Homeಚಳವಳಿಕಾರ್ಮಿಕರನ್ನು ಗುಲಾಮರನ್ನಾಗಿಸುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು.

ಕಾರ್ಮಿಕರನ್ನು ಗುಲಾಮರನ್ನಾಗಿಸುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು.

- Advertisement -
- Advertisement -

ಕಾರ್ಪೊರೇಟ್ ಧಣಿಗಳ ವ್ಯಾಪಾರವನ್ನು ಸುಲಲಿತಗೊಳಿಸುವ ಉದ್ದೇಶಕ್ಕೆ ಅತಿ ಅಗತ್ಯ ಎಂದು ಪ್ರತಿಪಾದಿಸುತ್ತಿರುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು ಅಕ್ಷರಶಃ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಧೋರಣೆಗಳಾಗಿವೆ. ಕಾರ್ಮಿಕರಿಗೆ ಕಾನೂನು ಬದ್ದವಾಗಿ ಇರುವ ಹಕ್ಕುಗಳನ್ನು ಹಾಗೂ ರಕ್ಷಣೆಗಳನ್ನು ದಮನ ಮಾಡುವುದೇ ಈ ಕಾರ್ಮಿಕ ಕಾನೂನು ಸುಧಾರಣೆಗಳ ಹೂರಣ ಎಂಬುದು ಗಮನಾರ್ಹ.

ಎರಡನೇ ಬಾರಿ ಪ್ರಧಾನಮಂತ್ರಿಯಾಗಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಕೇಂದ್ರ ಸಂಪುಟ ಸಭೆಯು ಮಾನವ ಘನತೆಗೆ ವಿರುದ್ದವಾದ ಅಮಾನವೀಯ ಧೋರಣೆಗೆ ಅನುಮತಿ ಕೊಟ್ಟಿದೆ. ಸ್ವತಃ ಕೇಂದ್ರ ಕಾರ್ಮಿಕ ಸಚಿವರು, ಇತರೆ ಸಚಿವರ ಜೊತೆ ದಿನಾಂಕ 10-07-19 ರಂದು ಪತ್ರಿಕಾಗೋಷ್ಠಿ ನಡೆಸಿ ‘ಔದ್ಯೋಗಿಕ ಸುರಕ್ಷತೆ ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಮಸೂದೆ 2019 ‘ಅನ್ನು ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸಭೆಯು ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ. ಈ ಮಸೂದೆಯು ಹಾಲಿ ಅಸ್ತಿತ್ವದಲ್ಲಿರುವ 13 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ ರೂಪಿಸಿರುವ ಸಂಹಿತೆಯಾಗಿದೆ. ಈ ಮಸೂದೆಯಲ್ಲಿ ಮಾಲೀಕರಿಗೆ ಅನುಕೂಲಕರವಾಗಿರುವ ಹಿಂದಿನ ಕಾಯಿದೆಯ ಅಂಶಗಳೆಲ್ಲವನ್ನೂ ಉಳಿಸಿಕೊಂಡು ಕಾರ್ಮಿಕರ ಹಕ್ಕು ಹಾಗೂ ರಕ್ಷಣೆಗಾಗಿ ಇದ್ದ ನಿಯಮ, ಉಪ ನಿಯಮಗಳೆಲ್ಲವನ್ನೂ ದುರ್ಬಲಗೊಳಿಸಲಾಗಿದೆ ಅಥವಾ ತಿರುಚಿ ಹಾಳು ಮಾಡಲಾಗಿದೆ.

ಆರೋಗ್ಯ ಹಾಗೂ ಸುರಕ್ಷತೆಯಂತಹ ವಿಷಯದಲ್ಲೂ ಸಹ ಕಾರ್ಮಿಕರಾಗಲಿ ಅಥವಾ ಅವರ ಸಂಘಟನೆಗಳಾಗಲಿ ಸಮರ್ಪಕ ಜಾರಿಗಾಗಿ ಒತ್ತಾಯಿಸಲು ಸಾಧ್ಯವಾಗದಂತೆ, ಮತ್ತು ಕೆಲಸದ ಸ್ಥಳದಲ್ಲಿ ಸಾಮಾನ್ಯವಾಗಿ ಉಂಟಾಗುವ ಮೂಲಭೂತ ಆರೋಗ್ಯ ಹಾಗೂ ಸುರಕ್ಷತೆಗೆ ಸಂಬಂಧಿಸಿ ಕಾನೂನು ಉಲ್ಲಂಘನೆಗಾಗಿ ಮಾಲೀಕರನ್ನು ಹೊಣೆ ಮಾಡಲು ಕೂಡ ಆಗದಂತೆ ಈ ಸಂಹಿತೆಯನ್ನು ರೂಪಿಸಲಾಗಿದೆ. ಇದರಿಂದಾಗಿ ಮತ್ತಷ್ಟು ಅಂಗವೈಕಲ್ಯತೆ, ಗಾಯಾಳುಗಳ ಸಂಖ್ಯೆಯಲ್ಲಿ ಹೆಚ್ಚಳ, ಪ್ರಾಣಹಾನಿ ಹೆಚ್ಚಾಗಲು ಈ ಮಸೂದೆ ಕಾರಣವಾಗಲಿದೆ.

ಈ ಮಸೂದೆಯನ್ನು ರೂಪಿಸುವ ಸಂದರ್ಭದಲ್ಲಿ ಎಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳು ಹಾಗೂ ಕಾರ್ಮಿಕರು ತೀವ್ರವಾದ ವಿರೋಧವನ್ನು ವ್ಯಕ್ತಪಡಿಸಿದ್ದರೂ ಕಡೆಗಣಿಸಿ, ಬಂಡವಾಳಶಾಹಿ -ಕಾರ್ಪೊರೇಟ್ ವಲಯವನ್ನು ತೃಪ್ತಿಪಡಿಸಲು ಹಾಗೂ ಚುನಾವಣೆಯಲ್ಲಿ ಮಾಡಿದ ಸಹಾಯಕ್ಕಾಗಿ ಋಣ ಸಂದಾಯ ಮಾಡಲು ಅತ್ಯುತ್ಸಾಹದಿಂದ ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ ಎಂದು ಸಿಐಟಿಯು ಅಪಾದಿಸಿದೆ.

ಕೇಂದ್ರ ಕಾರ್ಮಿಕ ಸಚಿವರು ಮತ್ತೊಂದು ವಿಷಯ ಪ್ರಸ್ತಾಪಿಸಿ ‘ವೇತನ ಸಂಹಿತೆ ಮಸೂದೆ 2019 ‘ಅನ್ನು ಸಹ ಅನುಮೋದಿಸಿರುವುದಾಗಿ ತಿಳಿಸಿದ್ದಾರೆ. ಇದರ ಪ್ರಕಾರ ರಾಷ್ಟ್ರೀಯ ಕನಿಷ್ಠ ವೇತನ ದಿನಕ್ಕೆ ರೂ 178 (ತಿಂಗಳಿಗೆ 4628) ನಿಗದಿಪಡಿಸಲಾಗಿದೆ. ಇದಕ್ಕಿಂತ ಕಡಿಮೆ ವೇತನವನ್ನು ರಾಜ್ಯ ಸರ್ಕಾರಗಳು ನಿಗದಿಪಡಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಇದೊಂದು ಅತ್ಯಂತ ಹಾಸ್ಯಾಸ್ಪದ ಹಾಗೂ ನಾಚಿಕೇಗೇಡಿನ ವಿಷಯವಾಗಿದೆ. ಈ ಸಂಹಿತೆಯು ಕನಿಷ್ಟ ಕೂಲಿಯ ಜಾರಿಗೆ ಬೇಕಾದ ಶಾಸನಬದ್ಧ ವ್ಯವಸ್ಥೆಯನ್ನು ಸಹ ಹೊಂದಿರುವುದಿಲ್ಲ.

ಈಗಾಗಲೇ ದೇಶದ 31 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕನಿಷ್ಠ ವೇತನವು ದಿನಕ್ಕೆ ರೂ 178 ಕ್ಕಿಂತ ಹೆಚ್ಚಿದೆ. ಕೇಂದ್ರ ಸರ್ಕಾರದ ಈ ಕನಿಷ್ಠ ವೇತನದ ಪ್ರಕಟಣೆಗಳು ಸರ್ಕಾರಗಳನ್ನು ಹಾಗೂ ಮಾಲೀಕರನ್ನು ಕನಿಷ್ಟ ವೇತನ ಕಡಿತ ಮಾಡಲು ಪ್ರಚೋದಿಸುವಂತಿದೆ. ನಗಣ್ಯಮಟ್ಟದ ಕನಿಷ್ಠ ವೇತನ ಕಾಯ್ದೆಯು, ಕನಿಷ್ಠ ವೇತನವನ್ನು ಕಡಿಮೆ ಮಾಡಿ ಕಾರ್ಮಿಕರನ್ನು ಲೂಟಿ ಮಾಡಲು ಬಂಡವಾಳಶಾಹಿಗಳಿಗೆ ಅವಕಾಶ ಮಾಡಿಕೊಡಲಿದೆ.

15 ನೇ ಭಾರತೀಯ ಕಾರ್ಮಿಕ ಸಮ್ಮೇಳನವು ಹಾಗೂ 1992 ರಲ್ಲಿ ಭಾರತ ಸರ್ವೋಚ್ಚ ನ್ಯಾಯಾಲಯವು ರಪ್ಟಾಕೋಸ್ ಬ್ರೆಟ್ ಪ್ರಕರಣದಲ್ಲಿ ಕನಿಷ್ಠ ವೇತನವನ್ನು ನಿಗದಿಗೊಳಿಸಲು ರೂಪಿಸಿದ್ದ ಸೂತ್ರ (2700 ಕ್ಯಾಲೂರಿ ಆಹಾರ) ವನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ. ಇದೇ ಸೂತ್ರವನ್ನು 44 ನೇ ಭಾರತೀಯ ಕಾರ್ಮಿಕ ಸಮ್ಮೇಳನದಲ್ಲಿ ಸರ್ವಾನುಮತದಿಂದ ಅಂಗೀಕಾರ ಆಗಿದ್ದಲ್ಲದೇ, 45 ಹಾಗೂ 46ನೇ ಭಾರತೀಯ ಕಾರ್ಮಿಕ ಸಮ್ಮೇಳನಗಳಲ್ಲಿ ಸಹ ಸರ್ವಾನುಮತದಿಂದ ಪುನರುಚ್ಚರಿಸಲಾಗಿತ್ತು.

ಈ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರವು ಭಾಗಿಧಾರನಾಗಿ ಭಾಗವಹಿಸಿತ್ತು. ಮೇಲೆ ಹೇಳಲಾದ ಸೂತ್ರದ ಪ್ರಕಾರ 2014 ರ ಕನಿಷ್ಠ ವೇತನ 18 ಸಾವಿರ ರೂ (ದಿನಕ್ಕೆ ರೂ 692.3) ಎಂದು ನಿಗದಿಯಾಗಿತ್ತು. ಇದೇ ವೇತನವನ್ನೇ ಆರನೇ ವೇತನ ಆಯೋಗವು ಶಿಪಾರಸ್ಸು ಮಾಡಿತ್ತು. ಇದಾದ ನಂತರ 2018 ರಲ್ಲಿ ಇದೇ ಕೇಂದ್ರ ಬಿಜೆಪಿ ಸರ್ಕಾರದ ಕಾರ್ಮಿಕ ಸಚಿವರು ಕನಿಷ್ಠ ವೇತನವನ್ನು ನಿಗಧಿಗೊಳಿಸುವ ಕುರಿತು ಇರುವ ವಿಧಾನಗಳನ್ನು ನಿರ್ಧರಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಿತ್ತು.

ಈ ತಜ್ಞರ ಸಮಿತಿಯು ಭಾರತೀಯ ಕಾರ್ಮಿಕ ಸಮ್ಮೇಳನದ ಸರ್ವಾನುಮತದ ಶಿಫಾರಸುಗಳಾದ 2700 ಕ್ಯಾಲೊರಿ ಆಹಾರ ಸೂತ್ರವನ್ನು ಏಕಪಕ್ಷೀಯವಾಗಿ ಬದಲಿಸಿ 2400 ಕ್ಯಾಲೊರಿಗೆ ಇಳಿಸಿತು. ಅಲ್ಲದೆ ಕನಿಷ್ಠ ವೇತನದ ಲೆಕ್ಕಾಚಾರಕ್ಕೆ ಅಗತ್ಯವಾದ ವಸ್ತುಗಳ ದರಗಳನ್ನು 2012ರ ಮಾರುಕಟ್ಟೆಯ ದರದಂತೆ ಪರಿಗಣಿಸಿತು.

ಈ ತಜ್ಞರ ಸಮಿತಿಯು ಕನಿಷ್ಠವೇತನವನ್ನು  ದಿನಕ್ಕೆ 375 ರೂನಿಂದ 447 ರೂಪಾಯಿಗಳಿಗೆ (ಮಾಸಿಕ ರೂ.9750 ರಿಂದ 11,622) ಶಿಫಾರಸು ಮಾಡಿತ್ತು. ಆದರೆ ಈ ಶಿಫಾರಸು ಕಾರ್ಪೊರೇಟ್ ಬಂಡವಾಳದಾರರ ಕಂಪನಿಗಳ ಕೆಂಗಣ್ಣಿಗೆ ಗುರಿಯಾಯಿತು.

ಬಲಿಷ್ಠ ಪ್ರಧಾನಿ ಸದೃಢ ಸರ್ಕಾರ ಎಂದು ಹೇಳುವ ಕೇಂದ್ರದ ಬಿಜೆಪಿ ಸರ್ಕಾರವು ನಾಚಿಕೆ ಇಲ್ಲದಂತೆ ತನ್ನದೇ ತಜ್ಞರ ಸಮಿತಿಯ ಶಿಫಾರಸುಗಳನ್ನು ಬದಿಗೆ ಸರಿಸಿ, ದಿನವೊಂದಕ್ಕೆ 178 ರೂಪಾಯಿ ನಗಣ್ಯ ಮಟ್ಟದ ಕನಿಷ್ಟ ವೇತನವನ್ನು ಘೋಷಿಸಿದೆ . ಇದು ಎಲ್ಲರನ್ನೂ ಒಳಗೊಳ್ಳುವಿಕೆಯ ಅಭಿವೃದ್ಧಿ ಎಂದು ಜಪ ಮಾಡುತ್ತಿರುವ ಬಿಜೆಪಿ ಸರ್ಕಾರದ ನಿಜ ಮುಖವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. “ಈ ತಜ್ಞರ ಸಮಿತಿಯು ಕನಿಷ್ಠವೇತನವನ್ನು ದಿನಕ್ಕೆ 375 ರೂನಿಂದ 447 ರೂಪಾಯಿಗಳಿಗೆ (ಮಾಸಿಕ ರೂ.9750 ರಿಂದ 11,622) ಶಿಫಾರಸು ಮಾಡಿತ್ತು” ಎಂದು ತಿಳಿಸಿರುತ್ತೀರಿ.

    ಆ ತಜ್ಞರ ಸಮಿತಿಯ ವರದಿಯನ್ನು ಪ್ರಕಟಿಸಿ ಎಂದು ವಿನಂತಿ.

  2. ಪ್ರಧಾನಿ ಮೋದಿಯವರು ಒಂದು ದಿನ ಅಣಬೆ ತಿನ್ನುವುದಕ್ಕೆ ಖರ್ಚು ಮಾಡುವ ದುಡ್ಡು 38000 (ಮೂವತ್ತೆಂಟು ಸಾವಿರ ). ಇಂತವರಿಗೆ ಕಾರ್ಮಿಕರ ಕಷ್ಟ ಎಲ್ಲಿ ಅರ್ಥ ಆಗುತ್ತೆ ?

LEAVE A REPLY

Please enter your comment!
Please enter your name here

- Advertisment -

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...