Homeಚಳವಳಿಕಾರ್ಮಿಕರನ್ನು ಗುಲಾಮರನ್ನಾಗಿಸುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು.

ಕಾರ್ಮಿಕರನ್ನು ಗುಲಾಮರನ್ನಾಗಿಸುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು.

- Advertisement -
- Advertisement -

ಕಾರ್ಪೊರೇಟ್ ಧಣಿಗಳ ವ್ಯಾಪಾರವನ್ನು ಸುಲಲಿತಗೊಳಿಸುವ ಉದ್ದೇಶಕ್ಕೆ ಅತಿ ಅಗತ್ಯ ಎಂದು ಪ್ರತಿಪಾದಿಸುತ್ತಿರುವ ಬಿಜೆಪಿ ಸರ್ಕಾರದ ಕಾರ್ಮಿಕ ಕಾನೂನು ಸುಧಾರಣೆಗಳು ಅಕ್ಷರಶಃ ಕಾರ್ಮಿಕರನ್ನು ಗುಲಾಮರನ್ನಾಗಿಸುವ ಧೋರಣೆಗಳಾಗಿವೆ. ಕಾರ್ಮಿಕರಿಗೆ ಕಾನೂನು ಬದ್ದವಾಗಿ ಇರುವ ಹಕ್ಕುಗಳನ್ನು ಹಾಗೂ ರಕ್ಷಣೆಗಳನ್ನು ದಮನ ಮಾಡುವುದೇ ಈ ಕಾರ್ಮಿಕ ಕಾನೂನು ಸುಧಾರಣೆಗಳ ಹೂರಣ ಎಂಬುದು ಗಮನಾರ್ಹ.

ಎರಡನೇ ಬಾರಿ ಪ್ರಧಾನಮಂತ್ರಿಯಾಗಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಕೇಂದ್ರ ಸಂಪುಟ ಸಭೆಯು ಮಾನವ ಘನತೆಗೆ ವಿರುದ್ದವಾದ ಅಮಾನವೀಯ ಧೋರಣೆಗೆ ಅನುಮತಿ ಕೊಟ್ಟಿದೆ. ಸ್ವತಃ ಕೇಂದ್ರ ಕಾರ್ಮಿಕ ಸಚಿವರು, ಇತರೆ ಸಚಿವರ ಜೊತೆ ದಿನಾಂಕ 10-07-19 ರಂದು ಪತ್ರಿಕಾಗೋಷ್ಠಿ ನಡೆಸಿ ‘ಔದ್ಯೋಗಿಕ ಸುರಕ್ಷತೆ ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಮಸೂದೆ 2019 ‘ಅನ್ನು ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸಭೆಯು ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ. ಈ ಮಸೂದೆಯು ಹಾಲಿ ಅಸ್ತಿತ್ವದಲ್ಲಿರುವ 13 ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸಿ ರೂಪಿಸಿರುವ ಸಂಹಿತೆಯಾಗಿದೆ. ಈ ಮಸೂದೆಯಲ್ಲಿ ಮಾಲೀಕರಿಗೆ ಅನುಕೂಲಕರವಾಗಿರುವ ಹಿಂದಿನ ಕಾಯಿದೆಯ ಅಂಶಗಳೆಲ್ಲವನ್ನೂ ಉಳಿಸಿಕೊಂಡು ಕಾರ್ಮಿಕರ ಹಕ್ಕು ಹಾಗೂ ರಕ್ಷಣೆಗಾಗಿ ಇದ್ದ ನಿಯಮ, ಉಪ ನಿಯಮಗಳೆಲ್ಲವನ್ನೂ ದುರ್ಬಲಗೊಳಿಸಲಾಗಿದೆ ಅಥವಾ ತಿರುಚಿ ಹಾಳು ಮಾಡಲಾಗಿದೆ.

ಆರೋಗ್ಯ ಹಾಗೂ ಸುರಕ್ಷತೆಯಂತಹ ವಿಷಯದಲ್ಲೂ ಸಹ ಕಾರ್ಮಿಕರಾಗಲಿ ಅಥವಾ ಅವರ ಸಂಘಟನೆಗಳಾಗಲಿ ಸಮರ್ಪಕ ಜಾರಿಗಾಗಿ ಒತ್ತಾಯಿಸಲು ಸಾಧ್ಯವಾಗದಂತೆ, ಮತ್ತು ಕೆಲಸದ ಸ್ಥಳದಲ್ಲಿ ಸಾಮಾನ್ಯವಾಗಿ ಉಂಟಾಗುವ ಮೂಲಭೂತ ಆರೋಗ್ಯ ಹಾಗೂ ಸುರಕ್ಷತೆಗೆ ಸಂಬಂಧಿಸಿ ಕಾನೂನು ಉಲ್ಲಂಘನೆಗಾಗಿ ಮಾಲೀಕರನ್ನು ಹೊಣೆ ಮಾಡಲು ಕೂಡ ಆಗದಂತೆ ಈ ಸಂಹಿತೆಯನ್ನು ರೂಪಿಸಲಾಗಿದೆ. ಇದರಿಂದಾಗಿ ಮತ್ತಷ್ಟು ಅಂಗವೈಕಲ್ಯತೆ, ಗಾಯಾಳುಗಳ ಸಂಖ್ಯೆಯಲ್ಲಿ ಹೆಚ್ಚಳ, ಪ್ರಾಣಹಾನಿ ಹೆಚ್ಚಾಗಲು ಈ ಮಸೂದೆ ಕಾರಣವಾಗಲಿದೆ.

ಈ ಮಸೂದೆಯನ್ನು ರೂಪಿಸುವ ಸಂದರ್ಭದಲ್ಲಿ ಎಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳು ಹಾಗೂ ಕಾರ್ಮಿಕರು ತೀವ್ರವಾದ ವಿರೋಧವನ್ನು ವ್ಯಕ್ತಪಡಿಸಿದ್ದರೂ ಕಡೆಗಣಿಸಿ, ಬಂಡವಾಳಶಾಹಿ -ಕಾರ್ಪೊರೇಟ್ ವಲಯವನ್ನು ತೃಪ್ತಿಪಡಿಸಲು ಹಾಗೂ ಚುನಾವಣೆಯಲ್ಲಿ ಮಾಡಿದ ಸಹಾಯಕ್ಕಾಗಿ ಋಣ ಸಂದಾಯ ಮಾಡಲು ಅತ್ಯುತ್ಸಾಹದಿಂದ ಕೇಂದ್ರ ಸರ್ಕಾರ ಜಾರಿಗೆ ತರುತ್ತಿದೆ ಎಂದು ಸಿಐಟಿಯು ಅಪಾದಿಸಿದೆ.

ಕೇಂದ್ರ ಕಾರ್ಮಿಕ ಸಚಿವರು ಮತ್ತೊಂದು ವಿಷಯ ಪ್ರಸ್ತಾಪಿಸಿ ‘ವೇತನ ಸಂಹಿತೆ ಮಸೂದೆ 2019 ‘ಅನ್ನು ಸಹ ಅನುಮೋದಿಸಿರುವುದಾಗಿ ತಿಳಿಸಿದ್ದಾರೆ. ಇದರ ಪ್ರಕಾರ ರಾಷ್ಟ್ರೀಯ ಕನಿಷ್ಠ ವೇತನ ದಿನಕ್ಕೆ ರೂ 178 (ತಿಂಗಳಿಗೆ 4628) ನಿಗದಿಪಡಿಸಲಾಗಿದೆ. ಇದಕ್ಕಿಂತ ಕಡಿಮೆ ವೇತನವನ್ನು ರಾಜ್ಯ ಸರ್ಕಾರಗಳು ನಿಗದಿಪಡಿಸುವಂತಿಲ್ಲ ಎಂದು ತಿಳಿಸಿದ್ದಾರೆ. ಇದೊಂದು ಅತ್ಯಂತ ಹಾಸ್ಯಾಸ್ಪದ ಹಾಗೂ ನಾಚಿಕೇಗೇಡಿನ ವಿಷಯವಾಗಿದೆ. ಈ ಸಂಹಿತೆಯು ಕನಿಷ್ಟ ಕೂಲಿಯ ಜಾರಿಗೆ ಬೇಕಾದ ಶಾಸನಬದ್ಧ ವ್ಯವಸ್ಥೆಯನ್ನು ಸಹ ಹೊಂದಿರುವುದಿಲ್ಲ.

ಈಗಾಗಲೇ ದೇಶದ 31 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕನಿಷ್ಠ ವೇತನವು ದಿನಕ್ಕೆ ರೂ 178 ಕ್ಕಿಂತ ಹೆಚ್ಚಿದೆ. ಕೇಂದ್ರ ಸರ್ಕಾರದ ಈ ಕನಿಷ್ಠ ವೇತನದ ಪ್ರಕಟಣೆಗಳು ಸರ್ಕಾರಗಳನ್ನು ಹಾಗೂ ಮಾಲೀಕರನ್ನು ಕನಿಷ್ಟ ವೇತನ ಕಡಿತ ಮಾಡಲು ಪ್ರಚೋದಿಸುವಂತಿದೆ. ನಗಣ್ಯಮಟ್ಟದ ಕನಿಷ್ಠ ವೇತನ ಕಾಯ್ದೆಯು, ಕನಿಷ್ಠ ವೇತನವನ್ನು ಕಡಿಮೆ ಮಾಡಿ ಕಾರ್ಮಿಕರನ್ನು ಲೂಟಿ ಮಾಡಲು ಬಂಡವಾಳಶಾಹಿಗಳಿಗೆ ಅವಕಾಶ ಮಾಡಿಕೊಡಲಿದೆ.

15 ನೇ ಭಾರತೀಯ ಕಾರ್ಮಿಕ ಸಮ್ಮೇಳನವು ಹಾಗೂ 1992 ರಲ್ಲಿ ಭಾರತ ಸರ್ವೋಚ್ಚ ನ್ಯಾಯಾಲಯವು ರಪ್ಟಾಕೋಸ್ ಬ್ರೆಟ್ ಪ್ರಕರಣದಲ್ಲಿ ಕನಿಷ್ಠ ವೇತನವನ್ನು ನಿಗದಿಗೊಳಿಸಲು ರೂಪಿಸಿದ್ದ ಸೂತ್ರ (2700 ಕ್ಯಾಲೂರಿ ಆಹಾರ) ವನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸಿದೆ. ಇದೇ ಸೂತ್ರವನ್ನು 44 ನೇ ಭಾರತೀಯ ಕಾರ್ಮಿಕ ಸಮ್ಮೇಳನದಲ್ಲಿ ಸರ್ವಾನುಮತದಿಂದ ಅಂಗೀಕಾರ ಆಗಿದ್ದಲ್ಲದೇ, 45 ಹಾಗೂ 46ನೇ ಭಾರತೀಯ ಕಾರ್ಮಿಕ ಸಮ್ಮೇಳನಗಳಲ್ಲಿ ಸಹ ಸರ್ವಾನುಮತದಿಂದ ಪುನರುಚ್ಚರಿಸಲಾಗಿತ್ತು.

ಈ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರವು ಭಾಗಿಧಾರನಾಗಿ ಭಾಗವಹಿಸಿತ್ತು. ಮೇಲೆ ಹೇಳಲಾದ ಸೂತ್ರದ ಪ್ರಕಾರ 2014 ರ ಕನಿಷ್ಠ ವೇತನ 18 ಸಾವಿರ ರೂ (ದಿನಕ್ಕೆ ರೂ 692.3) ಎಂದು ನಿಗದಿಯಾಗಿತ್ತು. ಇದೇ ವೇತನವನ್ನೇ ಆರನೇ ವೇತನ ಆಯೋಗವು ಶಿಪಾರಸ್ಸು ಮಾಡಿತ್ತು. ಇದಾದ ನಂತರ 2018 ರಲ್ಲಿ ಇದೇ ಕೇಂದ್ರ ಬಿಜೆಪಿ ಸರ್ಕಾರದ ಕಾರ್ಮಿಕ ಸಚಿವರು ಕನಿಷ್ಠ ವೇತನವನ್ನು ನಿಗಧಿಗೊಳಿಸುವ ಕುರಿತು ಇರುವ ವಿಧಾನಗಳನ್ನು ನಿರ್ಧರಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಿತ್ತು.

ಈ ತಜ್ಞರ ಸಮಿತಿಯು ಭಾರತೀಯ ಕಾರ್ಮಿಕ ಸಮ್ಮೇಳನದ ಸರ್ವಾನುಮತದ ಶಿಫಾರಸುಗಳಾದ 2700 ಕ್ಯಾಲೊರಿ ಆಹಾರ ಸೂತ್ರವನ್ನು ಏಕಪಕ್ಷೀಯವಾಗಿ ಬದಲಿಸಿ 2400 ಕ್ಯಾಲೊರಿಗೆ ಇಳಿಸಿತು. ಅಲ್ಲದೆ ಕನಿಷ್ಠ ವೇತನದ ಲೆಕ್ಕಾಚಾರಕ್ಕೆ ಅಗತ್ಯವಾದ ವಸ್ತುಗಳ ದರಗಳನ್ನು 2012ರ ಮಾರುಕಟ್ಟೆಯ ದರದಂತೆ ಪರಿಗಣಿಸಿತು.

ಈ ತಜ್ಞರ ಸಮಿತಿಯು ಕನಿಷ್ಠವೇತನವನ್ನು  ದಿನಕ್ಕೆ 375 ರೂನಿಂದ 447 ರೂಪಾಯಿಗಳಿಗೆ (ಮಾಸಿಕ ರೂ.9750 ರಿಂದ 11,622) ಶಿಫಾರಸು ಮಾಡಿತ್ತು. ಆದರೆ ಈ ಶಿಫಾರಸು ಕಾರ್ಪೊರೇಟ್ ಬಂಡವಾಳದಾರರ ಕಂಪನಿಗಳ ಕೆಂಗಣ್ಣಿಗೆ ಗುರಿಯಾಯಿತು.

ಬಲಿಷ್ಠ ಪ್ರಧಾನಿ ಸದೃಢ ಸರ್ಕಾರ ಎಂದು ಹೇಳುವ ಕೇಂದ್ರದ ಬಿಜೆಪಿ ಸರ್ಕಾರವು ನಾಚಿಕೆ ಇಲ್ಲದಂತೆ ತನ್ನದೇ ತಜ್ಞರ ಸಮಿತಿಯ ಶಿಫಾರಸುಗಳನ್ನು ಬದಿಗೆ ಸರಿಸಿ, ದಿನವೊಂದಕ್ಕೆ 178 ರೂಪಾಯಿ ನಗಣ್ಯ ಮಟ್ಟದ ಕನಿಷ್ಟ ವೇತನವನ್ನು ಘೋಷಿಸಿದೆ . ಇದು ಎಲ್ಲರನ್ನೂ ಒಳಗೊಳ್ಳುವಿಕೆಯ ಅಭಿವೃದ್ಧಿ ಎಂದು ಜಪ ಮಾಡುತ್ತಿರುವ ಬಿಜೆಪಿ ಸರ್ಕಾರದ ನಿಜ ಮುಖವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. “ಈ ತಜ್ಞರ ಸಮಿತಿಯು ಕನಿಷ್ಠವೇತನವನ್ನು ದಿನಕ್ಕೆ 375 ರೂನಿಂದ 447 ರೂಪಾಯಿಗಳಿಗೆ (ಮಾಸಿಕ ರೂ.9750 ರಿಂದ 11,622) ಶಿಫಾರಸು ಮಾಡಿತ್ತು” ಎಂದು ತಿಳಿಸಿರುತ್ತೀರಿ.

    ಆ ತಜ್ಞರ ಸಮಿತಿಯ ವರದಿಯನ್ನು ಪ್ರಕಟಿಸಿ ಎಂದು ವಿನಂತಿ.

  2. ಪ್ರಧಾನಿ ಮೋದಿಯವರು ಒಂದು ದಿನ ಅಣಬೆ ತಿನ್ನುವುದಕ್ಕೆ ಖರ್ಚು ಮಾಡುವ ದುಡ್ಡು 38000 (ಮೂವತ್ತೆಂಟು ಸಾವಿರ ). ಇಂತವರಿಗೆ ಕಾರ್ಮಿಕರ ಕಷ್ಟ ಎಲ್ಲಿ ಅರ್ಥ ಆಗುತ್ತೆ ?

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...