Homeಕರ್ನಾಟಕಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆ

- Advertisement -
- Advertisement -

ಕರ್ನಾಟಕ ರಾಜ್ಯ ಸಿಪಿಐ(ಎಂ) ಕಾರ್ಯದರ್ಶಿಯಾಗಿ ಹಿರಿಯ ಕಾರ್ಮಿಕ ಮುಖಂಡ ಡಾ.ಕೆ. ಪ್ರಕಾಶ್‌ ಮಂಗಳವಾರ ಆಯ್ಕೆಯಾಗಿದ್ದಾರೆ. ಕಳೆದ ಮೂರು ದಿನಗಳಿಂದ ತುಮಕೂರಿನಲ್ಲಿ ನಡೆಯುತ್ತಿರುವ ಪಕ್ಷದ 24 ನೇ ರಾಜ್ಯ ಸಮ್ಮೇಳನದಲ್ಲಿ 35 ಜನರ ನೂತನ ರಾಜ್ಯ ಸಮಿತಿಯನ್ನು ಚುನಾಯಿಸಲಾಗಿದ್ದು, ಈ ಸಮಿತಿಯು 12 ಜನರ ಕಾರ್ಯದರ್ಶಿ ಮಂಡಳಿಯನ್ನು ಆಯ್ಕೆ ಮಾಡಿದೆ.

ನೂತನ ರಾಜ್ಯ ಕಾರ್ಯದರ್ಶಿ ಡಾ.ಕೆ. ಪ್ರಕಾಶ್ ಅವರು ಈ ಹಿಂದೆ ಕೆಎಸ್ಆರ್‌ಟಿಸಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಹಲವಾರು ಹೋರಾಟಗಳನ್ನು ಸಂಘಟಿಸಿದ್ದರು. ನೂತನ ಕಾರ್ಯದರ್ಶಿ ಮಂಡಳಿಯಲ್ಲಿ ಡಾ.ಕೆ.ಪ್ರಕಾಶ್‌ ಅವರ ಜೊತೆಗೆ, ಯು. ಬಸವರಾಜ್‌, ಜಿ.ಸಿ. ಬಯ್ಯಾರೆಡ್ಡಿ,  ಮೀನಾಕ್ಷಿ ಸುಂದರಂ, ಎಸ್.‌ ವರಲಕ್ಷ್ಮಿ, ಕೆ. ನೀಲಾ, ಎಂ.ಪಿ ಮುನಿವೆಂಕಟಪ್ಪ, ಗೋಪಾಲಕೃಷ್ಣ ಹರಳಹಳ್ಳಿ, ಸೈಯದ್‌ ಮುಜೀಬ್‌, ಯಾದವ ಶೆಟ್ಟಿ, ಕೆ. ಮಹಾಂತೇಶ್‌, ಚಂದ್ರಪ್ಪ ಹೊಸ್ಕೇರಾ ಆಯ್ಕೆಯಾಗಿದ್ದಾರೆ. ಕಾರ್ಮಿಕ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

24 ನೇ ರಾಜ್ಯ ಸಮ್ಮಳೇನದ ಪ್ರತಿನಿಧಿ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದ್ದ ಸಿಪಿಐ(ಎಂ) ಪೊಲೀಟ್‌ ಬ್ಯೋರೋ ಸದಸ್ಯ ಬಿ.ವಿ ರಾಘವಲು, “ಸಂಸತ್ತಿನಲ್ಲಿ ಸಂವಿಧಾನದ 75 ವರ್ಷದ ಸಂದರ್ಭದಲ್ಲಿ ವಿಶೇಷ ಚರ್ಚೆ ನಡೆಯುತ್ತಿದೆ. ಸಂವಿಧಾನದ ಮಹತ್ವವನ್ನು ಅರಿಯದ ಕಾಂಗ್ರೆಸ್‌ ಮತ್ತು ಬಿಜೆಪಿ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದನ್ನು ದೇಶದ ಜನ ಗಮನಿಸಿದ್ದಾರೆ. ಸಂವಿಧಾನವನ್ನು ಅರ್ಥ ಮಾಡಿಕೊಂಡು, ಮೂಲಭೂತ ತತ್ವಗಳನ್ನು ಅರಿಯಬೇಕಿದೆ” ಎಂದು ಹೇಳಿದ್ದಾರೆ.

ಡಾ. ಬಿ.ಆರ್.‌ ಅಂಬೇಡ್ಕರ್‌ ಮತ್ತು ಸಂವಿಧಾನದ ನಿರ್ಮಾತ್ರುಗಳು ಪ್ರತಿಪಾದಿಸಿದ ಆಧಾರದಲ್ಲಿ 5 ಮೂಲಭೂತ ತತ್ವಗಳನ್ನು ಸಂವಿಧಾನವು ನಿರೂಪಿಸಿದೆ. ಪ್ರಜಾಪ್ರಭುತ್ವ, ಜಾತ್ಯಾತೀತತೆ, ಸಾಮಾಜಿಕ ನ್ಯಾಯ, ಒಕ್ಕೂಟ ತತ್ವ ಮತ್ತು ಸಮಾಜವಾದ ಇವುಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ದಾಳಿಯನ್ನು ನಾವು ತಡೆಗಟ್ಟಬೇಕಿದೆ ಎಂದು ಅವರು ಹೇಳಿದ್ದಾರೆ.

“ಪ್ರಜಾಪ್ರಭುತ್ವ ನಾಶವಾದರೆ ಅದರ ಮೊದಲ ದಾಳಿ ಬಡವರು, ದುರ್ಬಲರು, ಕಾರ್ಮಿಕರು, ದಲಿತರ ಮೇಲೆ ನಡೆಯುತ್ತದೆ. ಉದಾಹರಣೆಗೆ ಕಾರ್ಮಿಕ ಸಂಹಿತೆಗಳನ್ನು ಬಿಜೆಪಿ ತಂದಿದೆ. ಈ ಹಿಂದೆ ಕಾಂಗ್ರೆಸ್‌ ಕೂಡಾ ಜಾರಿಗೆ ಪ್ರಯತ್ನಿಸಿತ್ತು. ಈ ನೀತಿಗಳು ಸಂಘ ಕಟ್ಟುವ ಹಕ್ಕು, ಕೆಲಸದ ಅವಧಿ, ಗುತ್ತಿಗೆ ಪದ್ದತಿ, ಬೇಕೆಂದಾಗ ಕೆಲಸಕ್ಕೆ ತೆಗೆದುಕೊಳ್ಳುವುದು, ತೆಗೆದು ಹಾಕುವುದನ್ನು ಬೆಂಬಲಿಸುತ್ತದೆ. ಇಂತಹ ಕಾರ್ಮಿಕ ವಿರೋಧಿ ನೀತಿಗಳನ್ನು ಸಂಹಿತೆಗಳು ಹೇಳುತ್ತಿವೆ. ಇದ್ದಕ್ಕೆ ನಿಯಮಗಳನ್ನು ರೂಪಿಸಲು ಮುಂದಾಗಿದೆ. ಇವೆಲ್ಲವೂ ಪ್ರಜಾಪ್ರಬುತ್ಬದ ಮೌಲ್ಯಗಳಾಗಿವೆ, ಇವೆಲ್ಲ ನಾಶವಾದರೆ ಪ್ರಜಾಪ್ರಭುತ್ವದಕ್ಕೆ ದಕ್ಕೆಯಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಒಂದು ದೇಶ ಒಂದು ಚುನಾವಣೆ ಪ್ರಜಾಪ್ರಭುತ್ವ ನಾಶಮಾಡಿ ಫ್ಯಾಸಿಸಂ ಜಾರಿ ಮಾಡುವ ಹುನ್ನಾರವಾಗಿದೆ. ಇದು ಏಕ ವ್ಯಕ್ತಿಯ ಆಡಳಿತ ಸರ್ವಾಧಿಕಾರಕ್ಕೆ ದಾರಿ ಮಾಡಿಕೊಡಲಿದೆ. ಆರ್‌ಎಸ್‌ಎಸ್‌ ಫ್ಯಾಸಿಸಂನ್ನು ಬೆಂಬಲಿಸುತ್ತಿರುವ ಕಾರಣ ಈ ದಾಳಿ ನಡೆಸುತ್ತಿದೆ. ಇಂತಹ ದಾಳಿಗಳ ವಿರುದ್ದ ಹೋರಾಟಗಳನ್ನು ಸಂಘಟಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ಜಾತ್ಯಾತೀತಯನ್ನು ನಾಶ ಮಾಡುವುದಕ್ಕಾಗಿ ಬಿಜೆಪಿ ಮತೀಯ ಕೋಮುಗಲಭೆಗಳನ್ನು ಹೆಚ್ಚಿಸುತ್ತಿದೆ. ಇತ್ತೀಚೆಗೆ ಸುಪ್ರೀಂ ಕೋರ್ಟ್‌ 1991ರ ಪೂಜಾ ಸಂರಕ್ಷಣಾ ಕಾಯ್ದೆಯು ದೇಶದಲ್ಲಿರುವ ಎಲ್ಲಾ ಪೂಜಾ ಸ್ಥಳಗಳನ್ನು 1947ರ ಆಗಸ್ಟ್‌ 15ರ ಸ್ಥಿತಿಯಲ್ಲಿ ಕಾಪಾಡಬೇಕೆಂದುನ್ನು ಎತ್ತಿ ಹಿಡಿದಿದೆ. ಆರ್‌ಎಸ್‌ಎಸ್‌ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ನೆಪದಲ್ಲಿ ಮಸೀದಿಗಳ ಕೆಳಗ ದೇವಸ್ಥಾನ ಇದೆ ಎಂದು ಗುಲ್ಲೆಬ್ಬಿಸಿ ಪೂಜಾಕಾಯ್ದೆಯನ್ನು ಉಲ್ಲಂಘಿಸುತ್ತದೆ. ಇದೇ ವಾದವನ್ನು ದಲಿತ ವಿಭಾಗಗಳು ಪ್ರತಿಪಾದಿಸಿದರೆ 3 ಸಾವಿರ ವರ್ಷಗಳಿಂದ ಅಸ್ಪೃಶ್ಯತೆ, ಜಾತಿ ತಾರತಮ್ಯವನ್ನು ಅನುಸರಿಸಿರುವ ಜಾತಿಗಳ ವಿರುದ್ಧ ಅಂತಹದ್ದೇ ದೌರ್ಜನ್ಯಗಳನ್ನು ನಡೆಸುವಂತಾಗಬಹುದು” ಎಂದು ಅವರು ಹೇಳಿದ್ದಾರೆ.

ಆದ್ದರಿಂದ ಚಾರಿತ್ರಿಕ ತಪ್ಪುಗಳನ್ನು ಸರಿಪಡಿಸುವ ಬದಲಿಗೆ ಅದರಿಂದ ಪಾಠಗಳನ್ನು ಕಲಿತು ಸಮಾನತೆಯ ಆಧಾರದಲ್ಲಿ ಜಾತ್ಯಾತೀತ ತತ್ವವನ್ನು ಅಳವಡಿಸಿಕೊಳ್ಳುವುದನ್ನು ಸಂವಿಧಾನ ಪ್ರತಿಪಾದಿಸುತ್ತದೆ. ಇದಕ್ಕಾಗಿ ನಾವು ಹೋರಾಟ ಮಾಡಬೇಕಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ | ಪ್ರಕರಣವನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ | ಪ್ರಕರಣವನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...