Homeಚಳವಳಿಕಾರ್ಮಿಕರನ್ನು ಗುಲಾಮರನ್ನಾಗಿಸುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು.

ಕಾರ್ಮಿಕರನ್ನು ಗುಲಾಮರನ್ನಾಗಿಸುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು.

- Advertisement -
- Advertisement -

ಕಾರ್ಪೊರೇಟ್ ಧಣಿಗಳ ವ್ಯಾಪಾರವನ್ನು ಸುಲಲಿತಗೊಳಿಸುವ ಉದ್ದೇಶಕ್ಕೆ ಅತಿ ಅಗತ್ಯ ಎಂದು ಪ್ರತಿಪಾದಿಸುತ್ತಿರುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು ಅಕ್ಷರಶಃ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಧೋರಣೆಗಳಾಗಿವೆ. ಕಾರ್ಮಿಕರಿಗೆ ಕಾನೂನು ಬದ್ದವಾಗಿ ಇರುವ ಹಕ್ಕುಗಳನ್ನು ಹಾಗೂ ರಕ್ಷಣೆಗಳನ್ನು ದಮನ ಮಾಡುವುದೇ ಈ ಕಾರ್ಮಿಕ ಕಾನೂನು ಸುಧಾರಣೆಗಳ ಹೂರಣ ಎಂಬುದು ಗಮನಾರ್ಹ.

ಎರಡನೇ ಬಾರಿ ಪ್ರಧಾನಮಂತ್ರಿಯಾಗಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಕೇಂದ್ರ ಸಂಪುಟ ಸಭೆಯು ಮಾನವ ಘನತೆಗೆ ವಿರುದ್ದವಾದ ಅಮಾನವೀಯ ಧೋರಣೆಗೆ ಅನುಮತಿ ಕೊಟ್ಟಿದೆ. ಸ್ವತಃ ಕೇಂದ್ರ ಕಾರ್ಮಿಕ ಸಚಿವರು, ಇತರೆ ಸಚಿವರ ಜೊತೆ ದಿನಾಂಕ 10-07-19 ರಂದು ಪತ್ರಿಕಾಗೋಷ್ಠಿ ನಡೆಸಿ ‘ಔದ್ಯೋಗಿಕ ಸುರಕ್ಷತೆ ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಮಸೂದೆ 2019 ‘ಅನ್ನು ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸಭೆಯು ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ. ಈ ಮಸೂದೆಯು ಹಾಲಿ ಅಸ್ತಿತ್ವದಲ್ಲಿರುವ 13 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ ರೂಪಿಸಿರುವ ಸಂಹಿತೆಯಾಗಿದೆ. ಈ ಮಸೂದೆಯಲ್ಲಿ ಮಾಲೀಕರಿಗೆ ಅನುಕೂಲಕರವಾಗಿರುವ ಹಿಂದಿನ ಕಾಯಿದೆಯ ಅಂಶಗಳೆಲ್ಲವನ್ನೂ ಉಳಿಸಿಕೊಂಡು ಕಾರ್ಮಿಕರ ಹಕ್ಕು ಹಾಗೂ ರಕ್ಷಣೆಗಾಗಿ ಇದ್ದ ನಿಯಮ, ಉಪ ನಿಯಮಗಳೆಲ್ಲವನ್ನೂ ದುರ್ಬಲಗೊಳಿಸಲಾಗಿದೆ ಅಥವಾ ತಿರುಚಿ ಹಾಳು ಮಾಡಲಾಗಿದೆ.

ಆರೋಗ್ಯ ಹಾಗೂ ಸುರಕ್ಷತೆಯಂತಹ ವಿಷಯದಲ್ಲೂ ಸಹ ಕಾರ್ಮಿಕರಾಗಲಿ ಅಥವಾ ಅವರ ಸಂಘಟನೆಗಳಾಗಲಿ ಸಮರ್ಪಕ ಜಾರಿಗಾಗಿ ಒತ್ತಾಯಿಸಲು ಸಾಧ್ಯವಾಗದಂತೆ, ಮತ್ತು ಕೆಲಸದ ಸ್ಥಳದಲ್ಲಿ ಸಾಮಾನ್ಯವಾಗಿ ಉಂಟಾಗುವ ಮೂಲಭೂತ ಆರೋಗ್ಯ ಹಾಗೂ ಸುರಕ್ಷತೆಗೆ ಸಂಬಂಧಿಸಿ ಕಾನೂನು ಉಲ್ಲಂಘನೆಗಾಗಿ ಮಾಲೀಕರನ್ನು ಹೊಣೆ ಮಾಡಲು ಕೂಡ ಆಗದಂತೆ ಈ ಸಂಹಿತೆಯನ್ನು ರೂಪಿಸಲಾಗಿದೆ. ಇದರಿಂದಾಗಿ ಮತ್ತಷ್ಟು ಅಂಗವೈಕಲ್ಯತೆ, ಗಾಯಾಳುಗಳ ಸಂಖ್ಯೆಯಲ್ಲಿ ಹೆಚ್ಚಳ, ಪ್ರಾಣಹಾನಿ ಹೆಚ್ಚಾಗಲು ಈ ಮಸೂದೆ ಕಾರಣವಾಗಲಿದೆ.

ಈ ಮಸೂದೆಯನ್ನು ರೂಪಿಸುವ ಸಂದರ್ಭದಲ್ಲಿ ಎಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳು ಹಾಗೂ ಕಾರ್ಮಿಕರು ತೀವ್ರವಾದ ವಿರೋಧವನ್ನು ವ್ಯಕ್ತಪಡಿಸಿದ್ದರೂ ಕಡೆಗಣಿಸಿ, ಬಂಡವಾಳಶಾಹಿ -ಕಾರ್ಪೊರೇಟ್ ವಲಯವನ್ನು ತೃಪ್ತಿಪಡಿಸಲು ಹಾಗೂ ಚುನಾವಣೆಯಲ್ಲಿ ಮಾಡಿದ ಸಹಾಯಕ್ಕಾಗಿ ಋಣ ಸಂದಾಯ ಮಾಡಲು ಅತ್ಯುತ್ಸಾಹದಿಂದ ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ ಎಂದು ಸಿಐಟಿಯು ಅಪಾದಿಸಿದೆ.

ಕೇಂದ್ರ ಕಾರ್ಮಿಕ ಸಚಿವರು ಮತ್ತೊಂದು ವಿಷಯ ಪ್ರಸ್ತಾಪಿಸಿ ‘ವೇತನ ಸಂಹಿತೆ ಮಸೂದೆ 2019 ‘ಅನ್ನು ಸಹ ಅನುಮೋದಿಸಿರುವುದಾಗಿ ತಿಳಿಸಿದ್ದಾರೆ. ಇದರ ಪ್ರಕಾರ ರಾಷ್ಟ್ರೀಯ ಕನಿಷ್ಠ ವೇತನ ದಿನಕ್ಕೆ ರೂ 178 (ತಿಂಗಳಿಗೆ 4628) ನಿಗದಿಪಡಿಸಲಾಗಿದೆ. ಇದಕ್ಕಿಂತ ಕಡಿಮೆ ವೇತನವನ್ನು ರಾಜ್ಯ ಸರ್ಕಾರಗಳು ನಿಗದಿಪಡಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಇದೊಂದು ಅತ್ಯಂತ ಹಾಸ್ಯಾಸ್ಪದ ಹಾಗೂ ನಾಚಿಕೇಗೇಡಿನ ವಿಷಯವಾಗಿದೆ. ಈ ಸಂಹಿತೆಯು ಕನಿಷ್ಟ ಕೂಲಿಯ ಜಾರಿಗೆ ಬೇಕಾದ ಶಾಸನಬದ್ಧ ವ್ಯವಸ್ಥೆಯನ್ನು ಸಹ ಹೊಂದಿರುವುದಿಲ್ಲ.

ಈಗಾಗಲೇ ದೇಶದ 31 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕನಿಷ್ಠ ವೇತನವು ದಿನಕ್ಕೆ ರೂ 178 ಕ್ಕಿಂತ ಹೆಚ್ಚಿದೆ. ಕೇಂದ್ರ ಸರ್ಕಾರದ ಈ ಕನಿಷ್ಠ ವೇತನದ ಪ್ರಕಟಣೆಗಳು ಸರ್ಕಾರಗಳನ್ನು ಹಾಗೂ ಮಾಲೀಕರನ್ನು ಕನಿಷ್ಟ ವೇತನ ಕಡಿತ ಮಾಡಲು ಪ್ರಚೋದಿಸುವಂತಿದೆ. ನಗಣ್ಯಮಟ್ಟದ ಕನಿಷ್ಠ ವೇತನ ಕಾಯ್ದೆಯು, ಕನಿಷ್ಠ ವೇತನವನ್ನು ಕಡಿಮೆ ಮಾಡಿ ಕಾರ್ಮಿಕರನ್ನು ಲೂಟಿ ಮಾಡಲು ಬಂಡವಾಳಶಾಹಿಗಳಿಗೆ ಅವಕಾಶ ಮಾಡಿಕೊಡಲಿದೆ.

15 ನೇ ಭಾರತೀಯ ಕಾರ್ಮಿಕ ಸಮ್ಮೇಳನವು ಹಾಗೂ 1992 ರಲ್ಲಿ ಭಾರತ ಸರ್ವೋಚ್ಚ ನ್ಯಾಯಾಲಯವು ರಪ್ಟಾಕೋಸ್ ಬ್ರೆಟ್ ಪ್ರಕರಣದಲ್ಲಿ ಕನಿಷ್ಠ ವೇತನವನ್ನು ನಿಗದಿಗೊಳಿಸಲು ರೂಪಿಸಿದ್ದ ಸೂತ್ರ (2700 ಕ್ಯಾಲೂರಿ ಆಹಾರ) ವನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ. ಇದೇ ಸೂತ್ರವನ್ನು 44 ನೇ ಭಾರತೀಯ ಕಾರ್ಮಿಕ ಸಮ್ಮೇಳನದಲ್ಲಿ ಸರ್ವಾನುಮತದಿಂದ ಅಂಗೀಕಾರ ಆಗಿದ್ದಲ್ಲದೇ, 45 ಹಾಗೂ 46ನೇ ಭಾರತೀಯ ಕಾರ್ಮಿಕ ಸಮ್ಮೇಳನಗಳಲ್ಲಿ ಸಹ ಸರ್ವಾನುಮತದಿಂದ ಪುನರುಚ್ಚರಿಸಲಾಗಿತ್ತು.

ಈ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರವು ಭಾಗಿಧಾರನಾಗಿ ಭಾಗವಹಿಸಿತ್ತು. ಮೇಲೆ ಹೇಳಲಾದ ಸೂತ್ರದ ಪ್ರಕಾರ 2014 ರ ಕನಿಷ್ಠ ವೇತನ 18 ಸಾವಿರ ರೂ (ದಿನಕ್ಕೆ ರೂ 692.3) ಎಂದು ನಿಗದಿಯಾಗಿತ್ತು. ಇದೇ ವೇತನವನ್ನೇ ಆರನೇ ವೇತನ ಆಯೋಗವು ಶಿಪಾರಸ್ಸು ಮಾಡಿತ್ತು. ಇದಾದ ನಂತರ 2018 ರಲ್ಲಿ ಇದೇ ಕೇಂದ್ರ ಬಿಜೆಪಿ ಸರ್ಕಾರದ ಕಾರ್ಮಿಕ ಸಚಿವರು ಕನಿಷ್ಠ ವೇತನವನ್ನು ನಿಗಧಿಗೊಳಿಸುವ ಕುರಿತು ಇರುವ ವಿಧಾನಗಳನ್ನು ನಿರ್ಧರಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಿತ್ತು.

ಈ ತಜ್ಞರ ಸಮಿತಿಯು ಭಾರತೀಯ ಕಾರ್ಮಿಕ ಸಮ್ಮೇಳನದ ಸರ್ವಾನುಮತದ ಶಿಫಾರಸುಗಳಾದ 2700 ಕ್ಯಾಲೊರಿ ಆಹಾರ ಸೂತ್ರವನ್ನು ಏಕಪಕ್ಷೀಯವಾಗಿ ಬದಲಿಸಿ 2400 ಕ್ಯಾಲೊರಿಗೆ ಇಳಿಸಿತು. ಅಲ್ಲದೆ ಕನಿಷ್ಠ ವೇತನದ ಲೆಕ್ಕಾಚಾರಕ್ಕೆ ಅಗತ್ಯವಾದ ವಸ್ತುಗಳ ದರಗಳನ್ನು 2012ರ ಮಾರುಕಟ್ಟೆಯ ದರದಂತೆ ಪರಿಗಣಿಸಿತು.

ಈ ತಜ್ಞರ ಸಮಿತಿಯು ಕನಿಷ್ಠವೇತನವನ್ನು  ದಿನಕ್ಕೆ 375 ರೂನಿಂದ 447 ರೂಪಾಯಿಗಳಿಗೆ (ಮಾಸಿಕ ರೂ.9750 ರಿಂದ 11,622) ಶಿಫಾರಸು ಮಾಡಿತ್ತು. ಆದರೆ ಈ ಶಿಫಾರಸು ಕಾರ್ಪೊರೇಟ್ ಬಂಡವಾಳದಾರರ ಕಂಪನಿಗಳ ಕೆಂಗಣ್ಣಿಗೆ ಗುರಿಯಾಯಿತು.

ಬಲಿಷ್ಠ ಪ್ರಧಾನಿ ಸದೃಢ ಸರ್ಕಾರ ಎಂದು ಹೇಳುವ ಕೇಂದ್ರದ ಬಿಜೆಪಿ ಸರ್ಕಾರವು ನಾಚಿಕೆ ಇಲ್ಲದಂತೆ ತನ್ನದೇ ತಜ್ಞರ ಸಮಿತಿಯ ಶಿಫಾರಸುಗಳನ್ನು ಬದಿಗೆ ಸರಿಸಿ, ದಿನವೊಂದಕ್ಕೆ 178 ರೂಪಾಯಿ ನಗಣ್ಯ ಮಟ್ಟದ ಕನಿಷ್ಟ ವೇತನವನ್ನು ಘೋಷಿಸಿದೆ . ಇದು ಎಲ್ಲರನ್ನೂ ಒಳಗೊಳ್ಳುವಿಕೆಯ ಅಭಿವೃದ್ಧಿ ಎಂದು ಜಪ ಮಾಡುತ್ತಿರುವ ಬಿಜೆಪಿ ಸರ್ಕಾರದ ನಿಜ ಮುಖವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. “ಈ ತಜ್ಞರ ಸಮಿತಿಯು ಕನಿಷ್ಠವೇತನವನ್ನು ದಿನಕ್ಕೆ 375 ರೂನಿಂದ 447 ರೂಪಾಯಿಗಳಿಗೆ (ಮಾಸಿಕ ರೂ.9750 ರಿಂದ 11,622) ಶಿಫಾರಸು ಮಾಡಿತ್ತು” ಎಂದು ತಿಳಿಸಿರುತ್ತೀರಿ.

    ಆ ತಜ್ಞರ ಸಮಿತಿಯ ವರದಿಯನ್ನು ಪ್ರಕಟಿಸಿ ಎಂದು ವಿನಂತಿ.

  2. ಪ್ರಧಾನಿ ಮೋದಿಯವರು ಒಂದು ದಿನ ಅಣಬೆ ತಿನ್ನುವುದಕ್ಕೆ ಖರ್ಚು ಮಾಡುವ ದುಡ್ಡು 38000 (ಮೂವತ್ತೆಂಟು ಸಾವಿರ ). ಇಂತವರಿಗೆ ಕಾರ್ಮಿಕರ ಕಷ್ಟ ಎಲ್ಲಿ ಅರ್ಥ ಆಗುತ್ತೆ ?

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...