Homeಚಳವಳಿಕಾರ್ಮಿಕರನ್ನು ಗುಲಾಮರನ್ನಾಗಿಸುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು.

ಕಾರ್ಮಿಕರನ್ನು ಗುಲಾಮರನ್ನಾಗಿಸುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು.

- Advertisement -
- Advertisement -

ಕಾರ್ಪೊರೇಟ್ ಧಣಿಗಳ ವ್ಯಾಪಾರವನ್ನು ಸುಲಲಿತಗೊಳಿಸುವ ಉದ್ದೇಶಕ್ಕೆ ಅತಿ ಅಗತ್ಯ ಎಂದು ಪ್ರತಿಪಾದಿಸುತ್ತಿರುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು ಅಕ್ಷರಶಃ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಧೋರಣೆಗಳಾಗಿವೆ. ಕಾರ್ಮಿಕರಿಗೆ ಕಾನೂನು ಬದ್ದವಾಗಿ ಇರುವ ಹಕ್ಕುಗಳನ್ನು ಹಾಗೂ ರಕ್ಷಣೆಗಳನ್ನು ದಮನ ಮಾಡುವುದೇ ಈ ಕಾರ್ಮಿಕ ಕಾನೂನು ಸುಧಾರಣೆಗಳ ಹೂರಣ ಎಂಬುದು ಗಮನಾರ್ಹ.

ಎರಡನೇ ಬಾರಿ ಪ್ರಧಾನಮಂತ್ರಿಯಾಗಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಕೇಂದ್ರ ಸಂಪುಟ ಸಭೆಯು ಮಾನವ ಘನತೆಗೆ ವಿರುದ್ದವಾದ ಅಮಾನವೀಯ ಧೋರಣೆಗೆ ಅನುಮತಿ ಕೊಟ್ಟಿದೆ. ಸ್ವತಃ ಕೇಂದ್ರ ಕಾರ್ಮಿಕ ಸಚಿವರು, ಇತರೆ ಸಚಿವರ ಜೊತೆ ದಿನಾಂಕ 10-07-19 ರಂದು ಪತ್ರಿಕಾಗೋಷ್ಠಿ ನಡೆಸಿ ‘ಔದ್ಯೋಗಿಕ ಸುರಕ್ಷತೆ ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಮಸೂದೆ 2019 ‘ಅನ್ನು ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸಭೆಯು ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ. ಈ ಮಸೂದೆಯು ಹಾಲಿ ಅಸ್ತಿತ್ವದಲ್ಲಿರುವ 13 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ ರೂಪಿಸಿರುವ ಸಂಹಿತೆಯಾಗಿದೆ. ಈ ಮಸೂದೆಯಲ್ಲಿ ಮಾಲೀಕರಿಗೆ ಅನುಕೂಲಕರವಾಗಿರುವ ಹಿಂದಿನ ಕಾಯಿದೆಯ ಅಂಶಗಳೆಲ್ಲವನ್ನೂ ಉಳಿಸಿಕೊಂಡು ಕಾರ್ಮಿಕರ ಹಕ್ಕು ಹಾಗೂ ರಕ್ಷಣೆಗಾಗಿ ಇದ್ದ ನಿಯಮ, ಉಪ ನಿಯಮಗಳೆಲ್ಲವನ್ನೂ ದುರ್ಬಲಗೊಳಿಸಲಾಗಿದೆ ಅಥವಾ ತಿರುಚಿ ಹಾಳು ಮಾಡಲಾಗಿದೆ.

ಆರೋಗ್ಯ ಹಾಗೂ ಸುರಕ್ಷತೆಯಂತಹ ವಿಷಯದಲ್ಲೂ ಸಹ ಕಾರ್ಮಿಕರಾಗಲಿ ಅಥವಾ ಅವರ ಸಂಘಟನೆಗಳಾಗಲಿ ಸಮರ್ಪಕ ಜಾರಿಗಾಗಿ ಒತ್ತಾಯಿಸಲು ಸಾಧ್ಯವಾಗದಂತೆ, ಮತ್ತು ಕೆಲಸದ ಸ್ಥಳದಲ್ಲಿ ಸಾಮಾನ್ಯವಾಗಿ ಉಂಟಾಗುವ ಮೂಲಭೂತ ಆರೋಗ್ಯ ಹಾಗೂ ಸುರಕ್ಷತೆಗೆ ಸಂಬಂಧಿಸಿ ಕಾನೂನು ಉಲ್ಲಂಘನೆಗಾಗಿ ಮಾಲೀಕರನ್ನು ಹೊಣೆ ಮಾಡಲು ಕೂಡ ಆಗದಂತೆ ಈ ಸಂಹಿತೆಯನ್ನು ರೂಪಿಸಲಾಗಿದೆ. ಇದರಿಂದಾಗಿ ಮತ್ತಷ್ಟು ಅಂಗವೈಕಲ್ಯತೆ, ಗಾಯಾಳುಗಳ ಸಂಖ್ಯೆಯಲ್ಲಿ ಹೆಚ್ಚಳ, ಪ್ರಾಣಹಾನಿ ಹೆಚ್ಚಾಗಲು ಈ ಮಸೂದೆ ಕಾರಣವಾಗಲಿದೆ.

ಈ ಮಸೂದೆಯನ್ನು ರೂಪಿಸುವ ಸಂದರ್ಭದಲ್ಲಿ ಎಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳು ಹಾಗೂ ಕಾರ್ಮಿಕರು ತೀವ್ರವಾದ ವಿರೋಧವನ್ನು ವ್ಯಕ್ತಪಡಿಸಿದ್ದರೂ ಕಡೆಗಣಿಸಿ, ಬಂಡವಾಳಶಾಹಿ -ಕಾರ್ಪೊರೇಟ್ ವಲಯವನ್ನು ತೃಪ್ತಿಪಡಿಸಲು ಹಾಗೂ ಚುನಾವಣೆಯಲ್ಲಿ ಮಾಡಿದ ಸಹಾಯಕ್ಕಾಗಿ ಋಣ ಸಂದಾಯ ಮಾಡಲು ಅತ್ಯುತ್ಸಾಹದಿಂದ ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ ಎಂದು ಸಿಐಟಿಯು ಅಪಾದಿಸಿದೆ.

ಕೇಂದ್ರ ಕಾರ್ಮಿಕ ಸಚಿವರು ಮತ್ತೊಂದು ವಿಷಯ ಪ್ರಸ್ತಾಪಿಸಿ ‘ವೇತನ ಸಂಹಿತೆ ಮಸೂದೆ 2019 ‘ಅನ್ನು ಸಹ ಅನುಮೋದಿಸಿರುವುದಾಗಿ ತಿಳಿಸಿದ್ದಾರೆ. ಇದರ ಪ್ರಕಾರ ರಾಷ್ಟ್ರೀಯ ಕನಿಷ್ಠ ವೇತನ ದಿನಕ್ಕೆ ರೂ 178 (ತಿಂಗಳಿಗೆ 4628) ನಿಗದಿಪಡಿಸಲಾಗಿದೆ. ಇದಕ್ಕಿಂತ ಕಡಿಮೆ ವೇತನವನ್ನು ರಾಜ್ಯ ಸರ್ಕಾರಗಳು ನಿಗದಿಪಡಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಇದೊಂದು ಅತ್ಯಂತ ಹಾಸ್ಯಾಸ್ಪದ ಹಾಗೂ ನಾಚಿಕೇಗೇಡಿನ ವಿಷಯವಾಗಿದೆ. ಈ ಸಂಹಿತೆಯು ಕನಿಷ್ಟ ಕೂಲಿಯ ಜಾರಿಗೆ ಬೇಕಾದ ಶಾಸನಬದ್ಧ ವ್ಯವಸ್ಥೆಯನ್ನು ಸಹ ಹೊಂದಿರುವುದಿಲ್ಲ.

ಈಗಾಗಲೇ ದೇಶದ 31 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕನಿಷ್ಠ ವೇತನವು ದಿನಕ್ಕೆ ರೂ 178 ಕ್ಕಿಂತ ಹೆಚ್ಚಿದೆ. ಕೇಂದ್ರ ಸರ್ಕಾರದ ಈ ಕನಿಷ್ಠ ವೇತನದ ಪ್ರಕಟಣೆಗಳು ಸರ್ಕಾರಗಳನ್ನು ಹಾಗೂ ಮಾಲೀಕರನ್ನು ಕನಿಷ್ಟ ವೇತನ ಕಡಿತ ಮಾಡಲು ಪ್ರಚೋದಿಸುವಂತಿದೆ. ನಗಣ್ಯಮಟ್ಟದ ಕನಿಷ್ಠ ವೇತನ ಕಾಯ್ದೆಯು, ಕನಿಷ್ಠ ವೇತನವನ್ನು ಕಡಿಮೆ ಮಾಡಿ ಕಾರ್ಮಿಕರನ್ನು ಲೂಟಿ ಮಾಡಲು ಬಂಡವಾಳಶಾಹಿಗಳಿಗೆ ಅವಕಾಶ ಮಾಡಿಕೊಡಲಿದೆ.

15 ನೇ ಭಾರತೀಯ ಕಾರ್ಮಿಕ ಸಮ್ಮೇಳನವು ಹಾಗೂ 1992 ರಲ್ಲಿ ಭಾರತ ಸರ್ವೋಚ್ಚ ನ್ಯಾಯಾಲಯವು ರಪ್ಟಾಕೋಸ್ ಬ್ರೆಟ್ ಪ್ರಕರಣದಲ್ಲಿ ಕನಿಷ್ಠ ವೇತನವನ್ನು ನಿಗದಿಗೊಳಿಸಲು ರೂಪಿಸಿದ್ದ ಸೂತ್ರ (2700 ಕ್ಯಾಲೂರಿ ಆಹಾರ) ವನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ. ಇದೇ ಸೂತ್ರವನ್ನು 44 ನೇ ಭಾರತೀಯ ಕಾರ್ಮಿಕ ಸಮ್ಮೇಳನದಲ್ಲಿ ಸರ್ವಾನುಮತದಿಂದ ಅಂಗೀಕಾರ ಆಗಿದ್ದಲ್ಲದೇ, 45 ಹಾಗೂ 46ನೇ ಭಾರತೀಯ ಕಾರ್ಮಿಕ ಸಮ್ಮೇಳನಗಳಲ್ಲಿ ಸಹ ಸರ್ವಾನುಮತದಿಂದ ಪುನರುಚ್ಚರಿಸಲಾಗಿತ್ತು.

ಈ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರವು ಭಾಗಿಧಾರನಾಗಿ ಭಾಗವಹಿಸಿತ್ತು. ಮೇಲೆ ಹೇಳಲಾದ ಸೂತ್ರದ ಪ್ರಕಾರ 2014 ರ ಕನಿಷ್ಠ ವೇತನ 18 ಸಾವಿರ ರೂ (ದಿನಕ್ಕೆ ರೂ 692.3) ಎಂದು ನಿಗದಿಯಾಗಿತ್ತು. ಇದೇ ವೇತನವನ್ನೇ ಆರನೇ ವೇತನ ಆಯೋಗವು ಶಿಪಾರಸ್ಸು ಮಾಡಿತ್ತು. ಇದಾದ ನಂತರ 2018 ರಲ್ಲಿ ಇದೇ ಕೇಂದ್ರ ಬಿಜೆಪಿ ಸರ್ಕಾರದ ಕಾರ್ಮಿಕ ಸಚಿವರು ಕನಿಷ್ಠ ವೇತನವನ್ನು ನಿಗಧಿಗೊಳಿಸುವ ಕುರಿತು ಇರುವ ವಿಧಾನಗಳನ್ನು ನಿರ್ಧರಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಿತ್ತು.

ಈ ತಜ್ಞರ ಸಮಿತಿಯು ಭಾರತೀಯ ಕಾರ್ಮಿಕ ಸಮ್ಮೇಳನದ ಸರ್ವಾನುಮತದ ಶಿಫಾರಸುಗಳಾದ 2700 ಕ್ಯಾಲೊರಿ ಆಹಾರ ಸೂತ್ರವನ್ನು ಏಕಪಕ್ಷೀಯವಾಗಿ ಬದಲಿಸಿ 2400 ಕ್ಯಾಲೊರಿಗೆ ಇಳಿಸಿತು. ಅಲ್ಲದೆ ಕನಿಷ್ಠ ವೇತನದ ಲೆಕ್ಕಾಚಾರಕ್ಕೆ ಅಗತ್ಯವಾದ ವಸ್ತುಗಳ ದರಗಳನ್ನು 2012ರ ಮಾರುಕಟ್ಟೆಯ ದರದಂತೆ ಪರಿಗಣಿಸಿತು.

ಈ ತಜ್ಞರ ಸಮಿತಿಯು ಕನಿಷ್ಠವೇತನವನ್ನು  ದಿನಕ್ಕೆ 375 ರೂನಿಂದ 447 ರೂಪಾಯಿಗಳಿಗೆ (ಮಾಸಿಕ ರೂ.9750 ರಿಂದ 11,622) ಶಿಫಾರಸು ಮಾಡಿತ್ತು. ಆದರೆ ಈ ಶಿಫಾರಸು ಕಾರ್ಪೊರೇಟ್ ಬಂಡವಾಳದಾರರ ಕಂಪನಿಗಳ ಕೆಂಗಣ್ಣಿಗೆ ಗುರಿಯಾಯಿತು.

ಬಲಿಷ್ಠ ಪ್ರಧಾನಿ ಸದೃಢ ಸರ್ಕಾರ ಎಂದು ಹೇಳುವ ಕೇಂದ್ರದ ಬಿಜೆಪಿ ಸರ್ಕಾರವು ನಾಚಿಕೆ ಇಲ್ಲದಂತೆ ತನ್ನದೇ ತಜ್ಞರ ಸಮಿತಿಯ ಶಿಫಾರಸುಗಳನ್ನು ಬದಿಗೆ ಸರಿಸಿ, ದಿನವೊಂದಕ್ಕೆ 178 ರೂಪಾಯಿ ನಗಣ್ಯ ಮಟ್ಟದ ಕನಿಷ್ಟ ವೇತನವನ್ನು ಘೋಷಿಸಿದೆ . ಇದು ಎಲ್ಲರನ್ನೂ ಒಳಗೊಳ್ಳುವಿಕೆಯ ಅಭಿವೃದ್ಧಿ ಎಂದು ಜಪ ಮಾಡುತ್ತಿರುವ ಬಿಜೆಪಿ ಸರ್ಕಾರದ ನಿಜ ಮುಖವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. “ಈ ತಜ್ಞರ ಸಮಿತಿಯು ಕನಿಷ್ಠವೇತನವನ್ನು ದಿನಕ್ಕೆ 375 ರೂನಿಂದ 447 ರೂಪಾಯಿಗಳಿಗೆ (ಮಾಸಿಕ ರೂ.9750 ರಿಂದ 11,622) ಶಿಫಾರಸು ಮಾಡಿತ್ತು” ಎಂದು ತಿಳಿಸಿರುತ್ತೀರಿ.

    ಆ ತಜ್ಞರ ಸಮಿತಿಯ ವರದಿಯನ್ನು ಪ್ರಕಟಿಸಿ ಎಂದು ವಿನಂತಿ.

  2. ಪ್ರಧಾನಿ ಮೋದಿಯವರು ಒಂದು ದಿನ ಅಣಬೆ ತಿನ್ನುವುದಕ್ಕೆ ಖರ್ಚು ಮಾಡುವ ದುಡ್ಡು 38000 (ಮೂವತ್ತೆಂಟು ಸಾವಿರ ). ಇಂತವರಿಗೆ ಕಾರ್ಮಿಕರ ಕಷ್ಟ ಎಲ್ಲಿ ಅರ್ಥ ಆಗುತ್ತೆ ?

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...