Homeಕರ್ನಾಟಕಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

- Advertisement -
- Advertisement -

ಕರ್ನಾಟಕ ರಾಜ್ಯ ಸಿಪಿಐ(ಎಂ) ಕಾರ್ಯದರ್ಶಿಯಾಗಿ ಹಿರಿಯ ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಮಂಗಳವಾರ ಆಯ್ಕೆಯಾಗಿದ್ದಾರೆ. ಕಳೆದ ಮೂರು ದಿನಗಳಿಂದ ತುಮಕೂರಿನಲ್ಲಿ ನಡೆಯುತ್ತಿರುವ ಪಕ್ಷದ 24 ನೇ ರಾಜ್ಯ ಸಮ್ಮೇಳನದಲ್ಲಿ 35 ಜನರ ನೂತನ ರಾಜ್ಯ ಸಮಿತಿಯನ್ನು ಚುನಾಯಿಸಲಾಗಿದ್ದು, ಈ ಸಮಿತಿಯು 12 ಜನರ ಕಾರ್ಯದರ್ಶಿ ಮಂಡಳಿಯನ್ನು ಆಯ್ಕೆ ಮಾಡಿದೆ.

ನೂತನ ರಾಜ್ಯ ಕಾರ್ಯದರ್ಶಿ ಡಾ.ಕೆ. ಪ್ರಕಾಶ್ ಅವರು ಈ ಹಿಂದೆ ಕೆಎಸ್ಆರ್‌ಟಿಸಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಹಲವಾರು ಹೋರಾಟಗಳನ್ನು ಸಂಘಟಿಸಿದ್ದರು. ನೂತನ ಕಾರ್ಯದರ್ಶಿ ಮಂಡಳಿಯಲ್ಲಿ ಡಾ.ಕೆ.ಪ್ರಕಾಶ್‌ ಅವರ ಜೊತೆಗೆ, ಯು. ಬಸವರಾಜ್‌, ಜಿ.ಸಿ. ಬಯ್ಯಾರೆಡ್ಡಿ,  ಮೀನಾಕ್ಷಿ ಸುಂದರಂ, ಎಸ್.‌ ವರಲಕ್ಷ್ಮಿ, ಕೆ. ನೀಲಾ, ಎಂ.ಪಿ ಮುನಿವೆಂಕಟಪ್ಪ, ಗೋಪಾಲಕೃಷ್ಣ ಹರಳಹಳ್ಳಿ, ಸೈಯದ್‌ ಮುಜೀಬ್‌, ಯಾದವ ಶೆಟ್ಟಿ, ಕೆ. ಮಹಾಂತೇಶ್‌, ಚಂದ್ರಪ್ಪ ಹೊಸ್ಕೇರಾ ಆಯ್ಕೆಯಾಗಿದ್ದಾರೆ. ಕಾರ್ಮಿಕ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

24 ನೇ ರಾಜ್ಯ ಸಮ್ಮಳೇನದ ಪ್ರತಿನಿಧಿ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದ್ದ ಸಿಪಿಐ(ಎಂ) ಪೊಲೀಟ್‌ ಬ್ಯೋರೋ ಸದಸ್ಯ ಬಿ.ವಿ ರಾಘವಲು, “ಸಂಸತ್ತಿನಲ್ಲಿ ಸಂವಿಧಾನದ 75 ವರ್ಷದ ಸಂದರ್ಭದಲ್ಲಿ ವಿಶೇಷ ಚರ್ಚೆ ನಡೆಯುತ್ತಿದೆ. ಸಂವಿಧಾನದ ಮಹತ್ವವನ್ನು ಅರಿಯದ ಕಾಂಗ್ರೆಸ್‌ ಮತ್ತು ಬಿಜೆಪಿ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದನ್ನು ದೇಶದ ಜನ ಗಮನಿಸಿದ್ದಾರೆ. ಸಂವಿಧಾನವನ್ನು ಅರ್ಥ ಮಾಡಿಕೊಂಡು, ಮೂಲಭೂತ ತತ್ವಗಳನ್ನು ಅರಿಯಬೇಕಿದೆ” ಎಂದು ಹೇಳಿದ್ದಾರೆ.

ಡಾ. ಬಿ.ಆರ್.‌ ಅಂಬೇಡ್ಕರ್‌ ಮತ್ತು ಸಂವಿಧಾನದ ನಿರ್ಮಾತ್ರುಗಳು ಪ್ರತಿಪಾದಿಸಿದ ಆಧಾರದಲ್ಲಿ 5 ಮೂಲಭೂತ ತತ್ವಗಳನ್ನು ಸಂವಿಧಾನವು ನಿರೂಪಿಸಿದೆ. ಪ್ರಜಾಪ್ರಭುತ್ವ, ಜಾತ್ಯಾತೀತತೆ, ಸಾಮಾಜಿಕ ನ್ಯಾಯ, ಒಕ್ಕೂಟ ತತ್ವ ಮತ್ತು ಸಮಾಜವಾದ ಇವುಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ದಾಳಿಯನ್ನು ನಾವು ತಡೆಗಟ್ಟಬೇಕಿದೆ ಎಂದು ಅವರು ಹೇಳಿದ್ದಾರೆ.

“ಪ್ರಜಾಪ್ರಭುತ್ವ ನಾಶವಾದರೆ ಅದರ ಮೊದಲ ದಾಳಿ ಬಡವರು, ದುರ್ಬಲರು, ಕಾರ್ಮಿಕರು, ದಲಿತರ ಮೇಲೆ ನಡೆಯುತ್ತದೆ. ಉದಾಹರಣೆಗೆ ಕಾರ್ಮಿಕ ಸಂಹಿತೆಗಳನ್ನು ಬಿಜೆಪಿ ತಂದಿದೆ. ಈ ಹಿಂದೆ ಕಾಂಗ್ರೆಸ್‌ ಕೂಡಾ ಜಾರಿಗೆ ಪ್ರಯತ್ನಿಸಿತ್ತು. ಈ ನೀತಿಗಳು ಸಂಘ ಕಟ್ಟುವ ಹಕ್ಕು, ಕೆಲಸದ ಅವಧಿ, ಗುತ್ತಿಗೆ ಪದ್ದತಿ, ಬೇಕೆಂದಾಗ ಕೆಲಸಕ್ಕೆ ತೆಗೆದುಕೊಳ್ಳುವುದು, ತೆಗೆದು ಹಾಕುವುದನ್ನು ಬೆಂಬಲಿಸುತ್ತದೆ. ಇಂತಹ ಕಾರ್ಮಿಕ ವಿರೋಧಿ ನೀತಿಗಳನ್ನು ಸಂಹಿತೆಗಳು ಹೇಳುತ್ತಿವೆ. ಇದ್ದಕ್ಕೆ ನಿಯಮಗಳನ್ನು ರೂಪಿಸಲು ಮುಂದಾಗಿದೆ. ಇವೆಲ್ಲವೂ ಪ್ರಜಾಪ್ರಬುತ್ಬದ ಮೌಲ್ಯಗಳಾಗಿವೆ, ಇವೆಲ್ಲ ನಾಶವಾದರೆ ಪ್ರಜಾಪ್ರಭುತ್ವದಕ್ಕೆ ದಕ್ಕೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಒಂದು ದೇಶ ಒಂದು ಚುನಾವಣೆ ಪ್ರಜಾಪ್ರಭುತ್ವ ನಾಶಮಾಡಿ ಫ್ಯಾಸಿಸಂ ಜಾರಿ ಮಾಡುವ ಹುನ್ನಾರವಾಗಿದೆ. ಇದು ಏಕ ವ್ಯಕ್ತಿಯ ಆಡಳಿತ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡಲಿದೆ. ಆರ್‌ಎಸ್‌ಎಸ್‌ ಫ್ಯಾಸಿಸಂನ್ನು ಬೆಂಬಲಿಸುತ್ತಿರುವ ಕಾರಣ ಈ ದಾಳಿ ನಡೆಸುತ್ತಿದೆ. ಇಂತಹ ದಾಳಿಗಳ ವಿರುದ್ದ ಹೋರಾಟಗಳನ್ನು ಸಂಘಟಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ಜಾತ್ಯಾತೀತಯನ್ನು ನಾಶ ಮಾಡುವುದಕ್ಕಾಗಿ ಬಿಜೆಪಿ ಮತೀಯ ಕೋಮುಗಲಭೆಗಳನ್ನು ಹೆಚ್ಚಿಸುತ್ತಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ 1991ರ ಪೂಜಾ ಸಂರಕ್ಷಣಾ ಕಾಯ್ದೆಯು ದೇಶದಲ್ಲಿರುವ ಎಲ್ಲಾ ಪೂಜಾ ಸ್ಥಳಗಳನ್ನು 1947ರ ಆಗಸ್ಟ್‌ 15ರ ಸ್ಥಿತಿಯಲ್ಲಿ ಕಾಪಾಡಬೇಕೆಂದುನ್ನು ಎತ್ತಿ ಹಿಡಿದಿದೆ. ಆರ್‌ಎಸ್‌ಎಸ್‌ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ನೆಪದಲ್ಲಿ ಮಸೀದಿಗಳ ಕೆಳಗ ದೇವಸ್ಥಾನ ಇದೆ ಎಂದು ಗುಲ್ಲೆಬ್ಬಿಸಿ ಪೂಜಾಕಾಯ್ದೆಯನ್ನು ಉಲ್ಲಂಘಿಸುತ್ತದೆ. ಇದೇ ವಾದವನ್ನು ದಲಿತ ವಿಭಾಗಗಳು ಪ್ರತಿಪಾದಿಸಿದರೆ 3 ಸಾವಿರ ವರ್ಷಗಳಿಂದ ಅಸ್ಪೃಶ್ಯತೆ, ಜಾತಿ ತಾರತಮ್ಯವನ್ನು ಅನುಸರಿಸಿರುವ ಜಾತಿಗಳ ವಿರುದ್ಧ ಅಂತಹದ್ದೇ ದೌರ್ಜನ್ಯಗಳನ್ನು ನಡೆಸುವಂತಾಗಬಹುದು” ಎಂದು ಅವರು ಹೇಳಿದ್ದಾರೆ.

ಆದ್ದರಿಂದ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ಬದಲಿಗೆ ಅದರಿಂದ ಪಾಠಗಳನ್ನು ಕಲಿತು ಸಮಾನತೆಯ ಆಧಾರದಲ್ಲಿ ಜಾತ್ಯಾತೀತ ತತ್ವವನ್ನು ಅಳವಡಿಸಿಕೊಳ್ಳುವುದನ್ನು ಸಂವಿಧಾನ ಪ್ರತಿಪಾದಿಸುತ್ತದೆ. ಇದಕ್ಕಾಗಿ ನಾವು ಹೋರಾಟ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ | ಪ್ರಕರಣವನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ | ಪ್ರಕರಣವನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...