲ್ಲವನ್ನೂ ಉಳಿಸಿಕೊಂಡು ಕಾರ್ಮಿಕರ ಹಕ್ಕು ಹಾಗೂ ರಕ್ಷಣೆಗಾಗಿ ಇದ್ದ ನಿಯಮ, ಉಪ ನಿಯಮಗಳೆಲ್ಲವನ್ನೂ ದುರ್ಬಲಗೊಳಿಸಲಾಗಿದೆ ಅಥವಾ ತಿರುಚಿ ಹಾಳು ಮಾಡಲಾಗಿದೆ.

ಆರೋಗ್ಯ ಹಾಗೂ ಸುರಕ್ಷತೆಯಂತಹ ವಿಷಯದಲ್ಲೂ ಸಹ ಕಾರ್ಮಿಕರಾಗಲಿ ಅಥವಾ ಅವರ ಸಂಘಟನೆಗಳಾಗಲಿ ಸಮರ್ಪಕ ಜಾರಿಗಾಗಿ ಒತ್ತಾಯಿಸಲು ಸಾಧ್ಯವಾಗದಂತೆ, ಮತ್ತು ಕೆಲಸದ ಸ್ಥಳದಲ್ಲಿ ಸಾಮಾನ್ಯವಾಗಿ ಉಂಟಾಗುವ ಮೂಲಭೂತ ಆರೋಗ್ಯ ಹಾಗೂ ಸುರಕ್ಷತೆಗೆ ಸಂಬಂಧಿಸಿ ಕಾನೂನು ಉಲ್ಲಂಘನೆಗಾಗಿ ಮಾಲೀಕರನ್ನು ಹೊಣೆ ಮಾಡಲು ಕೂಡ ಆಗದಂತೆ ಈ ಸಂಹಿತೆಯನ್ನು ರೂಪಿಸಲಾಗಿದೆ. ಇದರಿಂದಾಗಿ ಮತ್ತಷ್ಟು ಅಂಗವೈಕಲ್ಯತೆ, ಗಾಯಾಳುಗಳ ಸಂಖ್ಯೆಯಲ್ಲಿ ಹೆಚ್ಚಳ, ಪ್ರಾಣಹಾನಿ ಹೆಚ್ಚಾಗಲು ಈ ಮಸೂದೆ ಕಾರಣವಾಗಲಿದೆ.

ಈ ಮಸೂದೆಯನ್ನು ರೂಪಿಸುವ ಸಂದರ್ಭದಲ್ಲಿ ಎಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳು ಹಾಗೂ ಕಾರ್ಮಿಕರು ತೀವ್ರವಾದ ವಿರೋಧವನ್ನು ವ್ಯಕ್ತಪಡಿಸಿದ್ದರೂ ಕಡೆಗಣಿಸಿ, ಬಂಡವಾಳಶಾಹಿ -ಕಾರ್ಪೊರೇಟ್ ವಲಯವನ್ನು ತೃಪ್ತಿಪಡಿಸಲು ಹಾಗೂ ಚುನಾವಣೆಯಲ್ಲಿ ಮಾಡಿದ ಸಹಾಯಕ್ಕಾಗಿ ಋಣ ಸಂದಾಯ ಮಾಡಲು ಅತ್ಯುತ್ಸಾಹದಿಂದ ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ ಎಂದು ಸಿಐಟಿಯು ಅಪಾದಿಸಿದೆ.

ಕೇಂದ್ರ ಕಾರ್ಮಿಕ ಸಚಿವರು ಮತ್ತೊಂದು ವಿಷಯ ಪ್ರಸ್ತಾಪಿಸಿ ‘ವೇತನ ಸಂಹಿತೆ ಮಸೂದೆ 2019 ‘ಅನ್ನು ಸಹ ಅನುಮೋದಿಸಿರುವುದಾಗಿ ತಿಳಿಸಿದ್ದಾರೆ. ಇದರ ಪ್ರಕಾರ ರಾಷ್ಟ್ರೀಯ ಕನಿಷ್ಠ ವೇತನ ದಿನಕ್ಕೆ ರೂ 178 (ತಿಂಗಳಿಗೆ 4628) ನಿಗದಿಪಡಿಸಲಾಗಿದೆ. ಇದಕ್ಕಿಂತ ಕಡಿಮೆ ವೇತನವನ್ನು ರಾಜ್ಯ ಸರ್ಕಾರಗಳು ನಿಗದಿಪಡಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಇದೊಂದು ಅತ್ಯಂತ ಹಾಸ್ಯಾಸ್ಪದ ಹಾಗೂ ನಾಚಿಕೇಗೇಡಿನ ವಿಷಯವಾಗಿದೆ. ಈ ಸಂಹಿತೆಯು ಕನಿಷ್ಟ ಕೂಲಿಯ ಜಾರಿಗೆ ಬೇಕಾದ ಶಾಸನಬದ್ಧ ವ್ಯವಸ್ಥೆಯನ್ನು ಸಹ ಹೊಂದಿರುವುದಿಲ್ಲ.

ಈಗಾಗಲೇ ದೇಶದ 31 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕನಿಷ್ಠ ವೇತನವು ದಿನಕ್ಕೆ ರೂ 178 ಕ್ಕಿಂತ ಹೆಚ್ಚಿದೆ. ಕೇಂದ್ರ ಸರ್ಕಾರದ ಈ ಕನಿಷ್ಠ ವೇತನದ ಪ್ರಕಟಣೆಗಳು ಸರ್ಕಾರಗಳನ್ನು ಹಾಗೂ ಮಾಲೀಕರನ್ನು ಕನಿಷ್ಟ ವೇತನ ಕಡಿತ ಮಾಡಲು ಪ್ರಚೋದಿಸುವಂತಿದೆ. ನಗಣ್ಯಮಟ್ಟದ ಕನಿಷ್ಠ ವೇತನ ಕಾಯ್ದೆಯು, ಕನಿಷ್ಠ ವೇತನವನ್ನು ಕಡಿಮೆ ಮಾಡಿ ಕಾರ್ಮಿಕರನ್ನು ಲೂಟಿ ಮಾಡಲು ಬಂಡವಾಳಶಾಹಿಗಳಿಗೆ ಅವಕಾಶ ಮಾಡಿಕೊಡಲಿದೆ.

15 ನೇ ಭಾರತೀಯ ಕಾರ್ಮಿಕ ಸಮ್ಮೇಳನವು ಹಾಗೂ 1992 ರಲ್ಲಿ ಭಾರತ ಸರ್ವೋಚ್ಚ ನ್ಯಾಯಾಲಯವು ರಪ್ಟಾಕೋಸ್ ಬ್ರೆಟ್ ಪ್ರಕರಣದಲ್ಲಿ ಕನಿಷ್ಠ ವೇತನವನ್ನು ನಿಗದಿಗೊಳಿಸಲು ರೂಪಿಸಿದ್ದ ಸೂತ್ರ (2700 ಕ್ಯಾಲೂರಿ ಆಹಾರ) ವನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ. ಇದೇ ಸೂತ್ರವನ್ನು 44 ನೇ ಭಾರತೀಯ ಕಾರ್ಮಿಕ ಸಮ್ಮೇಳನದಲ್ಲಿ ಸರ್ವಾನುಮತದಿಂದ ಅಂಗೀಕಾರ ಆಗಿದ್ದಲ್ಲದೇ, 45 ಹಾಗೂ 46ನೇ ಭಾರತೀಯ ಕಾರ್ಮಿಕ ಸಮ್ಮೇಳನಗಳಲ್ಲಿ ಸಹ ಸರ್ವಾನುಮತದಿಂದ ಪುನರುಚ್ಚರಿಸಲಾಗಿತ್ತು.

ಈ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರವು ಭಾಗಿಧಾರನಾಗಿ ಭಾಗವಹಿಸಿತ್ತು. ಮೇಲೆ ಹೇಳಲಾದ ಸೂತ್ರದ ಪ್ರಕಾರ 2014 ರ ಕನಿಷ್ಠ ವೇತನ 18 ಸಾವಿರ ರೂ (ದಿನಕ್ಕೆ ರೂ 692.3) ಎಂದು ನಿಗದಿಯಾಗಿತ್ತು. ಇದೇ ವೇತನವನ್ನೇ ಆರನೇ ವೇತನ ಆಯೋಗವು ಶಿಪಾರಸ್ಸು ಮಾಡಿತ್ತು. ಇದಾದ ನಂತರ 2018 ರಲ್ಲಿ ಇದೇ ಕೇಂದ್ರ ಬಿಜೆಪಿ ಸರ್ಕಾರದ ಕಾರ್ಮಿಕ ಸಚಿವರು ಕನಿಷ್ಠ ವೇತನವನ್ನು ನಿಗಧಿಗೊಳಿಸುವ ಕುರಿತು ಇರುವ ವಿಧಾನಗಳನ್ನು ನಿರ್ಧರಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಿತ್ತು.

ಈ ತಜ್ಞರ ಸಮಿತಿಯು ಭಾರತೀಯ ಕಾರ್ಮಿಕ ಸಮ್ಮೇಳನದ ಸರ್ವಾನುಮತದ ಶಿಫಾರಸುಗಳಾದ 2700 ಕ್ಯಾಲೊರಿ ಆಹಾರ ಸೂತ್ರವನ್ನು ಏಕಪಕ್ಷೀಯವಾಗಿ ಬದಲಿಸಿ 2400 ಕ್ಯಾಲೊರಿಗೆ ಇಳಿಸಿತು. ಅಲ್ಲದೆ ಕನಿಷ್ಠ ವೇತನದ ಲೆಕ್ಕಾಚಾರಕ್ಕೆ ಅಗತ್ಯವಾದ ವಸ್ತುಗಳ ದರಗಳನ್ನು 2012ರ ಮಾರುಕಟ್ಟೆಯ ದರದಂತೆ ಪರಿಗಣಿಸಿತು.

ಈ ತಜ್ಞರ ಸಮಿತಿಯು ಕನಿಷ್ಠವೇತನವನ್ನು  ದಿನಕ್ಕೆ 375 ರೂನಿಂದ 447 ರೂಪಾಯಿಗಳಿಗೆ (ಮಾಸಿಕ ರೂ.9750 ರಿಂದ 11,622) ಶಿಫಾರಸು ಮಾಡಿತ್ತು. ಆದರೆ ಈ ಶಿಫಾರಸು ಕಾರ್ಪೊರೇಟ್ ಬಂಡವಾಳದಾರರ ಕಂಪನಿಗಳ ಕೆಂಗಣ್ಣಿಗೆ ಗುರಿಯಾಯಿತು.

ಬಲಿಷ್ಠ ಪ್ರಧಾನಿ ಸದೃಢ ಸರ್ಕಾರ ಎಂದು ಹೇಳುವ ಕೇಂದ್ರದ ಬಿಜೆಪಿ ಸರ್ಕಾರವು ನಾಚಿಕೆ ಇಲ್ಲದಂತೆ ತನ್ನದೇ ತಜ್ಞರ ಸಮಿತಿಯ ಶಿಫಾರಸುಗಳನ್ನು ಬದಿಗೆ ಸರಿಸಿ, ದಿನವೊಂದಕ್ಕೆ 178 ರೂಪಾಯಿ ನಗಣ್ಯ ಮಟ್ಟದ ಕನಿಷ್ಟ ವೇತನವನ್ನು ಘೋಷಿಸಿದೆ . ಇದು ಎಲ್ಲರನ್ನೂ ಒಳಗೊಳ್ಳುವಿಕೆಯ ಅಭಿವೃದ್ಧಿ ಎಂದು ಜಪ ಮಾಡುತ್ತಿರುವ ಬಿಜೆಪಿ ಸರ್ಕಾರದ ನಿಜ ಮುಖವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. “ಈ ತಜ್ಞರ ಸಮಿತಿಯು ಕನಿಷ್ಠವೇತನವನ್ನು ದಿನಕ್ಕೆ 375 ರೂನಿಂದ 447 ರೂಪಾಯಿಗಳಿಗೆ (ಮಾಸಿಕ ರೂ.9750 ರಿಂದ 11,622) ಶಿಫಾರಸು ಮಾಡಿತ್ತು” ಎಂದು ತಿಳಿಸಿರುತ್ತೀರಿ.

    ಆ ತಜ್ಞರ ಸಮಿತಿಯ ವರದಿಯನ್ನು ಪ್ರಕಟಿಸಿ ಎಂದು ವಿನಂತಿ.

  2. ಪ್ರಧಾನಿ ಮೋದಿಯವರು ಒಂದು ದಿನ ಅಣಬೆ ತಿನ್ನುವುದಕ್ಕೆ ಖರ್ಚು ಮಾಡುವ ದುಡ್ಡು 38000 (ಮೂವತ್ತೆಂಟು ಸಾವಿರ ). ಇಂತವರಿಗೆ ಕಾರ್ಮಿಕರ ಕಷ್ಟ ಎಲ್ಲಿ ಅರ್ಥ ಆಗುತ್ತೆ ?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...