Homeಚಳವಳಿಕಾರ್ಮಿಕರನ್ನು ಗುಲಾಮರನ್ನಾಗಿಸುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು.

ಕಾರ್ಮಿಕರನ್ನು ಗುಲಾಮರನ್ನಾಗಿಸುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು.

- Advertisement -
- Advertisement -

ಕಾರ್ಪೊರೇಟ್ ಧಣಿಗಳ ವ್ಯಾಪಾರವನ್ನು ಸುಲಲಿತಗೊಳಿಸುವ ಉದ್ದೇಶಕ್ಕೆ ಅತಿ ಅಗತ್ಯ ಎಂದು ಪ್ರತಿಪಾದಿಸುತ್ತಿರುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು ಅಕ್ಷರಶಃ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಧೋರಣೆಗಳಾಗಿವೆ. ಕಾರ್ಮಿಕರಿಗೆ ಕಾನೂನು ಬದ್ದವಾಗಿ ಇರುವ ಹಕ್ಕುಗಳನ್ನು ಹಾಗೂ ರಕ್ಷಣೆಗಳನ್ನು ದಮನ ಮಾಡುವುದೇ ಈ ಕಾರ್ಮಿಕ ಕಾನೂನು ಸುಧಾರಣೆಗಳ ಹೂರಣ ಎಂಬುದು ಗಮನಾರ್ಹ.

ಎರಡನೇ ಬಾರಿ ಪ್ರಧಾನಮಂತ್ರಿಯಾಗಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಕೇಂದ್ರ ಸಂಪುಟ ಸಭೆಯು ಮಾನವ ಘನತೆಗೆ ವಿರುದ್ದವಾದ ಅಮಾನವೀಯ ಧೋರಣೆಗೆ ಅನುಮತಿ ಕೊಟ್ಟಿದೆ. ಸ್ವತಃ ಕೇಂದ್ರ ಕಾರ್ಮಿಕ ಸಚಿವರು, ಇತರೆ ಸಚಿವರ ಜೊತೆ ದಿನಾಂಕ 10-07-19 ರಂದು ಪತ್ರಿಕಾಗೋಷ್ಠಿ ನಡೆಸಿ ‘ಔದ್ಯೋಗಿಕ ಸುರಕ್ಷತೆ ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಮಸೂದೆ 2019 ‘ಅನ್ನು ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸಭೆಯು ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ. ಈ ಮಸೂದೆಯು ಹಾಲಿ ಅಸ್ತಿತ್ವದಲ್ಲಿರುವ 13 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ ರೂಪಿಸಿರುವ ಸಂಹಿತೆಯಾಗಿದೆ. ಈ ಮಸೂದೆಯಲ್ಲಿ ಮಾಲೀಕರಿಗೆ ಅನುಕೂಲಕರವಾಗಿರುವ ಹಿಂದಿನ ಕಾಯಿದೆಯ ಅಂಶಗಳೆಲ್ಲವನ್ನೂ ಉಳಿಸಿಕೊಂಡು ಕಾರ್ಮಿಕರ ಹಕ್ಕು ಹಾಗೂ ರಕ್ಷಣೆಗಾಗಿ ಇದ್ದ ನಿಯಮ, ಉಪ ನಿಯಮಗಳೆಲ್ಲವನ್ನೂ ದುರ್ಬಲಗೊಳಿಸಲಾಗಿದೆ ಅಥವಾ ತಿರುಚಿ ಹಾಳು ಮಾಡಲಾಗಿದೆ.

ಆರೋಗ್ಯ ಹಾಗೂ ಸುರಕ್ಷತೆಯಂತಹ ವಿಷಯದಲ್ಲೂ ಸಹ ಕಾರ್ಮಿಕರಾಗಲಿ ಅಥವಾ ಅವರ ಸಂಘಟನೆಗಳಾಗಲಿ ಸಮರ್ಪಕ ಜಾರಿಗಾಗಿ ಒತ್ತಾಯಿಸಲು ಸಾಧ್ಯವಾಗದಂತೆ, ಮತ್ತು ಕೆಲಸದ ಸ್ಥಳದಲ್ಲಿ ಸಾಮಾನ್ಯವಾಗಿ ಉಂಟಾಗುವ ಮೂಲಭೂತ ಆರೋಗ್ಯ ಹಾಗೂ ಸುರಕ್ಷತೆಗೆ ಸಂಬಂಧಿಸಿ ಕಾನೂನು ಉಲ್ಲಂಘನೆಗಾಗಿ ಮಾಲೀಕರನ್ನು ಹೊಣೆ ಮಾಡಲು ಕೂಡ ಆಗದಂತೆ ಈ ಸಂಹಿತೆಯನ್ನು ರೂಪಿಸಲಾಗಿದೆ. ಇದರಿಂದಾಗಿ ಮತ್ತಷ್ಟು ಅಂಗವೈಕಲ್ಯತೆ, ಗಾಯಾಳುಗಳ ಸಂಖ್ಯೆಯಲ್ಲಿ ಹೆಚ್ಚಳ, ಪ್ರಾಣಹಾನಿ ಹೆಚ್ಚಾಗಲು ಈ ಮಸೂದೆ ಕಾರಣವಾಗಲಿದೆ.

ಈ ಮಸೂದೆಯನ್ನು ರೂಪಿಸುವ ಸಂದರ್ಭದಲ್ಲಿ ಎಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳು ಹಾಗೂ ಕಾರ್ಮಿಕರು ತೀವ್ರವಾದ ವಿರೋಧವನ್ನು ವ್ಯಕ್ತಪಡಿಸಿದ್ದರೂ ಕಡೆಗಣಿಸಿ, ಬಂಡವಾಳಶಾಹಿ -ಕಾರ್ಪೊರೇಟ್ ವಲಯವನ್ನು ತೃಪ್ತಿಪಡಿಸಲು ಹಾಗೂ ಚುನಾವಣೆಯಲ್ಲಿ ಮಾಡಿದ ಸಹಾಯಕ್ಕಾಗಿ ಋಣ ಸಂದಾಯ ಮಾಡಲು ಅತ್ಯುತ್ಸಾಹದಿಂದ ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ ಎಂದು ಸಿಐಟಿಯು ಅಪಾದಿಸಿದೆ.

ಕೇಂದ್ರ ಕಾರ್ಮಿಕ ಸಚಿವರು ಮತ್ತೊಂದು ವಿಷಯ ಪ್ರಸ್ತಾಪಿಸಿ ‘ವೇತನ ಸಂಹಿತೆ ಮಸೂದೆ 2019 ‘ಅನ್ನು ಸಹ ಅನುಮೋದಿಸಿರುವುದಾಗಿ ತಿಳಿಸಿದ್ದಾರೆ. ಇದರ ಪ್ರಕಾರ ರಾಷ್ಟ್ರೀಯ ಕನಿಷ್ಠ ವೇತನ ದಿನಕ್ಕೆ ರೂ 178 (ತಿಂಗಳಿಗೆ 4628) ನಿಗದಿಪಡಿಸಲಾಗಿದೆ. ಇದಕ್ಕಿಂತ ಕಡಿಮೆ ವೇತನವನ್ನು ರಾಜ್ಯ ಸರ್ಕಾರಗಳು ನಿಗದಿಪಡಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಇದೊಂದು ಅತ್ಯಂತ ಹಾಸ್ಯಾಸ್ಪದ ಹಾಗೂ ನಾಚಿಕೇಗೇಡಿನ ವಿಷಯವಾಗಿದೆ. ಈ ಸಂಹಿತೆಯು ಕನಿಷ್ಟ ಕೂಲಿಯ ಜಾರಿಗೆ ಬೇಕಾದ ಶಾಸನಬದ್ಧ ವ್ಯವಸ್ಥೆಯನ್ನು ಸಹ ಹೊಂದಿರುವುದಿಲ್ಲ.

ಈಗಾಗಲೇ ದೇಶದ 31 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕನಿಷ್ಠ ವೇತನವು ದಿನಕ್ಕೆ ರೂ 178 ಕ್ಕಿಂತ ಹೆಚ್ಚಿದೆ. ಕೇಂದ್ರ ಸರ್ಕಾರದ ಈ ಕನಿಷ್ಠ ವೇತನದ ಪ್ರಕಟಣೆಗಳು ಸರ್ಕಾರಗಳನ್ನು ಹಾಗೂ ಮಾಲೀಕರನ್ನು ಕನಿಷ್ಟ ವೇತನ ಕಡಿತ ಮಾಡಲು ಪ್ರಚೋದಿಸುವಂತಿದೆ. ನಗಣ್ಯಮಟ್ಟದ ಕನಿಷ್ಠ ವೇತನ ಕಾಯ್ದೆಯು, ಕನಿಷ್ಠ ವೇತನವನ್ನು ಕಡಿಮೆ ಮಾಡಿ ಕಾರ್ಮಿಕರನ್ನು ಲೂಟಿ ಮಾಡಲು ಬಂಡವಾಳಶಾಹಿಗಳಿಗೆ ಅವಕಾಶ ಮಾಡಿಕೊಡಲಿದೆ.

15 ನೇ ಭಾರತೀಯ ಕಾರ್ಮಿಕ ಸಮ್ಮೇಳನವು ಹಾಗೂ 1992 ರಲ್ಲಿ ಭಾರತ ಸರ್ವೋಚ್ಚ ನ್ಯಾಯಾಲಯವು ರಪ್ಟಾಕೋಸ್ ಬ್ರೆಟ್ ಪ್ರಕರಣದಲ್ಲಿ ಕನಿಷ್ಠ ವೇತನವನ್ನು ನಿಗದಿಗೊಳಿಸಲು ರೂಪಿಸಿದ್ದ ಸೂತ್ರ (2700 ಕ್ಯಾಲೂರಿ ಆಹಾರ) ವನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ. ಇದೇ ಸೂತ್ರವನ್ನು 44 ನೇ ಭಾರತೀಯ ಕಾರ್ಮಿಕ ಸಮ್ಮೇಳನದಲ್ಲಿ ಸರ್ವಾನುಮತದಿಂದ ಅಂಗೀಕಾರ ಆಗಿದ್ದಲ್ಲದೇ, 45 ಹಾಗೂ 46ನೇ ಭಾರತೀಯ ಕಾರ್ಮಿಕ ಸಮ್ಮೇಳನಗಳಲ್ಲಿ ಸಹ ಸರ್ವಾನುಮತದಿಂದ ಪುನರುಚ್ಚರಿಸಲಾಗಿತ್ತು.

ಈ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರವು ಭಾಗಿಧಾರನಾಗಿ ಭಾಗವಹಿಸಿತ್ತು. ಮೇಲೆ ಹೇಳಲಾದ ಸೂತ್ರದ ಪ್ರಕಾರ 2014 ರ ಕನಿಷ್ಠ ವೇತನ 18 ಸಾವಿರ ರೂ (ದಿನಕ್ಕೆ ರೂ 692.3) ಎಂದು ನಿಗದಿಯಾಗಿತ್ತು. ಇದೇ ವೇತನವನ್ನೇ ಆರನೇ ವೇತನ ಆಯೋಗವು ಶಿಪಾರಸ್ಸು ಮಾಡಿತ್ತು. ಇದಾದ ನಂತರ 2018 ರಲ್ಲಿ ಇದೇ ಕೇಂದ್ರ ಬಿಜೆಪಿ ಸರ್ಕಾರದ ಕಾರ್ಮಿಕ ಸಚಿವರು ಕನಿಷ್ಠ ವೇತನವನ್ನು ನಿಗಧಿಗೊಳಿಸುವ ಕುರಿತು ಇರುವ ವಿಧಾನಗಳನ್ನು ನಿರ್ಧರಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಿತ್ತು.

ಈ ತಜ್ಞರ ಸಮಿತಿಯು ಭಾರತೀಯ ಕಾರ್ಮಿಕ ಸಮ್ಮೇಳನದ ಸರ್ವಾನುಮತದ ಶಿಫಾರಸುಗಳಾದ 2700 ಕ್ಯಾಲೊರಿ ಆಹಾರ ಸೂತ್ರವನ್ನು ಏಕಪಕ್ಷೀಯವಾಗಿ ಬದಲಿಸಿ 2400 ಕ್ಯಾಲೊರಿಗೆ ಇಳಿಸಿತು. ಅಲ್ಲದೆ ಕನಿಷ್ಠ ವೇತನದ ಲೆಕ್ಕಾಚಾರಕ್ಕೆ ಅಗತ್ಯವಾದ ವಸ್ತುಗಳ ದರಗಳನ್ನು 2012ರ ಮಾರುಕಟ್ಟೆಯ ದರದಂತೆ ಪರಿಗಣಿಸಿತು.

ಈ ತಜ್ಞರ ಸಮಿತಿಯು ಕನಿಷ್ಠವೇತನವನ್ನು  ದಿನಕ್ಕೆ 375 ರೂನಿಂದ 447 ರೂಪಾಯಿಗಳಿಗೆ (ಮಾಸಿಕ ರೂ.9750 ರಿಂದ 11,622) ಶಿಫಾರಸು ಮಾಡಿತ್ತು. ಆದರೆ ಈ ಶಿಫಾರಸು ಕಾರ್ಪೊರೇಟ್ ಬಂಡವಾಳದಾರರ ಕಂಪನಿಗಳ ಕೆಂಗಣ್ಣಿಗೆ ಗುರಿಯಾಯಿತು.

ಬಲಿಷ್ಠ ಪ್ರಧಾನಿ ಸದೃಢ ಸರ್ಕಾರ ಎಂದು ಹೇಳುವ ಕೇಂದ್ರದ ಬಿಜೆಪಿ ಸರ್ಕಾರವು ನಾಚಿಕೆ ಇಲ್ಲದಂತೆ ತನ್ನದೇ ತಜ್ಞರ ಸಮಿತಿಯ ಶಿಫಾರಸುಗಳನ್ನು ಬದಿಗೆ ಸರಿಸಿ, ದಿನವೊಂದಕ್ಕೆ 178 ರೂಪಾಯಿ ನಗಣ್ಯ ಮಟ್ಟದ ಕನಿಷ್ಟ ವೇತನವನ್ನು ಘೋಷಿಸಿದೆ . ಇದು ಎಲ್ಲರನ್ನೂ ಒಳಗೊಳ್ಳುವಿಕೆಯ ಅಭಿವೃದ್ಧಿ ಎಂದು ಜಪ ಮಾಡುತ್ತಿರುವ ಬಿಜೆಪಿ ಸರ್ಕಾರದ ನಿಜ ಮುಖವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. “ಈ ತಜ್ಞರ ಸಮಿತಿಯು ಕನಿಷ್ಠವೇತನವನ್ನು ದಿನಕ್ಕೆ 375 ರೂನಿಂದ 447 ರೂಪಾಯಿಗಳಿಗೆ (ಮಾಸಿಕ ರೂ.9750 ರಿಂದ 11,622) ಶಿಫಾರಸು ಮಾಡಿತ್ತು” ಎಂದು ತಿಳಿಸಿರುತ್ತೀರಿ.

    ಆ ತಜ್ಞರ ಸಮಿತಿಯ ವರದಿಯನ್ನು ಪ್ರಕಟಿಸಿ ಎಂದು ವಿನಂತಿ.

  2. ಪ್ರಧಾನಿ ಮೋದಿಯವರು ಒಂದು ದಿನ ಅಣಬೆ ತಿನ್ನುವುದಕ್ಕೆ ಖರ್ಚು ಮಾಡುವ ದುಡ್ಡು 38000 (ಮೂವತ್ತೆಂಟು ಸಾವಿರ ). ಇಂತವರಿಗೆ ಕಾರ್ಮಿಕರ ಕಷ್ಟ ಎಲ್ಲಿ ಅರ್ಥ ಆಗುತ್ತೆ ?

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...