Homeಕರ್ನಾಟಕಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

- Advertisement -
- Advertisement -

ಕರ್ನಾಟಕ ರಾಜ್ಯ ಸಿಪಿಐ(ಎಂ) ಕಾರ್ಯದರ್ಶಿಯಾಗಿ ಹಿರಿಯ ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಮಂಗಳವಾರ ಆಯ್ಕೆಯಾಗಿದ್ದಾರೆ. ಕಳೆದ ಮೂರು ದಿನಗಳಿಂದ ತುಮಕೂರಿನಲ್ಲಿ ನಡೆಯುತ್ತಿರುವ ಪಕ್ಷದ 24 ನೇ ರಾಜ್ಯ ಸಮ್ಮೇಳನದಲ್ಲಿ 35 ಜನರ ನೂತನ ರಾಜ್ಯ ಸಮಿತಿಯನ್ನು ಚುನಾಯಿಸಲಾಗಿದ್ದು, ಈ ಸಮಿತಿಯು 12 ಜನರ ಕಾರ್ಯದರ್ಶಿ ಮಂಡಳಿಯನ್ನು ಆಯ್ಕೆ ಮಾಡಿದೆ.

ನೂತನ ರಾಜ್ಯ ಕಾರ್ಯದರ್ಶಿ ಡಾ.ಕೆ. ಪ್ರಕಾಶ್ ಅವರು ಈ ಹಿಂದೆ ಕೆಎಸ್ಆರ್‌ಟಿಸಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಹಲವಾರು ಹೋರಾಟಗಳನ್ನು ಸಂಘಟಿಸಿದ್ದರು. ನೂತನ ಕಾರ್ಯದರ್ಶಿ ಮಂಡಳಿಯಲ್ಲಿ ಡಾ.ಕೆ.ಪ್ರಕಾಶ್‌ ಅವರ ಜೊತೆಗೆ, ಯು. ಬಸವರಾಜ್‌, ಜಿ.ಸಿ. ಬಯ್ಯಾರೆಡ್ಡಿ,  ಮೀನಾಕ್ಷಿ ಸುಂದರಂ, ಎಸ್.‌ ವರಲಕ್ಷ್ಮಿ, ಕೆ. ನೀಲಾ, ಎಂ.ಪಿ ಮುನಿವೆಂಕಟಪ್ಪ, ಗೋಪಾಲಕೃಷ್ಣ ಹರಳಹಳ್ಳಿ, ಸೈಯದ್‌ ಮುಜೀಬ್‌, ಯಾದವ ಶೆಟ್ಟಿ, ಕೆ. ಮಹಾಂತೇಶ್‌, ಚಂದ್ರಪ್ಪ ಹೊಸ್ಕೇರಾ ಆಯ್ಕೆಯಾಗಿದ್ದಾರೆ. ಕಾರ್ಮಿಕ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

24 ನೇ ರಾಜ್ಯ ಸಮ್ಮಳೇನದ ಪ್ರತಿನಿಧಿ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದ್ದ ಸಿಪಿಐ(ಎಂ) ಪೊಲೀಟ್‌ ಬ್ಯೋರೋ ಸದಸ್ಯ ಬಿ.ವಿ ರಾಘವಲು, “ಸಂಸತ್ತಿನಲ್ಲಿ ಸಂವಿಧಾನದ 75 ವರ್ಷದ ಸಂದರ್ಭದಲ್ಲಿ ವಿಶೇಷ ಚರ್ಚೆ ನಡೆಯುತ್ತಿದೆ. ಸಂವಿಧಾನದ ಮಹತ್ವವನ್ನು ಅರಿಯದ ಕಾಂಗ್ರೆಸ್‌ ಮತ್ತು ಬಿಜೆಪಿ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದನ್ನು ದೇಶದ ಜನ ಗಮನಿಸಿದ್ದಾರೆ. ಸಂವಿಧಾನವನ್ನು ಅರ್ಥ ಮಾಡಿಕೊಂಡು, ಮೂಲಭೂತ ತತ್ವಗಳನ್ನು ಅರಿಯಬೇಕಿದೆ” ಎಂದು ಹೇಳಿದ್ದಾರೆ.

ಡಾ. ಬಿ.ಆರ್.‌ ಅಂಬೇಡ್ಕರ್‌ ಮತ್ತು ಸಂವಿಧಾನದ ನಿರ್ಮಾತ್ರುಗಳು ಪ್ರತಿಪಾದಿಸಿದ ಆಧಾರದಲ್ಲಿ 5 ಮೂಲಭೂತ ತತ್ವಗಳನ್ನು ಸಂವಿಧಾನವು ನಿರೂಪಿಸಿದೆ. ಪ್ರಜಾಪ್ರಭುತ್ವ, ಜಾತ್ಯಾತೀತತೆ, ಸಾಮಾಜಿಕ ನ್ಯಾಯ, ಒಕ್ಕೂಟ ತತ್ವ ಮತ್ತು ಸಮಾಜವಾದ ಇವುಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ದಾಳಿಯನ್ನು ನಾವು ತಡೆಗಟ್ಟಬೇಕಿದೆ ಎಂದು ಅವರು ಹೇಳಿದ್ದಾರೆ.

“ಪ್ರಜಾಪ್ರಭುತ್ವ ನಾಶವಾದರೆ ಅದರ ಮೊದಲ ದಾಳಿ ಬಡವರು, ದುರ್ಬಲರು, ಕಾರ್ಮಿಕರು, ದಲಿತರ ಮೇಲೆ ನಡೆಯುತ್ತದೆ. ಉದಾಹರಣೆಗೆ ಕಾರ್ಮಿಕ ಸಂಹಿತೆಗಳನ್ನು ಬಿಜೆಪಿ ತಂದಿದೆ. ಈ ಹಿಂದೆ ಕಾಂಗ್ರೆಸ್‌ ಕೂಡಾ ಜಾರಿಗೆ ಪ್ರಯತ್ನಿಸಿತ್ತು. ಈ ನೀತಿಗಳು ಸಂಘ ಕಟ್ಟುವ ಹಕ್ಕು, ಕೆಲಸದ ಅವಧಿ, ಗುತ್ತಿಗೆ ಪದ್ದತಿ, ಬೇಕೆಂದಾಗ ಕೆಲಸಕ್ಕೆ ತೆಗೆದುಕೊಳ್ಳುವುದು, ತೆಗೆದು ಹಾಕುವುದನ್ನು ಬೆಂಬಲಿಸುತ್ತದೆ. ಇಂತಹ ಕಾರ್ಮಿಕ ವಿರೋಧಿ ನೀತಿಗಳನ್ನು ಸಂಹಿತೆಗಳು ಹೇಳುತ್ತಿವೆ. ಇದ್ದಕ್ಕೆ ನಿಯಮಗಳನ್ನು ರೂಪಿಸಲು ಮುಂದಾಗಿದೆ. ಇವೆಲ್ಲವೂ ಪ್ರಜಾಪ್ರಬುತ್ಬದ ಮೌಲ್ಯಗಳಾಗಿವೆ, ಇವೆಲ್ಲ ನಾಶವಾದರೆ ಪ್ರಜಾಪ್ರಭುತ್ವದಕ್ಕೆ ದಕ್ಕೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಒಂದು ದೇಶ ಒಂದು ಚುನಾವಣೆ ಪ್ರಜಾಪ್ರಭುತ್ವ ನಾಶಮಾಡಿ ಫ್ಯಾಸಿಸಂ ಜಾರಿ ಮಾಡುವ ಹುನ್ನಾರವಾಗಿದೆ. ಇದು ಏಕ ವ್ಯಕ್ತಿಯ ಆಡಳಿತ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡಲಿದೆ. ಆರ್‌ಎಸ್‌ಎಸ್‌ ಫ್ಯಾಸಿಸಂನ್ನು ಬೆಂಬಲಿಸುತ್ತಿರುವ ಕಾರಣ ಈ ದಾಳಿ ನಡೆಸುತ್ತಿದೆ. ಇಂತಹ ದಾಳಿಗಳ ವಿರುದ್ದ ಹೋರಾಟಗಳನ್ನು ಸಂಘಟಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ಜಾತ್ಯಾತೀತಯನ್ನು ನಾಶ ಮಾಡುವುದಕ್ಕಾಗಿ ಬಿಜೆಪಿ ಮತೀಯ ಕೋಮುಗಲಭೆಗಳನ್ನು ಹೆಚ್ಚಿಸುತ್ತಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ 1991ರ ಪೂಜಾ ಸಂರಕ್ಷಣಾ ಕಾಯ್ದೆಯು ದೇಶದಲ್ಲಿರುವ ಎಲ್ಲಾ ಪೂಜಾ ಸ್ಥಳಗಳನ್ನು 1947ರ ಆಗಸ್ಟ್‌ 15ರ ಸ್ಥಿತಿಯಲ್ಲಿ ಕಾಪಾಡಬೇಕೆಂದುನ್ನು ಎತ್ತಿ ಹಿಡಿದಿದೆ. ಆರ್‌ಎಸ್‌ಎಸ್‌ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ನೆಪದಲ್ಲಿ ಮಸೀದಿಗಳ ಕೆಳಗ ದೇವಸ್ಥಾನ ಇದೆ ಎಂದು ಗುಲ್ಲೆಬ್ಬಿಸಿ ಪೂಜಾಕಾಯ್ದೆಯನ್ನು ಉಲ್ಲಂಘಿಸುತ್ತದೆ. ಇದೇ ವಾದವನ್ನು ದಲಿತ ವಿಭಾಗಗಳು ಪ್ರತಿಪಾದಿಸಿದರೆ 3 ಸಾವಿರ ವರ್ಷಗಳಿಂದ ಅಸ್ಪೃಶ್ಯತೆ, ಜಾತಿ ತಾರತಮ್ಯವನ್ನು ಅನುಸರಿಸಿರುವ ಜಾತಿಗಳ ವಿರುದ್ಧ ಅಂತಹದ್ದೇ ದೌರ್ಜನ್ಯಗಳನ್ನು ನಡೆಸುವಂತಾಗಬಹುದು” ಎಂದು ಅವರು ಹೇಳಿದ್ದಾರೆ.

ಆದ್ದರಿಂದ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ಬದಲಿಗೆ ಅದರಿಂದ ಪಾಠಗಳನ್ನು ಕಲಿತು ಸಮಾನತೆಯ ಆಧಾರದಲ್ಲಿ ಜಾತ್ಯಾತೀತ ತತ್ವವನ್ನು ಅಳವಡಿಸಿಕೊಳ್ಳುವುದನ್ನು ಸಂವಿಧಾನ ಪ್ರತಿಪಾದಿಸುತ್ತದೆ. ಇದಕ್ಕಾಗಿ ನಾವು ಹೋರಾಟ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ | ಪ್ರಕರಣವನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ | ಪ್ರಕರಣವನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...